Homeಮುಖಪುಟ'ಕೆಫಿಯಹ್' ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

- Advertisement -
- Advertisement -

ಕೊಚ್ಚಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದ ಕೇರಳ ಬ್ಲಾಸ್ಟರ್ಸ್ ಎಫ್‌ಸಿ ಮತ್ತು ಹೈದರಾಬಾದ್ ಎಫ್‌ಸಿ ಫುಟ್‌ಬಾಲ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಪರ ಬೆಂಬಲದ ಸಂಕೇತವಾದ ‘ಕೆಫಿಯಹ್’ ಧರಿಸಿದ್ದಕ್ಕಾಗಿ ಕೇರಳ ಪೊಲೀಸರು ನಾಲ್ವರನ್ನು ಐದು ಗಂಟೆಗಳ ಕಾಲ ವಶಕ್ಕೆ ಪಡೆದಿರುವ ಘಟನೆ ನವೆಂಬರ್ 7ರಂದು ನಡೆದಿದೆ. ರಾಜ್ಯ ಪೊಲೀಸರ ಈ ಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವಶಕ್ಕೆ ಒಳಗಾದವರನ್ನು ರೆಜಾಜ್, ಅಬ್ದುಲ್ಲಾ, ಅಮೀನ್ ಮತ್ತು ಮಿದ್ಲಾಜ್ ಎಂದು ಗುರುತಿಸಲಾಗಿದ್ದು, ಈ ಸ್ನೇಹಿತರ ಗುಂಪು ನವೆಂಬರ್ 7 ರ ಗುರುವಾರ ಟಿಕೆಟ್ ಸರದಿಯಲ್ಲಿ ಕಾಯುತ್ತಿದ್ದಾಗ ಪೊಲೀಸರು ಅವರನ್ನು ಸಂಜೆ 7 ಗಂಟೆಗೆ ಪಲರಿವಟ್ಟಂ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಲಪ್ಪುರಂ ಅಪರಾಧ ವಿಭಾಗದ ಪೊಲೀಸರು ಅಮೀನ್ ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ ಎಂದು ರೆಜಾಜ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇರಳ ಬ್ಲಾಸ್ಟರ್ಸ್ ಎಫ್‌ಸಿ 28 ನಿಷೇಧಿತ ವಸ್ತುಗಳನ್ನು ಕ್ರೀಡಾಂಗಣದಲ್ಲಿ ನಿಷೇಧಿಸಿ ಪಟ್ಟಿ ಮಾಡಿತ್ತು. ಆದರೆ ಪ್ರೇಕ್ಷಕರು ಕೆಫಿಯೆಹ್ ಧರಿಸಿ ಪಂದ್ಯ ವೀಕ್ಷಿಸುವುದನ್ನು ಇದು ನಿಷೇಧಿಸಿರಲಿಲ್ಲ. ಫ್ರೆಂಚ್ ಕ್ಲಬ್ ಪ್ಯಾರಿಸ್ ಸೇಂಟ್ ಜರ್ಮೈನ್ (PSG) ಅಭಿಮಾನಿಗಳು ಚಾಂಪಿಯನ್ಸ್ ಲೀಗ್ ಪಂದ್ಯದಲ್ಲಿ ಫ್ರೀ ಪ್ಯಾಲೆಸ್ಟೈನ್ ಎಂದು ಹೇಳುವ ದೊಡ್ಡ ಟಿಫೊವನ್ನು ಬಿಚ್ಚಿಟ್ಟ ಘಟನೆಯ ಬೆನ್ನಲ್ಲೆ ಈ ಘಟನೆ ನಡೆದಿದೆ.

ವಶಕ್ಕೆ ಒಳಗಾಗಿರುವ ರೆಜಾಜ್ ಮಾತನಾಡಿ, ತಾವು ಪ್ರತಿಭಟನೆ ನಡೆಸುವ ಉದ್ದೇಶವನ್ನು ಹೊಂದಿಲ್ಲ,ಬದಲಾಗಿ ಪ್ಯಾಲೆಸ್ಟೈನ್ ಪರ ರಾಜಕೀಯದ ಕಾರಣಕ್ಕಾಗಿ ಕೆಫಿಯೆಹ್ ಧರಿಸಿದ್ದಾಗಿ ತಿಳಿಸಿದ್ದಾರೆ.

