Homeಮುಖಪುಟಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಿ ಎಂದ ಉತ್ತರಾಖಂಡ ಬಿಜೆಪಿ ಶಾಸಕಿ; ತೀವ್ರ ವಿರೋಧ

ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಿ ಎಂದ ಉತ್ತರಾಖಂಡ ಬಿಜೆಪಿ ಶಾಸಕಿ; ತೀವ್ರ ವಿರೋಧ

- Advertisement -
- Advertisement -

ಉತ್ತರಾಖಂಡದ ಕೇದಾರನಾಥದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಿ, ಪ್ರದೇಶಕ್ಕೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸಬೇಕೆಂದು ಬಿಜೆಪಿ ನಾಯಕಿ ಆಶಾ ನೌಟಿಯಾಲ್ ಭಾನುವಾರ ಕರೆ ನೀಡಿದ್ದಾರೆ. ಅವರ ಈ ಹೇಳಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಆಕ್ರೋಶ ಭುಗಿಲೆದ್ದಿದೆ.

“ನಾನು ಸ್ಥಳೀಯರೊಂದಿಗೆ ಸಭೆ ನಡೆಸಿದೆ. ಹಿಂದೂಯೇತರರು ಅಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಅವರು ನನಗೆ ತಿಳಿಸಿದರು” ಎಂದು ಕೇದಾರನಾಥ ಶಾಸಕಿ ಪಿಟಿಐಗೆ ತಿಳಿಸಿದ್ದಾರೆ.

“ಪ್ರಪಂಚದಾದ್ಯಂತ ಜನರು ಬಾಬಾ ಕೇದಾರನನ್ನು ಪೂಜಿಸಲು ಹೋಗುತ್ತಾರೆ, ಆದ್ದರಿಂದ ಆ ಜನರು [ಹಿಂದೂಯೇತರರು] ಅಲ್ಲಿಗೆ ಹೋಗುವುದನ್ನು ನಿಷೇಧಿಸಬೇಕು. ಸ್ಥಳೀಯ ಉದ್ಯಮಿಗಳು ಸಹ ಅಂತಹ ವಿಷಯಗಳನ್ನು ನಿರುತ್ಸಾಹಗೊಳಿಸಬೇಕು ಎಂದು ಒತ್ತಾಯಿಸಿದರು.” ಎಂದು ಅವರು ಹೇಳಿದ್ದಾರೆ. ಕೇದಾರನಾಥದಲ್ಲಿ

ಹಿಂದೂ ಧಾರ್ಮಿಕ ಸ್ಥಳದ ಬಳಿ ಮಾಂಸ ಮತ್ತು ಮದ್ಯ ಮಾರಾಟದ ಆರೋಪದ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ ನೌಟಿಯಾಲ್ ಅವರ ಈ ಹೇಳಿಕೆ ನೀಡಿದ್ದಾರೆ. ಶಿವನಿಗೆ ಸಮರ್ಪಿತವಾದ ಕೇದಾರನಾಥ ದೇವಾಲಯವು ಉತ್ತರಾಖಂಡದ ನಾಲ್ಕು ಪ್ರಮುಖ ಹಿಂದೂ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯವು ರುದ್ರಪ್ರಯಾಗ ಜಿಲ್ಲೆಯಲ್ಲಿದೆ.

ಚಾರ್ ಧಾಮ್ ಯಾತ್ರೆಯ ಭಾಗವಾಗಿರುವ ಎಲ್ಲಾ ಸ್ಥಳಗಳಿಂದ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ನೌಟಿಯಾಲ್ ಅವರು ಹೇಳಿದ್ದಾರೆ. “ನಾನು ಶಾಸಕಿಯಾಗಿರುವುದರಿಂದ, ಈ ವಿಚಾರವನ್ನು ಎತ್ತುವ ಜವಾಬ್ದಾರಿ ನನ್ನ ಮೇಲಿದೆ. ಯಾತ್ರಿಕರು ತಾವು ಬರುವ ನಂಬಿಕೆಯೊಂದಿಗೆ ಚಾರ್ ಧಾಮ್‌ನಿಂದ ಹಿಂತಿರುಗಬೇಕು.” ಎಂದು ನೌಟಿಯಾಲ್ ಹೇಳಿರುವುದಾಗಿ ಪಿಟಿಐ ಉಲ್ಲೇಖಿಸಿದೆ.

ಚಾರ್ ಧಾಮ್ ಯಾತ್ರೆಯು ಕೇದಾರನಾಥ, ಬದರಿನಾಥ, ಗಂಗೋತ್ರಿ ಮತ್ತು ಯಮುನೋತ್ರಿ ಎಂಬ ನಾಲ್ಕು ದೇವಾಲಯಗಳ ಹಿಂದೂ ತೀರ್ಥಯಾತ್ರೆಯಾಗಿದ್ದು, ಇವೆಲ್ಲವೂ ಉತ್ತರಾಖಂಡದಲ್ಲಿದೆ. ಏಪ್ರಿಲ್ 30 ರಂದು ಗಂಗೋತ್ರಿ ಮತ್ತು ಯಮುನೋತ್ರಿ ತೆರೆಯುವ ಸಮಯದಲ್ಲಿ ಯಾತ್ರೆ ಪ್ರಾರಂಭವಾಗುತ್ತದೆ, ನಂತರ ಮೇ 2 ರಂದು ಕೇದಾರನಾಥ ಮತ್ತು ಮೇ 4 ರಂದು ಬದರಿನಾಥ ತೆರೆಯಲಿದೆ. ಹಿಮಪಾತದಿಂದಾಗಿ ಚಳಿಗಾಲದಲ್ಲಿ ಈ ಸ್ಥಳಗಳನ್ನು ಪ್ರವೇಶಿಸುವುದು ಕಷ್ಟಕರವಾಗಿದೆ.

