Homeಮುಖಪುಟಐದು ವರ್ಷ ಮುಖ್ಯಮಂತ್ರಿ ಆಗಿದ್ದರೂ ಕಾರು ಹೊಂದಿಲ್ಲದ ವ್ಯಕ್ತಿ!! ಕೇಜ್ರಿವಾಲ್ ಆಸ್ತಿ ಅಫಿಡವಿಟ್ ಘೋಷಣೆ.

ಐದು ವರ್ಷ ಮುಖ್ಯಮಂತ್ರಿ ಆಗಿದ್ದರೂ ಕಾರು ಹೊಂದಿಲ್ಲದ ವ್ಯಕ್ತಿ!! ಕೇಜ್ರಿವಾಲ್ ಆಸ್ತಿ ಅಫಿಡವಿಟ್ ಘೋಷಣೆ.

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನವದೆಹಲಿಯಿಂದ ಸ್ಪರ್ಧಿಸುತ್ತಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 3.4 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಇದು 2015 ರಿಂದ 1.3 ಕೋಟಿ ರೂ.ಗಳ ಅಲ್ಪ ಹೆಚ್ಚಳವಾಗಿದೆ ಎಂದು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. 2015 ರಲ್ಲಿ, ಕೇಜ್ರಿವಾಲ್ ಅವರ ಒಟ್ಟು ಆಸ್ತಿ 2.1 ಕೋಟಿ ರೂ ಇತ್ತು.

ಕೇಜ್ರಿವಾಲ್ ಅವರು ಚುನಾವಣಾ ಆಯೋಗಕ್ಕೆ ನೀಡಿದ ಇತ್ತೀಚಿನ ಅಫಿಡವಿಟ್‌ನಲ್ಲಿ ನೀಡಿದ ವಿವರಗಳ ಪ್ರಕಾರ, ನಗದು ಮತ್ತು ಹೂಡಿಕೆಯಂತಹ ಚರ ಆಸ್ತಿಗಳನ್ನು 9.95 ಲಕ್ಷ ರೂ ಎಂದು ಘೋಷಿಸಿದ್ದಾರೆ. ಅವರ ಪತ್ನಿ ಸುನಿತಾ ಒಟ್ಟು 12 ಲಕ್ಷ ಮೌಲ್ಯದ 320 ಗ್ರಾಂ ಚಿನ್ನ ಸೇರಿದಂತೆ ಒಟ್ಟು 57.07 ಲಕ್ಷ ರೂ. ಮತ್ತು 1 ಕೆಜಿ ಬೆಳ್ಳಿ 40,000 ರೂ ಆಗಿದೆ. 2015 ರಲ್ಲಿ ಕೇಜ್ರಿವಾಲ್ 2.26 ಲಕ್ಷ ರೂ.ಗಳ ಚರ ಆಸ್ತಿಯನ್ನು ಘೋಷಿಸಿದ್ದರೆ, ಅವರ ಪತ್ನಿ 15.28 ಲಕ್ಷ ಹೊಂದಿದ್ದರು.

ವಿಶೇಷವೆಂದರೆ, ಕೇಜ್ರಿವಾಲ್ ಅವರ ಆದಾಯವು 2014-15ರಲ್ಲಿ 7.42 ಲಕ್ಷ ರೂ.ಗಳಿಂದ 2018-19ರಲ್ಲಿ 2.81 ಲಕ್ಷ ರೂ.ಗೆ ಇಳಿದಿದೆ. ಅವರ ಪತ್ನಿ ಸುನೀತಾ ಅವರ ಆದಾಯವೂ 2014-15ರಲ್ಲಿ 12.08 ಲಕ್ಷ ರೂ.ಗಳಿಂದ 2018-19ರಲ್ಲಿ 9.94 ಲಕ್ಷ ರೂ.ಗೆ ಇಳಿದಿದೆ.

32 ಲಕ್ಷ ಮೌಲ್ಯದ ನಗದು ಮತ್ತು ನಿಶ್ಚಿತ ಠೇವಣಿಯನ್ನು ಸ್ವಯಂಪ್ರೇರಿತ ನಿವೃತ್ತಿ ಸೌಲಭ್ಯವಾಗಿ ಸುನಿತಾ ಕೇಜ್ರಿವಾಲ್ ಸ್ವೀಕರಿಸಿದ್ದಾರೆ ಮತ್ತು ಉಳಿದವು ಉಳಿತಾಯವಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಕೇಜ್ರಿವಾಲ್ ಅವರ ಬಳಿ 12,000 ರೂ., ಅವರ ಪತ್ನಿ 9,000 ರೂ. ನಗದು ಹಣವಿದೆ .

ಇದಲ್ಲದೆ, ನವದೆಹಲಿ ಕ್ಷೇತ್ರದ ಚಾಂದನಿ ಚೌಕ್‌ನಲ್ಲಿ ಮತದಾರನಾಗಿರುವ 51 ವರ್ಷದ ಕೇಜ್ರಿವಾಲ್‌ ಸ್ವತಃ ವಾಹನ ಹೊಂದಿಲ್ಲ. ಅವರ ಪತ್ನಿ 6.20 ಲಕ್ಷ ರೂಪಾಯಿ ಮೌಲ್ಯದ ಮಾರುತಿ ಬಲೆನೊ ಹೊಂದಿದ್ದಾರೆ. ಸುನಿತಾ ಅವರು ಸಾರ್ವಜನಿಕ ಭವಿಷ್ಯ ನಿಧಿಗಳು ಮತ್ತು ಎಸ್‌ಬಿಐ ಮ್ಯೂಚುವಲ್ ಫಂಡ್‌ಗಳಲ್ಲೂ ಹೂಡಿಕೆ ಮಾಡಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಅವರು ತಮ್ಮ ಹೆಸರಿನಲ್ಲಿ ಗಾಜಿಯಾಬಾದ್‌ನ ಇಂದಿರಾಪುರಂನಲ್ಲಿ ಖರೀದಿಸಿದ ಫ್ಲ್ಯಾಟ್ ಮತ್ತು ಹರಿಯಾಣದ ಶಿವಾನಿಯಲ್ಲಿ ಅನುವಂಶಿಕವಾಗಿ ಪಡೆದ ಆಸ್ತಿಯನ್ನು ಪ್ರಸ್ತುತ ಮಾರುಕಟ್ಟೆ ಮೌಲ್ಯ ಕ್ರಮವಾಗಿ 1.4 ಕೋಟಿ ಮತ್ತು 37 ಲಕ್ಷ ರೂ. ಆಗಿದೆ. 2010 ರಲ್ಲಿ ಗುರುಗ್ರಾಮ್‌ನಲ್ಲಿ ಸುನೀತಾ ಅವರು ಫ್ಲ್ಯಾಟ್ ಖರೀದಿಸಿದ್ದಾರೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ, ಇದರ ಮಾರುಕಟ್ಟೆ ಮೌಲ್ಯವು ಈಗ 1 ಕೋಟಿ ರೂ. ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...