Homeಮುಖಪುಟ'ಪ್ರಧಾನಿ ಮೋದಿಯಂತೆ ಕೇಜ್ರಿವಾಲ್ ಕುತಂತ್ರಿ..'; ಎಎಪಿ ಮುಖ್ಯಸ್ಥರ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

‘ಪ್ರಧಾನಿ ಮೋದಿಯಂತೆ ಕೇಜ್ರಿವಾಲ್ ಕುತಂತ್ರಿ..’; ಎಎಪಿ ಮುಖ್ಯಸ್ಥರ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

- Advertisement -
- Advertisement -

ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಗುರುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ದೆಹಲಿಯ ಮಾಜಿ ಮುಖ್ಯಮಂತ್ರಿ ನರೇಂದ್ರ ಮೋದಿಯಂತೆಯೇ ಸುಳ್ಳು ಹೇಳುತ್ತಾರೆ. ಆದರೆ, ಬಹುಶಃ ಪ್ರಧಾನಿಗಿಂತ ಹೆಚ್ಚು ಕುತಂತ್ರಿ” ಎಂದು ಹೇಳಿದರು.

ಫೆಬ್ರವರಿ 5 ರ ವಿಧಾನಸಭಾ ಚುನಾವಣೆಗೆ ಮುನ್ನ ಬದ್ಲಿ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಗಾಂಧಿ, ತಾವು ಮತ್ತು ತಮ್ಮ ಪಕ್ಷವು ಬಿಜೆಪಿಯೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾವು ಸಾಯುತ್ತೇವೆ, ಆದರೆ ಈ ಜನರೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ” ಎಂದರು.

ಯಮುನಾ ನೀರನ್ನು ಕುಡಿಯಲು ಯೋಗ್ಯವಾಗಿಸುವ ತಮ್ಮ ಐದು ವರ್ಷಗಳ ಭರವಸೆ ಕುರಿತು ಕೇಜ್ರಿವಾಲ್ ಅವರನ್ನು ತರಾಟೆಗೆ ತೆಗೆದುಕೊಂಡರು. ಇದು ಅವರ ಟೊಳ್ಳುತನವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಕಳೆದ ಹಲವಾರು ದಿನಗಳಿಂದ, ಅತ್ಯಂತ ಅಪಾಯಕಾರಿ ಅಮೋನಿಯಾ ಮಟ್ಟವನ್ನು ಹೊಂದಿರುವ ನೀರು ಹರಿಯಾಣದಿಂದ ಯಮುನಾ ನದಿಗೆ ಹರಿಯುತ್ತಿದೆ ಎಂದು ಎಎಪಿ ಮುಖ್ಯಸ್ಥರು ಗುರುವಾರ ಹೇಳಿಕೊಂಡಿದ್ದಾರೆ. “ಮುಖ್ಯಮಂತ್ರಿ ಅತಿಶಿ ತಮ್ಮ ಹರಿಯಾಣದ ಪ್ರತಿರೂಪಕ್ಕೆ ಕರೆ ಮಾಡಿ, ಈ ವಿಷಕಾರಿ ನೀರನ್ನು ಕಳುಹಿಸುವುದನ್ನು ನಿಲ್ಲಿಸುವಂತೆ ಒತ್ತಾಯಿಸಿದಾಗ, ಅವರು ಏನೂ ಮಾಡಲಿಲ್ಲ” ಎಂದು ಕೇಜ್ರಿವಾಲ್ ಆರೋಪಿಸಿದರು.

ಗುರುವಾರ ನಡೆದ ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಕೇಜ್ರಿವಾಲ್ ಮೋದಿಯಂತೆಯೇ ಒಂದರ ನಂತರ ಒಂದರಂತೆ ಸುಳ್ಳುಗಳನ್ನು ಹೇಳುತ್ತಿದ್ದಾರೆ, ಯಾವುದೇ ವ್ಯತ್ಯಾಸವಿಲ್ಲ. ಒಂದೇ ಒಂದು ವಿಷಯವಿದೆ, ಬಹುಶಃ ಕೇಜ್ರಿವಾಲ್ ಮೋದಿಗಿಂತಲೂ ಹೆಚ್ಚು ‘ಚಾಲಾಕ್’ (ಕುತಂತ್ರಿ). ಆದ್ದರಿಂದ, ನಿಮ್ಮೊಂದಿಗೆ ಯಾರು ಇದ್ದಾರೆ, ಸಂವಿಧಾನವನ್ನು ರಕ್ಷಿಸುವವರು ಮತ್ತು ಸತ್ಯವನ್ನು ಮಾತನಾಡುವವರು ಯಾರು ಎಂಬುದನ್ನು ನೀವು ಮರೆಯಬಾರದು” ಎಂದರು.

ಕಾಂಗ್ರೆಸ್ ಅಧಿಕಾರದಲ್ಲಿರುವ ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ ತಮ್ಮ ಪಕ್ಷವು ತಾನು ಭರವಸೆ ನೀಡಿದ್ದನ್ನು ಈಡೇರಿಸಿದೆ ಎಂದರು.

“ಇದು ಸಿದ್ಧಾಂತಗಳ ಯುದ್ಧ. ಒಂದು ಕಡೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಇದೆ, ಮತ್ತೊಂದೆಡೆ ಕಾಂಗ್ರೆಸ್ ಇದೆ. ಅವರು (ಬಿಜೆಪಿ ಮತ್ತು ಆರ್‌ಎಸ್‌ಎಸ್) ಜನರಲ್ಲಿ ದ್ವೇಷ, ಹಿಂಸೆ ಮತ್ತು ಭಯವನ್ನು ಹರಡುತ್ತಾರೆ. ಅವರು ದ್ವೇಷವನ್ನು ಹರಡುವಲ್ಲೆಲ್ಲಾ ನಾವು ‘ಮೊಹಬ್ಬತ್ ಕಿ ಡುಕಾನ್’ ಅನ್ನು ತೆರೆಯುತ್ತೇವೆ ಎಂದು ನಾವು ಸ್ಪಷ್ಟವಾಗಿ ಹೇಳಿದ್ದೇವೆ” ಎಂದು ಗಾಂಧಿ ಹೇಳಿದರು.

