Homeಮುಖಪುಟ'ಕೆಫಿಯಹ್' ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

- Advertisement -
- Advertisement -

ಕೊಚ್ಚಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದ ಕೇರಳ ಬ್ಲಾಸ್ಟರ್ಸ್ ಎಫ್‌ಸಿ ಮತ್ತು ಹೈದರಾಬಾದ್ ಎಫ್‌ಸಿ ಫುಟ್‌ಬಾಲ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಪರ ಬೆಂಬಲದ ಸಂಕೇತವಾದ ‘ಕೆಫಿಯಹ್’ ಧರಿಸಿದ್ದಕ್ಕಾಗಿ ಕೇರಳ ಪೊಲೀಸರು ನಾಲ್ವರನ್ನು ಐದು ಗಂಟೆಗಳ ಕಾಲ ವಶಕ್ಕೆ ಪಡೆದಿರುವ ಘಟನೆ ನವೆಂಬರ್ 7ರಂದು ನಡೆದಿದೆ. ರಾಜ್ಯ ಪೊಲೀಸರ ಈ ಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವಶಕ್ಕೆ ಒಳಗಾದವರನ್ನು ರೆಜಾಜ್, ಅಬ್ದುಲ್ಲಾ, ಅಮೀನ್ ಮತ್ತು ಮಿದ್ಲಾಜ್ ಎಂದು ಗುರುತಿಸಲಾಗಿದ್ದು, ಈ ಸ್ನೇಹಿತರ ಗುಂಪು ನವೆಂಬರ್ 7 ರ ಗುರುವಾರ ಟಿಕೆಟ್ ಸರದಿಯಲ್ಲಿ ಕಾಯುತ್ತಿದ್ದಾಗ ಪೊಲೀಸರು ಅವರನ್ನು ಸಂಜೆ 7 ಗಂಟೆಗೆ ಪಲರಿವಟ್ಟಂ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಲಪ್ಪುರಂ ಅಪರಾಧ ವಿಭಾಗದ ಪೊಲೀಸರು ಅಮೀನ್ ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ ಎಂದು ರೆಜಾಜ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇರಳ ಬ್ಲಾಸ್ಟರ್ಸ್ ಎಫ್‌ಸಿ 28 ನಿಷೇಧಿತ ವಸ್ತುಗಳನ್ನು ಕ್ರೀಡಾಂಗಣದಲ್ಲಿ ನಿಷೇಧಿಸಿ ಪಟ್ಟಿ ಮಾಡಿತ್ತು. ಆದರೆ ಪ್ರೇಕ್ಷಕರು ಕೆಫಿಯೆಹ್ ಧರಿಸಿ ಪಂದ್ಯ ವೀಕ್ಷಿಸುವುದನ್ನು ಇದು ನಿಷೇಧಿಸಿರಲಿಲ್ಲ. ಫ್ರೆಂಚ್ ಕ್ಲಬ್ ಪ್ಯಾರಿಸ್ ಸೇಂಟ್ ಜರ್ಮೈನ್ (PSG) ಅಭಿಮಾನಿಗಳು ಚಾಂಪಿಯನ್ಸ್ ಲೀಗ್ ಪಂದ್ಯದಲ್ಲಿ ಫ್ರೀ ಪ್ಯಾಲೆಸ್ಟೈನ್ ಎಂದು ಹೇಳುವ ದೊಡ್ಡ ಟಿಫೊವನ್ನು ಬಿಚ್ಚಿಟ್ಟ ಘಟನೆಯ ಬೆನ್ನಲ್ಲೆ ಈ ಘಟನೆ ನಡೆದಿದೆ.

ವಶಕ್ಕೆ ಒಳಗಾಗಿರುವ ರೆಜಾಜ್ ಮಾತನಾಡಿ, ತಾವು ಪ್ರತಿಭಟನೆ ನಡೆಸುವ ಉದ್ದೇಶವನ್ನು ಹೊಂದಿಲ್ಲ,ಬದಲಾಗಿ ಪ್ಯಾಲೆಸ್ಟೈನ್ ಪರ ರಾಜಕೀಯದ ಕಾರಣಕ್ಕಾಗಿ ಕೆಫಿಯೆಹ್ ಧರಿಸಿದ್ದಾಗಿ ತಿಳಿಸಿದ್ದಾರೆ.

