Homeಮುಖಪುಟಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಿ ಎಂದ ಉತ್ತರಾಖಂಡ ಬಿಜೆಪಿ ಶಾಸಕಿ; ತೀವ್ರ ವಿರೋಧ

ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಿ ಎಂದ ಉತ್ತರಾಖಂಡ ಬಿಜೆಪಿ ಶಾಸಕಿ; ತೀವ್ರ ವಿರೋಧ

- Advertisement -
- Advertisement -

ಉತ್ತರಾಖಂಡದ ಕೇದಾರನಾಥದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಿ, ಪ್ರದೇಶಕ್ಕೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸಬೇಕೆಂದು ಬಿಜೆಪಿ ನಾಯಕಿ ಆಶಾ ನೌಟಿಯಾಲ್ ಭಾನುವಾರ ಕರೆ ನೀಡಿದ್ದಾರೆ. ಅವರ ಈ ಹೇಳಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಆಕ್ರೋಶ ಭುಗಿಲೆದ್ದಿದೆ.

“ನಾನು ಸ್ಥಳೀಯರೊಂದಿಗೆ ಸಭೆ ನಡೆಸಿದೆ. ಹಿಂದೂಯೇತರರು ಅಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಅವರು ನನಗೆ ತಿಳಿಸಿದರು” ಎಂದು ಕೇದಾರನಾಥ ಶಾಸಕಿ ಪಿಟಿಐಗೆ ತಿಳಿಸಿದ್ದಾರೆ.

“ಪ್ರಪಂಚದಾದ್ಯಂತ ಜನರು ಬಾಬಾ ಕೇದಾರನನ್ನು ಪೂಜಿಸಲು ಹೋಗುತ್ತಾರೆ, ಆದ್ದರಿಂದ ಆ ಜನರು [ಹಿಂದೂಯೇತರರು] ಅಲ್ಲಿಗೆ ಹೋಗುವುದನ್ನು ನಿಷೇಧಿಸಬೇಕು. ಸ್ಥಳೀಯ ಉದ್ಯಮಿಗಳು ಸಹ ಅಂತಹ ವಿಷಯಗಳನ್ನು ನಿರುತ್ಸಾಹಗೊಳಿಸಬೇಕು ಎಂದು ಒತ್ತಾಯಿಸಿದರು.” ಎಂದು ಅವರು ಹೇಳಿದ್ದಾರೆ. ಕೇದಾರನಾಥದಲ್ಲಿ

ಹಿಂದೂ ಧಾರ್ಮಿಕ ಸ್ಥಳದ ಬಳಿ ಮಾಂಸ ಮತ್ತು ಮದ್ಯ ಮಾರಾಟದ ಆರೋಪದ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ ನೌಟಿಯಾಲ್ ಅವರ ಈ ಹೇಳಿಕೆ ನೀಡಿದ್ದಾರೆ. ಶಿವನಿಗೆ ಸಮರ್ಪಿತವಾದ ಕೇದಾರನಾಥ ದೇವಾಲಯವು ಉತ್ತರಾಖಂಡದ ನಾಲ್ಕು ಪ್ರಮುಖ ಹಿಂದೂ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯವು ರುದ್ರಪ್ರಯಾಗ ಜಿಲ್ಲೆಯಲ್ಲಿದೆ.

ಚಾರ್ ಧಾಮ್ ಯಾತ್ರೆಯ ಭಾಗವಾಗಿರುವ ಎಲ್ಲಾ ಸ್ಥಳಗಳಿಂದ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ನೌಟಿಯಾಲ್ ಅವರು ಹೇಳಿದ್ದಾರೆ. “ನಾನು ಶಾಸಕಿಯಾಗಿರುವುದರಿಂದ, ಈ ವಿಚಾರವನ್ನು ಎತ್ತುವ ಜವಾಬ್ದಾರಿ ನನ್ನ ಮೇಲಿದೆ. ಯಾತ್ರಿಕರು ತಾವು ಬರುವ ನಂಬಿಕೆಯೊಂದಿಗೆ ಚಾರ್ ಧಾಮ್‌ನಿಂದ ಹಿಂತಿರುಗಬೇಕು.” ಎಂದು ನೌಟಿಯಾಲ್ ಹೇಳಿರುವುದಾಗಿ ಪಿಟಿಐ ಉಲ್ಲೇಖಿಸಿದೆ.

ಚಾರ್ ಧಾಮ್ ಯಾತ್ರೆಯು ಕೇದಾರನಾಥ, ಬದರಿನಾಥ, ಗಂಗೋತ್ರಿ ಮತ್ತು ಯಮುನೋತ್ರಿ ಎಂಬ ನಾಲ್ಕು ದೇವಾಲಯಗಳ ಹಿಂದೂ ತೀರ್ಥಯಾತ್ರೆಯಾಗಿದ್ದು, ಇವೆಲ್ಲವೂ ಉತ್ತರಾಖಂಡದಲ್ಲಿದೆ. ಏಪ್ರಿಲ್ 30 ರಂದು ಗಂಗೋತ್ರಿ ಮತ್ತು ಯಮುನೋತ್ರಿ ತೆರೆಯುವ ಸಮಯದಲ್ಲಿ ಯಾತ್ರೆ ಪ್ರಾರಂಭವಾಗುತ್ತದೆ, ನಂತರ ಮೇ 2 ರಂದು ಕೇದಾರನಾಥ ಮತ್ತು ಮೇ 4 ರಂದು ಬದರಿನಾಥ ತೆರೆಯಲಿದೆ. ಹಿಮಪಾತದಿಂದಾಗಿ ಚಳಿಗಾಲದಲ್ಲಿ ಈ ಸ್ಥಳಗಳನ್ನು ಪ್ರವೇಶಿಸುವುದು ಕಷ್ಟಕರವಾಗಿದೆ.