“ಬಿಜೆಪಿ ಹಿಂಸೆ ಮತ್ತು ದ್ವೇಷವನ್ನು ಹರಡುತ್ತದೆ. ಗಲಭೆಯಲ್ಲಿ ಜನರು ಕೊಲ್ಲಲ್ಪಟ್ಟಾಗ, ಕೇಜ್ರಿವಾಲ್ ಮತ್ತು ಅವರ ಪಕ್ಷದ ಜನರು ಪೀಡಿತರೊಂದಿಗೆ ನಿಲ್ಲಲಿಲ್ಲ” ಎಂದು ಆರೋಪಿಸಿದರು.

“ಒಂದು ಸಿದ್ಧಾಂತವು ಸಂವಿಧಾನವನ್ನು ರಕ್ಷಿಸಲು ಕೆಲಸ ಮಾಡುತ್ತದೆ ಮತ್ತು ಇನ್ನೊಂದು ಸಿದ್ಧಾಂತವು ಅದನ್ನು ಕೊನೆಗೊಳಿಸಲು ಬಯಸುತ್ತದೆ. ಮಹಾತ್ಮಾ ಗಾಂಧಿಯವರು ದ್ವೇಷದ ವಿರುದ್ಧ ಹೋರಾಡುತ್ತಿದ್ದ ಕಾರಣ, ಹಿಂದೂಗಳು, ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಸಿಖ್ಖರನ್ನು ಒಗ್ಗೂಡಿಸುತ್ತಿದ್ದ ಕಾರಣ ಮತ್ತು ದಲಿತರನ್ನು ರಕ್ಷಿಸುತ್ತಿದ್ದ ಕಾರಣ ಈ ದಿನ (ಅಕ್ಟೋಬರ್ 30, 1948) ಕೊಲ್ಲಲ್ಪಟ್ಟರು. ಅವರನ್ನು ಕೊಂದವರು ಯಾರು? ಇಂದು ದೇಶವನ್ನು ಸುಡುತ್ತಿರುವ ಸಿದ್ಧಾಂತದ ಜನರು ಅವರೇ” ಎಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು.

“ಇದೆಲ್ಲಾ ದೇಶದ ಜನರಿಗೆ ಅರ್ಥವಾಗುತ್ತಿಲ್ಲ ಎಂದು ಕೇಜ್ರಿವಾಲ್ ಭಾವಿಸುತ್ತಾರೆ. ಆದರೆ, ಸತ್ಯವೆಂದರೆ ಅವರು ಮತ್ತು ಮನೀಶ್ ಸಿಸೋಡಿಯಾ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಅವರು ಸುಳ್ಳು ಭರವಸೆಗಳನ್ನು ನೀಡಿದರು. ಐದು ವರ್ಷಗಳ ಹಿಂದೆ, ಕೇಜ್ರಿವಾಲ್ ನಾನು ಯಮುನೆಯಲ್ಲಿ ಸ್ನಾನ ಮಾಡಿ ಅದರ ನೀರನ್ನು ಕುಡಿಯುತ್ತೇನೆ ಎಂದು ಹೇಳಿದ್ದರು. ನಾನು ಅವರಿಗೆ ಸವಾಲು ಹಾಕುತ್ತೇನೆ, ಯಮುನೆ ನೀರನ್ನು ಬಿಡಿ, ಇಲ್ಲಿ (ಬದ್ಲಿಯಲ್ಲಿ) ಜನರು ಪಡೆಯುತ್ತಿರುವ ನೀರನ್ನು ಕುಡಿಯಿರಿ” ಎಂದರು.

“ಕಾಂಗ್ರೆಸ್ ಮತ್ತು ನಾನು ಎಂದಿಗೂ ಬಿಜೆಪಿಯೊಂದಿಗೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾನು 55 ಗಂಟೆಗಳ ವಿಚಾರಣೆಯನ್ನು ಎದುರಿಸಿದೆ, ಅವರು ನನ್ನ ವಿರುದ್ಧ 32 ಪ್ರಕರಣಗಳನ್ನು ಹೂಡಿದ್ದಾರೆ. ಆದರೆ ನನಗೆ ಭಯವಿಲ್ಲ; ನಾನು ಓಡಿಹೋಗಲಿಲ್ಲ. ನೀವು ನನ್ನನ್ನು ಬಂಧಿಸಬಹುದು ಎಂದು ನಾನು ಹೇಳಿದೆ. ಅವರು ನನ್ನ ಅಧಿಕೃತ ನಿವಾಸವನ್ನು ಕಿತ್ತುಕೊಂಡರು ಮತ್ತು ನಾನು ಅವರಿಗೆ ಕೀಲಿಗಳನ್ನು ಹಸ್ತಾಂತರಿಸಿದೆ. ನಾವು ಸಾಯುತ್ತೇವೆ. ಆದರೆ, ಈ ಜನರೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ; ಭಗವಂತ್ ಮಾನ್ ನಿವಾಸದ ಮೇಲೆ ದೆಹಲಿ ಪೊಲೀಸರಿಂದ ದಾಳಿ: ಎಎಪಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...