Homeಮುಖಪುಟ"ಮೆಲಾನಿಯ ಟ್ರಂಪ್‌" ಕಾರ್ಯಕ್ರಮದಲ್ಲಿ ಕೇಜ್ರಿ ಮತ್ತು ಸಿಸೋಡಿಯ ಹೆಸರು ರದ್ದು: ಆಪ್‌ ಆರೋಪ

“ಮೆಲಾನಿಯ ಟ್ರಂಪ್‌” ಕಾರ್ಯಕ್ರಮದಲ್ಲಿ ಕೇಜ್ರಿ ಮತ್ತು ಸಿಸೋಡಿಯ ಹೆಸರು ರದ್ದು: ಆಪ್‌ ಆರೋಪ

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರ ಹೆಸರನ್ನು ಟ್ರಂಪ್‌ ಭೇಟಿಯ ಕಾರ್ಯಕ್ರಮದಿಂದ ಕೈ ಬಿಡಲಾಗಿದೆ ಎಂದು ಎಎಪಿ ಆರೋಪಿಸಿದೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅಹ್ಮದಾಬಾದ್‌ ನಲ್ಲಿ ನಡೆಯಲಿರುವ “ನಮಸ್ತೇ ಟ್ರಂಪ್”‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ದೆಹಲಿಯಲ್ಲಿ ಟ್ರಂಪ್‌ ಮತ್ತು ಮೋದಿಯ ನಡುವೆ ಮಾತುಕತೆ ನಡೆಯಲಿದೆ. ಈ ಸಮಯದಲ್ಲಿ ಟ್ರಂಪ್‌ ಪತ್ನಿ ಮೆಲಾನಿಯ ಟ್ರಂಪ್‌ ಅವರು ದಹಲಿಯ ಶಾಲೆಗಳಿಗೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆ ಕಾರ್ಯಕ್ರಮದ ಪಟ್ಟಿಯಲ್ಲಿ ಮುಖ್ಯ ಅತಿಥಿಗಳಾಗಿದ್ದ ಸಿಎಂ ಕೇಜ್ರಿವಾಲ್‌ ಮತ್ತು ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ಎಎಪಿ ಆರೋಪಿಸಿದೆ.

ದೆಹಲಿ ಶಾಲೆಯಲ್ಲಿ ಹೊಸದಾಗಿ ಪರಿಚಯಿಸಲಾದ “ಹ್ಯಾಪಿನೆಸ್ಸ್‌ ಕರಿಕ್ಯುಲಮ್‌ (ಸಂತಸದಾಯಕ ಪಠ್ಯ) ಅನ್ನು ವೀಕ್ಷಿಸಲು ಕಾರ್ಯಕ್ರಮ ನಿಗದಿಪಡಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಕಾರ್ಯಕ್ರಮದ ಪಟ್ಟಿಯಿಂದ ದೆಹಲಿಯ ಇಬ್ಬರು ಉನ್ನತ ನಾಯಕರನ್ನು ವಿವಿಐಪಿ ಪಟ್ಟಿಯಿಂದ ಕೈಬಿಡುವುದರ ಹಿಂದೆ ಕೇಂದ್ರ ಸರ್ಕಾರದ ಹುನ್ನಾರವಿದೆ ಎಂದು ಎಎಪಿ ಆರೋಪಿಸಿದೆ.

ಶಾಲಾ ಮಕ್ಕಳಲ್ಲಿ ಒತ್ತಡವನ್ನು ಕಡಿಮೆ ಮಾಡುವ ಪ್ರಯತ್ನವಾಗಿ ಎರಡು ವರ್ಷಗಳ ಹಿಂದೆ “ಹ್ಯಾಪಿನೆಸ್ಸ್‌  ಪಠ್ಯಕ್ರಮ”ವನ್ನು ದೆಹಲಿ ಉಪ ಮುಖ್ಯಮಂತ್ರಿ ಸಿಸೋಡಿಯಾ ಪರಿಚಯಿಸಿದ್ದರು. ಇದು 40 ನಿಮಿಷಗಳ ಧ್ಯಾನ, ವಿಶ್ರಾಂತಿ ಮತ್ತು ಹೊರಾಂಗಣ ಚಟುವಟಿಕೆಗಳನ್ನು ಒಳಗೊಂಡಿದೆ.

