Homeಕರ್ನಾಟಕ‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

- Advertisement -
- Advertisement -

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು ಶಾಂತಿಗಾಗಿ ನಾಗರೀಕ ವೇದಿಕೆ ಹೇಳಿತು. 

2026 ಜನವರಿ 8, ಗುರುವಾರ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ವೇದಿಕೆಯ ಮುಖ್ಯಸ್ಥರು ನಕ್ಸಲ್ ಕಾರ್ಯಕರ್ತರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆದು, ಎಲ್ಲಾ ಮಾಜಿ ನಕ್ಸಲರ ಪುನರ್ವಸತಿ ಕಾರ್ಯವನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು. 

ಕರ್ನಾಟಕ, ಕೇರಳ ಹಾಗೂ ತಮಿಳುನಾಡು ನಕ್ಸಲ್ ಮುಕ್ತಗೊಂಡು ನಾಳೆಗೆ ಒಂದು ವರ್ಷ. ನಿಮ್ಮ ನೇತೃತ್ವದಲ್ಲಿ ಈ ಮಹತ್ಕಾರ್ಯ ನಡೆಯಿತು. ಇದು ಸಾಧ್ಯವಾಗಿದ್ದು ಕಾಡಿನಲ್ಲಿದ್ದ ನಕ್ಸಲರ ಕೊನೆ ತಂಡ ತೆಗೆದುಕೊಂಡ ತೀರ್ಮಾನದಿಂದಾಗಿ. ಅವರು ಈ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗಿದ್ದು ತಮ್ಮ ಮೇಲಿನ ವಿಶ್ವಾಸದಿಂದಾಗಿ. ಆ ವಿಶ್ವಾಸಕ್ಕೆ ಗ್ಯಾರಂಟಿಯಾಗಿ ನಿಂತದ್ದು “ಶಾಂತಿಗಾಗಿ ನಾಗರೀಕರ ವೇದಿಕೆ”. ಒಂದು ವರ್ಷದ ಹಿಂದಿನ ಇಂದಿನ ದಿನದಂದು ನಮ್ಮ ಮನಸ್ಸು ಸಂತೋಷ ಹಾಗೂ ಹೆಮ್ಮೆಯಿಂದ ಕೂಡಿತ್ತು. ಆದರೆ ಒಂದು ವರ್ಷದ ನಂತರದ ಇಂದು ನಮ್ಮ ಮನಸ್ಸಿನ ತುಂಬ ನೋವು, ದುಗುಡ ಹಾಗೂ ಪಾಪ ಪ್ರಜ್ಞೆ ತುಂಬಿಕೊಂಡಿದೆ ಎಂದು ಹೇಳಿದ್ದಾರೆ.

2025 ಜನವರಿ 8 ರಂದು ನಿಮ್ಮ ಕಛೇರಿಯಲ್ಲಿ, ನೂರಾರು ಮೀಡಿಯಾ ಕ್ಯಾಮರಾಗಳ ಎದುರು, ಅವರನ್ನು ಬರಮಾಡಿಕೊಳ್ಳುತ್ತಾ ತಾವು ಆಡಿದ ಮಾತು – “ಇಂದು ಅವರು ಕಾಡಿನಿಂದ ಜೈಲಿಗೆ ಬಂದಿದ್ದಾರೆ, ಆದಷ್ಟು ಬೇಗ ಜೈಲಿಂದ ನಾಡಿಗೆ ಬರುವಂತೆ ಮಾಡುವ ಜವಬ್ದಾರಿ ನಮ್ಮ ಸರ್ಕಾರ ಮೇಲಿದೆ. ಅದನ್ನು ನಿರ್ವಹಿಸುತ್ತೇವೆ”. ಆದರೆ ತಾವು ಕೊಟ್ಟ ಈ ಆಶ್ವಾಸನೆ ಇನ್ನೂ ಆಶ್ವಾಸನೆಯಾಗಷ್ಟೇ ಉಳಿದಿದೆ. ಈ ಸಂದರ್ಭದಲ್ಲಿ ಕೆಲವು ಕಠೋರ ವಾಸ್ತವಗಳನ್ನು ತಮ್ಮ ಗಮನಕ್ಕೆ ತರಲು ಬಯಸುತ್ತಿದ್ದೇವೆ ಎಂದಿರುವ ಶಾಂತಿಗಾಗಿ ನಾಗರೀಕ ವೇದಿಕೆಯ ಮುಖ್ಯಸ್ಥರು ಮುಖ್ಯವಾಹಿನಿಗೆ ಬಂದ ನಕ್ಸಲ್ ಕಾರ್ಯಕರ್ತರು ಎದುರಿಸುತ್ತಿರುವ ಸವಾಲುಗಳನ್ನು ವಿವರಿಸಿದರು. 

ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು [ಲತಾ, ಸುಂದರಿ, ವನಜಾಕ್ಷಿ ರಮೇಶ್, ವಸಂತ್, ರವೀಂದ್ರ] ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ.

ಅವರ ಕಾನೂನು ಪ್ರಕ್ರಿಯೆ ಒಂದು ಇಂಚು ಸಹ ಮುಂದಕ್ಕೆ ಹೋಗಿಲ್ಲ. ತ್ವರಿತ ವಿಚಾರಣೆಗಾಗಿ ಸರ್ಕಾರ ಪ್ರಸ್ತಾಪಿಸಿದ್ದ ವಿಶೇಷ ನ್ಯಾಯಲಯ ಕಾರ್ಯರೂಪಕ್ಕೆ ಬಂದಿಲ್ಲ.

ಇದಕ್ಕೂ ಮೊದಲು ಮುಖ್ಯವಾಹಿನಿಗೆ ಬಂದಿದ್ದ ಕನ್ಯಾಕುಮಾರಿ ಕಳೆದ 9 ವರ್ಷಗಳಿಂದ ಜೈಲಿನಲ್ಲೇ ಇದ್ದಾರೆ. ಆಕೆಯ ಮಗು ಐದು ವರ್ಷ ಜೈಲಿನಲ್ಲೇ ಇತ್ತು, ಈಗ ಹೊರಗಿದೆ. ಕಂಬಿಗಳ ಹಿಂದಿನಿಂದಲೇ ಅಮ್ಮನನ್ನು ಆಗಾಗ ಕಂಡು ಬರುತ್ತಿದೆ.

ಇವರೆಲ್ಲರ ಮೇಲೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲೂ ಅನೇಕ ಕೇಸುಗಳಿವೆ. ನೀವು ಅಲ್ಲಿನ ಮುಖ್ಯಮಂತ್ರಿಗಳಿಗೆ ಒಂದು ಪತ್ರ ಬರೆದಿದ್ದೀರಿ. ಅದು ಅಲ್ಲಿಗೇ ಮುಗಿಯಿತು. ಅಲ್ಲಿಂದಲೂ ಯಾವುದೇ ರೀತಿಯ ನೆರವು ಸರ್ಕಾರವನ್ನು ಮತ್ತು ನಮ್ಮನ್ನು ನಂಬಿ ಬಂದ ಈ ಆದಿವಾಸಿ, ದಲಿತ ಕಾರ್ಯಕರ್ತರುಗಳಿಗೆ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.  

ಅಲ್ಲದೇ ಈ ಹಿಂದೆ ಮುಖ್ಯವಾಹಿನಿಗೆ ಬಂದಿದ್ದ ಪದ್ಮನಾಭ, ರೇಣುಕಾ, ರಿಜ್ವಾನಾ, ಚೆನ್ನಮ್ಮ, ಜ್ಞಾನದೇವ, ಪರಶುರಾಮ ಎಲ್ಲರೂ ಕಡುಕಷ್ಟಗಳ ನಡುವೆ ಬದುಕು ನೂಕುತ್ತಿದ್ದಾರೆ. ಪರಿಹಾರವಾಗಿ ಬಂದ ಹಣ ಮಾಡಿಕೊಂಡಿದ್ದ ಸಾಲ ಮತ್ತು ಕೋರ್ಟು ಖರ್ಚುಗಳಿಗೇ ಸಾಲಲಿಲ್ಲ. ಪುನರ್ವಸತಿ ಸಂಬಂಧಿತ [ಸ್ವಯಂ ಉದ್ಯೋಗಕ್ಕೆ ನೆರವು ಮತ್ತು ವಸತಿ] ನಿರ್ಣಯಗಳು ಕಾಗದದ ಮೇಲಷ್ಟೇ ಉಳಿದಿವೆ.

ನಕ್ಸಲರು ಮುಖ್ಯವಾಹಿನಿಗೆ ಬರುವಾಗ ಮಲೆನಾಡಿನ ಬಡಜನರ ಬದುಕನ್ನು ಬಾಧಿಸುತ್ತಿರುವ 18 ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದು ಅವನ್ನು ಸಹನೀಯಗೊಳಿಸುವ ಮಟ್ಟದ ಕ್ರಮಗಳನ್ನಾದರೂ ತೆಗೆದುಕೊಳ್ಳುವಂತೆ ತಮಗೆ ಮನವಿ ಮಾಡಿದ್ದರು. ಈ ಸಮಸ್ಯೆಗಳ ಅಧ್ಯಯನ ಮತ್ತು ಯೋಜಿತ ಪರಿಹಾರ ಕ್ರಮಗಳನ್ನು ರೂಪಿಸಲು ಕಳೆದ ಬಜೆಟ್ಟಿನಲ್ಲಿ ತಾವು 10 ಕೋಟಿ ಹಣವನ್ನು ಎತ್ತಿಟ್ಟಿದ್ದೀರಿ. ಆದರೆ ಆ ಹಣ ಮೂಲ ಉದ್ದೇಶದ ಜೊತೆ ಸಂಬಂಧವನ್ನೇ ಇಟ್ಟುಕೊಳ್ಳದೆ ಖರ್ಚಾಗಿದೆ. ಇದಕ್ಕಾಗಿ ವಿಶೇಷ ಅಧಿಕಾರಿಯನ್ನು ನೇಮಿಸಬೇಕು ಎಂದು ಆಗಿದ್ದ ತೀರ್ಮಾನವೂ ಜಾರಿಯಾಗಿಲ್ಲ.

