Homeಮುಖಪುಟ'ಕೆಫಿಯಹ್' ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

- Advertisement -
- Advertisement -

ಕೊಚ್ಚಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದ ಕೇರಳ ಬ್ಲಾಸ್ಟರ್ಸ್ ಎಫ್‌ಸಿ ಮತ್ತು ಹೈದರಾಬಾದ್ ಎಫ್‌ಸಿ ಫುಟ್‌ಬಾಲ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಪರ ಬೆಂಬಲದ ಸಂಕೇತವಾದ ‘ಕೆಫಿಯಹ್’ ಧರಿಸಿದ್ದಕ್ಕಾಗಿ ಕೇರಳ ಪೊಲೀಸರು ನಾಲ್ವರನ್ನು ಐದು ಗಂಟೆಗಳ ಕಾಲ ವಶಕ್ಕೆ ಪಡೆದಿರುವ ಘಟನೆ ನವೆಂಬರ್ 7ರಂದು ನಡೆದಿದೆ. ರಾಜ್ಯ ಪೊಲೀಸರ ಈ ಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವಶಕ್ಕೆ ಒಳಗಾದವರನ್ನು ರೆಜಾಜ್, ಅಬ್ದುಲ್ಲಾ, ಅಮೀನ್ ಮತ್ತು ಮಿದ್ಲಾಜ್ ಎಂದು ಗುರುತಿಸಲಾಗಿದ್ದು, ಈ ಸ್ನೇಹಿತರ ಗುಂಪು ನವೆಂಬರ್ 7 ರ ಗುರುವಾರ ಟಿಕೆಟ್ ಸರದಿಯಲ್ಲಿ ಕಾಯುತ್ತಿದ್ದಾಗ ಪೊಲೀಸರು ಅವರನ್ನು ಸಂಜೆ 7 ಗಂಟೆಗೆ ಪಲರಿವಟ್ಟಂ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಲಪ್ಪುರಂ ಅಪರಾಧ ವಿಭಾಗದ ಪೊಲೀಸರು ಅಮೀನ್ ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ ಎಂದು ರೆಜಾಜ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇರಳ ಬ್ಲಾಸ್ಟರ್ಸ್ ಎಫ್‌ಸಿ 28 ನಿಷೇಧಿತ ವಸ್ತುಗಳನ್ನು ಕ್ರೀಡಾಂಗಣದಲ್ಲಿ ನಿಷೇಧಿಸಿ ಪಟ್ಟಿ ಮಾಡಿತ್ತು. ಆದರೆ ಪ್ರೇಕ್ಷಕರು ಕೆಫಿಯೆಹ್ ಧರಿಸಿ ಪಂದ್ಯ ವೀಕ್ಷಿಸುವುದನ್ನು ಇದು ನಿಷೇಧಿಸಿರಲಿಲ್ಲ. ಫ್ರೆಂಚ್ ಕ್ಲಬ್ ಪ್ಯಾರಿಸ್ ಸೇಂಟ್ ಜರ್ಮೈನ್ (PSG) ಅಭಿಮಾನಿಗಳು ಚಾಂಪಿಯನ್ಸ್ ಲೀಗ್ ಪಂದ್ಯದಲ್ಲಿ ಫ್ರೀ ಪ್ಯಾಲೆಸ್ಟೈನ್ ಎಂದು ಹೇಳುವ ದೊಡ್ಡ ಟಿಫೊವನ್ನು ಬಿಚ್ಚಿಟ್ಟ ಘಟನೆಯ ಬೆನ್ನಲ್ಲೆ ಈ ಘಟನೆ ನಡೆದಿದೆ.

ವಶಕ್ಕೆ ಒಳಗಾಗಿರುವ ರೆಜಾಜ್ ಮಾತನಾಡಿ, ತಾವು ಪ್ರತಿಭಟನೆ ನಡೆಸುವ ಉದ್ದೇಶವನ್ನು ಹೊಂದಿಲ್ಲ,ಬದಲಾಗಿ ಪ್ಯಾಲೆಸ್ಟೈನ್ ಪರ ರಾಜಕೀಯದ ಕಾರಣಕ್ಕಾಗಿ ಕೆಫಿಯೆಹ್ ಧರಿಸಿದ್ದಾಗಿ ತಿಳಿಸಿದ್ದಾರೆ.

