Homeಕರ್ನಾಟಕ‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

- Advertisement -
- Advertisement -

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು ಶಾಂತಿಗಾಗಿ ನಾಗರೀಕ ವೇದಿಕೆ ಹೇಳಿತು. 

2026 ಜನವರಿ 8, ಗುರುವಾರ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ವೇದಿಕೆಯ ಮುಖ್ಯಸ್ಥರು ನಕ್ಸಲ್ ಕಾರ್ಯಕರ್ತರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆದು, ಎಲ್ಲಾ ಮಾಜಿ ನಕ್ಸಲರ ಪುನರ್ವಸತಿ ಕಾರ್ಯವನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು. 

ಕರ್ನಾಟಕ, ಕೇರಳ ಹಾಗೂ ತಮಿಳುನಾಡು ನಕ್ಸಲ್ ಮುಕ್ತಗೊಂಡು ನಾಳೆಗೆ ಒಂದು ವರ್ಷ. ನಿಮ್ಮ ನೇತೃತ್ವದಲ್ಲಿ ಈ ಮಹತ್ಕಾರ್ಯ ನಡೆಯಿತು. ಇದು ಸಾಧ್ಯವಾಗಿದ್ದು ಕಾಡಿನಲ್ಲಿದ್ದ ನಕ್ಸಲರ ಕೊನೆ ತಂಡ ತೆಗೆದುಕೊಂಡ ತೀರ್ಮಾನದಿಂದಾಗಿ. ಅವರು ಈ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗಿದ್ದು ತಮ್ಮ ಮೇಲಿನ ವಿಶ್ವಾಸದಿಂದಾಗಿ. ಆ ವಿಶ್ವಾಸಕ್ಕೆ ಗ್ಯಾರಂಟಿಯಾಗಿ ನಿಂತದ್ದು “ಶಾಂತಿಗಾಗಿ ನಾಗರೀಕರ ವೇದಿಕೆ”. ಒಂದು ವರ್ಷದ ಹಿಂದಿನ ಇಂದಿನ ದಿನದಂದು ನಮ್ಮ ಮನಸ್ಸು ಸಂತೋಷ ಹಾಗೂ ಹೆಮ್ಮೆಯಿಂದ ಕೂಡಿತ್ತು. ಆದರೆ ಒಂದು ವರ್ಷದ ನಂತರದ ಇಂದು ನಮ್ಮ ಮನಸ್ಸಿನ ತುಂಬ ನೋವು, ದುಗುಡ ಹಾಗೂ ಪಾಪ ಪ್ರಜ್ಞೆ ತುಂಬಿಕೊಂಡಿದೆ ಎಂದು ಹೇಳಿದ್ದಾರೆ.

2025 ಜನವರಿ 8 ರಂದು ನಿಮ್ಮ ಕಛೇರಿಯಲ್ಲಿ, ನೂರಾರು ಮೀಡಿಯಾ ಕ್ಯಾಮರಾಗಳ ಎದುರು, ಅವರನ್ನು ಬರಮಾಡಿಕೊಳ್ಳುತ್ತಾ ತಾವು ಆಡಿದ ಮಾತು – “ಇಂದು ಅವರು ಕಾಡಿನಿಂದ ಜೈಲಿಗೆ ಬಂದಿದ್ದಾರೆ, ಆದಷ್ಟು ಬೇಗ ಜೈಲಿಂದ ನಾಡಿಗೆ ಬರುವಂತೆ ಮಾಡುವ ಜವಬ್ದಾರಿ ನಮ್ಮ ಸರ್ಕಾರ ಮೇಲಿದೆ. ಅದನ್ನು ನಿರ್ವಹಿಸುತ್ತೇವೆ”. ಆದರೆ ತಾವು ಕೊಟ್ಟ ಈ ಆಶ್ವಾಸನೆ ಇನ್ನೂ ಆಶ್ವಾಸನೆಯಾಗಷ್ಟೇ ಉಳಿದಿದೆ. ಈ ಸಂದರ್ಭದಲ್ಲಿ ಕೆಲವು ಕಠೋರ ವಾಸ್ತವಗಳನ್ನು ತಮ್ಮ ಗಮನಕ್ಕೆ ತರಲು ಬಯಸುತ್ತಿದ್ದೇವೆ ಎಂದಿರುವ ಶಾಂತಿಗಾಗಿ ನಾಗರೀಕ ವೇದಿಕೆಯ ಮುಖ್ಯಸ್ಥರು ಮುಖ್ಯವಾಹಿನಿಗೆ ಬಂದ ನಕ್ಸಲ್ ಕಾರ್ಯಕರ್ತರು ಎದುರಿಸುತ್ತಿರುವ ಸವಾಲುಗಳನ್ನು ವಿವರಿಸಿದರು. 

ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು [ಲತಾ, ಸುಂದರಿ, ವನಜಾಕ್ಷಿ ರಮೇಶ್, ವಸಂತ್, ರವೀಂದ್ರ] ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ.

ಅವರ ಕಾನೂನು ಪ್ರಕ್ರಿಯೆ ಒಂದು ಇಂಚು ಸಹ ಮುಂದಕ್ಕೆ ಹೋಗಿಲ್ಲ. ತ್ವರಿತ ವಿಚಾರಣೆಗಾಗಿ ಸರ್ಕಾರ ಪ್ರಸ್ತಾಪಿಸಿದ್ದ ವಿಶೇಷ ನ್ಯಾಯಲಯ ಕಾರ್ಯರೂಪಕ್ಕೆ ಬಂದಿಲ್ಲ.

ಇದಕ್ಕೂ ಮೊದಲು ಮುಖ್ಯವಾಹಿನಿಗೆ ಬಂದಿದ್ದ ಕನ್ಯಾಕುಮಾರಿ ಕಳೆದ 9 ವರ್ಷಗಳಿಂದ ಜೈಲಿನಲ್ಲೇ ಇದ್ದಾರೆ. ಆಕೆಯ ಮಗು ಐದು ವರ್ಷ ಜೈಲಿನಲ್ಲೇ ಇತ್ತು, ಈಗ ಹೊರಗಿದೆ. ಕಂಬಿಗಳ ಹಿಂದಿನಿಂದಲೇ ಅಮ್ಮನನ್ನು ಆಗಾಗ ಕಂಡು ಬರುತ್ತಿದೆ.

ಇವರೆಲ್ಲರ ಮೇಲೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲೂ ಅನೇಕ ಕೇಸುಗಳಿವೆ. ನೀವು ಅಲ್ಲಿನ ಮುಖ್ಯಮಂತ್ರಿಗಳಿಗೆ ಒಂದು ಪತ್ರ ಬರೆದಿದ್ದೀರಿ. ಅದು ಅಲ್ಲಿಗೇ ಮುಗಿಯಿತು. ಅಲ್ಲಿಂದಲೂ ಯಾವುದೇ ರೀತಿಯ ನೆರವು ಸರ್ಕಾರವನ್ನು ಮತ್ತು ನಮ್ಮನ್ನು ನಂಬಿ ಬಂದ ಈ ಆದಿವಾಸಿ, ದಲಿತ ಕಾರ್ಯಕರ್ತರುಗಳಿಗೆ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.  

ಅಲ್ಲದೇ ಈ ಹಿಂದೆ ಮುಖ್ಯವಾಹಿನಿಗೆ ಬಂದಿದ್ದ ಪದ್ಮನಾಭ, ರೇಣುಕಾ, ರಿಜ್ವಾನಾ, ಚೆನ್ನಮ್ಮ, ಜ್ಞಾನದೇವ, ಪರಶುರಾಮ ಎಲ್ಲರೂ ಕಡುಕಷ್ಟಗಳ ನಡುವೆ ಬದುಕು ನೂಕುತ್ತಿದ್ದಾರೆ. ಪರಿಹಾರವಾಗಿ ಬಂದ ಹಣ ಮಾಡಿಕೊಂಡಿದ್ದ ಸಾಲ ಮತ್ತು ಕೋರ್ಟು ಖರ್ಚುಗಳಿಗೇ ಸಾಲಲಿಲ್ಲ. ಪುನರ್ವಸತಿ ಸಂಬಂಧಿತ [ಸ್ವಯಂ ಉದ್ಯೋಗಕ್ಕೆ ನೆರವು ಮತ್ತು ವಸತಿ] ನಿರ್ಣಯಗಳು ಕಾಗದದ ಮೇಲಷ್ಟೇ ಉಳಿದಿವೆ.

ನಕ್ಸಲರು ಮುಖ್ಯವಾಹಿನಿಗೆ ಬರುವಾಗ ಮಲೆನಾಡಿನ ಬಡಜನರ ಬದುಕನ್ನು ಬಾಧಿಸುತ್ತಿರುವ 18 ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದು ಅವನ್ನು ಸಹನೀಯಗೊಳಿಸುವ ಮಟ್ಟದ ಕ್ರಮಗಳನ್ನಾದರೂ ತೆಗೆದುಕೊಳ್ಳುವಂತೆ ತಮಗೆ ಮನವಿ ಮಾಡಿದ್ದರು. ಈ ಸಮಸ್ಯೆಗಳ ಅಧ್ಯಯನ ಮತ್ತು ಯೋಜಿತ ಪರಿಹಾರ ಕ್ರಮಗಳನ್ನು ರೂಪಿಸಲು ಕಳೆದ ಬಜೆಟ್ಟಿನಲ್ಲಿ ತಾವು 10 ಕೋಟಿ ಹಣವನ್ನು ಎತ್ತಿಟ್ಟಿದ್ದೀರಿ. ಆದರೆ ಆ ಹಣ ಮೂಲ ಉದ್ದೇಶದ ಜೊತೆ ಸಂಬಂಧವನ್ನೇ ಇಟ್ಟುಕೊಳ್ಳದೆ ಖರ್ಚಾಗಿದೆ. ಇದಕ್ಕಾಗಿ ವಿಶೇಷ ಅಧಿಕಾರಿಯನ್ನು ನೇಮಿಸಬೇಕು ಎಂದು ಆಗಿದ್ದ ತೀರ್ಮಾನವೂ ಜಾರಿಯಾಗಿಲ್ಲ.

