Homeಮುಖಪುಟಕೇಜ್ರಿವಾಲ್ ಸೋಲು ಅಣ್ಣಾ ಹಜಾರೆಗೆ ಖುಷಿ ಕೊಟ್ಟಿದೆ - ಸಂಜಯ್ ರಾವತ್

ಕೇಜ್ರಿವಾಲ್ ಸೋಲು ಅಣ್ಣಾ ಹಜಾರೆಗೆ ಖುಷಿ ಕೊಟ್ಟಿದೆ – ಸಂಜಯ್ ರಾವತ್

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಸೋಲಿನಿಂದ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಸಂತೋಷಗೊಂಡಿದ್ದಾರೆ ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಭಾನುವಾರ ಹೇಳಿದ್ದಾರೆ. ಕೇಂದ್ರದಲ್ಲಿರುವ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಳೆದ ಕೆಲವು ವರ್ಷಗಳಿಂದ ಮಾಡಲಾಗುತ್ತಿರುವ ಭ್ರಷ್ಟಾಚಾರ ಆರೋಪಗಳ ಕುರಿತು ಅಣ್ಣಾ ಹಜಾರೆ ಅವರ ಮೌನವನ್ನು ಸಹ ರಾವತ್ ಪ್ರಶ್ನಿಸಿದ್ದಾರೆ. ಕೇಜ್ರಿವಾಲ್ ಸೋಲು

ದೆಹಲಿಯ 70 ಸದಸ್ಯ ಬಲದ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಆಮ್ ಆದ್ಮಿ ಪಕ್ಷದ ಆಳ್ವಿಕೆಯನ್ನು ಕೊನೆಗೊಳಿಸಿತ್ತು. ಅಲ್ಲದೆ, ಸೋತ ಪ್ರಮುಖರಲ್ಲಿ ಎಎಪಿ ಮುಖ್ಯಸ್ಥ ಕೇಜ್ರಿವಾಲ್ ಕೂಡ ಒಬ್ಬರು. ಕೇಜ್ರಿವಾಲ್ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಣ್ಣಾ ಹಜಾರೆ ಬಗ್ಗೆ ಪ್ರತಿಕ್ರಿಯಿಸಿದ ರಾವತ್, “ಮೋದಿ ಆಳ್ವಿಕೆಯಲ್ಲಿ ಭ್ರಷ್ಟಾಚಾರ ನಡೆದಾಗ ಹಜಾರೆ ಎಲ್ಲಿದ್ದರು? ಕೇಜ್ರಿವಾಲ್ ಸೋಲಿನಿಂದ ಹಜಾರೆ ಸಂತೋಷಗೊಂಡಿದ್ದಾರೆ. ಒಬ್ಬನೇ ಕೈಗಾರಿಕೋದ್ಯಮಿಯ ಕೈಯಲ್ಲಿ ಸಂಪತ್ತು ಕೇಂದ್ರೀಕೃತವಾಗಿ ದೇಶವನ್ನು ಲೂಟಿ ಮಾಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವ ಹೇಗೆ ಮುಂದುವರಿಯಬಹುದು? ಇಂತಹ ಸಮಯದಲ್ಲಿ ಹಜಾರೆ ಅವರ ಮೌನದ ಹಿಂದಿನ ರಹಸ್ಯವೇನು” ಎಂದು ರಾಜ್ಯಸಭಾ ಸಂಸದರು ಪ್ರಶ್ನಿಸಿದ್ದಾರೆ.

