Homeಮುಖಪುಟಬಿಜೆಪಿ ಮತ್ತೆ ಗೆದ್ದರೆ, ಮೋದಿ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಕೇಜ್ರಿವಾಲ್‌

ಬಿಜೆಪಿ ಮತ್ತೆ ಗೆದ್ದರೆ, ಮೋದಿ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಕೇಜ್ರಿವಾಲ್‌

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದ ಕೇಜ್ರಿವಾಲ್ ಬಿಜೆಪಿ ಮತ್ತು ಮೋದಿ ಸರಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದು, ಸರ್ವಾಧಿಕಾರಿ’ ಮೋದಿ ‘ಒಂದು ರಾಷ್ಟ್ರ, ಒಂದು ನಾಯಕ’ ವ್ಯವಸ್ಥೆಯನ್ನು ಬಯಸುತ್ತಿದ್ದಾರೆ, ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಹೇಳಿದ್ದಾರೆ.

ಶುಕ್ರವಾರ ಸುಪ್ರೀಂಕೋರ್ಟ್‌ನ ಆದೇಶದ ಮೇರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದ ಕೇಜ್ರಿವಾಲ್ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾತನಾಡಿದ್ದು, ನಿಮ್ಮ ಮುಂದಿನ ಪ್ರಧಾನಿ ಯಾರು ಎಂದು ಬಿಜೆಪಿಗರನ್ನು ಕೇಳಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ 2025ರ ನಂತರ ನರೇಂದ್ರ ಮೋದಿ ಅಲ್ಲ, ಅಮಿತ್ ಶಾ ದೇಶವನ್ನು ಮುನ್ನಡೆಸುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿಗರು ನಿಮ್ಮ ಪ್ರಧಾನಿ ಅಭ್ಯರ್ಥಿ ಯಾರು? ಎಂದು ಇಂಡಿಯಾ ಮೈತ್ರಿಕೂಟವನ್ನು ಕೇಳುತ್ತಾರೆ, ನಾನು ಬಿಜೆಪಿಯವರನ್ನು ಕೇಳುತ್ತೇನೆ, ನಿಮ್ಮ ಪ್ರಧಾನಿ ಯಾರು? ಮೋದಿ ಮುಂದಿನ ಸೆಪ್ಟೆಂಬರ್‌ನಲ್ಲಿ 75 ವರ್ಷಗಳನ್ನು ಪೂರೈಸುತ್ತಿದ್ದಾರೆ. 75 ವರ್ಷ ತುಂಬಿದ ಪಕ್ಷದ ಸದಸ್ಯರು ನಿವೃತ್ತಿಯಾಗಬೇಕು ಎಂಬ ನಿಯಮ ರೂಪಿಸಿದವರು ಅವರೇ, ಮುಂದಿನ ವರ್ಷ ಅವರು ನಿವೃತ್ತಿಯಾಗಬೇಕಿದೆ. ಮೋದಿಯವರ ಭರವಸೆಗಳನ್ನು ಯಾರು ಪೂರೈಸುತ್ತಾರೆ? ಅಮಿತ್ ಶಾ ಮಾಡುತ್ತಾರಾ? ನೀವು ಮತ ಹಾಕಲು ಹೊರಟಾಗ, ನೀವು ಅಮಿತ್ ಶಾಗೆ ಮತ ಹಾಕುತ್ತಿದ್ದೀರಿ, ಮೋದಿಗೆ ಅಲ್ಲ ಎಂಬುವುದನ್ನು ಮರೆಯಬೇಡಿ ಎಂದು ಹೇಳಿದ್ದಾರೆ.

ಮೋದಿ ಅತ್ಯಂತ ಅಪಾಯಕಾರಿ ಯೋಜನೆಯನ್ನು ಹೊಂದಿದ್ದಾರೆ, ಅವರು ರಾಜ್ಯ ಚುನಾವಣೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿಜೆಪಿಯ ಹಿರಿಯ ನಾಯಕರನ್ನು ಬದಿಗೆ ಸರಿಸುತ್ತಿದ್ದಾರೆ. ಮೋದಿ-ಒಂದು  ರಾಷ್ಟ್ರ, ಒಂದು ನಾಯಕ-ಅಪಾಯಕಾರಿ ಯೋಜನೆಯನ್ನು ಹೊಂದಿದ್ದಾರೆ. ಅವರು ಎಲ್ಲಾ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಕಳುಹಿಸುತ್ತಾರೆ ಮತ್ತು ಎಲ್ಲಾ ಹಿರಿಯ ಬಿಜೆಪಿ ನಾಯಕರನ್ನು ಅಧಿಕಾರದಿಂದ ದೂರವಿಡುತ್ತಾರೆ, ವಸುಂಧರಾ ರಾಜೆ, ಶಿವರಾಜ್ ಚೌಹಾಣ್ ಅವರನ್ನು ನೋಡಿ..ಈಗ ಯೋಗಿ ಆದಿತ್ಯನಾಥ್ ಸರದಿ, ಬಿಜೆಪಿ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮೋದಿ ಉತ್ತರಪ್ರದೇಶ ಮುಖ್ಯಮಂತ್ರಿಯನ್ನು ಬದಲಾಯಿಸುತ್ತಾರೆ.

