Homeಮುಖಪುಟರಾಜಕೀಯ ಕೆಲಸ ಬಿಟ್ಟು, ಜನರ ಸಹಾಯಕ್ಕೆ ನಿಲ್ಲುವಂತೆ ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

ರಾಜಕೀಯ ಕೆಲಸ ಬಿಟ್ಟು, ಜನರ ಸಹಾಯಕ್ಕೆ ನಿಲ್ಲುವಂತೆ ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

’ವ್ಯವಸ್ಥೆ ವಿಫಲವಾಗಿದೆ, ಆದ್ದರಿಂದ ಜನ್ ಕಿ ಬಾತ್ ಮಾಡುವುದು ಮುಖ್ಯವಾಗಿದೆ’- ರಾಹುಲ್ ಗಾಂಧಿ

- Advertisement -
- Advertisement -

ದೇಶದಲ್ಲಿ ಕೊರೊನಾ ಪ್ರಕರಣಗಳು ದಾಖಲೆಯ ಹೆಚ್ಚಳ ಕಾಣುತ್ತಿದೆ. ತೀವ್ರ ಆಮ್ಲಜನಕದ ಬಿಕ್ಕಟ್ಟಿಗೆ ದೇಶ ಒಳಗಾಗಿದೆ. ಇವುಗಳಿಗೆ ಪರಿಹಾರ ಒದಗಿಸಲು ವ್ಯವಸ್ಥೆಯು ವಿಫಲವಾಗಿರುವ ಕಾರಣ ರಾಜಕೀಯ ಕೆಲಸ ಬಿಟ್ಟು ಸಾರ್ವಜನಿಕರಿಗೆ ಸಹಾಯ ಮಾಡುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತರು, ಮುಖಂಡರಲ್ಲಿ ಮನವಿ ಮಾಡಿದ್ದಾರೆ.

ತಮ್ಮ ಟ್ವಿಟರ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ರಾಹುಲ್ ಗಾಂಧಿ, ’ವ್ಯವಸ್ಥೆಯು ವಿಫಲವಾಗಿದೆ, ಆದ್ದರಿಂದ ಜನ್ ಕಿ ಬಾತ್ ಮಾಡುವುದು ಮುಖ್ಯವಾಗಿದೆ” ಎಂದು, ಪ್ರಧಾನಿಯವರ ಮನ್‌ ಕಿ ಬಾತ್ ಅನ್ನು ಟೀಕಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,767 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ದಾಖಲೆಯ 3,49,691 ಹೊಸ ಕೊರೊನಾ ಸೋಂಕು ಪ್ರಕರಣಗಳನ್ನು ದಾಖಲಿಸಿದೆ.

ಇದನ್ನೂ ಓದಿ: ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

 

“ವ್ಯವಸ್ಥೆ ವಿಫಲವಾಗಿದೆ. ಜನ್ ಕಿ ಬಾತ್ ಮಾಡುವುದು ಮುಖ್ಯವಾಗಿದೆ. ಈ ಬಿಕ್ಕಟ್ಟಿನಲ್ಲಿ, ದೇಶಕ್ಕೆ ಜವಾಬ್ದಾರಿಯುತ ನಾಗರಿಕರು ಬೇಕಾಗಿದ್ದಾರೆ. ಎಲ್ಲಾ ರಾಜಕೀಯ ಕೆಲಸಗಳನ್ನು ತೊರೆದು, ಸಾರ್ವಜನಿಕರಿಗೆ ಎಲ್ಲಾ ಸಹಾಯವನ್ನು ನೀಡಿ, ನಮ್ಮ ದೇಶದ ಜನರ ನೋವನ್ನು ಕಡಿಮೆ ಮಾಡಿ ಎಂದು ನನ್ನ ಕಾಂಗ್ರೆಸ್ ಸಹೋದ್ಯೋಗಿಗಳಿಗೆ ವಿನಂತಿ ಮಾಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

“ಇದು ಕಾಂಗ್ರೆಸ್ ಕುಟುಂಬದ ಧರ್ಮ” ತಮ್ಮ ಟ್ವೀಟ್‌ನಲ್ಲಿ ಸೇರಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇನ್ನೂ ಮೂರು ಹಂತಗಳ ಚುನಾವಣೆ ಇರುವಾಗಲೇ  ಕೊರೊನಾ ಕಾರಣದಿಂದ ಏಪ್ರಿಲ್ 18 ರಂದು, ರಾಹುಲ್ ಗಾಂಧಿ ಅವರು ಪಶ್ಚಿಮ ಬಂಗಾಳದಲ್ಲಿ ನಡೆಯಲಿದ್ದ ಎಲ್ಲಾ ಸಾರ್ವಜನಿಕ ರ್‍ಯಾಲಿಗಳನ್ನು ರದ್ದುಗೊಳಿಸಿದ್ದರು.

“ಕೊರೊನಾ ಪರಿಸ್ಥಿತಿಯ ದೃಷ್ಟಿಯಿಂದ, ನಾನು ಪಶ್ಚಿಮ ಬಂಗಾಳದಲ್ಲಿ ನನ್ನ ಎಲ್ಲಾ ಸಾರ್ವಜನಿಕ ರ್‍ಯಾಲಿಗಳನ್ನು ಸ್ಥಗಿತಗೊಳಿಸುತ್ತಿದ್ದೇನೆ. ಪ್ರಸ್ತುತ ಸಂದರ್ಭಗಳಲ್ಲಿ ದೊಡ್ಡ ಸಾರ್ವಜನಿಕ ರ್‍ಯಾಲಿಗಳನ್ನು ನಡೆಸುವ ಪರಿಣಾಮಗಳ ಬಗ್ಗೆ ಆಳವಾಗಿ ಯೋಚಿಸುವಂತೆ ನಾನು ಎಲ್ಲಾ ರಾಜಕೀಯ ಮುಖಂಡರಿಗೆ ಸಲಹೆ ನೀಡುತ್ತೇನೆ” ಎಂದು ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಕುರಿತ ಟ್ವೀಟ್‌ಗಳನ್ನು ಅಳಿಸುವಂತೆ ಮೋದಿ ಸರ್ಕಾರದ ಒತ್ತಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...