Homeಮುಖಪುಟ'ಕೆಫಿಯಹ್' ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

- Advertisement -
- Advertisement -

ಕೊಚ್ಚಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದ ಕೇರಳ ಬ್ಲಾಸ್ಟರ್ಸ್ ಎಫ್‌ಸಿ ಮತ್ತು ಹೈದರಾಬಾದ್ ಎಫ್‌ಸಿ ಫುಟ್‌ಬಾಲ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಪರ ಬೆಂಬಲದ ಸಂಕೇತವಾದ ‘ಕೆಫಿಯಹ್’ ಧರಿಸಿದ್ದಕ್ಕಾಗಿ ಕೇರಳ ಪೊಲೀಸರು ನಾಲ್ವರನ್ನು ಐದು ಗಂಟೆಗಳ ಕಾಲ ವಶಕ್ಕೆ ಪಡೆದಿರುವ ಘಟನೆ ನವೆಂಬರ್ 7ರಂದು ನಡೆದಿದೆ. ರಾಜ್ಯ ಪೊಲೀಸರ ಈ ಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವಶಕ್ಕೆ ಒಳಗಾದವರನ್ನು ರೆಜಾಜ್, ಅಬ್ದುಲ್ಲಾ, ಅಮೀನ್ ಮತ್ತು ಮಿದ್ಲಾಜ್ ಎಂದು ಗುರುತಿಸಲಾಗಿದ್ದು, ಈ ಸ್ನೇಹಿತರ ಗುಂಪು ನವೆಂಬರ್ 7 ರ ಗುರುವಾರ ಟಿಕೆಟ್ ಸರದಿಯಲ್ಲಿ ಕಾಯುತ್ತಿದ್ದಾಗ ಪೊಲೀಸರು ಅವರನ್ನು ಸಂಜೆ 7 ಗಂಟೆಗೆ ಪಲರಿವಟ್ಟಂ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಲಪ್ಪುರಂ ಅಪರಾಧ ವಿಭಾಗದ ಪೊಲೀಸರು ಅಮೀನ್ ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ ಎಂದು ರೆಜಾಜ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇರಳ ಬ್ಲಾಸ್ಟರ್ಸ್ ಎಫ್‌ಸಿ 28 ನಿಷೇಧಿತ ವಸ್ತುಗಳನ್ನು ಕ್ರೀಡಾಂಗಣದಲ್ಲಿ ನಿಷೇಧಿಸಿ ಪಟ್ಟಿ ಮಾಡಿತ್ತು. ಆದರೆ ಪ್ರೇಕ್ಷಕರು ಕೆಫಿಯೆಹ್ ಧರಿಸಿ ಪಂದ್ಯ ವೀಕ್ಷಿಸುವುದನ್ನು ಇದು ನಿಷೇಧಿಸಿರಲಿಲ್ಲ. ಫ್ರೆಂಚ್ ಕ್ಲಬ್ ಪ್ಯಾರಿಸ್ ಸೇಂಟ್ ಜರ್ಮೈನ್ (PSG) ಅಭಿಮಾನಿಗಳು ಚಾಂಪಿಯನ್ಸ್ ಲೀಗ್ ಪಂದ್ಯದಲ್ಲಿ ಫ್ರೀ ಪ್ಯಾಲೆಸ್ಟೈನ್ ಎಂದು ಹೇಳುವ ದೊಡ್ಡ ಟಿಫೊವನ್ನು ಬಿಚ್ಚಿಟ್ಟ ಘಟನೆಯ ಬೆನ್ನಲ್ಲೆ ಈ ಘಟನೆ ನಡೆದಿದೆ.

ವಶಕ್ಕೆ ಒಳಗಾಗಿರುವ ರೆಜಾಜ್ ಮಾತನಾಡಿ, ತಾವು ಪ್ರತಿಭಟನೆ ನಡೆಸುವ ಉದ್ದೇಶವನ್ನು ಹೊಂದಿಲ್ಲ,ಬದಲಾಗಿ ಪ್ಯಾಲೆಸ್ಟೈನ್ ಪರ ರಾಜಕೀಯದ ಕಾರಣಕ್ಕಾಗಿ ಕೆಫಿಯೆಹ್ ಧರಿಸಿದ್ದಾಗಿ ತಿಳಿಸಿದ್ದಾರೆ.

