Homeಮುಖಪುಟಕೇದಾರನಾಥ ಯಾತ್ರೆಗೆ ಅವಕಾಶ ನೀಡಬೇಕು: ಉತ್ತರಾಖಂಡದ ಮಾಜಿ ಸಿಎಂ ತ್ರಿವೇಂದ್ರ ಸಿಂಗ್ ರಾವತ್

ಕೇದಾರನಾಥ ಯಾತ್ರೆಗೆ ಅವಕಾಶ ನೀಡಬೇಕು: ಉತ್ತರಾಖಂಡದ ಮಾಜಿ ಸಿಎಂ ತ್ರಿವೇಂದ್ರ ಸಿಂಗ್ ರಾವತ್

- Advertisement -
- Advertisement -

ಕೇದಾರನಾಥ ಯಾತ್ರೆಯನ್ನು ಉತ್ತರಾಖಂಡ ಸರ್ಕಾರ ನಿಲ್ಲಿಸಿಲ್ಲ. ಬದಲಿಗೆ ‘ಉನ್ನತ’ ಆದೇಶಗಳಿಂದ ನಿಲ್ಲಿಸಲಾಗಿದೆ ಎಂದು ಉತ್ತರಾಖಂಡದ ಮಾಜಿ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಆರೋಪಿಸಿದ್ದಾರೆ.

ಕೋವಿಡ್ ಎರಡನೇ ಅಲೆಯ ನಡುವೆಯೂ ಉತ್ತರಾಖಂಡದಲ್ಲಿ ಕುಂಭಮೇಳ ನಡೆಸಿದ ಟೀಕೆಗೆ ಗುರಿಯಾಗಿದ್ದ ಮಾಜಿ ಸಿಎಂ ತೀರತ್ ಸಿಂಗ್ ರಾವತ್‌ರವರನ್ನು ಮೇ ಅಂತ್ಯದಲ್ಲಿ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲಾಗದೆ. ಅವರ ಬದಲಿಗೆ ಪುಷ್ಕರ್‌ ಸಿಂಗ್ ಧಾಮಿ ಈಗ ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಆರೋಪದ ಕುರಿತು ಭಾರೀ ಚರ್ಚೆ ನಡೆಯುತ್ತಿದೆ.

ನಾನು ಸಿಎಂ ಆಗಿದ್ದಾಗ, ನಾವು ಹಂತ ಹಂತವಾಗಿ ಯಾತ್ರೆಗೆ ಅವಕಾಶ ನೀಡಿದ್ದೆವು. ಲಸಿಕೆ ಹಾಕಿದ ಜನರು ಮತ್ತು ಕೋವಿಡ್ ಮುಕ್ತ ಜಿಲ್ಲೆಗಳ ಜನರು ಕೇದಾರನಾಥ ಯಾತ್ರೆ ಭೇಟಿ ಮಾಡಲು ಅನುಮತಿಸಬೇಕು ಎಂದು ನಾನು ನಂಬುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಅಲ್ಲಿನ ಬಿಜೆಪಿ ನೇತೃತ್ವದ ಸರ್ಕಾರ ಈ ಬಾರಿಯ ಕೇದಾರನಾಥ ಯಾತ್ರೆಯನ್ನು ಮೊಟಕುಗೊಳಿಸಿದೆ. ಆದರೆ ಮೇಲಿನ ಆದೇಶಗಳು ಯಾತ್ರೆನ್ನು ತಡೆಯುತ್ತಿವೆ ಎಂದು ಮಾಜಿ ಸಿಎಂ ಹೇಳುವ ಮೂಲಕ ಅವರು ಬಿಜೆಪಿ ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ.

ಮುಂದಿನ ವರ್ಷದ ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದನ್ನು ಗೆಲ್ಲುವುದಕ್ಕಾಗಿಯೇ ಭಕ್ತಾಧಿಗಳನ್ನು ಒಲೈಸಲು ಈ ವರ್ಷದ ಮಾರ್ಚ್-ಏಪ್ರಿಲ್‌ನಲ್ಲಿ ಭಾರೀ ವಿರೋಧದ ನಡುವೆಯೂ ಕುಂಭಮೇಳ ನಡೆಸಲಾಗಿತ್ತು. ಈಗ ಅದನ್ನೆ ದಾಳವಾಗಿಟ್ಟುಕೊಂಡು ಮಾಜಿ ಸಿಎಂ ಪ್ರತಿಕ್ರಿಯಿಸಿದ್ದಾರೆ.

