Homeಮುಖಪುಟಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಿ ಎಂದ ಉತ್ತರಾಖಂಡ ಬಿಜೆಪಿ ಶಾಸಕಿ; ತೀವ್ರ ವಿರೋಧ

ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಿ ಎಂದ ಉತ್ತರಾಖಂಡ ಬಿಜೆಪಿ ಶಾಸಕಿ; ತೀವ್ರ ವಿರೋಧ

- Advertisement -
- Advertisement -

ಉತ್ತರಾಖಂಡದ ಕೇದಾರನಾಥದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಿ, ಪ್ರದೇಶಕ್ಕೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸಬೇಕೆಂದು ಬಿಜೆಪಿ ನಾಯಕಿ ಆಶಾ ನೌಟಿಯಾಲ್ ಭಾನುವಾರ ಕರೆ ನೀಡಿದ್ದಾರೆ. ಅವರ ಈ ಹೇಳಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಆಕ್ರೋಶ ಭುಗಿಲೆದ್ದಿದೆ.

“ನಾನು ಸ್ಥಳೀಯರೊಂದಿಗೆ ಸಭೆ ನಡೆಸಿದೆ. ಹಿಂದೂಯೇತರರು ಅಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಅವರು ನನಗೆ ತಿಳಿಸಿದರು” ಎಂದು ಕೇದಾರನಾಥ ಶಾಸಕಿ ಪಿಟಿಐಗೆ ತಿಳಿಸಿದ್ದಾರೆ.

“ಪ್ರಪಂಚದಾದ್ಯಂತ ಜನರು ಬಾಬಾ ಕೇದಾರನನ್ನು ಪೂಜಿಸಲು ಹೋಗುತ್ತಾರೆ, ಆದ್ದರಿಂದ ಆ ಜನರು [ಹಿಂದೂಯೇತರರು] ಅಲ್ಲಿಗೆ ಹೋಗುವುದನ್ನು ನಿಷೇಧಿಸಬೇಕು. ಸ್ಥಳೀಯ ಉದ್ಯಮಿಗಳು ಸಹ ಅಂತಹ ವಿಷಯಗಳನ್ನು ನಿರುತ್ಸಾಹಗೊಳಿಸಬೇಕು ಎಂದು ಒತ್ತಾಯಿಸಿದರು.” ಎಂದು ಅವರು ಹೇಳಿದ್ದಾರೆ. ಕೇದಾರನಾಥದಲ್ಲಿ

ಹಿಂದೂ ಧಾರ್ಮಿಕ ಸ್ಥಳದ ಬಳಿ ಮಾಂಸ ಮತ್ತು ಮದ್ಯ ಮಾರಾಟದ ಆರೋಪದ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ ನೌಟಿಯಾಲ್ ಅವರ ಈ ಹೇಳಿಕೆ ನೀಡಿದ್ದಾರೆ. ಶಿವನಿಗೆ ಸಮರ್ಪಿತವಾದ ಕೇದಾರನಾಥ ದೇವಾಲಯವು ಉತ್ತರಾಖಂಡದ ನಾಲ್ಕು ಪ್ರಮುಖ ಹಿಂದೂ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯವು ರುದ್ರಪ್ರಯಾಗ ಜಿಲ್ಲೆಯಲ್ಲಿದೆ.

ಚಾರ್ ಧಾಮ್ ಯಾತ್ರೆಯ ಭಾಗವಾಗಿರುವ ಎಲ್ಲಾ ಸ್ಥಳಗಳಿಂದ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ನೌಟಿಯಾಲ್ ಅವರು ಹೇಳಿದ್ದಾರೆ. “ನಾನು ಶಾಸಕಿಯಾಗಿರುವುದರಿಂದ, ಈ ವಿಚಾರವನ್ನು ಎತ್ತುವ ಜವಾಬ್ದಾರಿ ನನ್ನ ಮೇಲಿದೆ. ಯಾತ್ರಿಕರು ತಾವು ಬರುವ ನಂಬಿಕೆಯೊಂದಿಗೆ ಚಾರ್ ಧಾಮ್‌ನಿಂದ ಹಿಂತಿರುಗಬೇಕು.” ಎಂದು ನೌಟಿಯಾಲ್ ಹೇಳಿರುವುದಾಗಿ ಪಿಟಿಐ ಉಲ್ಲೇಖಿಸಿದೆ.

ಚಾರ್ ಧಾಮ್ ಯಾತ್ರೆಯು ಕೇದಾರನಾಥ, ಬದರಿನಾಥ, ಗಂಗೋತ್ರಿ ಮತ್ತು ಯಮುನೋತ್ರಿ ಎಂಬ ನಾಲ್ಕು ದೇವಾಲಯಗಳ ಹಿಂದೂ ತೀರ್ಥಯಾತ್ರೆಯಾಗಿದ್ದು, ಇವೆಲ್ಲವೂ ಉತ್ತರಾಖಂಡದಲ್ಲಿದೆ. ಏಪ್ರಿಲ್ 30 ರಂದು ಗಂಗೋತ್ರಿ ಮತ್ತು ಯಮುನೋತ್ರಿ ತೆರೆಯುವ ಸಮಯದಲ್ಲಿ ಯಾತ್ರೆ ಪ್ರಾರಂಭವಾಗುತ್ತದೆ, ನಂತರ ಮೇ 2 ರಂದು ಕೇದಾರನಾಥ ಮತ್ತು ಮೇ 4 ರಂದು ಬದರಿನಾಥ ತೆರೆಯಲಿದೆ. ಹಿಮಪಾತದಿಂದಾಗಿ ಚಳಿಗಾಲದಲ್ಲಿ ಈ ಸ್ಥಳಗಳನ್ನು ಪ್ರವೇಶಿಸುವುದು ಕಷ್ಟಕರವಾಗಿದೆ.

