Homeಮುಖಪುಟಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಿ ಎಂದ ಉತ್ತರಾಖಂಡ ಬಿಜೆಪಿ ಶಾಸಕಿ; ತೀವ್ರ ವಿರೋಧ

ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಿ ಎಂದ ಉತ್ತರಾಖಂಡ ಬಿಜೆಪಿ ಶಾಸಕಿ; ತೀವ್ರ ವಿರೋಧ

- Advertisement -
- Advertisement -

ಉತ್ತರಾಖಂಡದ ಕೇದಾರನಾಥದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಿ, ಪ್ರದೇಶಕ್ಕೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸಬೇಕೆಂದು ಬಿಜೆಪಿ ನಾಯಕಿ ಆಶಾ ನೌಟಿಯಾಲ್ ಭಾನುವಾರ ಕರೆ ನೀಡಿದ್ದಾರೆ. ಅವರ ಈ ಹೇಳಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಆಕ್ರೋಶ ಭುಗಿಲೆದ್ದಿದೆ.

“ನಾನು ಸ್ಥಳೀಯರೊಂದಿಗೆ ಸಭೆ ನಡೆಸಿದೆ. ಹಿಂದೂಯೇತರರು ಅಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಅವರು ನನಗೆ ತಿಳಿಸಿದರು” ಎಂದು ಕೇದಾರನಾಥ ಶಾಸಕಿ ಪಿಟಿಐಗೆ ತಿಳಿಸಿದ್ದಾರೆ.

“ಪ್ರಪಂಚದಾದ್ಯಂತ ಜನರು ಬಾಬಾ ಕೇದಾರನನ್ನು ಪೂಜಿಸಲು ಹೋಗುತ್ತಾರೆ, ಆದ್ದರಿಂದ ಆ ಜನರು [ಹಿಂದೂಯೇತರರು] ಅಲ್ಲಿಗೆ ಹೋಗುವುದನ್ನು ನಿಷೇಧಿಸಬೇಕು. ಸ್ಥಳೀಯ ಉದ್ಯಮಿಗಳು ಸಹ ಅಂತಹ ವಿಷಯಗಳನ್ನು ನಿರುತ್ಸಾಹಗೊಳಿಸಬೇಕು ಎಂದು ಒತ್ತಾಯಿಸಿದರು.” ಎಂದು ಅವರು ಹೇಳಿದ್ದಾರೆ. ಕೇದಾರನಾಥದಲ್ಲಿ

ಹಿಂದೂ ಧಾರ್ಮಿಕ ಸ್ಥಳದ ಬಳಿ ಮಾಂಸ ಮತ್ತು ಮದ್ಯ ಮಾರಾಟದ ಆರೋಪದ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ ನೌಟಿಯಾಲ್ ಅವರ ಈ ಹೇಳಿಕೆ ನೀಡಿದ್ದಾರೆ. ಶಿವನಿಗೆ ಸಮರ್ಪಿತವಾದ ಕೇದಾರನಾಥ ದೇವಾಲಯವು ಉತ್ತರಾಖಂಡದ ನಾಲ್ಕು ಪ್ರಮುಖ ಹಿಂದೂ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯವು ರುದ್ರಪ್ರಯಾಗ ಜಿಲ್ಲೆಯಲ್ಲಿದೆ.

ಚಾರ್ ಧಾಮ್ ಯಾತ್ರೆಯ ಭಾಗವಾಗಿರುವ ಎಲ್ಲಾ ಸ್ಥಳಗಳಿಂದ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ನೌಟಿಯಾಲ್ ಅವರು ಹೇಳಿದ್ದಾರೆ. “ನಾನು ಶಾಸಕಿಯಾಗಿರುವುದರಿಂದ, ಈ ವಿಚಾರವನ್ನು ಎತ್ತುವ ಜವಾಬ್ದಾರಿ ನನ್ನ ಮೇಲಿದೆ. ಯಾತ್ರಿಕರು ತಾವು ಬರುವ ನಂಬಿಕೆಯೊಂದಿಗೆ ಚಾರ್ ಧಾಮ್‌ನಿಂದ ಹಿಂತಿರುಗಬೇಕು.” ಎಂದು ನೌಟಿಯಾಲ್ ಹೇಳಿರುವುದಾಗಿ ಪಿಟಿಐ ಉಲ್ಲೇಖಿಸಿದೆ.

ಚಾರ್ ಧಾಮ್ ಯಾತ್ರೆಯು ಕೇದಾರನಾಥ, ಬದರಿನಾಥ, ಗಂಗೋತ್ರಿ ಮತ್ತು ಯಮುನೋತ್ರಿ ಎಂಬ ನಾಲ್ಕು ದೇವಾಲಯಗಳ ಹಿಂದೂ ತೀರ್ಥಯಾತ್ರೆಯಾಗಿದ್ದು, ಇವೆಲ್ಲವೂ ಉತ್ತರಾಖಂಡದಲ್ಲಿದೆ. ಏಪ್ರಿಲ್ 30 ರಂದು ಗಂಗೋತ್ರಿ ಮತ್ತು ಯಮುನೋತ್ರಿ ತೆರೆಯುವ ಸಮಯದಲ್ಲಿ ಯಾತ್ರೆ ಪ್ರಾರಂಭವಾಗುತ್ತದೆ, ನಂತರ ಮೇ 2 ರಂದು ಕೇದಾರನಾಥ ಮತ್ತು ಮೇ 4 ರಂದು ಬದರಿನಾಥ ತೆರೆಯಲಿದೆ. ಹಿಮಪಾತದಿಂದಾಗಿ ಚಳಿಗಾಲದಲ್ಲಿ ಈ ಸ್ಥಳಗಳನ್ನು ಪ್ರವೇಶಿಸುವುದು ಕಷ್ಟಕರವಾಗಿದೆ.

