Homeಮುಖಪುಟಐದು ವರ್ಷ ಮುಖ್ಯಮಂತ್ರಿ ಆಗಿದ್ದರೂ ಕಾರು ಹೊಂದಿಲ್ಲದ ವ್ಯಕ್ತಿ!! ಕೇಜ್ರಿವಾಲ್ ಆಸ್ತಿ ಅಫಿಡವಿಟ್ ಘೋಷಣೆ.

ಐದು ವರ್ಷ ಮುಖ್ಯಮಂತ್ರಿ ಆಗಿದ್ದರೂ ಕಾರು ಹೊಂದಿಲ್ಲದ ವ್ಯಕ್ತಿ!! ಕೇಜ್ರಿವಾಲ್ ಆಸ್ತಿ ಅಫಿಡವಿಟ್ ಘೋಷಣೆ.

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನವದೆಹಲಿಯಿಂದ ಸ್ಪರ್ಧಿಸುತ್ತಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 3.4 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಇದು 2015 ರಿಂದ 1.3 ಕೋಟಿ ರೂ.ಗಳ ಅಲ್ಪ ಹೆಚ್ಚಳವಾಗಿದೆ ಎಂದು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. 2015 ರಲ್ಲಿ, ಕೇಜ್ರಿವಾಲ್ ಅವರ ಒಟ್ಟು ಆಸ್ತಿ 2.1 ಕೋಟಿ ರೂ ಇತ್ತು.

ಕೇಜ್ರಿವಾಲ್ ಅವರು ಚುನಾವಣಾ ಆಯೋಗಕ್ಕೆ ನೀಡಿದ ಇತ್ತೀಚಿನ ಅಫಿಡವಿಟ್‌ನಲ್ಲಿ ನೀಡಿದ ವಿವರಗಳ ಪ್ರಕಾರ, ನಗದು ಮತ್ತು ಹೂಡಿಕೆಯಂತಹ ಚರ ಆಸ್ತಿಗಳನ್ನು 9.95 ಲಕ್ಷ ರೂ ಎಂದು ಘೋಷಿಸಿದ್ದಾರೆ. ಅವರ ಪತ್ನಿ ಸುನಿತಾ ಒಟ್ಟು 12 ಲಕ್ಷ ಮೌಲ್ಯದ 320 ಗ್ರಾಂ ಚಿನ್ನ ಸೇರಿದಂತೆ ಒಟ್ಟು 57.07 ಲಕ್ಷ ರೂ. ಮತ್ತು 1 ಕೆಜಿ ಬೆಳ್ಳಿ 40,000 ರೂ ಆಗಿದೆ. 2015 ರಲ್ಲಿ ಕೇಜ್ರಿವಾಲ್ 2.26 ಲಕ್ಷ ರೂ.ಗಳ ಚರ ಆಸ್ತಿಯನ್ನು ಘೋಷಿಸಿದ್ದರೆ, ಅವರ ಪತ್ನಿ 15.28 ಲಕ್ಷ ಹೊಂದಿದ್ದರು.

ವಿಶೇಷವೆಂದರೆ, ಕೇಜ್ರಿವಾಲ್ ಅವರ ಆದಾಯವು 2014-15ರಲ್ಲಿ 7.42 ಲಕ್ಷ ರೂ.ಗಳಿಂದ 2018-19ರಲ್ಲಿ 2.81 ಲಕ್ಷ ರೂ.ಗೆ ಇಳಿದಿದೆ. ಅವರ ಪತ್ನಿ ಸುನೀತಾ ಅವರ ಆದಾಯವೂ 2014-15ರಲ್ಲಿ 12.08 ಲಕ್ಷ ರೂ.ಗಳಿಂದ 2018-19ರಲ್ಲಿ 9.94 ಲಕ್ಷ ರೂ.ಗೆ ಇಳಿದಿದೆ.

32 ಲಕ್ಷ ಮೌಲ್ಯದ ನಗದು ಮತ್ತು ನಿಶ್ಚಿತ ಠೇವಣಿಯನ್ನು ಸ್ವಯಂಪ್ರೇರಿತ ನಿವೃತ್ತಿ ಸೌಲಭ್ಯವಾಗಿ ಸುನಿತಾ ಕೇಜ್ರಿವಾಲ್ ಸ್ವೀಕರಿಸಿದ್ದಾರೆ ಮತ್ತು ಉಳಿದವು ಉಳಿತಾಯವಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಕೇಜ್ರಿವಾಲ್ ಅವರ ಬಳಿ 12,000 ರೂ., ಅವರ ಪತ್ನಿ 9,000 ರೂ. ನಗದು ಹಣವಿದೆ .

ಇದಲ್ಲದೆ, ನವದೆಹಲಿ ಕ್ಷೇತ್ರದ ಚಾಂದನಿ ಚೌಕ್‌ನಲ್ಲಿ ಮತದಾರನಾಗಿರುವ 51 ವರ್ಷದ ಕೇಜ್ರಿವಾಲ್‌ ಸ್ವತಃ ವಾಹನ ಹೊಂದಿಲ್ಲ. ಅವರ ಪತ್ನಿ 6.20 ಲಕ್ಷ ರೂಪಾಯಿ ಮೌಲ್ಯದ ಮಾರುತಿ ಬಲೆನೊ ಹೊಂದಿದ್ದಾರೆ. ಸುನಿತಾ ಅವರು ಸಾರ್ವಜನಿಕ ಭವಿಷ್ಯ ನಿಧಿಗಳು ಮತ್ತು ಎಸ್‌ಬಿಐ ಮ್ಯೂಚುವಲ್ ಫಂಡ್‌ಗಳಲ್ಲೂ ಹೂಡಿಕೆ ಮಾಡಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಅವರು ತಮ್ಮ ಹೆಸರಿನಲ್ಲಿ ಗಾಜಿಯಾಬಾದ್‌ನ ಇಂದಿರಾಪುರಂನಲ್ಲಿ ಖರೀದಿಸಿದ ಫ್ಲ್ಯಾಟ್ ಮತ್ತು ಹರಿಯಾಣದ ಶಿವಾನಿಯಲ್ಲಿ ಅನುವಂಶಿಕವಾಗಿ ಪಡೆದ ಆಸ್ತಿಯನ್ನು ಪ್ರಸ್ತುತ ಮಾರುಕಟ್ಟೆ ಮೌಲ್ಯ ಕ್ರಮವಾಗಿ 1.4 ಕೋಟಿ ಮತ್ತು 37 ಲಕ್ಷ ರೂ. ಆಗಿದೆ. 2010 ರಲ್ಲಿ ಗುರುಗ್ರಾಮ್‌ನಲ್ಲಿ ಸುನೀತಾ ಅವರು ಫ್ಲ್ಯಾಟ್ ಖರೀದಿಸಿದ್ದಾರೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ, ಇದರ ಮಾರುಕಟ್ಟೆ ಮೌಲ್ಯವು ಈಗ 1 ಕೋಟಿ ರೂ. ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...