Homeಮುಖಪುಟಕೇದಾರನಾಥ ಯಾತ್ರೆಗೆ ಅವಕಾಶ ನೀಡಬೇಕು: ಉತ್ತರಾಖಂಡದ ಮಾಜಿ ಸಿಎಂ ತ್ರಿವೇಂದ್ರ ಸಿಂಗ್ ರಾವತ್

ಕೇದಾರನಾಥ ಯಾತ್ರೆಗೆ ಅವಕಾಶ ನೀಡಬೇಕು: ಉತ್ತರಾಖಂಡದ ಮಾಜಿ ಸಿಎಂ ತ್ರಿವೇಂದ್ರ ಸಿಂಗ್ ರಾವತ್

- Advertisement -
- Advertisement -

ಕೇದಾರನಾಥ ಯಾತ್ರೆಯನ್ನು ಉತ್ತರಾಖಂಡ ಸರ್ಕಾರ ನಿಲ್ಲಿಸಿಲ್ಲ. ಬದಲಿಗೆ ‘ಉನ್ನತ’ ಆದೇಶಗಳಿಂದ ನಿಲ್ಲಿಸಲಾಗಿದೆ ಎಂದು ಉತ್ತರಾಖಂಡದ ಮಾಜಿ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಆರೋಪಿಸಿದ್ದಾರೆ.

ಕೋವಿಡ್ ಎರಡನೇ ಅಲೆಯ ನಡುವೆಯೂ ಉತ್ತರಾಖಂಡದಲ್ಲಿ ಕುಂಭಮೇಳ ನಡೆಸಿದ ಟೀಕೆಗೆ ಗುರಿಯಾಗಿದ್ದ ಮಾಜಿ ಸಿಎಂ ತೀರತ್ ಸಿಂಗ್ ರಾವತ್‌ರವರನ್ನು ಮೇ ಅಂತ್ಯದಲ್ಲಿ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲಾಗದೆ. ಅವರ ಬದಲಿಗೆ ಪುಷ್ಕರ್‌ ಸಿಂಗ್ ಧಾಮಿ ಈಗ ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಆರೋಪದ ಕುರಿತು ಭಾರೀ ಚರ್ಚೆ ನಡೆಯುತ್ತಿದೆ.

ನಾನು ಸಿಎಂ ಆಗಿದ್ದಾಗ, ನಾವು ಹಂತ ಹಂತವಾಗಿ ಯಾತ್ರೆಗೆ ಅವಕಾಶ ನೀಡಿದ್ದೆವು. ಲಸಿಕೆ ಹಾಕಿದ ಜನರು ಮತ್ತು ಕೋವಿಡ್ ಮುಕ್ತ ಜಿಲ್ಲೆಗಳ ಜನರು ಕೇದಾರನಾಥ ಯಾತ್ರೆ ಭೇಟಿ ಮಾಡಲು ಅನುಮತಿಸಬೇಕು ಎಂದು ನಾನು ನಂಬುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಅಲ್ಲಿನ ಬಿಜೆಪಿ ನೇತೃತ್ವದ ಸರ್ಕಾರ ಈ ಬಾರಿಯ ಕೇದಾರನಾಥ ಯಾತ್ರೆಯನ್ನು ಮೊಟಕುಗೊಳಿಸಿದೆ. ಆದರೆ ಮೇಲಿನ ಆದೇಶಗಳು ಯಾತ್ರೆನ್ನು ತಡೆಯುತ್ತಿವೆ ಎಂದು ಮಾಜಿ ಸಿಎಂ ಹೇಳುವ ಮೂಲಕ ಅವರು ಬಿಜೆಪಿ ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ.

ಮುಂದಿನ ವರ್ಷದ ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದನ್ನು ಗೆಲ್ಲುವುದಕ್ಕಾಗಿಯೇ ಭಕ್ತಾಧಿಗಳನ್ನು ಒಲೈಸಲು ಈ ವರ್ಷದ ಮಾರ್ಚ್-ಏಪ್ರಿಲ್‌ನಲ್ಲಿ ಭಾರೀ ವಿರೋಧದ ನಡುವೆಯೂ ಕುಂಭಮೇಳ ನಡೆಸಲಾಗಿತ್ತು. ಈಗ ಅದನ್ನೆ ದಾಳವಾಗಿಟ್ಟುಕೊಂಡು ಮಾಜಿ ಸಿಎಂ ಪ್ರತಿಕ್ರಿಯಿಸಿದ್ದಾರೆ.