“ಮಹಾರಾಷ್ಟ್ರ ಹಾಗೂ ದೆಹಲಿಯಲ್ಲಿ ಮತದಾರರ ಪಟ್ಟಿ ಗೊಂದಲ ಒಂದೇ ರೀತಿಯ ಮಾದರಿಯಲ್ಲಿ ಇತ್ತು. ಆದಾಗ್ಯೂ, ಹಜಾರೆ ಅವರು ಅಂತಹ ವಿಷಯಗಳ ಬಗ್ಗೆ ಮೌನವಾಗಿದ್ದಾರೆ. ಹರಿಯಾಣದಲ್ಲೂ ಇದೇ ರೀತಿಯ ದೂರುಗಳು ಕೇಳಿ ಬಂದಿದ್ದವು. ಬಿಹಾರ ಚುನಾವಣೆಯಲ್ಲೂ ಇವು ಕೇಳಿ ಬರುತ್ತವೆ” ಎಂದು ರಾವತ್ ವರದಿಗಾರರಿಗೆ ತಿಳಿಸಿದ್ದಾರೆ.

2014 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ, ಚುನಾವಣೆಗಳಲ್ಲಿ ಸಾಂವಿಧಾನಿಕ ಕಾರ್ಯವಿಧಾನಗಳನ್ನು ಅನುಸರಿಸಲಾಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. “ಅಕ್ರಮ ಮತ್ತು ಹಣದ ಬಲದ ಮೂಲಕ ಗೆಲುವು ಸಾಧಿಸಲಾಗುತ್ತಿದೆ” ಎಂದು ರಾವತ್ ಪ್ರತಿಪಾದಿಸಿದ್ದಾರೆ. ಅಲ್ಲದೆ, ಅವರು ಎಎಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟದಲ್ಲಿ ಸ್ಪರ್ಧಿಸಿದ್ದರೆ ದೆಹಲಿ ಚುನಾವಣೆಯ ಫಲಿತಾಂಶ ವಿಭಿನ್ನವಾಗಿರುತ್ತಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ದೆಹಲಿ ಚುನಾವಣಾ ಫಲಿತಾಂಶಗಳು ಘೋಷಣೆಯಾದ ನಂತರ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಹಜಾರೆ, ಕೇಜ್ರಿವಾಲ್ ನಾನು ಹೇಳಿದ್ದ ವಿಷಯಗಳಿಗೆ ಗಮನ ಕೊಡಲಿಲ್ಲ. ಅವರು ಮದ್ಯದ ಮೇಲೆ ಮಾತ್ರ ಗಮನಹರಿಸಿದರು ಎಂದು ಹೇಳಿಕೊಂಡಿದ್ದಾರೆ.

“ಅಭ್ಯರ್ಥಿಯ ನಡವಳಿಕೆ ಮತ್ತು ಆಲೋಚನೆಗಳು ಶುದ್ಧವಾಗಿರಬೇಕು. ಅವನ ಜೀವನವು ದೋಷರಹಿತವಾಗಿರಬೇಕು ಮತ್ತು ಅದು ತ್ಯಾಗವನ್ನು ಒಳಗೊಂಡಿರಬೇಕು ಎಂದು ನಾನು ಯಾವಾಗಲೂ ಹೇಳುತ್ತಲೆ ಬಂದಿದ್ದೇನೆ. ಮತದಾರರಲ್ಲಿ ವಿಶ್ವಾಸವನ್ನು ಬೆಳೆಸುವ ಗುಣಗಳು ಇವುಗಳಾಗಿದ್ದು, ನಾನು ಇದನ್ನು ಕೇಜ್ರಿವಾಲ್‌ಗೆ ಹೇಳಿದ್ದೆ. ಆದರೆ ಅವರು ಅದರತ್ತ ಗಮನ ಹರಿಸಲಿಲ್ಲ. ಅವರು ಹಣ ಬಲದ ಹಿಂದೆ ಹೋಗಿದ್ದರು” ಎಂದು ಹಜಾರೆ ಹೇಳಿದ್ದರು.

ಇದನ್ನೂಓದಿ:  ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ಸಮುದ್ರ ಗಡಿ ಉಲ್ಲಂಘನೆ | ಶ್ರೀಲಂಕಾ ನೌಕಾಪಡೆಯಿಂದ 14 ಭಾರತೀಯ ಮೀನುಗಾರರ ಬಂಧನ; ಸರಣಿ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...