Homeಕರ್ನಾಟಕ‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

- Advertisement -
- Advertisement -

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು ಶಾಂತಿಗಾಗಿ ನಾಗರೀಕ ವೇದಿಕೆ ಹೇಳಿತು. 

2026 ಜನವರಿ 8, ಗುರುವಾರ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ವೇದಿಕೆಯ ಮುಖ್ಯಸ್ಥರು ನಕ್ಸಲ್ ಕಾರ್ಯಕರ್ತರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆದು, ಎಲ್ಲಾ ಮಾಜಿ ನಕ್ಸಲರ ಪುನರ್ವಸತಿ ಕಾರ್ಯವನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು. 

ಕರ್ನಾಟಕ, ಕೇರಳ ಹಾಗೂ ತಮಿಳುನಾಡು ನಕ್ಸಲ್ ಮುಕ್ತಗೊಂಡು ನಾಳೆಗೆ ಒಂದು ವರ್ಷ. ನಿಮ್ಮ ನೇತೃತ್ವದಲ್ಲಿ ಈ ಮಹತ್ಕಾರ್ಯ ನಡೆಯಿತು. ಇದು ಸಾಧ್ಯವಾಗಿದ್ದು ಕಾಡಿನಲ್ಲಿದ್ದ ನಕ್ಸಲರ ಕೊನೆ ತಂಡ ತೆಗೆದುಕೊಂಡ ತೀರ್ಮಾನದಿಂದಾಗಿ. ಅವರು ಈ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗಿದ್ದು ತಮ್ಮ ಮೇಲಿನ ವಿಶ್ವಾಸದಿಂದಾಗಿ. ಆ ವಿಶ್ವಾಸಕ್ಕೆ ಗ್ಯಾರಂಟಿಯಾಗಿ ನಿಂತದ್ದು “ಶಾಂತಿಗಾಗಿ ನಾಗರೀಕರ ವೇದಿಕೆ”. ಒಂದು ವರ್ಷದ ಹಿಂದಿನ ಇಂದಿನ ದಿನದಂದು ನಮ್ಮ ಮನಸ್ಸು ಸಂತೋಷ ಹಾಗೂ ಹೆಮ್ಮೆಯಿಂದ ಕೂಡಿತ್ತು. ಆದರೆ ಒಂದು ವರ್ಷದ ನಂತರದ ಇಂದು ನಮ್ಮ ಮನಸ್ಸಿನ ತುಂಬ ನೋವು, ದುಗುಡ ಹಾಗೂ ಪಾಪ ಪ್ರಜ್ಞೆ ತುಂಬಿಕೊಂಡಿದೆ ಎಂದು ಹೇಳಿದ್ದಾರೆ.

2025 ಜನವರಿ 8 ರಂದು ನಿಮ್ಮ ಕಛೇರಿಯಲ್ಲಿ, ನೂರಾರು ಮೀಡಿಯಾ ಕ್ಯಾಮರಾಗಳ ಎದುರು, ಅವರನ್ನು ಬರಮಾಡಿಕೊಳ್ಳುತ್ತಾ ತಾವು ಆಡಿದ ಮಾತು – “ಇಂದು ಅವರು ಕಾಡಿನಿಂದ ಜೈಲಿಗೆ ಬಂದಿದ್ದಾರೆ, ಆದಷ್ಟು ಬೇಗ ಜೈಲಿಂದ ನಾಡಿಗೆ ಬರುವಂತೆ ಮಾಡುವ ಜವಬ್ದಾರಿ ನಮ್ಮ ಸರ್ಕಾರ ಮೇಲಿದೆ. ಅದನ್ನು ನಿರ್ವಹಿಸುತ್ತೇವೆ”. ಆದರೆ ತಾವು ಕೊಟ್ಟ ಈ ಆಶ್ವಾಸನೆ ಇನ್ನೂ ಆಶ್ವಾಸನೆಯಾಗಷ್ಟೇ ಉಳಿದಿದೆ. ಈ ಸಂದರ್ಭದಲ್ಲಿ ಕೆಲವು ಕಠೋರ ವಾಸ್ತವಗಳನ್ನು ತಮ್ಮ ಗಮನಕ್ಕೆ ತರಲು ಬಯಸುತ್ತಿದ್ದೇವೆ ಎಂದಿರುವ ಶಾಂತಿಗಾಗಿ ನಾಗರೀಕ ವೇದಿಕೆಯ ಮುಖ್ಯಸ್ಥರು ಮುಖ್ಯವಾಹಿನಿಗೆ ಬಂದ ನಕ್ಸಲ್ ಕಾರ್ಯಕರ್ತರು ಎದುರಿಸುತ್ತಿರುವ ಸವಾಲುಗಳನ್ನು ವಿವರಿಸಿದರು. 

ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು [ಲತಾ, ಸುಂದರಿ, ವನಜಾಕ್ಷಿ ರಮೇಶ್, ವಸಂತ್, ರವೀಂದ್ರ] ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ.

ಅವರ ಕಾನೂನು ಪ್ರಕ್ರಿಯೆ ಒಂದು ಇಂಚು ಸಹ ಮುಂದಕ್ಕೆ ಹೋಗಿಲ್ಲ. ತ್ವರಿತ ವಿಚಾರಣೆಗಾಗಿ ಸರ್ಕಾರ ಪ್ರಸ್ತಾಪಿಸಿದ್ದ ವಿಶೇಷ ನ್ಯಾಯಲಯ ಕಾರ್ಯರೂಪಕ್ಕೆ ಬಂದಿಲ್ಲ.

ಇದಕ್ಕೂ ಮೊದಲು ಮುಖ್ಯವಾಹಿನಿಗೆ ಬಂದಿದ್ದ ಕನ್ಯಾಕುಮಾರಿ ಕಳೆದ 9 ವರ್ಷಗಳಿಂದ ಜೈಲಿನಲ್ಲೇ ಇದ್ದಾರೆ. ಆಕೆಯ ಮಗು ಐದು ವರ್ಷ ಜೈಲಿನಲ್ಲೇ ಇತ್ತು, ಈಗ ಹೊರಗಿದೆ. ಕಂಬಿಗಳ ಹಿಂದಿನಿಂದಲೇ ಅಮ್ಮನನ್ನು ಆಗಾಗ ಕಂಡು ಬರುತ್ತಿದೆ.

ಇವರೆಲ್ಲರ ಮೇಲೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲೂ ಅನೇಕ ಕೇಸುಗಳಿವೆ. ನೀವು ಅಲ್ಲಿನ ಮುಖ್ಯಮಂತ್ರಿಗಳಿಗೆ ಒಂದು ಪತ್ರ ಬರೆದಿದ್ದೀರಿ. ಅದು ಅಲ್ಲಿಗೇ ಮುಗಿಯಿತು. ಅಲ್ಲಿಂದಲೂ ಯಾವುದೇ ರೀತಿಯ ನೆರವು ಸರ್ಕಾರವನ್ನು ಮತ್ತು ನಮ್ಮನ್ನು ನಂಬಿ ಬಂದ ಈ ಆದಿವಾಸಿ, ದಲಿತ ಕಾರ್ಯಕರ್ತರುಗಳಿಗೆ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.  

ಅಲ್ಲದೇ ಈ ಹಿಂದೆ ಮುಖ್ಯವಾಹಿನಿಗೆ ಬಂದಿದ್ದ ಪದ್ಮನಾಭ, ರೇಣುಕಾ, ರಿಜ್ವಾನಾ, ಚೆನ್ನಮ್ಮ, ಜ್ಞಾನದೇವ, ಪರಶುರಾಮ ಎಲ್ಲರೂ ಕಡುಕಷ್ಟಗಳ ನಡುವೆ ಬದುಕು ನೂಕುತ್ತಿದ್ದಾರೆ. ಪರಿಹಾರವಾಗಿ ಬಂದ ಹಣ ಮಾಡಿಕೊಂಡಿದ್ದ ಸಾಲ ಮತ್ತು ಕೋರ್ಟು ಖರ್ಚುಗಳಿಗೇ ಸಾಲಲಿಲ್ಲ. ಪುನರ್ವಸತಿ ಸಂಬಂಧಿತ [ಸ್ವಯಂ ಉದ್ಯೋಗಕ್ಕೆ ನೆರವು ಮತ್ತು ವಸತಿ] ನಿರ್ಣಯಗಳು ಕಾಗದದ ಮೇಲಷ್ಟೇ ಉಳಿದಿವೆ.

ನಕ್ಸಲರು ಮುಖ್ಯವಾಹಿನಿಗೆ ಬರುವಾಗ ಮಲೆನಾಡಿನ ಬಡಜನರ ಬದುಕನ್ನು ಬಾಧಿಸುತ್ತಿರುವ 18 ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದು ಅವನ್ನು ಸಹನೀಯಗೊಳಿಸುವ ಮಟ್ಟದ ಕ್ರಮಗಳನ್ನಾದರೂ ತೆಗೆದುಕೊಳ್ಳುವಂತೆ ತಮಗೆ ಮನವಿ ಮಾಡಿದ್ದರು. ಈ ಸಮಸ್ಯೆಗಳ ಅಧ್ಯಯನ ಮತ್ತು ಯೋಜಿತ ಪರಿಹಾರ ಕ್ರಮಗಳನ್ನು ರೂಪಿಸಲು ಕಳೆದ ಬಜೆಟ್ಟಿನಲ್ಲಿ ತಾವು 10 ಕೋಟಿ ಹಣವನ್ನು ಎತ್ತಿಟ್ಟಿದ್ದೀರಿ. ಆದರೆ ಆ ಹಣ ಮೂಲ ಉದ್ದೇಶದ ಜೊತೆ ಸಂಬಂಧವನ್ನೇ ಇಟ್ಟುಕೊಳ್ಳದೆ ಖರ್ಚಾಗಿದೆ. ಇದಕ್ಕಾಗಿ ವಿಶೇಷ ಅಧಿಕಾರಿಯನ್ನು ನೇಮಿಸಬೇಕು ಎಂದು ಆಗಿದ್ದ ತೀರ್ಮಾನವೂ ಜಾರಿಯಾಗಿಲ್ಲ.