ಉತ್ತರಾಖಂಡದಲ್ಲಿ 2017ರಲ್ಲಿ ಬಿಜೆಪಿ ಸರ್ಕಾರ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಇದರ ನಾಯಕರಾಗಿ ರಾವತ್ ಆಯ್ಕೆಯಾಗಿದ್ದರು. ಆದರೆ ಕಾರ್ಯವೈಖರಿ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಅಪಸ್ವರ ಎತ್ತಿದ್ದರು. ರಾವತ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸದಿದ್ದರೆ, ರಾಜೀನಾಮೆ ನೀಡುವ ಬಗ್ಗೆ ಎಚ್ಚರಿಕೆ ನೀಡಿದ್ದರು. ಹಾಗಾಗಿ ಕಳೆದ ಮಾರ್ಚ್‌ನಲ್ಲಿ ಅವರು ರಾಜೀನಾಮೆ ನೀಡಿದ್ದರು.

ಮುಖ್ಯಮಂತ್ರಿಯಿಂದ ಕೆಳಗಿಳಿದ ನಂತರವೂ ಸಹ “ಕೊರೊನಾ ವೈರಸ್ ಒಂದು ಜೀವಂತ ಜೀವಿ, ನಮ್ಮಂತೆ ಅದಕ್ಕೂ ಬದುಕುವ ಹಕ್ಕು ಇದೆ” ಎಂದು ತ್ರಿವೇಂದ್ರ ಸಿಂಗ್ ರಾವತ್ ಹೇಳಿಕೆ ನೀಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ಗೆ ಒಳಗಾಗಿದ್ದರು.

ಅವರ ನಂತರ ಸಿಎಂ ಆದ ತೀರತ್ ಸಿಂಗ್ ರಾವತ್ ತಜ್ಞರ ವಿರೋಧದ ನಡುವೆಯೂ ಕುಂಭಮೇಳವನ್ನು ನಡೆಸಿ ಅದನ್ನು ಸಮರ್ಥಿಸಿಕೊಂಡಿದ್ದರು. ಅದರಿಂದಾಗಿಯೇ ಲಕ್ಷಾಂತರ ಜನಕ್ಕೆ ಕೋವಿಡ್ ತಗುಲಿದೆ ಎಂದು ತಜ್ಞರು ಆರೋಪಿಸಿದ್ದರು. ಮುಖ್ಯಮಂತ್ರಿಯಾಗಿ ಮುಂದುವರೆಯಲು ಆರು ತಿಂಗಳೊಳಗೆ ಅವರು ಯಾವುದಾದರೂ ಸದನದ ಸದಸ್ಯರಾಗಬೇಕಿತ್ತು. ಉತ್ತರಾಖಂಡದಲ್ಲಿ ವಿಧಾನ ಪರಿಷತ್ ಅಸ್ತಿತ್ವದಲ್ಲಿಲ್ಲ. ಅಲ್ಲದೇ ಕೊರೊನಾ ಕಾರಣದಿಂದ ಚುನಾವಣಾ ಆಯೋಗವು ಸದ್ಯಕ್ಕೆ ಉಪ ಚುನಾವಣೆ ನಡೆಸುವುದು ಕಷ್ಟಕರ ಎಂಬ ಕಾರಣ ನೀಡಿ ಬಿಜೆಪಿ ಹೈಕಮಾಂಡ್ ಅವರನ್ನು ಮೇ ಅಂತ್ಯದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದೆ. ಈಗ ಪುಷ್ಕರ್‌ ಸಿಂಗ್ ಧಾಮಿ ನೂತನ ಸಿಎಂ ಆಗಿದ್ದಾರೆ.


ಇದನ್ನೂ ಓದಿ: Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...