Homeಮುಖಪುಟಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

ಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

- Advertisement -
- Advertisement -

ಬಿಜೆಪಿ ತನ್ನ ರಾಜ್ಯ ಪಕ್ಷದ ಮುಖ್ಯಸ್ಥ ಕೆ ಅಣ್ಣಾಮಲೈ ಅವರನ್ನು ಹಿಡಿತದಲ್ಲಿ ಇಟ್ಟುಕೊಳ್ಳಬೇಕು  ಎಂದು  ಮಿತ್ರಪಕ್ಷ ಎಐಎಡಿಎಂಕೆ ಸೋಮವಾರ ಹೇಳಿದೆ. ಉನ್ನತ ನಾಯಕತ್ವದಲ್ಲಿ ಕೇಸರಿ ಪಕ್ಷದೊಂದಿಗಿನ ತನ್ನ ಸಂಬಂಧವನ್ನು ಮರುಪರಿಶೀಲಿಸಬೇಕು ಎಂದು ಎಐಎಡಿಎಂಕೆ ಹೇಳಿದೆ.

ಅಣ್ಣಾಮಲೈ ಅವರು ಮಾಜಿ ಮುಖ್ಯಮಂತ್ರಿ ಮತ್ತು ದಿವಂಗತ ಎಐಎಡಿಎಂಕೆ ವರಿಷ್ಠೆ ಜೆ ಜಯಲಲಿತಾ ಅವರನ್ನು ಪರೋಕ್ಷವಾಗಿ ಕೆಣಕಿದ ನಂತರ ಅವರ ಮೇಲೆ ಹಿರಿಯ ಎಐಎಡಿಎಂಕೆ ನಾಯಕ ಡಿ ಜಯಕುಮಾರ್ ಅವರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಪ್ರಮುಖ ಪತ್ರಿಕೆಯೊಂದಕ್ಕೆ ಅಣ್ಣಾಮಲೈ ಅವರು ನೀಡಿದ ಸಂದರ್ಶನದಲ್ಲಿ ”ಸಾರ್ವಜನಿಕ ಖಜಾನೆಯನ್ನು ಲಪಟಾಯಿಸಿದ ಯಾವುದೇ ಸರ್ಕಾರವನ್ನು ಪ್ರಶ್ನಿಸುತ್ತೇವೆ ಎಂದಿದ್ದಾರೆ. ತಮಿಳುನಾಡಿನ ಹಲವು ಸರ್ಕಾರಗಳ ಅವಧಿಯಲ್ಲಿ ಭ್ರಷ್ಟಚಾರ ನಡೆದಿವೆ. ಮಾಜಿ ಮುಖ್ಯಮಂತ್ರಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗಿದೆ. ಹಾಗಾಗಿಯೇ ತಮಿಳುನಾಡು ಅತ್ಯಂತ ಭ್ರಷ್ಟ ರಾಜ್ಯಗಳಲ್ಲೊಂದಾಗಿದೆ. 1991-96ರ ನಡುವಿನ ಅವಧಿಯು (ಜಯಲಲಿತಾ ಅವರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾಗ) ಭ್ರಷ್ಟಾಚಾರದಲ್ಲಿ ನಂಬರ್ ಒನ್ ಅವಧಿ ಎಂದು ಹೇಳುತ್ತೇನೆ” ಎಂದು ಅಣ್ಣಾಮಲೈ ಹೇಳಿದರು.

ಅಣ್ಣಾಮಲೈ ಅವರ ಹೇಳಿಕೆಯಿಂದ ಎಐಎಡಿಎಂಕೆ ಪದಾಧಿಕಾರಿಗಳು ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಚೆನ್ನೈನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಜಯಕುಮಾರ್, ”ತಮಿಳುನಾಡು ರಾಜಕೀಯದ ಇತಿಹಾಸ ಗೊತ್ತಿಲ್ಲದ ಅನನುಭವಿ ನಾಯಕ ಅಣ್ಣಾಮಲೈ” ಎಂದು ಕರೆದರು.

”ಡಿಎಂಕೆಯನ್ನು ಟೀಕಿಸುವ ಬದಲು… ಮೈತ್ರಿ ಪಾಲುದಾರರ ವಿರುದ್ಧ ಹೇಳಿಕೆಗಳನ್ನು ನೀಡುವುದು ಸ್ವೀಕಾರಾರ್ಹವಲ್ಲ. ಅವರ ಹೇಳಿಕೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಎಐಎಡಿಎಂಕೆ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಆಯ್ಕೆಯಾಗುವುದನ್ನು ನೋಡಲು ಬಯಸುತ್ತಾರೆ (2024 ರ ಲೋಕಸಭೆ ಚುನಾವಣೆಯಲ್ಲಿ). ಆದರೆ ಅಣ್ಣಾಮಲೈ ಅವರ ಹೇಳಿಕೆಯಿಂದ, ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯನ್ನು ಮುಂದುವರಿಸಲು ಬಯಸುವುದಿಲ್ಲ, ಮೋದಿ ಮತ್ತೆ ಪ್ರಧಾನಿಯಾಗುವುದನ್ನು ಬಯಸುವುದಿಲ್ಲ ಎಂದು ಸೂಚಿಸುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಸುಳ್ಳು ಆರೋಪಕ್ಕಾಗಿ ಅಣ್ಣಾಮಲೈ 500 ಕೋಟಿ ರೂ. ಮಾನನಷ್ಟ ಪರಿಹಾರ ನೀಡಬೇಕು: ಡಿಎಂಕೆ ನೋಟಿಸ್

