Homeಮುಖಪುಟ'ಕೆಫಿಯಹ್' ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

- Advertisement -
- Advertisement -

ಕೊಚ್ಚಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದ ಕೇರಳ ಬ್ಲಾಸ್ಟರ್ಸ್ ಎಫ್‌ಸಿ ಮತ್ತು ಹೈದರಾಬಾದ್ ಎಫ್‌ಸಿ ಫುಟ್‌ಬಾಲ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಪರ ಬೆಂಬಲದ ಸಂಕೇತವಾದ ‘ಕೆಫಿಯಹ್’ ಧರಿಸಿದ್ದಕ್ಕಾಗಿ ಕೇರಳ ಪೊಲೀಸರು ನಾಲ್ವರನ್ನು ಐದು ಗಂಟೆಗಳ ಕಾಲ ವಶಕ್ಕೆ ಪಡೆದಿರುವ ಘಟನೆ ನವೆಂಬರ್ 7ರಂದು ನಡೆದಿದೆ. ರಾಜ್ಯ ಪೊಲೀಸರ ಈ ಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವಶಕ್ಕೆ ಒಳಗಾದವರನ್ನು ರೆಜಾಜ್, ಅಬ್ದುಲ್ಲಾ, ಅಮೀನ್ ಮತ್ತು ಮಿದ್ಲಾಜ್ ಎಂದು ಗುರುತಿಸಲಾಗಿದ್ದು, ಈ ಸ್ನೇಹಿತರ ಗುಂಪು ನವೆಂಬರ್ 7 ರ ಗುರುವಾರ ಟಿಕೆಟ್ ಸರದಿಯಲ್ಲಿ ಕಾಯುತ್ತಿದ್ದಾಗ ಪೊಲೀಸರು ಅವರನ್ನು ಸಂಜೆ 7 ಗಂಟೆಗೆ ಪಲರಿವಟ್ಟಂ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಲಪ್ಪುರಂ ಅಪರಾಧ ವಿಭಾಗದ ಪೊಲೀಸರು ಅಮೀನ್ ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ ಎಂದು ರೆಜಾಜ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇರಳ ಬ್ಲಾಸ್ಟರ್ಸ್ ಎಫ್‌ಸಿ 28 ನಿಷೇಧಿತ ವಸ್ತುಗಳನ್ನು ಕ್ರೀಡಾಂಗಣದಲ್ಲಿ ನಿಷೇಧಿಸಿ ಪಟ್ಟಿ ಮಾಡಿತ್ತು. ಆದರೆ ಪ್ರೇಕ್ಷಕರು ಕೆಫಿಯೆಹ್ ಧರಿಸಿ ಪಂದ್ಯ ವೀಕ್ಷಿಸುವುದನ್ನು ಇದು ನಿಷೇಧಿಸಿರಲಿಲ್ಲ. ಫ್ರೆಂಚ್ ಕ್ಲಬ್ ಪ್ಯಾರಿಸ್ ಸೇಂಟ್ ಜರ್ಮೈನ್ (PSG) ಅಭಿಮಾನಿಗಳು ಚಾಂಪಿಯನ್ಸ್ ಲೀಗ್ ಪಂದ್ಯದಲ್ಲಿ ಫ್ರೀ ಪ್ಯಾಲೆಸ್ಟೈನ್ ಎಂದು ಹೇಳುವ ದೊಡ್ಡ ಟಿಫೊವನ್ನು ಬಿಚ್ಚಿಟ್ಟ ಘಟನೆಯ ಬೆನ್ನಲ್ಲೆ ಈ ಘಟನೆ ನಡೆದಿದೆ.

ವಶಕ್ಕೆ ಒಳಗಾಗಿರುವ ರೆಜಾಜ್ ಮಾತನಾಡಿ, ತಾವು ಪ್ರತಿಭಟನೆ ನಡೆಸುವ ಉದ್ದೇಶವನ್ನು ಹೊಂದಿಲ್ಲ,ಬದಲಾಗಿ ಪ್ಯಾಲೆಸ್ಟೈನ್ ಪರ ರಾಜಕೀಯದ ಕಾರಣಕ್ಕಾಗಿ ಕೆಫಿಯೆಹ್ ಧರಿಸಿದ್ದಾಗಿ ತಿಳಿಸಿದ್ದಾರೆ.