ನೌಟಿಯಾಲ್ ಅವರ ಹೇಳಿಕೆ ದ್ವೇಷ ಹರಡುವ ಪ್ರಯತ್ನ ಎಂದು ವಿರೋಧ ಪಕ್ಷ ಕಾಂಗ್ರೆಸ್ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ. ಕಾಂಗ್ರೆಸ್ ರಾಜ್ಯ ಘಟಕದ ಉಪಾಧ್ಯಕ್ಷ ಸೂರ್ಯಕಾಂತ್ ಧಸ್ಮಾನಾ ಮಾತನಾಡಿ, “ಮಹಾ ಕುಂಭ, ಹೋಳಿ, ಜುಮ್ಮೆ ಕಿ ನಮಾಜ್ ಅಥವಾ ಚಾರ್ ಧಾಮ್ ಯಾತ್ರೆ ಇರಲಿ, ಕೋಮು ಸಾಮರಸ್ಯವನ್ನು ಹಾಳು ಮಾಡಲು ಬಿಜೆಪಿ ಪದೇ ಪದೇ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡಿದೆ. ಇದು ಅವರ ರಾಷ್ಟ್ರೀಯ ಕಾರ್ಯಸೂಚಿಯಾಗಿದೆ.” ಎಂದು ಹೇಳಿದೆ.

ನಿರುದ್ಯೋಗ ಮತ್ತು ಹಣದುಬ್ಬರದಂತಹ ವಿಷಯಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಬಿಜೆಪಿ ಎಲ್ಲವನ್ನೂ ಧರ್ಮದೊಂದಿಗೆ ಜೋಡಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಅಸೂಕ್ಷ್ಮ ಹೇಳಿಕೆಗಳನ್ನು ನೀಡುವುದು ಬಿಜೆಪಿ ನಾಯಕರ ಅಭ್ಯಾಸ. ಉತ್ತರಾಖಂಡ ದೇವಭೂಮಿಯಾಗಿದ್ದು, ನೀವು ಎಲ್ಲಿಯವರೆಗೆ ಎಲ್ಲವನ್ನೂ ಧರ್ಮದೊಂದಿಗೆ ಜೋಡಿಸುತ್ತೀರಿ? ಬಿಜೆಪಿಗೆ ಜನರೊಂದಿಗೆ ಹೇಳಲು ಏನೂ ಇಲ್ಲದ ಕಾರಣ ಅವರು ಇದನ್ನು ಮಾಡುತ್ತಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಉತ್ತರಾಖಂಡ ಘಟಕದ ಮಾಧ್ಯಮ ಉಸ್ತುವಾರಿ ಮನ್ವೀರ್ ಸಿಂಗ್ ಚೌಹಾಣ್ ಅವರು ನೌಟಿಯಾಲ್ ಅವರ ಹೇಳಿಕೆಯನ್ನು ಬೆಂಬಲಿಸಿದ್ದು, ಇದು ಹಿಂದೂ ಧರ್ಮದ ಭಾವನೆಗಳಿಗೆ ಸಂಬಂಧಿಸಿದೆ ಎಂದು ಹೇಳಿದ್ದಾರೆ. “ಈ ನಾಲ್ಕು ತೀರ್ಥಯಾತ್ರೆಗಳು ಸನಾತನ ಧರ್ಮದಲ್ಲಿ ಮುಖ್ಯವಾಗಿವೆ. ಪ್ರತಿ ವರ್ಷ ಲಕ್ಷಾಂತರ ಜನರು ಈ ಯಾತ್ರೆಗೆ ಹೋಗುತ್ತಾರೆ” ಎಂದು ಅವರು ಹೇಳಿದ್ದಾರೆ.

ಕೇದಾರನಾಥದ ವ್ಯಾಪಾರಿಗಳು ಮುಸ್ಲಿಮರು ಈ ಪ್ರದೇಶದಲ್ಲಿ ಮಾಂಸ ಮತ್ತು ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು ಎಂದು ಚೌಹಾಣ್ ಹೇಳಿದ್ದಾರೆ. “ಈ ಪವಿತ್ರ ಧಾಮದಲ್ಲಿ ಅಂತಹ ವ್ಯವಹಾರಗಳನ್ನು ನಡೆಸುವುದು ತಪ್ಪು. ಇತರ ವ್ಯವಹಾರಗಳ ಸೋಗಿನಲ್ಲಿ ಮದ್ಯದ ಅಂಗಡಿಗಳು ಸಹ ಇವೆ.” ಎಂದು ಅವರು ಆರೋಪಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....