Homeಮುಖಪುಟ'ಕೆಫಿಯಹ್' ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

- Advertisement -
- Advertisement -

ಕೊಚ್ಚಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದ ಕೇರಳ ಬ್ಲಾಸ್ಟರ್ಸ್ ಎಫ್‌ಸಿ ಮತ್ತು ಹೈದರಾಬಾದ್ ಎಫ್‌ಸಿ ಫುಟ್‌ಬಾಲ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಪರ ಬೆಂಬಲದ ಸಂಕೇತವಾದ ‘ಕೆಫಿಯಹ್’ ಧರಿಸಿದ್ದಕ್ಕಾಗಿ ಕೇರಳ ಪೊಲೀಸರು ನಾಲ್ವರನ್ನು ಐದು ಗಂಟೆಗಳ ಕಾಲ ವಶಕ್ಕೆ ಪಡೆದಿರುವ ಘಟನೆ ನವೆಂಬರ್ 7ರಂದು ನಡೆದಿದೆ. ರಾಜ್ಯ ಪೊಲೀಸರ ಈ ಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವಶಕ್ಕೆ ಒಳಗಾದವರನ್ನು ರೆಜಾಜ್, ಅಬ್ದುಲ್ಲಾ, ಅಮೀನ್ ಮತ್ತು ಮಿದ್ಲಾಜ್ ಎಂದು ಗುರುತಿಸಲಾಗಿದ್ದು, ಈ ಸ್ನೇಹಿತರ ಗುಂಪು ನವೆಂಬರ್ 7 ರ ಗುರುವಾರ ಟಿಕೆಟ್ ಸರದಿಯಲ್ಲಿ ಕಾಯುತ್ತಿದ್ದಾಗ ಪೊಲೀಸರು ಅವರನ್ನು ಸಂಜೆ 7 ಗಂಟೆಗೆ ಪಲರಿವಟ್ಟಂ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಲಪ್ಪುರಂ ಅಪರಾಧ ವಿಭಾಗದ ಪೊಲೀಸರು ಅಮೀನ್ ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ ಎಂದು ರೆಜಾಜ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇರಳ ಬ್ಲಾಸ್ಟರ್ಸ್ ಎಫ್‌ಸಿ 28 ನಿಷೇಧಿತ ವಸ್ತುಗಳನ್ನು ಕ್ರೀಡಾಂಗಣದಲ್ಲಿ ನಿಷೇಧಿಸಿ ಪಟ್ಟಿ ಮಾಡಿತ್ತು. ಆದರೆ ಪ್ರೇಕ್ಷಕರು ಕೆಫಿಯೆಹ್ ಧರಿಸಿ ಪಂದ್ಯ ವೀಕ್ಷಿಸುವುದನ್ನು ಇದು ನಿಷೇಧಿಸಿರಲಿಲ್ಲ. ಫ್ರೆಂಚ್ ಕ್ಲಬ್ ಪ್ಯಾರಿಸ್ ಸೇಂಟ್ ಜರ್ಮೈನ್ (PSG) ಅಭಿಮಾನಿಗಳು ಚಾಂಪಿಯನ್ಸ್ ಲೀಗ್ ಪಂದ್ಯದಲ್ಲಿ ಫ್ರೀ ಪ್ಯಾಲೆಸ್ಟೈನ್ ಎಂದು ಹೇಳುವ ದೊಡ್ಡ ಟಿಫೊವನ್ನು ಬಿಚ್ಚಿಟ್ಟ ಘಟನೆಯ ಬೆನ್ನಲ್ಲೆ ಈ ಘಟನೆ ನಡೆದಿದೆ.

ವಶಕ್ಕೆ ಒಳಗಾಗಿರುವ ರೆಜಾಜ್ ಮಾತನಾಡಿ, ತಾವು ಪ್ರತಿಭಟನೆ ನಡೆಸುವ ಉದ್ದೇಶವನ್ನು ಹೊಂದಿಲ್ಲ,ಬದಲಾಗಿ ಪ್ಯಾಲೆಸ್ಟೈನ್ ಪರ ರಾಜಕೀಯದ ಕಾರಣಕ್ಕಾಗಿ ಕೆಫಿಯೆಹ್ ಧರಿಸಿದ್ದಾಗಿ ತಿಳಿಸಿದ್ದಾರೆ.

