Homeಮುಖಪುಟ'ಕೆಫಿಯಹ್' ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

- Advertisement -
- Advertisement -

ಕೊಚ್ಚಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದ ಕೇರಳ ಬ್ಲಾಸ್ಟರ್ಸ್ ಎಫ್‌ಸಿ ಮತ್ತು ಹೈದರಾಬಾದ್ ಎಫ್‌ಸಿ ಫುಟ್‌ಬಾಲ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಪರ ಬೆಂಬಲದ ಸಂಕೇತವಾದ ‘ಕೆಫಿಯಹ್’ ಧರಿಸಿದ್ದಕ್ಕಾಗಿ ಕೇರಳ ಪೊಲೀಸರು ನಾಲ್ವರನ್ನು ಐದು ಗಂಟೆಗಳ ಕಾಲ ವಶಕ್ಕೆ ಪಡೆದಿರುವ ಘಟನೆ ನವೆಂಬರ್ 7ರಂದು ನಡೆದಿದೆ. ರಾಜ್ಯ ಪೊಲೀಸರ ಈ ಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವಶಕ್ಕೆ ಒಳಗಾದವರನ್ನು ರೆಜಾಜ್, ಅಬ್ದುಲ್ಲಾ, ಅಮೀನ್ ಮತ್ತು ಮಿದ್ಲಾಜ್ ಎಂದು ಗುರುತಿಸಲಾಗಿದ್ದು, ಈ ಸ್ನೇಹಿತರ ಗುಂಪು ನವೆಂಬರ್ 7 ರ ಗುರುವಾರ ಟಿಕೆಟ್ ಸರದಿಯಲ್ಲಿ ಕಾಯುತ್ತಿದ್ದಾಗ ಪೊಲೀಸರು ಅವರನ್ನು ಸಂಜೆ 7 ಗಂಟೆಗೆ ಪಲರಿವಟ್ಟಂ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಲಪ್ಪುರಂ ಅಪರಾಧ ವಿಭಾಗದ ಪೊಲೀಸರು ಅಮೀನ್ ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ ಎಂದು ರೆಜಾಜ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇರಳ ಬ್ಲಾಸ್ಟರ್ಸ್ ಎಫ್‌ಸಿ 28 ನಿಷೇಧಿತ ವಸ್ತುಗಳನ್ನು ಕ್ರೀಡಾಂಗಣದಲ್ಲಿ ನಿಷೇಧಿಸಿ ಪಟ್ಟಿ ಮಾಡಿತ್ತು. ಆದರೆ ಪ್ರೇಕ್ಷಕರು ಕೆಫಿಯೆಹ್ ಧರಿಸಿ ಪಂದ್ಯ ವೀಕ್ಷಿಸುವುದನ್ನು ಇದು ನಿಷೇಧಿಸಿರಲಿಲ್ಲ. ಫ್ರೆಂಚ್ ಕ್ಲಬ್ ಪ್ಯಾರಿಸ್ ಸೇಂಟ್ ಜರ್ಮೈನ್ (PSG) ಅಭಿಮಾನಿಗಳು ಚಾಂಪಿಯನ್ಸ್ ಲೀಗ್ ಪಂದ್ಯದಲ್ಲಿ ಫ್ರೀ ಪ್ಯಾಲೆಸ್ಟೈನ್ ಎಂದು ಹೇಳುವ ದೊಡ್ಡ ಟಿಫೊವನ್ನು ಬಿಚ್ಚಿಟ್ಟ ಘಟನೆಯ ಬೆನ್ನಲ್ಲೆ ಈ ಘಟನೆ ನಡೆದಿದೆ.

ವಶಕ್ಕೆ ಒಳಗಾಗಿರುವ ರೆಜಾಜ್ ಮಾತನಾಡಿ, ತಾವು ಪ್ರತಿಭಟನೆ ನಡೆಸುವ ಉದ್ದೇಶವನ್ನು ಹೊಂದಿಲ್ಲ,ಬದಲಾಗಿ ಪ್ಯಾಲೆಸ್ಟೈನ್ ಪರ ರಾಜಕೀಯದ ಕಾರಣಕ್ಕಾಗಿ ಕೆಫಿಯೆಹ್ ಧರಿಸಿದ್ದಾಗಿ ತಿಳಿಸಿದ್ದಾರೆ.