ನೌಟಿಯಾಲ್ ಅವರ ಹೇಳಿಕೆ ದ್ವೇಷ ಹರಡುವ ಪ್ರಯತ್ನ ಎಂದು ವಿರೋಧ ಪಕ್ಷ ಕಾಂಗ್ರೆಸ್ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ. ಕಾಂಗ್ರೆಸ್ ರಾಜ್ಯ ಘಟಕದ ಉಪಾಧ್ಯಕ್ಷ ಸೂರ್ಯಕಾಂತ್ ಧಸ್ಮಾನಾ ಮಾತನಾಡಿ, “ಮಹಾ ಕುಂಭ, ಹೋಳಿ, ಜುಮ್ಮೆ ಕಿ ನಮಾಜ್ ಅಥವಾ ಚಾರ್ ಧಾಮ್ ಯಾತ್ರೆ ಇರಲಿ, ಕೋಮು ಸಾಮರಸ್ಯವನ್ನು ಹಾಳು ಮಾಡಲು ಬಿಜೆಪಿ ಪದೇ ಪದೇ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡಿದೆ. ಇದು ಅವರ ರಾಷ್ಟ್ರೀಯ ಕಾರ್ಯಸೂಚಿಯಾಗಿದೆ.” ಎಂದು ಹೇಳಿದೆ.

ನಿರುದ್ಯೋಗ ಮತ್ತು ಹಣದುಬ್ಬರದಂತಹ ವಿಷಯಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಬಿಜೆಪಿ ಎಲ್ಲವನ್ನೂ ಧರ್ಮದೊಂದಿಗೆ ಜೋಡಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಅಸೂಕ್ಷ್ಮ ಹೇಳಿಕೆಗಳನ್ನು ನೀಡುವುದು ಬಿಜೆಪಿ ನಾಯಕರ ಅಭ್ಯಾಸ. ಉತ್ತರಾಖಂಡ ದೇವಭೂಮಿಯಾಗಿದ್ದು, ನೀವು ಎಲ್ಲಿಯವರೆಗೆ ಎಲ್ಲವನ್ನೂ ಧರ್ಮದೊಂದಿಗೆ ಜೋಡಿಸುತ್ತೀರಿ? ಬಿಜೆಪಿಗೆ ಜನರೊಂದಿಗೆ ಹೇಳಲು ಏನೂ ಇಲ್ಲದ ಕಾರಣ ಅವರು ಇದನ್ನು ಮಾಡುತ್ತಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಉತ್ತರಾಖಂಡ ಘಟಕದ ಮಾಧ್ಯಮ ಉಸ್ತುವಾರಿ ಮನ್ವೀರ್ ಸಿಂಗ್ ಚೌಹಾಣ್ ಅವರು ನೌಟಿಯಾಲ್ ಅವರ ಹೇಳಿಕೆಯನ್ನು ಬೆಂಬಲಿಸಿದ್ದು, ಇದು ಹಿಂದೂ ಧರ್ಮದ ಭಾವನೆಗಳಿಗೆ ಸಂಬಂಧಿಸಿದೆ ಎಂದು ಹೇಳಿದ್ದಾರೆ. “ಈ ನಾಲ್ಕು ತೀರ್ಥಯಾತ್ರೆಗಳು ಸನಾತನ ಧರ್ಮದಲ್ಲಿ ಮುಖ್ಯವಾಗಿವೆ. ಪ್ರತಿ ವರ್ಷ ಲಕ್ಷಾಂತರ ಜನರು ಈ ಯಾತ್ರೆಗೆ ಹೋಗುತ್ತಾರೆ” ಎಂದು ಅವರು ಹೇಳಿದ್ದಾರೆ.

ಕೇದಾರನಾಥದ ವ್ಯಾಪಾರಿಗಳು ಮುಸ್ಲಿಮರು ಈ ಪ್ರದೇಶದಲ್ಲಿ ಮಾಂಸ ಮತ್ತು ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು ಎಂದು ಚೌಹಾಣ್ ಹೇಳಿದ್ದಾರೆ. “ಈ ಪವಿತ್ರ ಧಾಮದಲ್ಲಿ ಅಂತಹ ವ್ಯವಹಾರಗಳನ್ನು ನಡೆಸುವುದು ತಪ್ಪು. ಇತರ ವ್ಯವಹಾರಗಳ ಸೋಗಿನಲ್ಲಿ ಮದ್ಯದ ಅಂಗಡಿಗಳು ಸಹ ಇವೆ.” ಎಂದು ಅವರು ಆರೋಪಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...