ಸಾರಾಂಶದಲ್ಲಿ ನಕ್ಸಲೀಯರನ್ನು ಮನವೊಲಿಸಿ ಮುಖ್ಯವಾಹಿನಿಗೆ ತರುವುದರಲ್ಲಿ ಕರ್ನಾಟಕ ಮೇಲ್ಪಂಕ್ತಿ ಹಾಕಿಕೊಟ್ಟಿತು. ಆದರೆ ಕಾನೂನಿನ ನೆರವು ನೀಡುವುದರಲ್ಲಿ ಹಾಗೂ ಬದುಕು ಕಟ್ಟಿ ಕೊಡುವುದರಲ್ಲಿ ಸಂಪೂರ್ಣವಾಗಿ ಸೋತಿದೆ ಎಂದೇ ಹೇಳಬೇಕು.

ಇಂದು ಉಪವಾಸ ಸತ್ಯಾಗ್ರಹ ನಡೆಸಬೇಕು ಎಂದುಕೊಂಡಿದ್ದೆವು ಆದರೂ ಕೊನೆ ಪ್ರಯತ್ನವೆಂದು ತಮ್ಮಲ್ಲಿ ಈ ಒತ್ತಾಯಪೂರ್ವಕ ಮನವಿಯನ್ನು ಮಾಡುತ್ತಿದ್ದೇವೆ. ಈ ಕೆಳಕಂಡ ಕ್ರಮಗಳನ್ನು ತಾವು ತೆಗೆದುಕೊಳ್ಳಲೇಬೇಕು.

ಜೈಲಲ್ಲಿರುವವರನ್ನು ಇನ್ನೂ ಕಾಯಿಸುವುದು, ಮತ್ತೆ ಕೋರ್ಟಿಗೆ ಅಲೆಸುವುದು ಸರಿಯಲ್ಲ. ಹಾಗಾಗಿ ಛತ್ತೀಸ್ ಘಡ ಸರ್ಕಾರದ ಮಾದರಿಯಲ್ಲಿ ಅವರ ಮೇಲಿನ ಎಲ್ಲಾ ಕೇಸುಗಳನ್ನು ಹಿಂಪಡೆಯಲು ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು.

ಒಂಭತ್ತು ವರ್ಷದಿಂದ ಜೈಲಲ್ಲಿರುವ ಕನ್ಯಾಕುಮಾರಿಯ ಬಿಡುಗಡೆಗೆ ಆಧ್ಯತೆಯ ಮೇರೆಗೆ ಕ್ರಮ ತೆಗೆದುಕೊಳ್ಳಬೇಕು.

ಹೊರಗಿರುವ ಎಲ್ಲಾ ಮಾಜಿ ನಕ್ಸಲೀಯರ ಪುನರ್ವಸತಿಗೆ ಸಂಬಂಧಿಸಿದ ತೀರ್ಮಾನಗಳು ಕೂಡಲೇ ಜಾರಿಯಾಗುವಂತೆ ತಾವು ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು.

ನಕ್ಸಲ್ ಪ್ರದೇಶದ ಅಭಿವೃದ್ಧಿಗಾಗಿ ಮಂಜೂರಾಗಿರುವ ಹಣವನ್ನು ಮೂಲ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ಜಾರಿಯಾಗುವಂತೆ ಮಾಡಲು ವಿಶೇಷ ಅಧಿಕಾರಿಯನ್ನು ನಿಯೋಜಿಸಿ ಸದ್ಬಳಕೆ ಮಾಡುವಂತೆ ತಾವು ಆದೇಶಿಸಬೇಕು ಎಂದು ಮನವಿ ಮಾಡಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಶಾಂತಿಗಾಗಿ ನಾಗರೀಕ ವೇದಿಕೆಯ ನಗರಗೆರೆ ರಮೇಶ್, ವಿ.ಎಸ್. ಶ್ರೀಧರ್, ತಾರಾ ರಾವ್, ಬಿ.ಟಿ. ಲಲಿತಾ ನಾಯ್, ನೂರ್ ಶ್ರೀಧರ್ ಹಾಗೂ ವೀರಸಂಗಯ್ಯ ಉಪಸ್ಥಿತರಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...