“ನಾವು ಯಾವುದೇ ಬ್ಯಾನರ್, ಫಲಕ ಅಥವಾ ಧ್ವಜವನ್ನು ಹಿಡಿದಿಲ್ಲ. ಟಿಕೆಟ್ ಲಭ್ಯವಿದೆ ಎಂದು ನನ್ನ ಸ್ನೇಹಿತರು ನನ್ನನ್ನು ಕರೆದಿದ್ದರಿಂದ ನಾನು ಪಂದ್ಯಕ್ಕೆ ಬಂದೆ. ನಾವು ಟಿಕೆಟ್ ಸರದಿಯಲ್ಲಿ ಕಾಯುತ್ತಿರುವಾಗ, ಸಹಾಯಕ ಪೊಲೀಸ್ ಆಯುಕ್ತರು ಕೆಫಿಯೆಹ್ ಎಂದರೇನು ಎಂದು ಕೇಳಿದರು. ಇದನ್ನು ಒಳಗೆ ಬಿಡುವುದಿಲ್ಲ ಎಂದು ಹೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

“ಇದನ್ನು ಸಭ್ಯ ರೀತಿಯಲ್ಲಿ ಧರಿಸುವುಕ್ಕೆ ನಿಯಮಗಳು ಅಡ್ಡಿ ಮಾಡುವುದಿಲ್ಲ ಎಂದು ನಾನು ಅವರಿಗೆ ಹೇಳಿದೆ. ಈ ವೇಳೆ ಅವರು ನಮ್ಮ ಹೆಸರುಗಳನ್ನು ಕೇಳಿದ್ದು, ನಾನು ಅವರಿಗೆ ಹೆಸರು ಕೇಳಿದ ನಂತರ ನಮಗೆ ಕಾಯುವಂತೆ ಹೇಳಿದರು. ನಂತರ ಹೆಚ್ಚಿನ ಪೊಲೀಸರು ಸ್ಥಳಕ್ಕೆ ಬಂದರು. ನಂತರ ಎಸಿಪಿ ಕೆಲವು ಫೋನ್ ಕರೆಗಳನ್ನು ಮಾಡಿ  ಸ್ಪಷ್ಟನೆಗಾಗಿ ಠಾಣೆಗೆ ಬರುವಂತೆ ಹೇಳಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ನಮ್ಮನ್ನು ಧರ್ಮದ ಆಧಾರದ ಮೇಲೆ ಪ್ರಶ್ನಿಸಲಾಗಿದೆ ಎಂದು ಜನಪ್ರಿಯ ಸ್ವತಂತ್ರ ಪತ್ರಕರ್ತರೂ ಆಗಿರುವ ರೆಜಾಜ್ ವಿವರಿಸಿದ್ದಾರೆ. “ಮತ್ತೊಬ್ಬ ಬಂಧಿತ ವ್ಯಕ್ತಿ ಅಬ್ದುಲ್ಲಾ ಅವರು ತಿರುವನಂತಪುರಂನಲ್ಲಿ ನೆಲೆಸಿದ್ದು, ತಾನು ಮಸೀದಿಯೊಂದರಲ್ಲಿ ಧರ್ಮಗುರು ಎಂದು ಹೇಳಿದಾಗ, ಸರ್ಕಲ್ ಇನ್ಸ್‌ಪೆಕ್ಟರ್ ನೀವೆಲ್ಲರೂ ಮದರಸಾಗಳಿಗೆ ಹೋಗುತ್ತೀರಾ ಎಂದು ಕೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

ನನ್ನ ಜೊತೆಗಿದ್ದ ನನ್ನ ಇತರ ಸ್ನೇಹಿತರು ಮಲಪ್ಪುರಂ ಮತ್ತು ಪಾಲಕ್ಕಾಡ್‌ನಿಂದ ಬಂದಿದ್ದರಿಂದ, ಪಂದ್ಯಕ್ಕೆ ಬೇರೆ ಜಿಲ್ಲೆಗಳಿಂದ ಏಕೆ ಒಟ್ಟಿಗೆ ಬಂದರು ಎಂದು ಸಿಐ ನಮ್ಮನ್ನು ಕೇಳಿದ್ದಾರೆ. ಅದಾಗ್ಯೂ, ಕೇರಳ ಬ್ಲಾಸ್ಟರ್ಸ್ ಪಂದ್ಯಕ್ಕೆ ಎರ್ನಾಕುಲಂ ನಿವಾಸಿಗಳು ಮಾತ್ರ ಹಾಜರಾಗುವುದಿಲ್ಲ ಎಂಬುದು ನಮಗೆಲ್ಲರಿಗೂ ತಿಳಿದಿದೆ. ನಂತರ ನಾವು ಒಬ್ಬರನ್ನೊಬ್ಬರು ಹೇಗೆ ತಿಳಿದಿದ್ದೇವೆ, ನಮ್ಮ ಉದ್ದೇಶವೇನು, ನಾವು ಯಾವ ಪುಸ್ತಕಗಳನ್ನು ಓದುತ್ತೇವೆ, ಇತರ ವಿಷಯಗಳ ಜೊತೆಗೆ ನಾವು ಹೊಂದಿರುವ ರಾಜಕೀಯದಂತಹ ಬಹಳಷ್ಟು ವೈಯಕ್ತಿಕ ವಿವರಗಳನ್ನು ಕೇಳಲಾಯಿತು ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...