“ನಾವು ಯಾವುದೇ ಬ್ಯಾನರ್, ಫಲಕ ಅಥವಾ ಧ್ವಜವನ್ನು ಹಿಡಿದಿಲ್ಲ. ಟಿಕೆಟ್ ಲಭ್ಯವಿದೆ ಎಂದು ನನ್ನ ಸ್ನೇಹಿತರು ನನ್ನನ್ನು ಕರೆದಿದ್ದರಿಂದ ನಾನು ಪಂದ್ಯಕ್ಕೆ ಬಂದೆ. ನಾವು ಟಿಕೆಟ್ ಸರದಿಯಲ್ಲಿ ಕಾಯುತ್ತಿರುವಾಗ, ಸಹಾಯಕ ಪೊಲೀಸ್ ಆಯುಕ್ತರು ಕೆಫಿಯೆಹ್ ಎಂದರೇನು ಎಂದು ಕೇಳಿದರು. ಇದನ್ನು ಒಳಗೆ ಬಿಡುವುದಿಲ್ಲ ಎಂದು ಹೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

“ಇದನ್ನು ಸಭ್ಯ ರೀತಿಯಲ್ಲಿ ಧರಿಸುವುಕ್ಕೆ ನಿಯಮಗಳು ಅಡ್ಡಿ ಮಾಡುವುದಿಲ್ಲ ಎಂದು ನಾನು ಅವರಿಗೆ ಹೇಳಿದೆ. ಈ ವೇಳೆ ಅವರು ನಮ್ಮ ಹೆಸರುಗಳನ್ನು ಕೇಳಿದ್ದು, ನಾನು ಅವರಿಗೆ ಹೆಸರು ಕೇಳಿದ ನಂತರ ನಮಗೆ ಕಾಯುವಂತೆ ಹೇಳಿದರು. ನಂತರ ಹೆಚ್ಚಿನ ಪೊಲೀಸರು ಸ್ಥಳಕ್ಕೆ ಬಂದರು. ನಂತರ ಎಸಿಪಿ ಕೆಲವು ಫೋನ್ ಕರೆಗಳನ್ನು ಮಾಡಿ  ಸ್ಪಷ್ಟನೆಗಾಗಿ ಠಾಣೆಗೆ ಬರುವಂತೆ ಹೇಳಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ನಮ್ಮನ್ನು ಧರ್ಮದ ಆಧಾರದ ಮೇಲೆ ಪ್ರಶ್ನಿಸಲಾಗಿದೆ ಎಂದು ಜನಪ್ರಿಯ ಸ್ವತಂತ್ರ ಪತ್ರಕರ್ತರೂ ಆಗಿರುವ ರೆಜಾಜ್ ವಿವರಿಸಿದ್ದಾರೆ. “ಮತ್ತೊಬ್ಬ ಬಂಧಿತ ವ್ಯಕ್ತಿ ಅಬ್ದುಲ್ಲಾ ಅವರು ತಿರುವನಂತಪುರಂನಲ್ಲಿ ನೆಲೆಸಿದ್ದು, ತಾನು ಮಸೀದಿಯೊಂದರಲ್ಲಿ ಧರ್ಮಗುರು ಎಂದು ಹೇಳಿದಾಗ, ಸರ್ಕಲ್ ಇನ್ಸ್‌ಪೆಕ್ಟರ್ ನೀವೆಲ್ಲರೂ ಮದರಸಾಗಳಿಗೆ ಹೋಗುತ್ತೀರಾ ಎಂದು ಕೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

ನನ್ನ ಜೊತೆಗಿದ್ದ ನನ್ನ ಇತರ ಸ್ನೇಹಿತರು ಮಲಪ್ಪುರಂ ಮತ್ತು ಪಾಲಕ್ಕಾಡ್‌ನಿಂದ ಬಂದಿದ್ದರಿಂದ, ಪಂದ್ಯಕ್ಕೆ ಬೇರೆ ಜಿಲ್ಲೆಗಳಿಂದ ಏಕೆ ಒಟ್ಟಿಗೆ ಬಂದರು ಎಂದು ಸಿಐ ನಮ್ಮನ್ನು ಕೇಳಿದ್ದಾರೆ. ಅದಾಗ್ಯೂ, ಕೇರಳ ಬ್ಲಾಸ್ಟರ್ಸ್ ಪಂದ್ಯಕ್ಕೆ ಎರ್ನಾಕುಲಂ ನಿವಾಸಿಗಳು ಮಾತ್ರ ಹಾಜರಾಗುವುದಿಲ್ಲ ಎಂಬುದು ನಮಗೆಲ್ಲರಿಗೂ ತಿಳಿದಿದೆ. ನಂತರ ನಾವು ಒಬ್ಬರನ್ನೊಬ್ಬರು ಹೇಗೆ ತಿಳಿದಿದ್ದೇವೆ, ನಮ್ಮ ಉದ್ದೇಶವೇನು, ನಾವು ಯಾವ ಪುಸ್ತಕಗಳನ್ನು ಓದುತ್ತೇವೆ, ಇತರ ವಿಷಯಗಳ ಜೊತೆಗೆ ನಾವು ಹೊಂದಿರುವ ರಾಜಕೀಯದಂತಹ ಬಹಳಷ್ಟು ವೈಯಕ್ತಿಕ ವಿವರಗಳನ್ನು ಕೇಳಲಾಯಿತು ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...