Homeಮುಖಪುಟ'ಕೆಫಿಯಹ್' ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದ ನಾಲ್ವರನ್ನು ವಶಕ್ಕೆ ಪಡೆದ ಕೇರಳ ಪೊಲೀಸರು!

- Advertisement -
- Advertisement -

ಕೊಚ್ಚಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದ ಕೇರಳ ಬ್ಲಾಸ್ಟರ್ಸ್ ಎಫ್‌ಸಿ ಮತ್ತು ಹೈದರಾಬಾದ್ ಎಫ್‌ಸಿ ಫುಟ್‌ಬಾಲ್ ಪಂದ್ಯದ ವೇಳೆ ಪ್ಯಾಲೆಸ್ತೀನ್ ಪರ ಬೆಂಬಲದ ಸಂಕೇತವಾದ ‘ಕೆಫಿಯಹ್’ ಧರಿಸಿದ್ದಕ್ಕಾಗಿ ಕೇರಳ ಪೊಲೀಸರು ನಾಲ್ವರನ್ನು ಐದು ಗಂಟೆಗಳ ಕಾಲ ವಶಕ್ಕೆ ಪಡೆದಿರುವ ಘಟನೆ ನವೆಂಬರ್ 7ರಂದು ನಡೆದಿದೆ. ರಾಜ್ಯ ಪೊಲೀಸರ ಈ ಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವಶಕ್ಕೆ ಒಳಗಾದವರನ್ನು ರೆಜಾಜ್, ಅಬ್ದುಲ್ಲಾ, ಅಮೀನ್ ಮತ್ತು ಮಿದ್ಲಾಜ್ ಎಂದು ಗುರುತಿಸಲಾಗಿದ್ದು, ಈ ಸ್ನೇಹಿತರ ಗುಂಪು ನವೆಂಬರ್ 7 ರ ಗುರುವಾರ ಟಿಕೆಟ್ ಸರದಿಯಲ್ಲಿ ಕಾಯುತ್ತಿದ್ದಾಗ ಪೊಲೀಸರು ಅವರನ್ನು ಸಂಜೆ 7 ಗಂಟೆಗೆ ಪಲರಿವಟ್ಟಂ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಲಪ್ಪುರಂ ಅಪರಾಧ ವಿಭಾಗದ ಪೊಲೀಸರು ಅಮೀನ್ ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ ಎಂದು ರೆಜಾಜ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇರಳ ಬ್ಲಾಸ್ಟರ್ಸ್ ಎಫ್‌ಸಿ 28 ನಿಷೇಧಿತ ವಸ್ತುಗಳನ್ನು ಕ್ರೀಡಾಂಗಣದಲ್ಲಿ ನಿಷೇಧಿಸಿ ಪಟ್ಟಿ ಮಾಡಿತ್ತು. ಆದರೆ ಪ್ರೇಕ್ಷಕರು ಕೆಫಿಯೆಹ್ ಧರಿಸಿ ಪಂದ್ಯ ವೀಕ್ಷಿಸುವುದನ್ನು ಇದು ನಿಷೇಧಿಸಿರಲಿಲ್ಲ. ಫ್ರೆಂಚ್ ಕ್ಲಬ್ ಪ್ಯಾರಿಸ್ ಸೇಂಟ್ ಜರ್ಮೈನ್ (PSG) ಅಭಿಮಾನಿಗಳು ಚಾಂಪಿಯನ್ಸ್ ಲೀಗ್ ಪಂದ್ಯದಲ್ಲಿ ಫ್ರೀ ಪ್ಯಾಲೆಸ್ಟೈನ್ ಎಂದು ಹೇಳುವ ದೊಡ್ಡ ಟಿಫೊವನ್ನು ಬಿಚ್ಚಿಟ್ಟ ಘಟನೆಯ ಬೆನ್ನಲ್ಲೆ ಈ ಘಟನೆ ನಡೆದಿದೆ.

ವಶಕ್ಕೆ ಒಳಗಾಗಿರುವ ರೆಜಾಜ್ ಮಾತನಾಡಿ, ತಾವು ಪ್ರತಿಭಟನೆ ನಡೆಸುವ ಉದ್ದೇಶವನ್ನು ಹೊಂದಿಲ್ಲ,ಬದಲಾಗಿ ಪ್ಯಾಲೆಸ್ಟೈನ್ ಪರ ರಾಜಕೀಯದ ಕಾರಣಕ್ಕಾಗಿ ಕೆಫಿಯೆಹ್ ಧರಿಸಿದ್ದಾಗಿ ತಿಳಿಸಿದ್ದಾರೆ.

