Homeಕರ್ನಾಟಕ‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

- Advertisement -
- Advertisement -

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು ಶಾಂತಿಗಾಗಿ ನಾಗರೀಕ ವೇದಿಕೆ ಹೇಳಿತು. 

2026 ಜನವರಿ 8, ಗುರುವಾರ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ವೇದಿಕೆಯ ಮುಖ್ಯಸ್ಥರು ನಕ್ಸಲ್ ಕಾರ್ಯಕರ್ತರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆದು, ಎಲ್ಲಾ ಮಾಜಿ ನಕ್ಸಲರ ಪುನರ್ವಸತಿ ಕಾರ್ಯವನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು. 

ಕರ್ನಾಟಕ, ಕೇರಳ ಹಾಗೂ ತಮಿಳುನಾಡು ನಕ್ಸಲ್ ಮುಕ್ತಗೊಂಡು ನಾಳೆಗೆ ಒಂದು ವರ್ಷ. ನಿಮ್ಮ ನೇತೃತ್ವದಲ್ಲಿ ಈ ಮಹತ್ಕಾರ್ಯ ನಡೆಯಿತು. ಇದು ಸಾಧ್ಯವಾಗಿದ್ದು ಕಾಡಿನಲ್ಲಿದ್ದ ನಕ್ಸಲರ ಕೊನೆ ತಂಡ ತೆಗೆದುಕೊಂಡ ತೀರ್ಮಾನದಿಂದಾಗಿ. ಅವರು ಈ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗಿದ್ದು ತಮ್ಮ ಮೇಲಿನ ವಿಶ್ವಾಸದಿಂದಾಗಿ. ಆ ವಿಶ್ವಾಸಕ್ಕೆ ಗ್ಯಾರಂಟಿಯಾಗಿ ನಿಂತದ್ದು “ಶಾಂತಿಗಾಗಿ ನಾಗರೀಕರ ವೇದಿಕೆ”. ಒಂದು ವರ್ಷದ ಹಿಂದಿನ ಇಂದಿನ ದಿನದಂದು ನಮ್ಮ ಮನಸ್ಸು ಸಂತೋಷ ಹಾಗೂ ಹೆಮ್ಮೆಯಿಂದ ಕೂಡಿತ್ತು. ಆದರೆ ಒಂದು ವರ್ಷದ ನಂತರದ ಇಂದು ನಮ್ಮ ಮನಸ್ಸಿನ ತುಂಬ ನೋವು, ದುಗುಡ ಹಾಗೂ ಪಾಪ ಪ್ರಜ್ಞೆ ತುಂಬಿಕೊಂಡಿದೆ ಎಂದು ಹೇಳಿದ್ದಾರೆ.

2025 ಜನವರಿ 8 ರಂದು ನಿಮ್ಮ ಕಛೇರಿಯಲ್ಲಿ, ನೂರಾರು ಮೀಡಿಯಾ ಕ್ಯಾಮರಾಗಳ ಎದುರು, ಅವರನ್ನು ಬರಮಾಡಿಕೊಳ್ಳುತ್ತಾ ತಾವು ಆಡಿದ ಮಾತು – “ಇಂದು ಅವರು ಕಾಡಿನಿಂದ ಜೈಲಿಗೆ ಬಂದಿದ್ದಾರೆ, ಆದಷ್ಟು ಬೇಗ ಜೈಲಿಂದ ನಾಡಿಗೆ ಬರುವಂತೆ ಮಾಡುವ ಜವಬ್ದಾರಿ ನಮ್ಮ ಸರ್ಕಾರ ಮೇಲಿದೆ. ಅದನ್ನು ನಿರ್ವಹಿಸುತ್ತೇವೆ”. ಆದರೆ ತಾವು ಕೊಟ್ಟ ಈ ಆಶ್ವಾಸನೆ ಇನ್ನೂ ಆಶ್ವಾಸನೆಯಾಗಷ್ಟೇ ಉಳಿದಿದೆ. ಈ ಸಂದರ್ಭದಲ್ಲಿ ಕೆಲವು ಕಠೋರ ವಾಸ್ತವಗಳನ್ನು ತಮ್ಮ ಗಮನಕ್ಕೆ ತರಲು ಬಯಸುತ್ತಿದ್ದೇವೆ ಎಂದಿರುವ ಶಾಂತಿಗಾಗಿ ನಾಗರೀಕ ವೇದಿಕೆಯ ಮುಖ್ಯಸ್ಥರು ಮುಖ್ಯವಾಹಿನಿಗೆ ಬಂದ ನಕ್ಸಲ್ ಕಾರ್ಯಕರ್ತರು ಎದುರಿಸುತ್ತಿರುವ ಸವಾಲುಗಳನ್ನು ವಿವರಿಸಿದರು. 

ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು [ಲತಾ, ಸುಂದರಿ, ವನಜಾಕ್ಷಿ ರಮೇಶ್, ವಸಂತ್, ರವೀಂದ್ರ] ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ.

ಅವರ ಕಾನೂನು ಪ್ರಕ್ರಿಯೆ ಒಂದು ಇಂಚು ಸಹ ಮುಂದಕ್ಕೆ ಹೋಗಿಲ್ಲ. ತ್ವರಿತ ವಿಚಾರಣೆಗಾಗಿ ಸರ್ಕಾರ ಪ್ರಸ್ತಾಪಿಸಿದ್ದ ವಿಶೇಷ ನ್ಯಾಯಲಯ ಕಾರ್ಯರೂಪಕ್ಕೆ ಬಂದಿಲ್ಲ.

ಇದಕ್ಕೂ ಮೊದಲು ಮುಖ್ಯವಾಹಿನಿಗೆ ಬಂದಿದ್ದ ಕನ್ಯಾಕುಮಾರಿ ಕಳೆದ 9 ವರ್ಷಗಳಿಂದ ಜೈಲಿನಲ್ಲೇ ಇದ್ದಾರೆ. ಆಕೆಯ ಮಗು ಐದು ವರ್ಷ ಜೈಲಿನಲ್ಲೇ ಇತ್ತು, ಈಗ ಹೊರಗಿದೆ. ಕಂಬಿಗಳ ಹಿಂದಿನಿಂದಲೇ ಅಮ್ಮನನ್ನು ಆಗಾಗ ಕಂಡು ಬರುತ್ತಿದೆ.

ಇವರೆಲ್ಲರ ಮೇಲೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲೂ ಅನೇಕ ಕೇಸುಗಳಿವೆ. ನೀವು ಅಲ್ಲಿನ ಮುಖ್ಯಮಂತ್ರಿಗಳಿಗೆ ಒಂದು ಪತ್ರ ಬರೆದಿದ್ದೀರಿ. ಅದು ಅಲ್ಲಿಗೇ ಮುಗಿಯಿತು. ಅಲ್ಲಿಂದಲೂ ಯಾವುದೇ ರೀತಿಯ ನೆರವು ಸರ್ಕಾರವನ್ನು ಮತ್ತು ನಮ್ಮನ್ನು ನಂಬಿ ಬಂದ ಈ ಆದಿವಾಸಿ, ದಲಿತ ಕಾರ್ಯಕರ್ತರುಗಳಿಗೆ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.  

ಅಲ್ಲದೇ ಈ ಹಿಂದೆ ಮುಖ್ಯವಾಹಿನಿಗೆ ಬಂದಿದ್ದ ಪದ್ಮನಾಭ, ರೇಣುಕಾ, ರಿಜ್ವಾನಾ, ಚೆನ್ನಮ್ಮ, ಜ್ಞಾನದೇವ, ಪರಶುರಾಮ ಎಲ್ಲರೂ ಕಡುಕಷ್ಟಗಳ ನಡುವೆ ಬದುಕು ನೂಕುತ್ತಿದ್ದಾರೆ. ಪರಿಹಾರವಾಗಿ ಬಂದ ಹಣ ಮಾಡಿಕೊಂಡಿದ್ದ ಸಾಲ ಮತ್ತು ಕೋರ್ಟು ಖರ್ಚುಗಳಿಗೇ ಸಾಲಲಿಲ್ಲ. ಪುನರ್ವಸತಿ ಸಂಬಂಧಿತ [ಸ್ವಯಂ ಉದ್ಯೋಗಕ್ಕೆ ನೆರವು ಮತ್ತು ವಸತಿ] ನಿರ್ಣಯಗಳು ಕಾಗದದ ಮೇಲಷ್ಟೇ ಉಳಿದಿವೆ.

ನಕ್ಸಲರು ಮುಖ್ಯವಾಹಿನಿಗೆ ಬರುವಾಗ ಮಲೆನಾಡಿನ ಬಡಜನರ ಬದುಕನ್ನು ಬಾಧಿಸುತ್ತಿರುವ 18 ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದು ಅವನ್ನು ಸಹನೀಯಗೊಳಿಸುವ ಮಟ್ಟದ ಕ್ರಮಗಳನ್ನಾದರೂ ತೆಗೆದುಕೊಳ್ಳುವಂತೆ ತಮಗೆ ಮನವಿ ಮಾಡಿದ್ದರು. ಈ ಸಮಸ್ಯೆಗಳ ಅಧ್ಯಯನ ಮತ್ತು ಯೋಜಿತ ಪರಿಹಾರ ಕ್ರಮಗಳನ್ನು ರೂಪಿಸಲು ಕಳೆದ ಬಜೆಟ್ಟಿನಲ್ಲಿ ತಾವು 10 ಕೋಟಿ ಹಣವನ್ನು ಎತ್ತಿಟ್ಟಿದ್ದೀರಿ. ಆದರೆ ಆ ಹಣ ಮೂಲ ಉದ್ದೇಶದ ಜೊತೆ ಸಂಬಂಧವನ್ನೇ ಇಟ್ಟುಕೊಳ್ಳದೆ ಖರ್ಚಾಗಿದೆ. ಇದಕ್ಕಾಗಿ ವಿಶೇಷ ಅಧಿಕಾರಿಯನ್ನು ನೇಮಿಸಬೇಕು ಎಂದು ಆಗಿದ್ದ ತೀರ್ಮಾನವೂ ಜಾರಿಯಾಗಿಲ್ಲ.

