Homeಮುಖಪುಟಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

ಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

- Advertisement -
- Advertisement -

ಬಿಜೆಪಿ ತನ್ನ ರಾಜ್ಯ ಪಕ್ಷದ ಮುಖ್ಯಸ್ಥ ಕೆ ಅಣ್ಣಾಮಲೈ ಅವರನ್ನು ಹಿಡಿತದಲ್ಲಿ ಇಟ್ಟುಕೊಳ್ಳಬೇಕು  ಎಂದು  ಮಿತ್ರಪಕ್ಷ ಎಐಎಡಿಎಂಕೆ ಸೋಮವಾರ ಹೇಳಿದೆ. ಉನ್ನತ ನಾಯಕತ್ವದಲ್ಲಿ ಕೇಸರಿ ಪಕ್ಷದೊಂದಿಗಿನ ತನ್ನ ಸಂಬಂಧವನ್ನು ಮರುಪರಿಶೀಲಿಸಬೇಕು ಎಂದು ಎಐಎಡಿಎಂಕೆ ಹೇಳಿದೆ.

ಅಣ್ಣಾಮಲೈ ಅವರು ಮಾಜಿ ಮುಖ್ಯಮಂತ್ರಿ ಮತ್ತು ದಿವಂಗತ ಎಐಎಡಿಎಂಕೆ ವರಿಷ್ಠೆ ಜೆ ಜಯಲಲಿತಾ ಅವರನ್ನು ಪರೋಕ್ಷವಾಗಿ ಕೆಣಕಿದ ನಂತರ ಅವರ ಮೇಲೆ ಹಿರಿಯ ಎಐಎಡಿಎಂಕೆ ನಾಯಕ ಡಿ ಜಯಕುಮಾರ್ ಅವರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಪ್ರಮುಖ ಪತ್ರಿಕೆಯೊಂದಕ್ಕೆ ಅಣ್ಣಾಮಲೈ ಅವರು ನೀಡಿದ ಸಂದರ್ಶನದಲ್ಲಿ ”ಸಾರ್ವಜನಿಕ ಖಜಾನೆಯನ್ನು ಲಪಟಾಯಿಸಿದ ಯಾವುದೇ ಸರ್ಕಾರವನ್ನು ಪ್ರಶ್ನಿಸುತ್ತೇವೆ ಎಂದಿದ್ದಾರೆ. ತಮಿಳುನಾಡಿನ ಹಲವು ಸರ್ಕಾರಗಳ ಅವಧಿಯಲ್ಲಿ ಭ್ರಷ್ಟಚಾರ ನಡೆದಿವೆ. ಮಾಜಿ ಮುಖ್ಯಮಂತ್ರಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗಿದೆ. ಹಾಗಾಗಿಯೇ ತಮಿಳುನಾಡು ಅತ್ಯಂತ ಭ್ರಷ್ಟ ರಾಜ್ಯಗಳಲ್ಲೊಂದಾಗಿದೆ. 1991-96ರ ನಡುವಿನ ಅವಧಿಯು (ಜಯಲಲಿತಾ ಅವರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾಗ) ಭ್ರಷ್ಟಾಚಾರದಲ್ಲಿ ನಂಬರ್ ಒನ್ ಅವಧಿ ಎಂದು ಹೇಳುತ್ತೇನೆ” ಎಂದು ಅಣ್ಣಾಮಲೈ ಹೇಳಿದರು.

ಅಣ್ಣಾಮಲೈ ಅವರ ಹೇಳಿಕೆಯಿಂದ ಎಐಎಡಿಎಂಕೆ ಪದಾಧಿಕಾರಿಗಳು ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಚೆನ್ನೈನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಜಯಕುಮಾರ್, ”ತಮಿಳುನಾಡು ರಾಜಕೀಯದ ಇತಿಹಾಸ ಗೊತ್ತಿಲ್ಲದ ಅನನುಭವಿ ನಾಯಕ ಅಣ್ಣಾಮಲೈ” ಎಂದು ಕರೆದರು.

”ಡಿಎಂಕೆಯನ್ನು ಟೀಕಿಸುವ ಬದಲು… ಮೈತ್ರಿ ಪಾಲುದಾರರ ವಿರುದ್ಧ ಹೇಳಿಕೆಗಳನ್ನು ನೀಡುವುದು ಸ್ವೀಕಾರಾರ್ಹವಲ್ಲ. ಅವರ ಹೇಳಿಕೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಎಐಎಡಿಎಂಕೆ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಆಯ್ಕೆಯಾಗುವುದನ್ನು ನೋಡಲು ಬಯಸುತ್ತಾರೆ (2024 ರ ಲೋಕಸಭೆ ಚುನಾವಣೆಯಲ್ಲಿ). ಆದರೆ ಅಣ್ಣಾಮಲೈ ಅವರ ಹೇಳಿಕೆಯಿಂದ, ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯನ್ನು ಮುಂದುವರಿಸಲು ಬಯಸುವುದಿಲ್ಲ, ಮೋದಿ ಮತ್ತೆ ಪ್ರಧಾನಿಯಾಗುವುದನ್ನು ಬಯಸುವುದಿಲ್ಲ ಎಂದು ಸೂಚಿಸುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಸುಳ್ಳು ಆರೋಪಕ್ಕಾಗಿ ಅಣ್ಣಾಮಲೈ 500 ಕೋಟಿ ರೂ. ಮಾನನಷ್ಟ ಪರಿಹಾರ ನೀಡಬೇಕು: ಡಿಎಂಕೆ ನೋಟಿಸ್