“ನಾವು ಯಾವುದೇ ಬ್ಯಾನರ್, ಫಲಕ ಅಥವಾ ಧ್ವಜವನ್ನು ಹಿಡಿದಿಲ್ಲ. ಟಿಕೆಟ್ ಲಭ್ಯವಿದೆ ಎಂದು ನನ್ನ ಸ್ನೇಹಿತರು ನನ್ನನ್ನು ಕರೆದಿದ್ದರಿಂದ ನಾನು ಪಂದ್ಯಕ್ಕೆ ಬಂದೆ. ನಾವು ಟಿಕೆಟ್ ಸರದಿಯಲ್ಲಿ ಕಾಯುತ್ತಿರುವಾಗ, ಸಹಾಯಕ ಪೊಲೀಸ್ ಆಯುಕ್ತರು ಕೆಫಿಯೆಹ್ ಎಂದರೇನು ಎಂದು ಕೇಳಿದರು. ಇದನ್ನು ಒಳಗೆ ಬಿಡುವುದಿಲ್ಲ ಎಂದು ಹೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

“ಇದನ್ನು ಸಭ್ಯ ರೀತಿಯಲ್ಲಿ ಧರಿಸುವುಕ್ಕೆ ನಿಯಮಗಳು ಅಡ್ಡಿ ಮಾಡುವುದಿಲ್ಲ ಎಂದು ನಾನು ಅವರಿಗೆ ಹೇಳಿದೆ. ಈ ವೇಳೆ ಅವರು ನಮ್ಮ ಹೆಸರುಗಳನ್ನು ಕೇಳಿದ್ದು, ನಾನು ಅವರಿಗೆ ಹೆಸರು ಕೇಳಿದ ನಂತರ ನಮಗೆ ಕಾಯುವಂತೆ ಹೇಳಿದರು. ನಂತರ ಹೆಚ್ಚಿನ ಪೊಲೀಸರು ಸ್ಥಳಕ್ಕೆ ಬಂದರು. ನಂತರ ಎಸಿಪಿ ಕೆಲವು ಫೋನ್ ಕರೆಗಳನ್ನು ಮಾಡಿ  ಸ್ಪಷ್ಟನೆಗಾಗಿ ಠಾಣೆಗೆ ಬರುವಂತೆ ಹೇಳಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ನಮ್ಮನ್ನು ಧರ್ಮದ ಆಧಾರದ ಮೇಲೆ ಪ್ರಶ್ನಿಸಲಾಗಿದೆ ಎಂದು ಜನಪ್ರಿಯ ಸ್ವತಂತ್ರ ಪತ್ರಕರ್ತರೂ ಆಗಿರುವ ರೆಜಾಜ್ ವಿವರಿಸಿದ್ದಾರೆ. “ಮತ್ತೊಬ್ಬ ಬಂಧಿತ ವ್ಯಕ್ತಿ ಅಬ್ದುಲ್ಲಾ ಅವರು ತಿರುವನಂತಪುರಂನಲ್ಲಿ ನೆಲೆಸಿದ್ದು, ತಾನು ಮಸೀದಿಯೊಂದರಲ್ಲಿ ಧರ್ಮಗುರು ಎಂದು ಹೇಳಿದಾಗ, ಸರ್ಕಲ್ ಇನ್ಸ್‌ಪೆಕ್ಟರ್ ನೀವೆಲ್ಲರೂ ಮದರಸಾಗಳಿಗೆ ಹೋಗುತ್ತೀರಾ ಎಂದು ಕೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

ನನ್ನ ಜೊತೆಗಿದ್ದ ನನ್ನ ಇತರ ಸ್ನೇಹಿತರು ಮಲಪ್ಪುರಂ ಮತ್ತು ಪಾಲಕ್ಕಾಡ್‌ನಿಂದ ಬಂದಿದ್ದರಿಂದ, ಪಂದ್ಯಕ್ಕೆ ಬೇರೆ ಜಿಲ್ಲೆಗಳಿಂದ ಏಕೆ ಒಟ್ಟಿಗೆ ಬಂದರು ಎಂದು ಸಿಐ ನಮ್ಮನ್ನು ಕೇಳಿದ್ದಾರೆ. ಅದಾಗ್ಯೂ, ಕೇರಳ ಬ್ಲಾಸ್ಟರ್ಸ್ ಪಂದ್ಯಕ್ಕೆ ಎರ್ನಾಕುಲಂ ನಿವಾಸಿಗಳು ಮಾತ್ರ ಹಾಜರಾಗುವುದಿಲ್ಲ ಎಂಬುದು ನಮಗೆಲ್ಲರಿಗೂ ತಿಳಿದಿದೆ. ನಂತರ ನಾವು ಒಬ್ಬರನ್ನೊಬ್ಬರು ಹೇಗೆ ತಿಳಿದಿದ್ದೇವೆ, ನಮ್ಮ ಉದ್ದೇಶವೇನು, ನಾವು ಯಾವ ಪುಸ್ತಕಗಳನ್ನು ಓದುತ್ತೇವೆ, ಇತರ ವಿಷಯಗಳ ಜೊತೆಗೆ ನಾವು ಹೊಂದಿರುವ ರಾಜಕೀಯದಂತಹ ಬಹಳಷ್ಟು ವೈಯಕ್ತಿಕ ವಿವರಗಳನ್ನು ಕೇಳಲಾಯಿತು ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...