Homeಮುಖಪುಟ"ಮೆಲಾನಿಯ ಟ್ರಂಪ್‌" ಕಾರ್ಯಕ್ರಮದಲ್ಲಿ ಕೇಜ್ರಿ ಮತ್ತು ಸಿಸೋಡಿಯ ಹೆಸರು ರದ್ದು: ಆಪ್‌ ಆರೋಪ

“ಮೆಲಾನಿಯ ಟ್ರಂಪ್‌” ಕಾರ್ಯಕ್ರಮದಲ್ಲಿ ಕೇಜ್ರಿ ಮತ್ತು ಸಿಸೋಡಿಯ ಹೆಸರು ರದ್ದು: ಆಪ್‌ ಆರೋಪ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರ ಹೆಸರನ್ನು ಟ್ರಂಪ್‌ ಭೇಟಿಯ ಕಾರ್ಯಕ್ರಮದಿಂದ ಕೈ ಬಿಡಲಾಗಿದೆ ಎಂದು ಎಎಪಿ ಆರೋಪಿಸಿದೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅಹ್ಮದಾಬಾದ್‌ ನಲ್ಲಿ ನಡೆಯಲಿರುವ “ನಮಸ್ತೇ ಟ್ರಂಪ್”‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ದೆಹಲಿಯಲ್ಲಿ ಟ್ರಂಪ್‌ ಮತ್ತು ಮೋದಿಯ ನಡುವೆ ಮಾತುಕತೆ ನಡೆಯಲಿದೆ. ಈ ಸಮಯದಲ್ಲಿ ಟ್ರಂಪ್‌ ಪತ್ನಿ ಮೆಲಾನಿಯ ಟ್ರಂಪ್‌ ಅವರು ದಹಲಿಯ ಶಾಲೆಗಳಿಗೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆ ಕಾರ್ಯಕ್ರಮದ ಪಟ್ಟಿಯಲ್ಲಿ ಮುಖ್ಯ ಅತಿಥಿಗಳಾಗಿದ್ದ ಸಿಎಂ ಕೇಜ್ರಿವಾಲ್‌ ಮತ್ತು ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ಎಎಪಿ ಆರೋಪಿಸಿದೆ.

ದೆಹಲಿ ಶಾಲೆಯಲ್ಲಿ ಹೊಸದಾಗಿ ಪರಿಚಯಿಸಲಾದ “ಹ್ಯಾಪಿನೆಸ್ಸ್‌ ಕರಿಕ್ಯುಲಮ್‌ (ಸಂತಸದಾಯಕ ಪಠ್ಯ) ಅನ್ನು ವೀಕ್ಷಿಸಲು ಕಾರ್ಯಕ್ರಮ ನಿಗದಿಪಡಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಕಾರ್ಯಕ್ರಮದ ಪಟ್ಟಿಯಿಂದ ದೆಹಲಿಯ ಇಬ್ಬರು ಉನ್ನತ ನಾಯಕರನ್ನು ವಿವಿಐಪಿ ಪಟ್ಟಿಯಿಂದ ಕೈಬಿಡುವುದರ ಹಿಂದೆ ಕೇಂದ್ರ ಸರ್ಕಾರದ ಹುನ್ನಾರವಿದೆ ಎಂದು ಎಎಪಿ ಆರೋಪಿಸಿದೆ.

ಶಾಲಾ ಮಕ್ಕಳಲ್ಲಿ ಒತ್ತಡವನ್ನು ಕಡಿಮೆ ಮಾಡುವ ಪ್ರಯತ್ನವಾಗಿ ಎರಡು ವರ್ಷಗಳ ಹಿಂದೆ “ಹ್ಯಾಪಿನೆಸ್ಸ್‌  ಪಠ್ಯಕ್ರಮ”ವನ್ನು ದೆಹಲಿ ಉಪ ಮುಖ್ಯಮಂತ್ರಿ ಸಿಸೋಡಿಯಾ ಪರಿಚಯಿಸಿದ್ದರು. ಇದು 40 ನಿಮಿಷಗಳ ಧ್ಯಾನ, ವಿಶ್ರಾಂತಿ ಮತ್ತು ಹೊರಾಂಗಣ ಚಟುವಟಿಕೆಗಳನ್ನು ಒಳಗೊಂಡಿದೆ.

