Homeಮುಖಪುಟಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

ಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

- Advertisement -
- Advertisement -

ಬಿಜೆಪಿ ತನ್ನ ರಾಜ್ಯ ಪಕ್ಷದ ಮುಖ್ಯಸ್ಥ ಕೆ ಅಣ್ಣಾಮಲೈ ಅವರನ್ನು ಹಿಡಿತದಲ್ಲಿ ಇಟ್ಟುಕೊಳ್ಳಬೇಕು  ಎಂದು  ಮಿತ್ರಪಕ್ಷ ಎಐಎಡಿಎಂಕೆ ಸೋಮವಾರ ಹೇಳಿದೆ. ಉನ್ನತ ನಾಯಕತ್ವದಲ್ಲಿ ಕೇಸರಿ ಪಕ್ಷದೊಂದಿಗಿನ ತನ್ನ ಸಂಬಂಧವನ್ನು ಮರುಪರಿಶೀಲಿಸಬೇಕು ಎಂದು ಎಐಎಡಿಎಂಕೆ ಹೇಳಿದೆ.

ಅಣ್ಣಾಮಲೈ ಅವರು ಮಾಜಿ ಮುಖ್ಯಮಂತ್ರಿ ಮತ್ತು ದಿವಂಗತ ಎಐಎಡಿಎಂಕೆ ವರಿಷ್ಠೆ ಜೆ ಜಯಲಲಿತಾ ಅವರನ್ನು ಪರೋಕ್ಷವಾಗಿ ಕೆಣಕಿದ ನಂತರ ಅವರ ಮೇಲೆ ಹಿರಿಯ ಎಐಎಡಿಎಂಕೆ ನಾಯಕ ಡಿ ಜಯಕುಮಾರ್ ಅವರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಪ್ರಮುಖ ಪತ್ರಿಕೆಯೊಂದಕ್ಕೆ ಅಣ್ಣಾಮಲೈ ಅವರು ನೀಡಿದ ಸಂದರ್ಶನದಲ್ಲಿ ”ಸಾರ್ವಜನಿಕ ಖಜಾನೆಯನ್ನು ಲಪಟಾಯಿಸಿದ ಯಾವುದೇ ಸರ್ಕಾರವನ್ನು ಪ್ರಶ್ನಿಸುತ್ತೇವೆ ಎಂದಿದ್ದಾರೆ. ತಮಿಳುನಾಡಿನ ಹಲವು ಸರ್ಕಾರಗಳ ಅವಧಿಯಲ್ಲಿ ಭ್ರಷ್ಟಚಾರ ನಡೆದಿವೆ. ಮಾಜಿ ಮುಖ್ಯಮಂತ್ರಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗಿದೆ. ಹಾಗಾಗಿಯೇ ತಮಿಳುನಾಡು ಅತ್ಯಂತ ಭ್ರಷ್ಟ ರಾಜ್ಯಗಳಲ್ಲೊಂದಾಗಿದೆ. 1991-96ರ ನಡುವಿನ ಅವಧಿಯು (ಜಯಲಲಿತಾ ಅವರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾಗ) ಭ್ರಷ್ಟಾಚಾರದಲ್ಲಿ ನಂಬರ್ ಒನ್ ಅವಧಿ ಎಂದು ಹೇಳುತ್ತೇನೆ” ಎಂದು ಅಣ್ಣಾಮಲೈ ಹೇಳಿದರು.

ಅಣ್ಣಾಮಲೈ ಅವರ ಹೇಳಿಕೆಯಿಂದ ಎಐಎಡಿಎಂಕೆ ಪದಾಧಿಕಾರಿಗಳು ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಚೆನ್ನೈನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಜಯಕುಮಾರ್, ”ತಮಿಳುನಾಡು ರಾಜಕೀಯದ ಇತಿಹಾಸ ಗೊತ್ತಿಲ್ಲದ ಅನನುಭವಿ ನಾಯಕ ಅಣ್ಣಾಮಲೈ” ಎಂದು ಕರೆದರು.

”ಡಿಎಂಕೆಯನ್ನು ಟೀಕಿಸುವ ಬದಲು… ಮೈತ್ರಿ ಪಾಲುದಾರರ ವಿರುದ್ಧ ಹೇಳಿಕೆಗಳನ್ನು ನೀಡುವುದು ಸ್ವೀಕಾರಾರ್ಹವಲ್ಲ. ಅವರ ಹೇಳಿಕೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಎಐಎಡಿಎಂಕೆ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಆಯ್ಕೆಯಾಗುವುದನ್ನು ನೋಡಲು ಬಯಸುತ್ತಾರೆ (2024 ರ ಲೋಕಸಭೆ ಚುನಾವಣೆಯಲ್ಲಿ). ಆದರೆ ಅಣ್ಣಾಮಲೈ ಅವರ ಹೇಳಿಕೆಯಿಂದ, ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯನ್ನು ಮುಂದುವರಿಸಲು ಬಯಸುವುದಿಲ್ಲ, ಮೋದಿ ಮತ್ತೆ ಪ್ರಧಾನಿಯಾಗುವುದನ್ನು ಬಯಸುವುದಿಲ್ಲ ಎಂದು ಸೂಚಿಸುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಸುಳ್ಳು ಆರೋಪಕ್ಕಾಗಿ ಅಣ್ಣಾಮಲೈ 500 ಕೋಟಿ ರೂ. ಮಾನನಷ್ಟ ಪರಿಹಾರ ನೀಡಬೇಕು: ಡಿಎಂಕೆ ನೋಟಿಸ್

