Homeಮುಖಪುಟಬಿಜೆಪಿಯ ‘ಬುಲ್ಡೋಜರ್‌’ ರಾಜಕಾರಣ ಎದುರಿಸಲು ಎಎಪಿ ಎಂಎಲ್‌ಎಗಳೊಂದಿಗೆ ಇಂದು ಕೇಜ್ರಿವಾಲ್‌ ಸಭೆ

ಬಿಜೆಪಿಯ ‘ಬುಲ್ಡೋಜರ್‌’ ರಾಜಕಾರಣ ಎದುರಿಸಲು ಎಎಪಿ ಎಂಎಲ್‌ಎಗಳೊಂದಿಗೆ ಇಂದು ಕೇಜ್ರಿವಾಲ್‌ ಸಭೆ

- Advertisement -
- Advertisement -

ಬಿಜೆಪಿ ಆಡಳಿತದಲ್ಲಿರುವ ದೆಹಲಿಯ ಮೂರು ಮುನ್ಸಿಪಲ್ ಕಾರ್ಪೊರೇಷನ್‌ಗಳು ನಡೆಸುತ್ತಿರುವ ಬುಲ್ಡೋಜರ್ ರಾಜಕೀಯದ ಕುರಿತು ಚರ್ಚಿಸಲು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೋಮವಾರ ಬೆಳಿಗ್ಗೆ ಪಕ್ಷದ ದೆಹಲಿ ಶಾಸಕರ ಸಭೆ ಕರೆದಿದ್ದಾರೆ.

ಎಎಪಿ ರಾಜಕೀಯ ಪ್ರತಿತಂತ್ರವನ್ನು ರೂಪಿಸಲು ನೋಡುತ್ತಿದೆ ಪಕ್ಷದ ನಾಯಕರು ತಿಳಿಸಿದ್ದಾರೆ. ಈ ಹಿಂದೆ ಶನಿವಾರ ಸಭೆ ಕರೆಯಲಾಗಿತ್ತು, ಆದರೆ ಮುಂಡ್ಕ ಬೆಂಕಿ ದುರಂತದ ಕಾರಣ ಸಭೆಯನ್ನು ಮುಂದೂಡಲಾಯಿತು.

ಮೂರು ಕಾರ್ಪೋರೇಷನ್‌ಗಳಿಂದ ನಡೆಯುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನವು “ನಿರ್ದಿಷ್ಟ ಸಮುದಾಯವನ್ನು, ಬಡವರನ್ನು ಗುರಿಯಾಗಿಸಿಕೊಂಡಿದೆ” ಎಂದು ಎಎಪಿ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬುಲ್ಡೋಜರ್ ರಾಜಕೀಯ” ಎಎಪಿ ಮತ್ತು ಬಿಜೆಪಿ ನಡುವೆ ಹೊಸ ವಾಗ್ವಾದವನ್ನು ಉಂಟು ಮಾಡಿದೆ. ಕೇಂದ್ರ ನಾಗರಿಕ ಸಂಸ್ಥೆಗಳ ಪದಾಧಿಕಾರಿಗಳ ವಿರುದ್ಧ ತನಿಖೆ ನಡೆಸುವವರೆಗೆ ರಾಜಧಾನಿಯಲ್ಲಿ ತೆರವು ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ.

ಬುಲ್ಡೋಜರ್‌ ರಾಜಕಾರಣದ ಕುರಿತು ಮೊದಲು ತುಸು ಮೌನವಾಗಿದ್ದ ಎಎಪಿ, ನಂತರ ಬಿಜೆಪಿ ವಿರುದ್ಧ ತಿರುಗಿ ಬಿದ್ದಿದೆ. ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಮನೀಶ್‌ ಸಿಸೋಡಿಯಾ ಅವರು, “ಬಿಜೆಪಿ ಬುಲ್ಡೋಜರ್ ರಾಜಕೀಯ ಮಾಡುತ್ತಿದ್ದು, ಇದರಿಂದ ಇಡೀ ದೆಹಲಿಯೇ ಧ್ವಂಸವಾಗಲಿದೆ” ಎಂದು ಎಚ್ಚರಿಸಿದ್ದರು.

“ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಮೊದಲು ಅನುಮತಿ ನೀಡಿದ ಕೌನ್ಸಿಲರ್‌ಗಳಿಗೂ ನೋಟಿಸ್ ಜಾರಿ ಮಾಡಬೇಕು” ಎಂದು ಒತ್ತಾಯಿಸಿದ್ದರು.

“1,750 ಅನಧಿಕೃತ, ನಿಯಮಿತವಲ್ಲದೆ ಕಾಲೋನಿಗಳಿಗೆ ನೋಟಿಸ್ ಕಳುಹಿಸಲಾಗಿದೆ. ಇಲ್ಲಿ 50 ಲಕ್ಷಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಇದು ಬುಲ್ಡೋಜರ್ ರಾಜಕಾರಣ. ಈ ಜನರನ್ನು ನಿರಾಶ್ರಿತರನ್ನಾಗಿ ಮಾಡಲು ಬಿಜೆಪಿ ಬಯಸುತ್ತಿದೆ. ಜೊತೆಗೆ 10 ಲಕ್ಷ ಜನರು ವಾಸಿಸುವ ಜೆಜೆ ಕ್ಲಸ್ಟರ್‌ಗಳ 860 ಕಾಲೋನಿಗಳಿಗೂ ನೋಟಿಸ್‌ಗಳನ್ನು ಕಳುಹಿಸಲಾಗಿದೆ. ಈ ರೀತಿಯಾಗಿ ಇಡೀ ದೆಹಲಿಯನ್ನು ಧ್ವಂಸ ಮಾಡಲು ಬಿಜೆಪಿ ಹೊರಟಿದೆ” ಎಂದು ಆತಂಕ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ಸಿಎಎ ವಿರೋಧಿ ಹೋರಾಟದ ಕೇಂದ್ರ ಶಾಹೀನ್‌ಬಾಗ್‌ನಲ್ಲಿ ಬುಲ್ಡೋಜರ್‌ಗಳು: ದ್ವೇಷ ರಾಜಕಾರಣಕ್ಕೆ ಮುಂದಾದ ಬಿಜೆಪಿ

ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಫ್ಲಾಟ್‌ಗಳಲ್ಲಿ ಹೆಚ್ಚುವರಿ ಬಾಲ್ಕನಿ ಅಥವಾ ಕೊಠಡಿಯನ್ನು ನಿರ್ಮಿಸಿದ ಜನರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದ ಅವರು, “ಕಳೆದ ಎರಡು ವರ್ಷಗಳಲ್ಲಿ ಸುಮಾರು ಮೂರು ಲಕ್ಷ ಜನರು ಇಂತಹ ನೋಟಿಸ್‌ಗಳನ್ನು ಸ್ವೀಕರಿಸಿದ್ದಾರೆ” ಎಂದು ಮಾಹಿತಿ ನೀಡಿದ್ದರು.

“ನಾವು ಜನರಿಗೆ ಮನೆ ನೀಡಲು ಪ್ರಯತ್ನಿಸುತ್ತಿದ್ದೇವೆ ಮತ್ತು ಬಿಜೆಪಿ ಬುಲ್ಡೋಜರ್‌ ಮೂಲಕ ಅವುಗಳನ್ನು ಉರುಳಿಸುತ್ತದೆ” ಎಂದು ಕಟುವಾಗಿ ಟೀಕಿಸಿದ್ದರು.

ದೆಹಲಿಯ ಜಹಾಂಗೀರ್‌ಪುರಿ ಕೋಮು ಸಂಘರ್ಷ ನಡೆದ ಬಳಿಕ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಬಿಜೆಪಿ ಆರಂಭಿಸಿತು. ಸುಪ್ರೀಂ ಕೋರ್ಟ್ ತಡೆಯಾಜ್ಞೆಯ ನಡುವೆಯೂ ಕಾರ್ಯಾಚರಣೆಯನ್ನು ನಡೆಸಿದ್ದು ಚರ್ಚೆಗೆ ಗ್ರಾಸವಾಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಕೊಲೆಗೆ ರಾಜಕೀಯ ಬಣ್ಣ ಬಳಿದ ಅಣ್ಣಾಮಲೈ: ಪ್ರಕರಣ ದಾಖಲು

0
ಮಹಿಳೆಯೋರ್ವರ ಸಾವಿಗೆ ಸಂಬಂಧಿಸಿ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯ ಪಕ್ಕಿರಿಮಣಿಯಂ...