ನಾನು ದೇಶದ 140 ಕೋಟಿ ಜನರಲ್ಲಿ ಭಿಕ್ಷೆ ಬೇಡಲು ಬಂದಿದ್ದೇನೆ. ಸರ್ವಾಧಿಕಾರದಿಂದ ನನ್ನ ದೇಶವನ್ನು ಉಳಿಸಿ, ಸುಪ್ರೀಂಕೋರ್ಟ್ ನನಗೆ 21 ದಿನಗಳನ್ನು ನೀಡಿದೆ. ಒಂದು ದಿನ 24 ಗಂಟೆಗಳು ಆದರೆ ನಾನು 36 ಗಂಟೆಗಳ ಕಾಲ ಕೆಲಸ ಮಾಡುತ್ತೇನೆ. ನನ್ನ ಸಂಪೂರ್ಣ ಜೀವ ನನ್ನ ದೇಶಕ್ಕೆ ಸಮರ್ಪಿತವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿಗರು ನನ್ನನ್ನು ಜೈಲಿಗೆ ಕಳುಹಿಸಿದರು, ಪ್ರಧಾನಿ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಹೇಳುತ್ತಾರೆ. ಮತ್ತೊಂದೆಡೆ ಅವರು ತಮ್ಮ ಪಕ್ಷಕ್ಕೆ ಎಲ್ಲಾ ಭ್ರಷ್ಟರನ್ನು ಸ್ವಾಗತಿಸಿದ್ದಾರೆ, ನೀವು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಬಯಸಿದರೆ, ಅರವಿಂದ್ ಕೇಜ್ರಿವಾಲ್ ಅವರಿಂದ ಕಲಿಯಿರಿ. 2015ರಲ್ಲಿ ನಾವು ಸರ್ಕಾರ ರಚಿಸಿದಾಗ ನನ್ನ ಸಚಿವರೊಬ್ಬರು ಅಂಗಡಿಯವನಿಗೆ 5 ಲಕ್ಷ ರೂಪಾಯಿ ಕೇಳುತ್ತಿರುವ ಆಡಿಯೋವನ್ನು ಯಾರೋ ನನಗೆ ಕಳುಹಿಸಿದ್ದರು. ಅದರ ಬಗ್ಗೆ ಯಾರಿಗೂ ತಿಳಿದಿರಲಿಲ್ಲ, ಆದರೆ ನಾನು ಆ ಕೇಸ್‌ನ್ನು ಸಿಬಿಐಗೆ ಒಪ್ಪಿಸಿದೆ, ನೀವು ಏನು ಮಾಡಿದ್ದೀರಿ? ಪಕ್ಷಕ್ಕೆ ಎಲ್ಲಾ ಭ್ರಷ್ಟರನ್ನು ನೀವು ಸ್ವಾಗತಿಸುತ್ತೀರಿ ಮತ್ತು ನಿಮ್ಮನ್ನು ಭ್ರಷ್ಟಾಚಾರದ ವಿರುದ್ಧ ಹೋರಾಟಗಾರ ಎಂದು ಕರೆಯುವ ಧೈರ್ಯವಿದೆಯೇ? ನನ್ನನ್ನು ಬಂಧಿಸುವ ಮೂಲಕ ಬಿಜೆಪಿಯವರು ಯಾವುದೇ ಕೇಸು ಇಲ್ಲದಿದ್ದರೂ ಯಾರನ್ನು ಬೇಕಾದರೂ ಬಂಧಿಸಬಹುದು ಎಂಬ ಸಂದೇಶವನ್ನು ನೀಡಿದ್ದಾರೆ ಎಂದು ಕೇಜ್ರವಾಲ್‌ ಹೇಳಿದ್ದಾರೆ.

ನನಗೆ ಹುದ್ದೆಗಳ ಮೇಲೆ ಪ್ರೀತಿ ಇಲ್ಲ, ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ 49 ದಿನಗಳಲ್ಲಿ ರಾಜೀನಾಮೆ ನೀಡಿದ್ದೆ, ನನ್ನನ್ನು ಬಂಧಿಸಿದಾಗ ನಾನೇಕೆ ರಾಜೀನಾಮೆ ನೀಡಲಿಲ್ಲ? ಎಎಪಿ ದೆಹಲಿಯನ್ನು ಅಭೂತಪೂರ್ವ ಅಂತರದಿಂದ ಗೆದ್ದಿದೆ. ಮುಂದಿನ 20 ವರ್ಷಗಳ ಕಾಲ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಅವರಿಗೆ ತಿಳಿದಿದೆ. ನಾನು ರಾಜೀನಾಮೆ ನೀಡಿ ಎಎಪಿ ಸರ್ಕಾರ ಪತನವಾಗುವಂತೆ ಪಿತೂರಿ ನಡೆಸಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ ಮತ್ತು ಜೈಲಿನಿಂದ ಸರ್ಕಾರವನ್ನು ನಡೆಸುತ್ತೇನೆ ಎಂದು ಹೇಳಿದ್ದೇನೆ. ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಕೂಡ ರಾಜೀನಾಮೆ ನೀಡಬಾರದಿತ್ತು ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

ಇದನ್ನು ಓದಿ: ‘ಸರ್ಜಿಕಲ್ ಸ್ಟ್ರೈಕ್’ ನಿಜವಾಗಿ ನಡೆದಿದೆಯೋ ಇಲ್ಲವೋ ಗೊತ್ತಿಲ್ಲ: ರೇವಂತ್ ರೆಡ್ಡಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...