ಸಾರಾಂಶದಲ್ಲಿ ನಕ್ಸಲೀಯರನ್ನು ಮನವೊಲಿಸಿ ಮುಖ್ಯವಾಹಿನಿಗೆ ತರುವುದರಲ್ಲಿ ಕರ್ನಾಟಕ ಮೇಲ್ಪಂಕ್ತಿ ಹಾಕಿಕೊಟ್ಟಿತು. ಆದರೆ ಕಾನೂನಿನ ನೆರವು ನೀಡುವುದರಲ್ಲಿ ಹಾಗೂ ಬದುಕು ಕಟ್ಟಿ ಕೊಡುವುದರಲ್ಲಿ ಸಂಪೂರ್ಣವಾಗಿ ಸೋತಿದೆ ಎಂದೇ ಹೇಳಬೇಕು.

ಇಂದು ಉಪವಾಸ ಸತ್ಯಾಗ್ರಹ ನಡೆಸಬೇಕು ಎಂದುಕೊಂಡಿದ್ದೆವು ಆದರೂ ಕೊನೆ ಪ್ರಯತ್ನವೆಂದು ತಮ್ಮಲ್ಲಿ ಈ ಒತ್ತಾಯಪೂರ್ವಕ ಮನವಿಯನ್ನು ಮಾಡುತ್ತಿದ್ದೇವೆ. ಈ ಕೆಳಕಂಡ ಕ್ರಮಗಳನ್ನು ತಾವು ತೆಗೆದುಕೊಳ್ಳಲೇಬೇಕು.

ಜೈಲಲ್ಲಿರುವವರನ್ನು ಇನ್ನೂ ಕಾಯಿಸುವುದು, ಮತ್ತೆ ಕೋರ್ಟಿಗೆ ಅಲೆಸುವುದು ಸರಿಯಲ್ಲ. ಹಾಗಾಗಿ ಛತ್ತೀಸ್ ಘಡ ಸರ್ಕಾರದ ಮಾದರಿಯಲ್ಲಿ ಅವರ ಮೇಲಿನ ಎಲ್ಲಾ ಕೇಸುಗಳನ್ನು ಹಿಂಪಡೆಯಲು ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು.

ಒಂಭತ್ತು ವರ್ಷದಿಂದ ಜೈಲಲ್ಲಿರುವ ಕನ್ಯಾಕುಮಾರಿಯ ಬಿಡುಗಡೆಗೆ ಆಧ್ಯತೆಯ ಮೇರೆಗೆ ಕ್ರಮ ತೆಗೆದುಕೊಳ್ಳಬೇಕು.

ಹೊರಗಿರುವ ಎಲ್ಲಾ ಮಾಜಿ ನಕ್ಸಲೀಯರ ಪುನರ್ವಸತಿಗೆ ಸಂಬಂಧಿಸಿದ ತೀರ್ಮಾನಗಳು ಕೂಡಲೇ ಜಾರಿಯಾಗುವಂತೆ ತಾವು ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು.

ನಕ್ಸಲ್ ಪ್ರದೇಶದ ಅಭಿವೃದ್ಧಿಗಾಗಿ ಮಂಜೂರಾಗಿರುವ ಹಣವನ್ನು ಮೂಲ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ಜಾರಿಯಾಗುವಂತೆ ಮಾಡಲು ವಿಶೇಷ ಅಧಿಕಾರಿಯನ್ನು ನಿಯೋಜಿಸಿ ಸದ್ಬಳಕೆ ಮಾಡುವಂತೆ ತಾವು ಆದೇಶಿಸಬೇಕು ಎಂದು ಮನವಿ ಮಾಡಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಶಾಂತಿಗಾಗಿ ನಾಗರೀಕ ವೇದಿಕೆಯ ನಗರಗೆರೆ ರಮೇಶ್, ವಿ.ಎಸ್. ಶ್ರೀಧರ್, ತಾರಾ ರಾವ್, ಬಿ.ಟಿ. ಲಲಿತಾ ನಾಯ್, ನೂರ್ ಶ್ರೀಧರ್ ಹಾಗೂ ವೀರಸಂಗಯ್ಯ ಉಪಸ್ಥಿತರಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...