Homeಮುಖಪುಟ"ಮೆಲಾನಿಯ ಟ್ರಂಪ್‌" ಕಾರ್ಯಕ್ರಮದಲ್ಲಿ ಕೇಜ್ರಿ ಮತ್ತು ಸಿಸೋಡಿಯ ಹೆಸರು ರದ್ದು: ಆಪ್‌ ಆರೋಪ

“ಮೆಲಾನಿಯ ಟ್ರಂಪ್‌” ಕಾರ್ಯಕ್ರಮದಲ್ಲಿ ಕೇಜ್ರಿ ಮತ್ತು ಸಿಸೋಡಿಯ ಹೆಸರು ರದ್ದು: ಆಪ್‌ ಆರೋಪ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರ ಹೆಸರನ್ನು ಟ್ರಂಪ್‌ ಭೇಟಿಯ ಕಾರ್ಯಕ್ರಮದಿಂದ ಕೈ ಬಿಡಲಾಗಿದೆ ಎಂದು ಎಎಪಿ ಆರೋಪಿಸಿದೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅಹ್ಮದಾಬಾದ್‌ ನಲ್ಲಿ ನಡೆಯಲಿರುವ “ನಮಸ್ತೇ ಟ್ರಂಪ್”‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ದೆಹಲಿಯಲ್ಲಿ ಟ್ರಂಪ್‌ ಮತ್ತು ಮೋದಿಯ ನಡುವೆ ಮಾತುಕತೆ ನಡೆಯಲಿದೆ. ಈ ಸಮಯದಲ್ಲಿ ಟ್ರಂಪ್‌ ಪತ್ನಿ ಮೆಲಾನಿಯ ಟ್ರಂಪ್‌ ಅವರು ದಹಲಿಯ ಶಾಲೆಗಳಿಗೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆ ಕಾರ್ಯಕ್ರಮದ ಪಟ್ಟಿಯಲ್ಲಿ ಮುಖ್ಯ ಅತಿಥಿಗಳಾಗಿದ್ದ ಸಿಎಂ ಕೇಜ್ರಿವಾಲ್‌ ಮತ್ತು ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ಎಎಪಿ ಆರೋಪಿಸಿದೆ.

ದೆಹಲಿ ಶಾಲೆಯಲ್ಲಿ ಹೊಸದಾಗಿ ಪರಿಚಯಿಸಲಾದ “ಹ್ಯಾಪಿನೆಸ್ಸ್‌ ಕರಿಕ್ಯುಲಮ್‌ (ಸಂತಸದಾಯಕ ಪಠ್ಯ) ಅನ್ನು ವೀಕ್ಷಿಸಲು ಕಾರ್ಯಕ್ರಮ ನಿಗದಿಪಡಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಕಾರ್ಯಕ್ರಮದ ಪಟ್ಟಿಯಿಂದ ದೆಹಲಿಯ ಇಬ್ಬರು ಉನ್ನತ ನಾಯಕರನ್ನು ವಿವಿಐಪಿ ಪಟ್ಟಿಯಿಂದ ಕೈಬಿಡುವುದರ ಹಿಂದೆ ಕೇಂದ್ರ ಸರ್ಕಾರದ ಹುನ್ನಾರವಿದೆ ಎಂದು ಎಎಪಿ ಆರೋಪಿಸಿದೆ.

ಶಾಲಾ ಮಕ್ಕಳಲ್ಲಿ ಒತ್ತಡವನ್ನು ಕಡಿಮೆ ಮಾಡುವ ಪ್ರಯತ್ನವಾಗಿ ಎರಡು ವರ್ಷಗಳ ಹಿಂದೆ “ಹ್ಯಾಪಿನೆಸ್ಸ್‌  ಪಠ್ಯಕ್ರಮ”ವನ್ನು ದೆಹಲಿ ಉಪ ಮುಖ್ಯಮಂತ್ರಿ ಸಿಸೋಡಿಯಾ ಪರಿಚಯಿಸಿದ್ದರು. ಇದು 40 ನಿಮಿಷಗಳ ಧ್ಯಾನ, ವಿಶ್ರಾಂತಿ ಮತ್ತು ಹೊರಾಂಗಣ ಚಟುವಟಿಕೆಗಳನ್ನು ಒಳಗೊಂಡಿದೆ.