“ನಾವು ಯಾವುದೇ ಬ್ಯಾನರ್, ಫಲಕ ಅಥವಾ ಧ್ವಜವನ್ನು ಹಿಡಿದಿಲ್ಲ. ಟಿಕೆಟ್ ಲಭ್ಯವಿದೆ ಎಂದು ನನ್ನ ಸ್ನೇಹಿತರು ನನ್ನನ್ನು ಕರೆದಿದ್ದರಿಂದ ನಾನು ಪಂದ್ಯಕ್ಕೆ ಬಂದೆ. ನಾವು ಟಿಕೆಟ್ ಸರದಿಯಲ್ಲಿ ಕಾಯುತ್ತಿರುವಾಗ, ಸಹಾಯಕ ಪೊಲೀಸ್ ಆಯುಕ್ತರು ಕೆಫಿಯೆಹ್ ಎಂದರೇನು ಎಂದು ಕೇಳಿದರು. ಇದನ್ನು ಒಳಗೆ ಬಿಡುವುದಿಲ್ಲ ಎಂದು ಹೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

“ಇದನ್ನು ಸಭ್ಯ ರೀತಿಯಲ್ಲಿ ಧರಿಸುವುಕ್ಕೆ ನಿಯಮಗಳು ಅಡ್ಡಿ ಮಾಡುವುದಿಲ್ಲ ಎಂದು ನಾನು ಅವರಿಗೆ ಹೇಳಿದೆ. ಈ ವೇಳೆ ಅವರು ನಮ್ಮ ಹೆಸರುಗಳನ್ನು ಕೇಳಿದ್ದು, ನಾನು ಅವರಿಗೆ ಹೆಸರು ಕೇಳಿದ ನಂತರ ನಮಗೆ ಕಾಯುವಂತೆ ಹೇಳಿದರು. ನಂತರ ಹೆಚ್ಚಿನ ಪೊಲೀಸರು ಸ್ಥಳಕ್ಕೆ ಬಂದರು. ನಂತರ ಎಸಿಪಿ ಕೆಲವು ಫೋನ್ ಕರೆಗಳನ್ನು ಮಾಡಿ  ಸ್ಪಷ್ಟನೆಗಾಗಿ ಠಾಣೆಗೆ ಬರುವಂತೆ ಹೇಳಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ನಮ್ಮನ್ನು ಧರ್ಮದ ಆಧಾರದ ಮೇಲೆ ಪ್ರಶ್ನಿಸಲಾಗಿದೆ ಎಂದು ಜನಪ್ರಿಯ ಸ್ವತಂತ್ರ ಪತ್ರಕರ್ತರೂ ಆಗಿರುವ ರೆಜಾಜ್ ವಿವರಿಸಿದ್ದಾರೆ. “ಮತ್ತೊಬ್ಬ ಬಂಧಿತ ವ್ಯಕ್ತಿ ಅಬ್ದುಲ್ಲಾ ಅವರು ತಿರುವನಂತಪುರಂನಲ್ಲಿ ನೆಲೆಸಿದ್ದು, ತಾನು ಮಸೀದಿಯೊಂದರಲ್ಲಿ ಧರ್ಮಗುರು ಎಂದು ಹೇಳಿದಾಗ, ಸರ್ಕಲ್ ಇನ್ಸ್‌ಪೆಕ್ಟರ್ ನೀವೆಲ್ಲರೂ ಮದರಸಾಗಳಿಗೆ ಹೋಗುತ್ತೀರಾ ಎಂದು ಕೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

ನನ್ನ ಜೊತೆಗಿದ್ದ ನನ್ನ ಇತರ ಸ್ನೇಹಿತರು ಮಲಪ್ಪುರಂ ಮತ್ತು ಪಾಲಕ್ಕಾಡ್‌ನಿಂದ ಬಂದಿದ್ದರಿಂದ, ಪಂದ್ಯಕ್ಕೆ ಬೇರೆ ಜಿಲ್ಲೆಗಳಿಂದ ಏಕೆ ಒಟ್ಟಿಗೆ ಬಂದರು ಎಂದು ಸಿಐ ನಮ್ಮನ್ನು ಕೇಳಿದ್ದಾರೆ. ಅದಾಗ್ಯೂ, ಕೇರಳ ಬ್ಲಾಸ್ಟರ್ಸ್ ಪಂದ್ಯಕ್ಕೆ ಎರ್ನಾಕುಲಂ ನಿವಾಸಿಗಳು ಮಾತ್ರ ಹಾಜರಾಗುವುದಿಲ್ಲ ಎಂಬುದು ನಮಗೆಲ್ಲರಿಗೂ ತಿಳಿದಿದೆ. ನಂತರ ನಾವು ಒಬ್ಬರನ್ನೊಬ್ಬರು ಹೇಗೆ ತಿಳಿದಿದ್ದೇವೆ, ನಮ್ಮ ಉದ್ದೇಶವೇನು, ನಾವು ಯಾವ ಪುಸ್ತಕಗಳನ್ನು ಓದುತ್ತೇವೆ, ಇತರ ವಿಷಯಗಳ ಜೊತೆಗೆ ನಾವು ಹೊಂದಿರುವ ರಾಜಕೀಯದಂತಹ ಬಹಳಷ್ಟು ವೈಯಕ್ತಿಕ ವಿವರಗಳನ್ನು ಕೇಳಲಾಯಿತು ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...