ನೌಟಿಯಾಲ್ ಅವರ ಹೇಳಿಕೆ ದ್ವೇಷ ಹರಡುವ ಪ್ರಯತ್ನ ಎಂದು ವಿರೋಧ ಪಕ್ಷ ಕಾಂಗ್ರೆಸ್ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ. ಕಾಂಗ್ರೆಸ್ ರಾಜ್ಯ ಘಟಕದ ಉಪಾಧ್ಯಕ್ಷ ಸೂರ್ಯಕಾಂತ್ ಧಸ್ಮಾನಾ ಮಾತನಾಡಿ, “ಮಹಾ ಕುಂಭ, ಹೋಳಿ, ಜುಮ್ಮೆ ಕಿ ನಮಾಜ್ ಅಥವಾ ಚಾರ್ ಧಾಮ್ ಯಾತ್ರೆ ಇರಲಿ, ಕೋಮು ಸಾಮರಸ್ಯವನ್ನು ಹಾಳು ಮಾಡಲು ಬಿಜೆಪಿ ಪದೇ ಪದೇ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡಿದೆ. ಇದು ಅವರ ರಾಷ್ಟ್ರೀಯ ಕಾರ್ಯಸೂಚಿಯಾಗಿದೆ.” ಎಂದು ಹೇಳಿದೆ.

ನಿರುದ್ಯೋಗ ಮತ್ತು ಹಣದುಬ್ಬರದಂತಹ ವಿಷಯಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಬಿಜೆಪಿ ಎಲ್ಲವನ್ನೂ ಧರ್ಮದೊಂದಿಗೆ ಜೋಡಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಅಸೂಕ್ಷ್ಮ ಹೇಳಿಕೆಗಳನ್ನು ನೀಡುವುದು ಬಿಜೆಪಿ ನಾಯಕರ ಅಭ್ಯಾಸ. ಉತ್ತರಾಖಂಡ ದೇವಭೂಮಿಯಾಗಿದ್ದು, ನೀವು ಎಲ್ಲಿಯವರೆಗೆ ಎಲ್ಲವನ್ನೂ ಧರ್ಮದೊಂದಿಗೆ ಜೋಡಿಸುತ್ತೀರಿ? ಬಿಜೆಪಿಗೆ ಜನರೊಂದಿಗೆ ಹೇಳಲು ಏನೂ ಇಲ್ಲದ ಕಾರಣ ಅವರು ಇದನ್ನು ಮಾಡುತ್ತಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಉತ್ತರಾಖಂಡ ಘಟಕದ ಮಾಧ್ಯಮ ಉಸ್ತುವಾರಿ ಮನ್ವೀರ್ ಸಿಂಗ್ ಚೌಹಾಣ್ ಅವರು ನೌಟಿಯಾಲ್ ಅವರ ಹೇಳಿಕೆಯನ್ನು ಬೆಂಬಲಿಸಿದ್ದು, ಇದು ಹಿಂದೂ ಧರ್ಮದ ಭಾವನೆಗಳಿಗೆ ಸಂಬಂಧಿಸಿದೆ ಎಂದು ಹೇಳಿದ್ದಾರೆ. “ಈ ನಾಲ್ಕು ತೀರ್ಥಯಾತ್ರೆಗಳು ಸನಾತನ ಧರ್ಮದಲ್ಲಿ ಮುಖ್ಯವಾಗಿವೆ. ಪ್ರತಿ ವರ್ಷ ಲಕ್ಷಾಂತರ ಜನರು ಈ ಯಾತ್ರೆಗೆ ಹೋಗುತ್ತಾರೆ” ಎಂದು ಅವರು ಹೇಳಿದ್ದಾರೆ.

ಕೇದಾರನಾಥದ ವ್ಯಾಪಾರಿಗಳು ಮುಸ್ಲಿಮರು ಈ ಪ್ರದೇಶದಲ್ಲಿ ಮಾಂಸ ಮತ್ತು ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು ಎಂದು ಚೌಹಾಣ್ ಹೇಳಿದ್ದಾರೆ. “ಈ ಪವಿತ್ರ ಧಾಮದಲ್ಲಿ ಅಂತಹ ವ್ಯವಹಾರಗಳನ್ನು ನಡೆಸುವುದು ತಪ್ಪು. ಇತರ ವ್ಯವಹಾರಗಳ ಸೋಗಿನಲ್ಲಿ ಮದ್ಯದ ಅಂಗಡಿಗಳು ಸಹ ಇವೆ.” ಎಂದು ಅವರು ಆರೋಪಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...