“ನಾವು ಯಾವುದೇ ಬ್ಯಾನರ್, ಫಲಕ ಅಥವಾ ಧ್ವಜವನ್ನು ಹಿಡಿದಿಲ್ಲ. ಟಿಕೆಟ್ ಲಭ್ಯವಿದೆ ಎಂದು ನನ್ನ ಸ್ನೇಹಿತರು ನನ್ನನ್ನು ಕರೆದಿದ್ದರಿಂದ ನಾನು ಪಂದ್ಯಕ್ಕೆ ಬಂದೆ. ನಾವು ಟಿಕೆಟ್ ಸರದಿಯಲ್ಲಿ ಕಾಯುತ್ತಿರುವಾಗ, ಸಹಾಯಕ ಪೊಲೀಸ್ ಆಯುಕ್ತರು ಕೆಫಿಯೆಹ್ ಎಂದರೇನು ಎಂದು ಕೇಳಿದರು. ಇದನ್ನು ಒಳಗೆ ಬಿಡುವುದಿಲ್ಲ ಎಂದು ಹೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

“ಇದನ್ನು ಸಭ್ಯ ರೀತಿಯಲ್ಲಿ ಧರಿಸುವುಕ್ಕೆ ನಿಯಮಗಳು ಅಡ್ಡಿ ಮಾಡುವುದಿಲ್ಲ ಎಂದು ನಾನು ಅವರಿಗೆ ಹೇಳಿದೆ. ಈ ವೇಳೆ ಅವರು ನಮ್ಮ ಹೆಸರುಗಳನ್ನು ಕೇಳಿದ್ದು, ನಾನು ಅವರಿಗೆ ಹೆಸರು ಕೇಳಿದ ನಂತರ ನಮಗೆ ಕಾಯುವಂತೆ ಹೇಳಿದರು. ನಂತರ ಹೆಚ್ಚಿನ ಪೊಲೀಸರು ಸ್ಥಳಕ್ಕೆ ಬಂದರು. ನಂತರ ಎಸಿಪಿ ಕೆಲವು ಫೋನ್ ಕರೆಗಳನ್ನು ಮಾಡಿ  ಸ್ಪಷ್ಟನೆಗಾಗಿ ಠಾಣೆಗೆ ಬರುವಂತೆ ಹೇಳಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ನಮ್ಮನ್ನು ಧರ್ಮದ ಆಧಾರದ ಮೇಲೆ ಪ್ರಶ್ನಿಸಲಾಗಿದೆ ಎಂದು ಜನಪ್ರಿಯ ಸ್ವತಂತ್ರ ಪತ್ರಕರ್ತರೂ ಆಗಿರುವ ರೆಜಾಜ್ ವಿವರಿಸಿದ್ದಾರೆ. “ಮತ್ತೊಬ್ಬ ಬಂಧಿತ ವ್ಯಕ್ತಿ ಅಬ್ದುಲ್ಲಾ ಅವರು ತಿರುವನಂತಪುರಂನಲ್ಲಿ ನೆಲೆಸಿದ್ದು, ತಾನು ಮಸೀದಿಯೊಂದರಲ್ಲಿ ಧರ್ಮಗುರು ಎಂದು ಹೇಳಿದಾಗ, ಸರ್ಕಲ್ ಇನ್ಸ್‌ಪೆಕ್ಟರ್ ನೀವೆಲ್ಲರೂ ಮದರಸಾಗಳಿಗೆ ಹೋಗುತ್ತೀರಾ ಎಂದು ಕೇಳಿದ್ದಾರೆ” ಎಂದು ರೆಜಾಜ್ ಹೇಳಿದ್ದಾರೆ.

ನನ್ನ ಜೊತೆಗಿದ್ದ ನನ್ನ ಇತರ ಸ್ನೇಹಿತರು ಮಲಪ್ಪುರಂ ಮತ್ತು ಪಾಲಕ್ಕಾಡ್‌ನಿಂದ ಬಂದಿದ್ದರಿಂದ, ಪಂದ್ಯಕ್ಕೆ ಬೇರೆ ಜಿಲ್ಲೆಗಳಿಂದ ಏಕೆ ಒಟ್ಟಿಗೆ ಬಂದರು ಎಂದು ಸಿಐ ನಮ್ಮನ್ನು ಕೇಳಿದ್ದಾರೆ. ಅದಾಗ್ಯೂ, ಕೇರಳ ಬ್ಲಾಸ್ಟರ್ಸ್ ಪಂದ್ಯಕ್ಕೆ ಎರ್ನಾಕುಲಂ ನಿವಾಸಿಗಳು ಮಾತ್ರ ಹಾಜರಾಗುವುದಿಲ್ಲ ಎಂಬುದು ನಮಗೆಲ್ಲರಿಗೂ ತಿಳಿದಿದೆ. ನಂತರ ನಾವು ಒಬ್ಬರನ್ನೊಬ್ಬರು ಹೇಗೆ ತಿಳಿದಿದ್ದೇವೆ, ನಮ್ಮ ಉದ್ದೇಶವೇನು, ನಾವು ಯಾವ ಪುಸ್ತಕಗಳನ್ನು ಓದುತ್ತೇವೆ, ಇತರ ವಿಷಯಗಳ ಜೊತೆಗೆ ನಾವು ಹೊಂದಿರುವ ರಾಜಕೀಯದಂತಹ ಬಹಳಷ್ಟು ವೈಯಕ್ತಿಕ ವಿವರಗಳನ್ನು ಕೇಳಲಾಯಿತು ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ಆಂಧ್ರಪ್ರದೇಶ | ವಾಟ್ಸಾಪ್‌ ಮೂಲಕ ಕನಿಷ್ಠ 100 ಸರ್ಕಾರಿ ಸೇವೆ ನೀಡುವ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...