Homeಮುಖಪುಟಬಿಜೆಪಿ ಮತ್ತೆ ಗೆದ್ದರೆ, ಮೋದಿ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಕೇಜ್ರಿವಾಲ್‌

ಬಿಜೆಪಿ ಮತ್ತೆ ಗೆದ್ದರೆ, ಮೋದಿ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಕೇಜ್ರಿವಾಲ್‌

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದ ಕೇಜ್ರಿವಾಲ್ ಬಿಜೆಪಿ ಮತ್ತು ಮೋದಿ ಸರಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದು, ಸರ್ವಾಧಿಕಾರಿ’ ಮೋದಿ ‘ಒಂದು ರಾಷ್ಟ್ರ, ಒಂದು ನಾಯಕ’ ವ್ಯವಸ್ಥೆಯನ್ನು ಬಯಸುತ್ತಿದ್ದಾರೆ, ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಹೇಳಿದ್ದಾರೆ.

ಶುಕ್ರವಾರ ಸುಪ್ರೀಂಕೋರ್ಟ್‌ನ ಆದೇಶದ ಮೇರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದ ಕೇಜ್ರಿವಾಲ್ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾತನಾಡಿದ್ದು, ನಿಮ್ಮ ಮುಂದಿನ ಪ್ರಧಾನಿ ಯಾರು ಎಂದು ಬಿಜೆಪಿಗರನ್ನು ಕೇಳಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ 2025ರ ನಂತರ ನರೇಂದ್ರ ಮೋದಿ ಅಲ್ಲ, ಅಮಿತ್ ಶಾ ದೇಶವನ್ನು ಮುನ್ನಡೆಸುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿಗರು ನಿಮ್ಮ ಪ್ರಧಾನಿ ಅಭ್ಯರ್ಥಿ ಯಾರು? ಎಂದು ಇಂಡಿಯಾ ಮೈತ್ರಿಕೂಟವನ್ನು ಕೇಳುತ್ತಾರೆ, ನಾನು ಬಿಜೆಪಿಯವರನ್ನು ಕೇಳುತ್ತೇನೆ, ನಿಮ್ಮ ಪ್ರಧಾನಿ ಯಾರು? ಮೋದಿ ಮುಂದಿನ ಸೆಪ್ಟೆಂಬರ್‌ನಲ್ಲಿ 75 ವರ್ಷಗಳನ್ನು ಪೂರೈಸುತ್ತಿದ್ದಾರೆ. 75 ವರ್ಷ ತುಂಬಿದ ಪಕ್ಷದ ಸದಸ್ಯರು ನಿವೃತ್ತಿಯಾಗಬೇಕು ಎಂಬ ನಿಯಮ ರೂಪಿಸಿದವರು ಅವರೇ, ಮುಂದಿನ ವರ್ಷ ಅವರು ನಿವೃತ್ತಿಯಾಗಬೇಕಿದೆ. ಮೋದಿಯವರ ಭರವಸೆಗಳನ್ನು ಯಾರು ಪೂರೈಸುತ್ತಾರೆ? ಅಮಿತ್ ಶಾ ಮಾಡುತ್ತಾರಾ? ನೀವು ಮತ ಹಾಕಲು ಹೊರಟಾಗ, ನೀವು ಅಮಿತ್ ಶಾಗೆ ಮತ ಹಾಕುತ್ತಿದ್ದೀರಿ, ಮೋದಿಗೆ ಅಲ್ಲ ಎಂಬುವುದನ್ನು ಮರೆಯಬೇಡಿ ಎಂದು ಹೇಳಿದ್ದಾರೆ.

ಮೋದಿ ಅತ್ಯಂತ ಅಪಾಯಕಾರಿ ಯೋಜನೆಯನ್ನು ಹೊಂದಿದ್ದಾರೆ, ಅವರು ರಾಜ್ಯ ಚುನಾವಣೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿಜೆಪಿಯ ಹಿರಿಯ ನಾಯಕರನ್ನು ಬದಿಗೆ ಸರಿಸುತ್ತಿದ್ದಾರೆ. ಮೋದಿ-ಒಂದು  ರಾಷ್ಟ್ರ, ಒಂದು ನಾಯಕ-ಅಪಾಯಕಾರಿ ಯೋಜನೆಯನ್ನು ಹೊಂದಿದ್ದಾರೆ. ಅವರು ಎಲ್ಲಾ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಕಳುಹಿಸುತ್ತಾರೆ ಮತ್ತು ಎಲ್ಲಾ ಹಿರಿಯ ಬಿಜೆಪಿ ನಾಯಕರನ್ನು ಅಧಿಕಾರದಿಂದ ದೂರವಿಡುತ್ತಾರೆ, ವಸುಂಧರಾ ರಾಜೆ, ಶಿವರಾಜ್ ಚೌಹಾಣ್ ಅವರನ್ನು ನೋಡಿ..ಈಗ ಯೋಗಿ ಆದಿತ್ಯನಾಥ್ ಸರದಿ, ಬಿಜೆಪಿ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮೋದಿ ಉತ್ತರಪ್ರದೇಶ ಮುಖ್ಯಮಂತ್ರಿಯನ್ನು ಬದಲಾಯಿಸುತ್ತಾರೆ.