ನೌಟಿಯಾಲ್ ಅವರ ಹೇಳಿಕೆ ದ್ವೇಷ ಹರಡುವ ಪ್ರಯತ್ನ ಎಂದು ವಿರೋಧ ಪಕ್ಷ ಕಾಂಗ್ರೆಸ್ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ. ಕಾಂಗ್ರೆಸ್ ರಾಜ್ಯ ಘಟಕದ ಉಪಾಧ್ಯಕ್ಷ ಸೂರ್ಯಕಾಂತ್ ಧಸ್ಮಾನಾ ಮಾತನಾಡಿ, “ಮಹಾ ಕುಂಭ, ಹೋಳಿ, ಜುಮ್ಮೆ ಕಿ ನಮಾಜ್ ಅಥವಾ ಚಾರ್ ಧಾಮ್ ಯಾತ್ರೆ ಇರಲಿ, ಕೋಮು ಸಾಮರಸ್ಯವನ್ನು ಹಾಳು ಮಾಡಲು ಬಿಜೆಪಿ ಪದೇ ಪದೇ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡಿದೆ. ಇದು ಅವರ ರಾಷ್ಟ್ರೀಯ ಕಾರ್ಯಸೂಚಿಯಾಗಿದೆ.” ಎಂದು ಹೇಳಿದೆ.

ನಿರುದ್ಯೋಗ ಮತ್ತು ಹಣದುಬ್ಬರದಂತಹ ವಿಷಯಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಬಿಜೆಪಿ ಎಲ್ಲವನ್ನೂ ಧರ್ಮದೊಂದಿಗೆ ಜೋಡಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಅಸೂಕ್ಷ್ಮ ಹೇಳಿಕೆಗಳನ್ನು ನೀಡುವುದು ಬಿಜೆಪಿ ನಾಯಕರ ಅಭ್ಯಾಸ. ಉತ್ತರಾಖಂಡ ದೇವಭೂಮಿಯಾಗಿದ್ದು, ನೀವು ಎಲ್ಲಿಯವರೆಗೆ ಎಲ್ಲವನ್ನೂ ಧರ್ಮದೊಂದಿಗೆ ಜೋಡಿಸುತ್ತೀರಿ? ಬಿಜೆಪಿಗೆ ಜನರೊಂದಿಗೆ ಹೇಳಲು ಏನೂ ಇಲ್ಲದ ಕಾರಣ ಅವರು ಇದನ್ನು ಮಾಡುತ್ತಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಉತ್ತರಾಖಂಡ ಘಟಕದ ಮಾಧ್ಯಮ ಉಸ್ತುವಾರಿ ಮನ್ವೀರ್ ಸಿಂಗ್ ಚೌಹಾಣ್ ಅವರು ನೌಟಿಯಾಲ್ ಅವರ ಹೇಳಿಕೆಯನ್ನು ಬೆಂಬಲಿಸಿದ್ದು, ಇದು ಹಿಂದೂ ಧರ್ಮದ ಭಾವನೆಗಳಿಗೆ ಸಂಬಂಧಿಸಿದೆ ಎಂದು ಹೇಳಿದ್ದಾರೆ. “ಈ ನಾಲ್ಕು ತೀರ್ಥಯಾತ್ರೆಗಳು ಸನಾತನ ಧರ್ಮದಲ್ಲಿ ಮುಖ್ಯವಾಗಿವೆ. ಪ್ರತಿ ವರ್ಷ ಲಕ್ಷಾಂತರ ಜನರು ಈ ಯಾತ್ರೆಗೆ ಹೋಗುತ್ತಾರೆ” ಎಂದು ಅವರು ಹೇಳಿದ್ದಾರೆ.

ಕೇದಾರನಾಥದ ವ್ಯಾಪಾರಿಗಳು ಮುಸ್ಲಿಮರು ಈ ಪ್ರದೇಶದಲ್ಲಿ ಮಾಂಸ ಮತ್ತು ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು ಎಂದು ಚೌಹಾಣ್ ಹೇಳಿದ್ದಾರೆ. “ಈ ಪವಿತ್ರ ಧಾಮದಲ್ಲಿ ಅಂತಹ ವ್ಯವಹಾರಗಳನ್ನು ನಡೆಸುವುದು ತಪ್ಪು. ಇತರ ವ್ಯವಹಾರಗಳ ಸೋಗಿನಲ್ಲಿ ಮದ್ಯದ ಅಂಗಡಿಗಳು ಸಹ ಇವೆ.” ಎಂದು ಅವರು ಆರೋಪಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...