ಸಾರಾಂಶದಲ್ಲಿ ನಕ್ಸಲೀಯರನ್ನು ಮನವೊಲಿಸಿ ಮುಖ್ಯವಾಹಿನಿಗೆ ತರುವುದರಲ್ಲಿ ಕರ್ನಾಟಕ ಮೇಲ್ಪಂಕ್ತಿ ಹಾಕಿಕೊಟ್ಟಿತು. ಆದರೆ ಕಾನೂನಿನ ನೆರವು ನೀಡುವುದರಲ್ಲಿ ಹಾಗೂ ಬದುಕು ಕಟ್ಟಿ ಕೊಡುವುದರಲ್ಲಿ ಸಂಪೂರ್ಣವಾಗಿ ಸೋತಿದೆ ಎಂದೇ ಹೇಳಬೇಕು.

ಇಂದು ಉಪವಾಸ ಸತ್ಯಾಗ್ರಹ ನಡೆಸಬೇಕು ಎಂದುಕೊಂಡಿದ್ದೆವು ಆದರೂ ಕೊನೆ ಪ್ರಯತ್ನವೆಂದು ತಮ್ಮಲ್ಲಿ ಈ ಒತ್ತಾಯಪೂರ್ವಕ ಮನವಿಯನ್ನು ಮಾಡುತ್ತಿದ್ದೇವೆ. ಈ ಕೆಳಕಂಡ ಕ್ರಮಗಳನ್ನು ತಾವು ತೆಗೆದುಕೊಳ್ಳಲೇಬೇಕು.

ಜೈಲಲ್ಲಿರುವವರನ್ನು ಇನ್ನೂ ಕಾಯಿಸುವುದು, ಮತ್ತೆ ಕೋರ್ಟಿಗೆ ಅಲೆಸುವುದು ಸರಿಯಲ್ಲ. ಹಾಗಾಗಿ ಛತ್ತೀಸ್ ಘಡ ಸರ್ಕಾರದ ಮಾದರಿಯಲ್ಲಿ ಅವರ ಮೇಲಿನ ಎಲ್ಲಾ ಕೇಸುಗಳನ್ನು ಹಿಂಪಡೆಯಲು ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು.

ಒಂಭತ್ತು ವರ್ಷದಿಂದ ಜೈಲಲ್ಲಿರುವ ಕನ್ಯಾಕುಮಾರಿಯ ಬಿಡುಗಡೆಗೆ ಆಧ್ಯತೆಯ ಮೇರೆಗೆ ಕ್ರಮ ತೆಗೆದುಕೊಳ್ಳಬೇಕು.

ಹೊರಗಿರುವ ಎಲ್ಲಾ ಮಾಜಿ ನಕ್ಸಲೀಯರ ಪುನರ್ವಸತಿಗೆ ಸಂಬಂಧಿಸಿದ ತೀರ್ಮಾನಗಳು ಕೂಡಲೇ ಜಾರಿಯಾಗುವಂತೆ ತಾವು ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು.

ನಕ್ಸಲ್ ಪ್ರದೇಶದ ಅಭಿವೃದ್ಧಿಗಾಗಿ ಮಂಜೂರಾಗಿರುವ ಹಣವನ್ನು ಮೂಲ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ಜಾರಿಯಾಗುವಂತೆ ಮಾಡಲು ವಿಶೇಷ ಅಧಿಕಾರಿಯನ್ನು ನಿಯೋಜಿಸಿ ಸದ್ಬಳಕೆ ಮಾಡುವಂತೆ ತಾವು ಆದೇಶಿಸಬೇಕು ಎಂದು ಮನವಿ ಮಾಡಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಶಾಂತಿಗಾಗಿ ನಾಗರೀಕ ವೇದಿಕೆಯ ನಗರಗೆರೆ ರಮೇಶ್, ವಿ.ಎಸ್. ಶ್ರೀಧರ್, ತಾರಾ ರಾವ್, ಬಿ.ಟಿ. ಲಲಿತಾ ನಾಯ್, ನೂರ್ ಶ್ರೀಧರ್ ಹಾಗೂ ವೀರಸಂಗಯ್ಯ ಉಪಸ್ಥಿತರಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...