ಉತ್ತರಾಖಂಡದಲ್ಲಿ 2017ರಲ್ಲಿ ಬಿಜೆಪಿ ಸರ್ಕಾರ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಇದರ ನಾಯಕರಾಗಿ ರಾವತ್ ಆಯ್ಕೆಯಾಗಿದ್ದರು. ಆದರೆ ಕಾರ್ಯವೈಖರಿ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಅಪಸ್ವರ ಎತ್ತಿದ್ದರು. ರಾವತ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸದಿದ್ದರೆ, ರಾಜೀನಾಮೆ ನೀಡುವ ಬಗ್ಗೆ ಎಚ್ಚರಿಕೆ ನೀಡಿದ್ದರು. ಹಾಗಾಗಿ ಕಳೆದ ಮಾರ್ಚ್‌ನಲ್ಲಿ ಅವರು ರಾಜೀನಾಮೆ ನೀಡಿದ್ದರು.

ಮುಖ್ಯಮಂತ್ರಿಯಿಂದ ಕೆಳಗಿಳಿದ ನಂತರವೂ ಸಹ “ಕೊರೊನಾ ವೈರಸ್ ಒಂದು ಜೀವಂತ ಜೀವಿ, ನಮ್ಮಂತೆ ಅದಕ್ಕೂ ಬದುಕುವ ಹಕ್ಕು ಇದೆ” ಎಂದು ತ್ರಿವೇಂದ್ರ ಸಿಂಗ್ ರಾವತ್ ಹೇಳಿಕೆ ನೀಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ಗೆ ಒಳಗಾಗಿದ್ದರು.

ಅವರ ನಂತರ ಸಿಎಂ ಆದ ತೀರತ್ ಸಿಂಗ್ ರಾವತ್ ತಜ್ಞರ ವಿರೋಧದ ನಡುವೆಯೂ ಕುಂಭಮೇಳವನ್ನು ನಡೆಸಿ ಅದನ್ನು ಸಮರ್ಥಿಸಿಕೊಂಡಿದ್ದರು. ಅದರಿಂದಾಗಿಯೇ ಲಕ್ಷಾಂತರ ಜನಕ್ಕೆ ಕೋವಿಡ್ ತಗುಲಿದೆ ಎಂದು ತಜ್ಞರು ಆರೋಪಿಸಿದ್ದರು. ಮುಖ್ಯಮಂತ್ರಿಯಾಗಿ ಮುಂದುವರೆಯಲು ಆರು ತಿಂಗಳೊಳಗೆ ಅವರು ಯಾವುದಾದರೂ ಸದನದ ಸದಸ್ಯರಾಗಬೇಕಿತ್ತು. ಉತ್ತರಾಖಂಡದಲ್ಲಿ ವಿಧಾನ ಪರಿಷತ್ ಅಸ್ತಿತ್ವದಲ್ಲಿಲ್ಲ. ಅಲ್ಲದೇ ಕೊರೊನಾ ಕಾರಣದಿಂದ ಚುನಾವಣಾ ಆಯೋಗವು ಸದ್ಯಕ್ಕೆ ಉಪ ಚುನಾವಣೆ ನಡೆಸುವುದು ಕಷ್ಟಕರ ಎಂಬ ಕಾರಣ ನೀಡಿ ಬಿಜೆಪಿ ಹೈಕಮಾಂಡ್ ಅವರನ್ನು ಮೇ ಅಂತ್ಯದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದೆ. ಈಗ ಪುಷ್ಕರ್‌ ಸಿಂಗ್ ಧಾಮಿ ನೂತನ ಸಿಎಂ ಆಗಿದ್ದಾರೆ.


ಇದನ್ನೂ ಓದಿ: Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...