ಎಎಪಿ ಸರ್ಕಾರ ಜುಲೈ 2018 ರಲ್ಲಿ ತನ್ನ ಶಾಲೆಗಳಲ್ಲಿ ‘ಸಂತೋಷದಾಯಕ ಪಠ್ಯಕ್ರಮ’ ವನ್ನು ಪರಿಚಯಿಸಿತು. ಪಠ್ಯಕ್ರಮದ ಅಡಿಯಲ್ಲಿ, ನರ್ಸರಿ ಮತ್ತು ಶಿಶುವಿಹಾರದ ವಿದ್ಯಾರ್ಥಿಗಳಿಗೆ ವಾರಕ್ಕೆ ಎರಡು ಬಾರಿ ಮತ್ತು 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ದಿನಕ್ಕೆ ಒಂದು ಗಂಟೆಯ ಅವಧಿಯಲ್ಲಿ ಧ್ಯಾನ, ವಿಶ್ರಾಂತಿಯ ಜೊತೆಗೆ ಕಥೆ ಹೇಳುವಿಕೆ ಮತ್ತು ಪ್ರಶ್ನೆ-ಉತ್ತರದ ವಿಷಯಗಳನ್ನು ಒಳಗೊಂಡಿದೆ.

ಅಮೆರಿಕದ ಪ್ರಥಮ ಮಹಿಳೆಯ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ ಎಂದು ಸಿಸೋಡಿಯಾ ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಮೆಲಾನಿಯಾ ಟ್ರಂಪ್ ಭೇಟಿ ನೀಡಲಿರುವ ಶಾಲೆಯ ಹೆಸರು ಮತ್ತು ಸ್ಥಳವನ್ನು ಭದ್ರತಾ ಕಾರಣಗಳಿಂದ ಬಹಿರಂಗಪಡಿಸಿಲ್ಲ.

ನಾವು ಯುಎಸ್ ರಾಯಭಾರ ಕಚೇರಿಯಿಂದ ಶಾಲಾ ಭೇಟಿಗೆ ವಿನಂತಿಯನ್ನು ಪಡೆದುಕೊಂಡಿದ್ದೇವೆ. ಅವರು ಬರಲು ಬಯಸಿದರೆ ಖಂಡಿತ ಅವರನ್ನು ಸ್ವಾಗತಿಸುತ್ತೇವೆ ಎಂದು ನಾವು ಅವರಿಗೆ ತಿಳಿಸಿದ್ದೇವೆ ಎಂದು ಪಟ್ಪರ್ಗಂಜ್‌ನ ದೆಹಲಿ ಸರ್ಕಾರಿ ಶಾಲೆಗೆ ಭೇಟಿಯ ಸಂದರ್ಭದಲ್ಲಿ ಸಿಸೋಡಿಯ ಹೇಳಿದ್ದಾರೆ.

ಯಾರನ್ನು ಆಹ್ವಾನಿಸಬೇಕು ಮತ್ತು ಯಾರನ್ನು ಆಹ್ವಾನಿಸಬಾರದು ಎಂದು ಭಾರತೀಯ ಸರ್ಕಾರವು ವಿದೇಶಿ ಅತಿಥಿಗೆ ಸಲಹೆ ನೀಡುವುದಿಲ್ಲ. “ಸಣ್ಣ ರಾಜಕೀಯವನ್ನು ಪ್ರಮುಖ ಸಂದರ್ಭಗಳಲ್ಲಿ ಮಾಡಬಾರದು. ಭಾರತ ಸರ್ಕಾರವು ಎಲ್ಲ ಪಕ್ಷಗಳನ್ನು ಒಳಗೊಂಡ ಭಾರತೀಯರನ್ನು ಪ್ರತಿನಿಧಿಸುತ್ತದೆ. ಇಂತಹ ಸಂದರ್ಭದಲ್ಲಿ ರಾಜಕೀಯ ತರಬಾರದು ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...