”ಈಗ ಚುನಾವಣೆ ನಡೆದರೆ, ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟವು 30 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯವನ್ನು ಹೊಂದಿದೆ ಎಂದು ಜಯಕುಮಾರ್ ಹೇಳಿದರು, ಮೈತ್ರಿಕೂಟವು ಪುದುಚೇರಿ ಸೇರಿದಂತೆ ಎಲ್ಲಾ 40 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯನ್ನು ಹೊಂದಿದೆ” ಎಂದು ಹೇಳಿದರು.

”ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಣ್ಣಾಮಲೈ ಅವರನ್ನು ಚುನಾವಣಾ ಸಹ-ಪ್ರಭಾರಿಯಾಗಿ ನೇಮಕ ಮಾಡಲಾಗಿತ್ತು ಆದರೆ ಅಲ್ಲಿ ಬಿಜೆಪಿ ಬಹಳ ಹೀನಾಯವಾಗಿ ಸೋಲು ಕಂಡಿತು ಎಂದು ಅವರು ಹೇಳಿದರು. ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಹೊರಿಸಲಾದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಮಾಜಿ ಪೊಲೀಸ್ ಅಧಿಕಾರಿ ಏಕೆ ಪ್ರತಿಕ್ರಿಯಿಸಲಿಲ್ಲ?” ಎಂದು ಜಯಕುಮಾರ್ ಕೇಳಿದರು.

”ನಿಧನನಾಗಿರುವ ನಮ್ಮ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವುದು ಅತ್ಯಂತ ಖಂಡನೀಯ. 20 ವರ್ಷಗಳ ನಂತರ, (2021) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು ಮತ್ತು ಅದಕ್ಕೆ ಎಐಎಡಿಎಂಕೆ ಕಾರಣ. ಅಣ್ಣಾಮಲೈ ಅದನ್ನು ನಿರಾಕರಿಸಬಹುದೇ? ಅವರು ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟದ ಭಾಗವಾಗಿರುವುದರಿಂದ ಇಲ್ಲಿ ಬಿಜೆಪಿಗೆ ಗುರುತಿದೆ. ಅಮಿತ್ ಶಾ ಮತ್ತು (ಬಿಜೆಪಿ ಅಧ್ಯಕ್ಷ) ಜೆಪಿ ನಡ್ಡಾ ಅವರು ಅಣ್ಣಾಮಲೈ ಅವರಿಗೆ ಎಚ್ಚರಿಕೆ ನೀಡಬೇಕು, ಅವರನ್ನು ನಿಯಂತ್ರಿಸಬೇಕು” ಎಂದು ಎಚ್ಚರಿಕೆ ನೀಡಿದ್ದಾರೆ.

”ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಶೀತಲ ಸಮರ ಕಳೆದ ಹಲವು ತಿಂಗಳುಗಳಿಂದ ಚಾಲ್ತಿಯಲ್ಲಿದೆ, ಎರಡೂ ಪಕ್ಷಗಳ ನಾಯಕರು ಪರಸ್ಪರ ಟೀಕೆ ಮಾಡುತ್ತಿದ್ದಾರೆ. ಅಣ್ಣಾಮಲೈ ಅವರನ್ನು ಅಮ್ಮನಂಥ ಸರ್ವೋಚ್ಚ ನಾಯಕನಿಗೆ ಹೋಲಿಸಲು ಸಾಧ್ಯವಿಲ್ಲ” ಎಂದು ಜಯಕುಮಾರ್ ಹೇಳಿದರು.

ಇತ್ತೀಚಿನ ಜಟಾಪಟಿಯು ಎರಡು ಪಕ್ಷಗಳ ನಡುವಿನ ಸಂಬಂಧ ಮತ್ತು 2024 ರ ಚುನಾವಣೆಗೆ ಒಟ್ಟಿಗೆ ಸೇರುತ್ತದೆಯೇ ಎಂಬ ಅನುಮಾನವನ್ನು ಮತ್ತೊಮ್ಮೆ ಹುಟ್ಟುಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...