“ನಾವು ಯಾವುದೇ ಬ್ಯಾನರ್, ಫಲಕ ಅಥವಾ ಧ್ವಜವನ್ನು ಹಿಡಿದಿಲ್ಲ. ಟಿಕೆಟ್ ಲಭ್ಯವಿದೆ ಎಂದು ನನ್ನ ಸ್ನೇಹಿತರು ನನ್ನನ್ನು ಕರೆದಿದ್ದರಿಂದ ನಾನು ಪಂದ್ಯಕ್ಕೆ ಬಂದೆ. ನಾವು ಟಿಕೆಟ್ ಸರದಿಯಲ್ಲಿ ಕಾಯುತ್ತಿರುವಾಗ, ಸಹಾಯಕ ಪೊಲೀಸ್ ಆಯುಕ್ತರು ಕೆಫಿಯೆಹ್ ಎಂದರೇನು ಎಂದು ಕೇಳಿದರು. ಇದನ್ನು ಒಳಗೆ ಬಿಡುವುದಿಲ್ಲ ಎಂದು ಹೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

“ಇದನ್ನು ಸಭ್ಯ ರೀತಿಯಲ್ಲಿ ಧರಿಸುವುಕ್ಕೆ ನಿಯಮಗಳು ಅಡ್ಡಿ ಮಾಡುವುದಿಲ್ಲ ಎಂದು ನಾನು ಅವರಿಗೆ ಹೇಳಿದೆ. ಈ ವೇಳೆ ಅವರು ನಮ್ಮ ಹೆಸರುಗಳನ್ನು ಕೇಳಿದ್ದು, ನಾನು ಅವರಿಗೆ ಹೆಸರು ಕೇಳಿದ ನಂತರ ನಮಗೆ ಕಾಯುವಂತೆ ಹೇಳಿದರು. ನಂತರ ಹೆಚ್ಚಿನ ಪೊಲೀಸರು ಸ್ಥಳಕ್ಕೆ ಬಂದರು. ನಂತರ ಎಸಿಪಿ ಕೆಲವು ಫೋನ್ ಕರೆಗಳನ್ನು ಮಾಡಿ  ಸ್ಪಷ್ಟನೆಗಾಗಿ ಠಾಣೆಗೆ ಬರುವಂತೆ ಹೇಳಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ನಮ್ಮನ್ನು ಧರ್ಮದ ಆಧಾರದ ಮೇಲೆ ಪ್ರಶ್ನಿಸಲಾಗಿದೆ ಎಂದು ಜನಪ್ರಿಯ ಸ್ವತಂತ್ರ ಪತ್ರಕರ್ತರೂ ಆಗಿರುವ ರೆಜಾಜ್ ವಿವರಿಸಿದ್ದಾರೆ. “ಮತ್ತೊಬ್ಬ ಬಂಧಿತ ವ್ಯಕ್ತಿ ಅಬ್ದುಲ್ಲಾ ಅವರು ತಿರುವನಂತಪುರಂನಲ್ಲಿ ನೆಲೆಸಿದ್ದು, ತಾನು ಮಸೀದಿಯೊಂದರಲ್ಲಿ ಧರ್ಮಗುರು ಎಂದು ಹೇಳಿದಾಗ, ಸರ್ಕಲ್ ಇನ್ಸ್‌ಪೆಕ್ಟರ್ ನೀವೆಲ್ಲರೂ ಮದರಸಾಗಳಿಗೆ ಹೋಗುತ್ತೀರಾ ಎಂದು ಕೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

ನನ್ನ ಜೊತೆಗಿದ್ದ ನನ್ನ ಇತರ ಸ್ನೇಹಿತರು ಮಲಪ್ಪುರಂ ಮತ್ತು ಪಾಲಕ್ಕಾಡ್‌ನಿಂದ ಬಂದಿದ್ದರಿಂದ, ಪಂದ್ಯಕ್ಕೆ ಬೇರೆ ಜಿಲ್ಲೆಗಳಿಂದ ಏಕೆ ಒಟ್ಟಿಗೆ ಬಂದರು ಎಂದು ಸಿಐ ನಮ್ಮನ್ನು ಕೇಳಿದ್ದಾರೆ. ಅದಾಗ್ಯೂ, ಕೇರಳ ಬ್ಲಾಸ್ಟರ್ಸ್ ಪಂದ್ಯಕ್ಕೆ ಎರ್ನಾಕುಲಂ ನಿವಾಸಿಗಳು ಮಾತ್ರ ಹಾಜರಾಗುವುದಿಲ್ಲ ಎಂಬುದು ನಮಗೆಲ್ಲರಿಗೂ ತಿಳಿದಿದೆ. ನಂತರ ನಾವು ಒಬ್ಬರನ್ನೊಬ್ಬರು ಹೇಗೆ ತಿಳಿದಿದ್ದೇವೆ, ನಮ್ಮ ಉದ್ದೇಶವೇನು, ನಾವು ಯಾವ ಪುಸ್ತಕಗಳನ್ನು ಓದುತ್ತೇವೆ, ಇತರ ವಿಷಯಗಳ ಜೊತೆಗೆ ನಾವು ಹೊಂದಿರುವ ರಾಜಕೀಯದಂತಹ ಬಹಳಷ್ಟು ವೈಯಕ್ತಿಕ ವಿವರಗಳನ್ನು ಕೇಳಲಾಯಿತು ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...