“ನಾವು ಯಾವುದೇ ಬ್ಯಾನರ್, ಫಲಕ ಅಥವಾ ಧ್ವಜವನ್ನು ಹಿಡಿದಿಲ್ಲ. ಟಿಕೆಟ್ ಲಭ್ಯವಿದೆ ಎಂದು ನನ್ನ ಸ್ನೇಹಿತರು ನನ್ನನ್ನು ಕರೆದಿದ್ದರಿಂದ ನಾನು ಪಂದ್ಯಕ್ಕೆ ಬಂದೆ. ನಾವು ಟಿಕೆಟ್ ಸರದಿಯಲ್ಲಿ ಕಾಯುತ್ತಿರುವಾಗ, ಸಹಾಯಕ ಪೊಲೀಸ್ ಆಯುಕ್ತರು ಕೆಫಿಯೆಹ್ ಎಂದರೇನು ಎಂದು ಕೇಳಿದರು. ಇದನ್ನು ಒಳಗೆ ಬಿಡುವುದಿಲ್ಲ ಎಂದು ಹೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

“ಇದನ್ನು ಸಭ್ಯ ರೀತಿಯಲ್ಲಿ ಧರಿಸುವುಕ್ಕೆ ನಿಯಮಗಳು ಅಡ್ಡಿ ಮಾಡುವುದಿಲ್ಲ ಎಂದು ನಾನು ಅವರಿಗೆ ಹೇಳಿದೆ. ಈ ವೇಳೆ ಅವರು ನಮ್ಮ ಹೆಸರುಗಳನ್ನು ಕೇಳಿದ್ದು, ನಾನು ಅವರಿಗೆ ಹೆಸರು ಕೇಳಿದ ನಂತರ ನಮಗೆ ಕಾಯುವಂತೆ ಹೇಳಿದರು. ನಂತರ ಹೆಚ್ಚಿನ ಪೊಲೀಸರು ಸ್ಥಳಕ್ಕೆ ಬಂದರು. ನಂತರ ಎಸಿಪಿ ಕೆಲವು ಫೋನ್ ಕರೆಗಳನ್ನು ಮಾಡಿ  ಸ್ಪಷ್ಟನೆಗಾಗಿ ಠಾಣೆಗೆ ಬರುವಂತೆ ಹೇಳಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ನಮ್ಮನ್ನು ಧರ್ಮದ ಆಧಾರದ ಮೇಲೆ ಪ್ರಶ್ನಿಸಲಾಗಿದೆ ಎಂದು ಜನಪ್ರಿಯ ಸ್ವತಂತ್ರ ಪತ್ರಕರ್ತರೂ ಆಗಿರುವ ರೆಜಾಜ್ ವಿವರಿಸಿದ್ದಾರೆ. “ಮತ್ತೊಬ್ಬ ಬಂಧಿತ ವ್ಯಕ್ತಿ ಅಬ್ದುಲ್ಲಾ ಅವರು ತಿರುವನಂತಪುರಂನಲ್ಲಿ ನೆಲೆಸಿದ್ದು, ತಾನು ಮಸೀದಿಯೊಂದರಲ್ಲಿ ಧರ್ಮಗುರು ಎಂದು ಹೇಳಿದಾಗ, ಸರ್ಕಲ್ ಇನ್ಸ್‌ಪೆಕ್ಟರ್ ನೀವೆಲ್ಲರೂ ಮದರಸಾಗಳಿಗೆ ಹೋಗುತ್ತೀರಾ ಎಂದು ಕೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

ನನ್ನ ಜೊತೆಗಿದ್ದ ನನ್ನ ಇತರ ಸ್ನೇಹಿತರು ಮಲಪ್ಪುರಂ ಮತ್ತು ಪಾಲಕ್ಕಾಡ್‌ನಿಂದ ಬಂದಿದ್ದರಿಂದ, ಪಂದ್ಯಕ್ಕೆ ಬೇರೆ ಜಿಲ್ಲೆಗಳಿಂದ ಏಕೆ ಒಟ್ಟಿಗೆ ಬಂದರು ಎಂದು ಸಿಐ ನಮ್ಮನ್ನು ಕೇಳಿದ್ದಾರೆ. ಅದಾಗ್ಯೂ, ಕೇರಳ ಬ್ಲಾಸ್ಟರ್ಸ್ ಪಂದ್ಯಕ್ಕೆ ಎರ್ನಾಕುಲಂ ನಿವಾಸಿಗಳು ಮಾತ್ರ ಹಾಜರಾಗುವುದಿಲ್ಲ ಎಂಬುದು ನಮಗೆಲ್ಲರಿಗೂ ತಿಳಿದಿದೆ. ನಂತರ ನಾವು ಒಬ್ಬರನ್ನೊಬ್ಬರು ಹೇಗೆ ತಿಳಿದಿದ್ದೇವೆ, ನಮ್ಮ ಉದ್ದೇಶವೇನು, ನಾವು ಯಾವ ಪುಸ್ತಕಗಳನ್ನು ಓದುತ್ತೇವೆ, ಇತರ ವಿಷಯಗಳ ಜೊತೆಗೆ ನಾವು ಹೊಂದಿರುವ ರಾಜಕೀಯದಂತಹ ಬಹಳಷ್ಟು ವೈಯಕ್ತಿಕ ವಿವರಗಳನ್ನು ಕೇಳಲಾಯಿತು ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...