Homeಮುಖಪುಟಕೇಜ್ರಿವಾಲ್ ಬಂಧನ: ದೇಶವ್ಯಾಪಿ ಬಿಜೆಪಿ ಕಚೇರಿಗಳ ಮುಂದೆ ಪ್ರತಿಭಟನೆಗೆ ಕರೆಕೊಟ್ಟ ಎಎಪಿ

ಕೇಜ್ರಿವಾಲ್ ಬಂಧನ: ದೇಶವ್ಯಾಪಿ ಬಿಜೆಪಿ ಕಚೇರಿಗಳ ಮುಂದೆ ಪ್ರತಿಭಟನೆಗೆ ಕರೆಕೊಟ್ಟ ಎಎಪಿ

ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಸಾಧ್ಯತೆ

- Advertisement -
- Advertisement -

ಆಪಾದಿತ ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷ (ಎಎಪಿ) ಇಂದು (ಮಾ.22) ರಾಷ್ಟ್ರವ್ಯಾಪಿ ಬಿಜೆಪಿ ಕಚೇರಿಗಳ ಬಳಿ ಪ್ರತಿಭಟನೆಗೆ ಕರೆ ನೀಡಿದೆ.

ಕೇಜ್ರಿವಾಲ್ ಅವರ ಬಂಧನದ ವಿರುದ್ಧದ ಎಎಪಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

ಕೇಜ್ರಿವಾಲ್ ಅವರ ಮನೆಗೆ ನಿನ್ನೆ (ಮಾ.21) ಸಂಜೆ ಇಡಿ ಅಧಿಕಾರಿಗಳು ಆಗಮಿಸಿದಾಗಲೇ ಅವರನ್ನು ಬಂಧಿಸಲಿದ್ದಾರೆ ಎಂಬುವುದು ಎಎಪಿ ನಾಯಕರಿಗೆ ಖಚಿತವಾಗಿತ್ತು. ಹಾಗಾಗಿ, ರಾತ್ರಿಯೇ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ತುರ್ತು ಅರ್ಜಿ ವಿಚಾರಣೆಗೆ ಮನವಿ ಮಾಡಿದ್ದರು. ಆದರೆ, ಸುಪ್ರೀಂ ಕೋರ್ಟ್‌ ತುರ್ತು ವಿಚಾರಣೆಗೆ ನಿರಾಕರಿಸಿದೆ.

ಪ್ರಸ್ತುತ ಬಂಧನದಲ್ಲಿರುವ ಕೇಜ್ರಿವಾಲ್ ಅವರನ್ನು ಇಂದು ಇಡಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ.

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಕೇಜ್ರಿವಾಲ್ ಅವರನ್ನು ಬಂಧಿಸಿರುವುದು ಎಎಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ವಿವಿಧ ಪಕ್ಷಗಳ ನಾಯಕರು ಕೇಜ್ರಿವಾಲ್ ಬಂಧನ ಕೇಂದ್ರದ ಬಿಜೆಪಿ ಸರ್ಕಾರ ಪಿತೂರಿಯ ಭಾಗ ಎಂದಿದ್ದಾರೆ.

ಎಎಪಿ ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷವಾಗಿರುವ ಹಿನ್ನೆಲೆ, ಕಾಂಗ್ರೆಸ್ ಸಂಪೂರ್ಣವಾಗಿ ಕೇಜ್ರಿವಾಲ್ ಬೆಂಬಲಕ್ಕೆ ನಿಂತಿದೆ. ಇಂದು ರಾಹುಲ್ ಗಾಂಧಿಯವರು ಕೇಜ್ರಿವಾಲ್ ಕುಟುಂಬಸ್ಥರನ್ನು ಭೇಟಿಯಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಕೇಜ್ರಿವಾಲ್ ಜೈಲಿನಿಂದಲೇ ಮುಖ್ಯಮಂತ್ರಿ ಹುದ್ದೆಯನ್ನು ನಿರ್ವಹಿಸಲಿದ್ದಾರೆ ಎಂದು ಎಎಪಿ ಹೇಳಿದೆ. ಆದರೆ, ಇದು ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಕಾನೂನು ತಜ್ಞರು ಹೇಳಿದ್ದಾರೆ.

ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಬಂಧನವಾಗಿದೆ. ಈ ಪ್ರಕರಣ ಸಂಬಂಧ ಇಡಿ ಕೇಜ್ರಿವಾಲ್ ಅವರಿಗೆ ಈ ಹಿಂದೆ 8-9 ಸಮನ್ಸ್‌ಗಳನ್ನು ನೀಡಿತ್ತು. ಆದರೆ, ಅವುಗಳನ್ನು ತಿರಸ್ಕರಿಸಿದ್ದ ಕೇಜ್ರಿವಾಲ್ ವಿಚಾರಣೆಗೆ ಗೈರಾಗಿದ್ದರು.

ಹೈಕೋರ್ಟ್‌ ಇಡಿಯ ಬಲವಂತದ ಕ್ರಮದಿಂದ ಕೇಜ್ರಿವಾಲ್‌ಗೆ ರಕ್ಷಣೆ ಒದಗಿಸಲು ನಿನ್ನೆ (ಮಾ.21) ನಿರಾಕರಿಸಿತ್ತು. ಈ ಬೆನ್ನಲ್ಲೇ ಕೇಜ್ರಿವಾಲ್ ನಿವಾಸಕ್ಕೆ ಆಗಮಿಸಿದ ಇಡಿ ತಂಡ ಅವರನ್ನು ಬಂಧಿಸಿದೆ.

ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ತೆಲಂಗಾಣದ ಮಾಜಿ ಸಿಎಂ ಕೆಸಿಆರ್ ಅವರ ಪುತ್ರಿ ಕವಿತಾ ಕಲ್ವಕುಂಟ್ಲ ಅವರನ್ನು ಇಡಿ ಬಂಧಿಸಿದೆ. ಇದೇ ಪ್ರಕರಣದಲ್ಲಿ ಮೂವರು ಎಎಪಿ ನಾಯಕರಾದ ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಈಗಾಗಲೇ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ : ಅಬಕಾರಿ ನೀತಿ ಪ್ರಕರಣ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...