”ಈಗ ಚುನಾವಣೆ ನಡೆದರೆ, ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟವು 30 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯವನ್ನು ಹೊಂದಿದೆ ಎಂದು ಜಯಕುಮಾರ್ ಹೇಳಿದರು, ಮೈತ್ರಿಕೂಟವು ಪುದುಚೇರಿ ಸೇರಿದಂತೆ ಎಲ್ಲಾ 40 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯನ್ನು ಹೊಂದಿದೆ” ಎಂದು ಹೇಳಿದರು.

”ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಣ್ಣಾಮಲೈ ಅವರನ್ನು ಚುನಾವಣಾ ಸಹ-ಪ್ರಭಾರಿಯಾಗಿ ನೇಮಕ ಮಾಡಲಾಗಿತ್ತು ಆದರೆ ಅಲ್ಲಿ ಬಿಜೆಪಿ ಬಹಳ ಹೀನಾಯವಾಗಿ ಸೋಲು ಕಂಡಿತು ಎಂದು ಅವರು ಹೇಳಿದರು. ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಹೊರಿಸಲಾದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಮಾಜಿ ಪೊಲೀಸ್ ಅಧಿಕಾರಿ ಏಕೆ ಪ್ರತಿಕ್ರಿಯಿಸಲಿಲ್ಲ?” ಎಂದು ಜಯಕುಮಾರ್ ಕೇಳಿದರು.

”ನಿಧನನಾಗಿರುವ ನಮ್ಮ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವುದು ಅತ್ಯಂತ ಖಂಡನೀಯ. 20 ವರ್ಷಗಳ ನಂತರ, (2021) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು ಮತ್ತು ಅದಕ್ಕೆ ಎಐಎಡಿಎಂಕೆ ಕಾರಣ. ಅಣ್ಣಾಮಲೈ ಅದನ್ನು ನಿರಾಕರಿಸಬಹುದೇ? ಅವರು ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟದ ಭಾಗವಾಗಿರುವುದರಿಂದ ಇಲ್ಲಿ ಬಿಜೆಪಿಗೆ ಗುರುತಿದೆ. ಅಮಿತ್ ಶಾ ಮತ್ತು (ಬಿಜೆಪಿ ಅಧ್ಯಕ್ಷ) ಜೆಪಿ ನಡ್ಡಾ ಅವರು ಅಣ್ಣಾಮಲೈ ಅವರಿಗೆ ಎಚ್ಚರಿಕೆ ನೀಡಬೇಕು, ಅವರನ್ನು ನಿಯಂತ್ರಿಸಬೇಕು” ಎಂದು ಎಚ್ಚರಿಕೆ ನೀಡಿದ್ದಾರೆ.

”ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಶೀತಲ ಸಮರ ಕಳೆದ ಹಲವು ತಿಂಗಳುಗಳಿಂದ ಚಾಲ್ತಿಯಲ್ಲಿದೆ, ಎರಡೂ ಪಕ್ಷಗಳ ನಾಯಕರು ಪರಸ್ಪರ ಟೀಕೆ ಮಾಡುತ್ತಿದ್ದಾರೆ. ಅಣ್ಣಾಮಲೈ ಅವರನ್ನು ಅಮ್ಮನಂಥ ಸರ್ವೋಚ್ಚ ನಾಯಕನಿಗೆ ಹೋಲಿಸಲು ಸಾಧ್ಯವಿಲ್ಲ” ಎಂದು ಜಯಕುಮಾರ್ ಹೇಳಿದರು.

ಇತ್ತೀಚಿನ ಜಟಾಪಟಿಯು ಎರಡು ಪಕ್ಷಗಳ ನಡುವಿನ ಸಂಬಂಧ ಮತ್ತು 2024 ರ ಚುನಾವಣೆಗೆ ಒಟ್ಟಿಗೆ ಸೇರುತ್ತದೆಯೇ ಎಂಬ ಅನುಮಾನವನ್ನು ಮತ್ತೊಮ್ಮೆ ಹುಟ್ಟುಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...