”ಈಗ ಚುನಾವಣೆ ನಡೆದರೆ, ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟವು 30 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯವನ್ನು ಹೊಂದಿದೆ ಎಂದು ಜಯಕುಮಾರ್ ಹೇಳಿದರು, ಮೈತ್ರಿಕೂಟವು ಪುದುಚೇರಿ ಸೇರಿದಂತೆ ಎಲ್ಲಾ 40 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯನ್ನು ಹೊಂದಿದೆ” ಎಂದು ಹೇಳಿದರು.

”ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಣ್ಣಾಮಲೈ ಅವರನ್ನು ಚುನಾವಣಾ ಸಹ-ಪ್ರಭಾರಿಯಾಗಿ ನೇಮಕ ಮಾಡಲಾಗಿತ್ತು ಆದರೆ ಅಲ್ಲಿ ಬಿಜೆಪಿ ಬಹಳ ಹೀನಾಯವಾಗಿ ಸೋಲು ಕಂಡಿತು ಎಂದು ಅವರು ಹೇಳಿದರು. ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಹೊರಿಸಲಾದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಮಾಜಿ ಪೊಲೀಸ್ ಅಧಿಕಾರಿ ಏಕೆ ಪ್ರತಿಕ್ರಿಯಿಸಲಿಲ್ಲ?” ಎಂದು ಜಯಕುಮಾರ್ ಕೇಳಿದರು.

”ನಿಧನನಾಗಿರುವ ನಮ್ಮ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವುದು ಅತ್ಯಂತ ಖಂಡನೀಯ. 20 ವರ್ಷಗಳ ನಂತರ, (2021) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು ಮತ್ತು ಅದಕ್ಕೆ ಎಐಎಡಿಎಂಕೆ ಕಾರಣ. ಅಣ್ಣಾಮಲೈ ಅದನ್ನು ನಿರಾಕರಿಸಬಹುದೇ? ಅವರು ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟದ ಭಾಗವಾಗಿರುವುದರಿಂದ ಇಲ್ಲಿ ಬಿಜೆಪಿಗೆ ಗುರುತಿದೆ. ಅಮಿತ್ ಶಾ ಮತ್ತು (ಬಿಜೆಪಿ ಅಧ್ಯಕ್ಷ) ಜೆಪಿ ನಡ್ಡಾ ಅವರು ಅಣ್ಣಾಮಲೈ ಅವರಿಗೆ ಎಚ್ಚರಿಕೆ ನೀಡಬೇಕು, ಅವರನ್ನು ನಿಯಂತ್ರಿಸಬೇಕು” ಎಂದು ಎಚ್ಚರಿಕೆ ನೀಡಿದ್ದಾರೆ.

”ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಶೀತಲ ಸಮರ ಕಳೆದ ಹಲವು ತಿಂಗಳುಗಳಿಂದ ಚಾಲ್ತಿಯಲ್ಲಿದೆ, ಎರಡೂ ಪಕ್ಷಗಳ ನಾಯಕರು ಪರಸ್ಪರ ಟೀಕೆ ಮಾಡುತ್ತಿದ್ದಾರೆ. ಅಣ್ಣಾಮಲೈ ಅವರನ್ನು ಅಮ್ಮನಂಥ ಸರ್ವೋಚ್ಚ ನಾಯಕನಿಗೆ ಹೋಲಿಸಲು ಸಾಧ್ಯವಿಲ್ಲ” ಎಂದು ಜಯಕುಮಾರ್ ಹೇಳಿದರು.

ಇತ್ತೀಚಿನ ಜಟಾಪಟಿಯು ಎರಡು ಪಕ್ಷಗಳ ನಡುವಿನ ಸಂಬಂಧ ಮತ್ತು 2024 ರ ಚುನಾವಣೆಗೆ ಒಟ್ಟಿಗೆ ಸೇರುತ್ತದೆಯೇ ಎಂಬ ಅನುಮಾನವನ್ನು ಮತ್ತೊಮ್ಮೆ ಹುಟ್ಟುಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...