ಎಎಪಿ ಸರ್ಕಾರ ಜುಲೈ 2018 ರಲ್ಲಿ ತನ್ನ ಶಾಲೆಗಳಲ್ಲಿ ‘ಸಂತೋಷದಾಯಕ ಪಠ್ಯಕ್ರಮ’ ವನ್ನು ಪರಿಚಯಿಸಿತು. ಪಠ್ಯಕ್ರಮದ ಅಡಿಯಲ್ಲಿ, ನರ್ಸರಿ ಮತ್ತು ಶಿಶುವಿಹಾರದ ವಿದ್ಯಾರ್ಥಿಗಳಿಗೆ ವಾರಕ್ಕೆ ಎರಡು ಬಾರಿ ಮತ್ತು 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ದಿನಕ್ಕೆ ಒಂದು ಗಂಟೆಯ ಅವಧಿಯಲ್ಲಿ ಧ್ಯಾನ, ವಿಶ್ರಾಂತಿಯ ಜೊತೆಗೆ ಕಥೆ ಹೇಳುವಿಕೆ ಮತ್ತು ಪ್ರಶ್ನೆ-ಉತ್ತರದ ವಿಷಯಗಳನ್ನು ಒಳಗೊಂಡಿದೆ.

ಅಮೆರಿಕದ ಪ್ರಥಮ ಮಹಿಳೆಯ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ ಎಂದು ಸಿಸೋಡಿಯಾ ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಮೆಲಾನಿಯಾ ಟ್ರಂಪ್ ಭೇಟಿ ನೀಡಲಿರುವ ಶಾಲೆಯ ಹೆಸರು ಮತ್ತು ಸ್ಥಳವನ್ನು ಭದ್ರತಾ ಕಾರಣಗಳಿಂದ ಬಹಿರಂಗಪಡಿಸಿಲ್ಲ.

ನಾವು ಯುಎಸ್ ರಾಯಭಾರ ಕಚೇರಿಯಿಂದ ಶಾಲಾ ಭೇಟಿಗೆ ವಿನಂತಿಯನ್ನು ಪಡೆದುಕೊಂಡಿದ್ದೇವೆ. ಅವರು ಬರಲು ಬಯಸಿದರೆ ಖಂಡಿತ ಅವರನ್ನು ಸ್ವಾಗತಿಸುತ್ತೇವೆ ಎಂದು ನಾವು ಅವರಿಗೆ ತಿಳಿಸಿದ್ದೇವೆ ಎಂದು ಪಟ್ಪರ್ಗಂಜ್‌ನ ದೆಹಲಿ ಸರ್ಕಾರಿ ಶಾಲೆಗೆ ಭೇಟಿಯ ಸಂದರ್ಭದಲ್ಲಿ ಸಿಸೋಡಿಯ ಹೇಳಿದ್ದಾರೆ.

ಯಾರನ್ನು ಆಹ್ವಾನಿಸಬೇಕು ಮತ್ತು ಯಾರನ್ನು ಆಹ್ವಾನಿಸಬಾರದು ಎಂದು ಭಾರತೀಯ ಸರ್ಕಾರವು ವಿದೇಶಿ ಅತಿಥಿಗೆ ಸಲಹೆ ನೀಡುವುದಿಲ್ಲ. “ಸಣ್ಣ ರಾಜಕೀಯವನ್ನು ಪ್ರಮುಖ ಸಂದರ್ಭಗಳಲ್ಲಿ ಮಾಡಬಾರದು. ಭಾರತ ಸರ್ಕಾರವು ಎಲ್ಲ ಪಕ್ಷಗಳನ್ನು ಒಳಗೊಂಡ ಭಾರತೀಯರನ್ನು ಪ್ರತಿನಿಧಿಸುತ್ತದೆ. ಇಂತಹ ಸಂದರ್ಭದಲ್ಲಿ ರಾಜಕೀಯ ತರಬಾರದು ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...