“ನಾವು ಯಾವುದೇ ಬ್ಯಾನರ್, ಫಲಕ ಅಥವಾ ಧ್ವಜವನ್ನು ಹಿಡಿದಿಲ್ಲ. ಟಿಕೆಟ್ ಲಭ್ಯವಿದೆ ಎಂದು ನನ್ನ ಸ್ನೇಹಿತರು ನನ್ನನ್ನು ಕರೆದಿದ್ದರಿಂದ ನಾನು ಪಂದ್ಯಕ್ಕೆ ಬಂದೆ. ನಾವು ಟಿಕೆಟ್ ಸರದಿಯಲ್ಲಿ ಕಾಯುತ್ತಿರುವಾಗ, ಸಹಾಯಕ ಪೊಲೀಸ್ ಆಯುಕ್ತರು ಕೆಫಿಯೆಹ್ ಎಂದರೇನು ಎಂದು ಕೇಳಿದರು. ಇದನ್ನು ಒಳಗೆ ಬಿಡುವುದಿಲ್ಲ ಎಂದು ಹೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

“ಇದನ್ನು ಸಭ್ಯ ರೀತಿಯಲ್ಲಿ ಧರಿಸುವುಕ್ಕೆ ನಿಯಮಗಳು ಅಡ್ಡಿ ಮಾಡುವುದಿಲ್ಲ ಎಂದು ನಾನು ಅವರಿಗೆ ಹೇಳಿದೆ. ಈ ವೇಳೆ ಅವರು ನಮ್ಮ ಹೆಸರುಗಳನ್ನು ಕೇಳಿದ್ದು, ನಾನು ಅವರಿಗೆ ಹೆಸರು ಕೇಳಿದ ನಂತರ ನಮಗೆ ಕಾಯುವಂತೆ ಹೇಳಿದರು. ನಂತರ ಹೆಚ್ಚಿನ ಪೊಲೀಸರು ಸ್ಥಳಕ್ಕೆ ಬಂದರು. ನಂತರ ಎಸಿಪಿ ಕೆಲವು ಫೋನ್ ಕರೆಗಳನ್ನು ಮಾಡಿ  ಸ್ಪಷ್ಟನೆಗಾಗಿ ಠಾಣೆಗೆ ಬರುವಂತೆ ಹೇಳಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ನಮ್ಮನ್ನು ಧರ್ಮದ ಆಧಾರದ ಮೇಲೆ ಪ್ರಶ್ನಿಸಲಾಗಿದೆ ಎಂದು ಜನಪ್ರಿಯ ಸ್ವತಂತ್ರ ಪತ್ರಕರ್ತರೂ ಆಗಿರುವ ರೆಜಾಜ್ ವಿವರಿಸಿದ್ದಾರೆ. “ಮತ್ತೊಬ್ಬ ಬಂಧಿತ ವ್ಯಕ್ತಿ ಅಬ್ದುಲ್ಲಾ ಅವರು ತಿರುವನಂತಪುರಂನಲ್ಲಿ ನೆಲೆಸಿದ್ದು, ತಾನು ಮಸೀದಿಯೊಂದರಲ್ಲಿ ಧರ್ಮಗುರು ಎಂದು ಹೇಳಿದಾಗ, ಸರ್ಕಲ್ ಇನ್ಸ್‌ಪೆಕ್ಟರ್ ನೀವೆಲ್ಲರೂ ಮದರಸಾಗಳಿಗೆ ಹೋಗುತ್ತೀರಾ ಎಂದು ಕೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

ನನ್ನ ಜೊತೆಗಿದ್ದ ನನ್ನ ಇತರ ಸ್ನೇಹಿತರು ಮಲಪ್ಪುರಂ ಮತ್ತು ಪಾಲಕ್ಕಾಡ್‌ನಿಂದ ಬಂದಿದ್ದರಿಂದ, ಪಂದ್ಯಕ್ಕೆ ಬೇರೆ ಜಿಲ್ಲೆಗಳಿಂದ ಏಕೆ ಒಟ್ಟಿಗೆ ಬಂದರು ಎಂದು ಸಿಐ ನಮ್ಮನ್ನು ಕೇಳಿದ್ದಾರೆ. ಅದಾಗ್ಯೂ, ಕೇರಳ ಬ್ಲಾಸ್ಟರ್ಸ್ ಪಂದ್ಯಕ್ಕೆ ಎರ್ನಾಕುಲಂ ನಿವಾಸಿಗಳು ಮಾತ್ರ ಹಾಜರಾಗುವುದಿಲ್ಲ ಎಂಬುದು ನಮಗೆಲ್ಲರಿಗೂ ತಿಳಿದಿದೆ. ನಂತರ ನಾವು ಒಬ್ಬರನ್ನೊಬ್ಬರು ಹೇಗೆ ತಿಳಿದಿದ್ದೇವೆ, ನಮ್ಮ ಉದ್ದೇಶವೇನು, ನಾವು ಯಾವ ಪುಸ್ತಕಗಳನ್ನು ಓದುತ್ತೇವೆ, ಇತರ ವಿಷಯಗಳ ಜೊತೆಗೆ ನಾವು ಹೊಂದಿರುವ ರಾಜಕೀಯದಂತಹ ಬಹಳಷ್ಟು ವೈಯಕ್ತಿಕ ವಿವರಗಳನ್ನು ಕೇಳಲಾಯಿತು ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...