ನಾನು ದೇಶದ 140 ಕೋಟಿ ಜನರಲ್ಲಿ ಭಿಕ್ಷೆ ಬೇಡಲು ಬಂದಿದ್ದೇನೆ. ಸರ್ವಾಧಿಕಾರದಿಂದ ನನ್ನ ದೇಶವನ್ನು ಉಳಿಸಿ, ಸುಪ್ರೀಂಕೋರ್ಟ್ ನನಗೆ 21 ದಿನಗಳನ್ನು ನೀಡಿದೆ. ಒಂದು ದಿನ 24 ಗಂಟೆಗಳು ಆದರೆ ನಾನು 36 ಗಂಟೆಗಳ ಕಾಲ ಕೆಲಸ ಮಾಡುತ್ತೇನೆ. ನನ್ನ ಸಂಪೂರ್ಣ ಜೀವ ನನ್ನ ದೇಶಕ್ಕೆ ಸಮರ್ಪಿತವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿಗರು ನನ್ನನ್ನು ಜೈಲಿಗೆ ಕಳುಹಿಸಿದರು, ಪ್ರಧಾನಿ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಹೇಳುತ್ತಾರೆ. ಮತ್ತೊಂದೆಡೆ ಅವರು ತಮ್ಮ ಪಕ್ಷಕ್ಕೆ ಎಲ್ಲಾ ಭ್ರಷ್ಟರನ್ನು ಸ್ವಾಗತಿಸಿದ್ದಾರೆ, ನೀವು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಬಯಸಿದರೆ, ಅರವಿಂದ್ ಕೇಜ್ರಿವಾಲ್ ಅವರಿಂದ ಕಲಿಯಿರಿ. 2015ರಲ್ಲಿ ನಾವು ಸರ್ಕಾರ ರಚಿಸಿದಾಗ ನನ್ನ ಸಚಿವರೊಬ್ಬರು ಅಂಗಡಿಯವನಿಗೆ 5 ಲಕ್ಷ ರೂಪಾಯಿ ಕೇಳುತ್ತಿರುವ ಆಡಿಯೋವನ್ನು ಯಾರೋ ನನಗೆ ಕಳುಹಿಸಿದ್ದರು. ಅದರ ಬಗ್ಗೆ ಯಾರಿಗೂ ತಿಳಿದಿರಲಿಲ್ಲ, ಆದರೆ ನಾನು ಆ ಕೇಸ್‌ನ್ನು ಸಿಬಿಐಗೆ ಒಪ್ಪಿಸಿದೆ, ನೀವು ಏನು ಮಾಡಿದ್ದೀರಿ? ಪಕ್ಷಕ್ಕೆ ಎಲ್ಲಾ ಭ್ರಷ್ಟರನ್ನು ನೀವು ಸ್ವಾಗತಿಸುತ್ತೀರಿ ಮತ್ತು ನಿಮ್ಮನ್ನು ಭ್ರಷ್ಟಾಚಾರದ ವಿರುದ್ಧ ಹೋರಾಟಗಾರ ಎಂದು ಕರೆಯುವ ಧೈರ್ಯವಿದೆಯೇ? ನನ್ನನ್ನು ಬಂಧಿಸುವ ಮೂಲಕ ಬಿಜೆಪಿಯವರು ಯಾವುದೇ ಕೇಸು ಇಲ್ಲದಿದ್ದರೂ ಯಾರನ್ನು ಬೇಕಾದರೂ ಬಂಧಿಸಬಹುದು ಎಂಬ ಸಂದೇಶವನ್ನು ನೀಡಿದ್ದಾರೆ ಎಂದು ಕೇಜ್ರವಾಲ್‌ ಹೇಳಿದ್ದಾರೆ.

ನನಗೆ ಹುದ್ದೆಗಳ ಮೇಲೆ ಪ್ರೀತಿ ಇಲ್ಲ, ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ 49 ದಿನಗಳಲ್ಲಿ ರಾಜೀನಾಮೆ ನೀಡಿದ್ದೆ, ನನ್ನನ್ನು ಬಂಧಿಸಿದಾಗ ನಾನೇಕೆ ರಾಜೀನಾಮೆ ನೀಡಲಿಲ್ಲ? ಎಎಪಿ ದೆಹಲಿಯನ್ನು ಅಭೂತಪೂರ್ವ ಅಂತರದಿಂದ ಗೆದ್ದಿದೆ. ಮುಂದಿನ 20 ವರ್ಷಗಳ ಕಾಲ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಅವರಿಗೆ ತಿಳಿದಿದೆ. ನಾನು ರಾಜೀನಾಮೆ ನೀಡಿ ಎಎಪಿ ಸರ್ಕಾರ ಪತನವಾಗುವಂತೆ ಪಿತೂರಿ ನಡೆಸಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ ಮತ್ತು ಜೈಲಿನಿಂದ ಸರ್ಕಾರವನ್ನು ನಡೆಸುತ್ತೇನೆ ಎಂದು ಹೇಳಿದ್ದೇನೆ. ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಕೂಡ ರಾಜೀನಾಮೆ ನೀಡಬಾರದಿತ್ತು ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

ಇದನ್ನು ಓದಿ: ‘ಸರ್ಜಿಕಲ್ ಸ್ಟ್ರೈಕ್’ ನಿಜವಾಗಿ ನಡೆದಿದೆಯೋ ಇಲ್ಲವೋ ಗೊತ್ತಿಲ್ಲ: ರೇವಂತ್ ರೆಡ್ಡಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...