ಎಎಪಿ ಸರ್ಕಾರ ಜುಲೈ 2018 ರಲ್ಲಿ ತನ್ನ ಶಾಲೆಗಳಲ್ಲಿ ‘ಸಂತೋಷದಾಯಕ ಪಠ್ಯಕ್ರಮ’ ವನ್ನು ಪರಿಚಯಿಸಿತು. ಪಠ್ಯಕ್ರಮದ ಅಡಿಯಲ್ಲಿ, ನರ್ಸರಿ ಮತ್ತು ಶಿಶುವಿಹಾರದ ವಿದ್ಯಾರ್ಥಿಗಳಿಗೆ ವಾರಕ್ಕೆ ಎರಡು ಬಾರಿ ಮತ್ತು 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ದಿನಕ್ಕೆ ಒಂದು ಗಂಟೆಯ ಅವಧಿಯಲ್ಲಿ ಧ್ಯಾನ, ವಿಶ್ರಾಂತಿಯ ಜೊತೆಗೆ ಕಥೆ ಹೇಳುವಿಕೆ ಮತ್ತು ಪ್ರಶ್ನೆ-ಉತ್ತರದ ವಿಷಯಗಳನ್ನು ಒಳಗೊಂಡಿದೆ.

ಅಮೆರಿಕದ ಪ್ರಥಮ ಮಹಿಳೆಯ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ ಎಂದು ಸಿಸೋಡಿಯಾ ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಮೆಲಾನಿಯಾ ಟ್ರಂಪ್ ಭೇಟಿ ನೀಡಲಿರುವ ಶಾಲೆಯ ಹೆಸರು ಮತ್ತು ಸ್ಥಳವನ್ನು ಭದ್ರತಾ ಕಾರಣಗಳಿಂದ ಬಹಿರಂಗಪಡಿಸಿಲ್ಲ.

ನಾವು ಯುಎಸ್ ರಾಯಭಾರ ಕಚೇರಿಯಿಂದ ಶಾಲಾ ಭೇಟಿಗೆ ವಿನಂತಿಯನ್ನು ಪಡೆದುಕೊಂಡಿದ್ದೇವೆ. ಅವರು ಬರಲು ಬಯಸಿದರೆ ಖಂಡಿತ ಅವರನ್ನು ಸ್ವಾಗತಿಸುತ್ತೇವೆ ಎಂದು ನಾವು ಅವರಿಗೆ ತಿಳಿಸಿದ್ದೇವೆ ಎಂದು ಪಟ್ಪರ್ಗಂಜ್‌ನ ದೆಹಲಿ ಸರ್ಕಾರಿ ಶಾಲೆಗೆ ಭೇಟಿಯ ಸಂದರ್ಭದಲ್ಲಿ ಸಿಸೋಡಿಯ ಹೇಳಿದ್ದಾರೆ.

ಯಾರನ್ನು ಆಹ್ವಾನಿಸಬೇಕು ಮತ್ತು ಯಾರನ್ನು ಆಹ್ವಾನಿಸಬಾರದು ಎಂದು ಭಾರತೀಯ ಸರ್ಕಾರವು ವಿದೇಶಿ ಅತಿಥಿಗೆ ಸಲಹೆ ನೀಡುವುದಿಲ್ಲ. “ಸಣ್ಣ ರಾಜಕೀಯವನ್ನು ಪ್ರಮುಖ ಸಂದರ್ಭಗಳಲ್ಲಿ ಮಾಡಬಾರದು. ಭಾರತ ಸರ್ಕಾರವು ಎಲ್ಲ ಪಕ್ಷಗಳನ್ನು ಒಳಗೊಂಡ ಭಾರತೀಯರನ್ನು ಪ್ರತಿನಿಧಿಸುತ್ತದೆ. ಇಂತಹ ಸಂದರ್ಭದಲ್ಲಿ ರಾಜಕೀಯ ತರಬಾರದು ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...