ಸಾರಾಂಶದಲ್ಲಿ ನಕ್ಸಲೀಯರನ್ನು ಮನವೊಲಿಸಿ ಮುಖ್ಯವಾಹಿನಿಗೆ ತರುವುದರಲ್ಲಿ ಕರ್ನಾಟಕ ಮೇಲ್ಪಂಕ್ತಿ ಹಾಕಿಕೊಟ್ಟಿತು. ಆದರೆ ಕಾನೂನಿನ ನೆರವು ನೀಡುವುದರಲ್ಲಿ ಹಾಗೂ ಬದುಕು ಕಟ್ಟಿ ಕೊಡುವುದರಲ್ಲಿ ಸಂಪೂರ್ಣವಾಗಿ ಸೋತಿದೆ ಎಂದೇ ಹೇಳಬೇಕು.

ಇಂದು ಉಪವಾಸ ಸತ್ಯಾಗ್ರಹ ನಡೆಸಬೇಕು ಎಂದುಕೊಂಡಿದ್ದೆವು ಆದರೂ ಕೊನೆ ಪ್ರಯತ್ನವೆಂದು ತಮ್ಮಲ್ಲಿ ಈ ಒತ್ತಾಯಪೂರ್ವಕ ಮನವಿಯನ್ನು ಮಾಡುತ್ತಿದ್ದೇವೆ. ಈ ಕೆಳಕಂಡ ಕ್ರಮಗಳನ್ನು ತಾವು ತೆಗೆದುಕೊಳ್ಳಲೇಬೇಕು.

ಜೈಲಲ್ಲಿರುವವರನ್ನು ಇನ್ನೂ ಕಾಯಿಸುವುದು, ಮತ್ತೆ ಕೋರ್ಟಿಗೆ ಅಲೆಸುವುದು ಸರಿಯಲ್ಲ. ಹಾಗಾಗಿ ಛತ್ತೀಸ್ ಘಡ ಸರ್ಕಾರದ ಮಾದರಿಯಲ್ಲಿ ಅವರ ಮೇಲಿನ ಎಲ್ಲಾ ಕೇಸುಗಳನ್ನು ಹಿಂಪಡೆಯಲು ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು.

ಒಂಭತ್ತು ವರ್ಷದಿಂದ ಜೈಲಲ್ಲಿರುವ ಕನ್ಯಾಕುಮಾರಿಯ ಬಿಡುಗಡೆಗೆ ಆಧ್ಯತೆಯ ಮೇರೆಗೆ ಕ್ರಮ ತೆಗೆದುಕೊಳ್ಳಬೇಕು.

ಹೊರಗಿರುವ ಎಲ್ಲಾ ಮಾಜಿ ನಕ್ಸಲೀಯರ ಪುನರ್ವಸತಿಗೆ ಸಂಬಂಧಿಸಿದ ತೀರ್ಮಾನಗಳು ಕೂಡಲೇ ಜಾರಿಯಾಗುವಂತೆ ತಾವು ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು.

ನಕ್ಸಲ್ ಪ್ರದೇಶದ ಅಭಿವೃದ್ಧಿಗಾಗಿ ಮಂಜೂರಾಗಿರುವ ಹಣವನ್ನು ಮೂಲ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ಜಾರಿಯಾಗುವಂತೆ ಮಾಡಲು ವಿಶೇಷ ಅಧಿಕಾರಿಯನ್ನು ನಿಯೋಜಿಸಿ ಸದ್ಬಳಕೆ ಮಾಡುವಂತೆ ತಾವು ಆದೇಶಿಸಬೇಕು ಎಂದು ಮನವಿ ಮಾಡಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಶಾಂತಿಗಾಗಿ ನಾಗರೀಕ ವೇದಿಕೆಯ ನಗರಗೆರೆ ರಮೇಶ್, ವಿ.ಎಸ್. ಶ್ರೀಧರ್, ತಾರಾ ರಾವ್, ಬಿ.ಟಿ. ಲಲಿತಾ ನಾಯ್, ನೂರ್ ಶ್ರೀಧರ್ ಹಾಗೂ ವೀರಸಂಗಯ್ಯ ಉಪಸ್ಥಿತರಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...