Homeಮುಖಪುಟಭಿನ್ನಮತದ ವದಂತಿ ನಡುವೆ ಪಂಜಾಬ್ ಸಿಎಂ, ಶಾಸಕರೊಂದಿಗೆ ಕೇಜ್ರಿವಾಲ್ ಮಹತ್ವದ ಸಭೆ

ಭಿನ್ನಮತದ ವದಂತಿ ನಡುವೆ ಪಂಜಾಬ್ ಸಿಎಂ, ಶಾಸಕರೊಂದಿಗೆ ಕೇಜ್ರಿವಾಲ್ ಮಹತ್ವದ ಸಭೆ

- Advertisement -
- Advertisement -

ಪಕ್ಷದ ಪಂಜಾಬ್ ಘಟಕದಲ್ಲಿ ಭಿನ್ನಮತದ ವದಂತಿಗಳ ನಡುವೆ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ (ಫೆ.11) ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಸಚಿವರು ಮತ್ತು ಶಾಸಕರೊಂದಿಗೆ ದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ಸಭೆ ನಡೆಸಿದ್ದಾರೆ.

ಪಕ್ಷದ ನಾಯಕರ ಪ್ರಕಾರ, ಇತ್ತೀಚೆಗೆ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿಯ ಸೋತಿರುವ ಕುರಿತು ಪರಾಮರ್ಶೆ ನಡೆಸಲು ಮತ್ತು 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಯೋಜನೆ ರೂಪಿಸುವ ಬಗ್ಗೆ ಚರ್ಚೆಸಲು ಸಭೆ ನಡೆಸಲಾಗಿದೆ. ಪಂಜಾಬ್‌ ಸಂಸದರಾದ ರಾಘವ್ ಚಡ್ಡಾ ಮತ್ತು ಸಂದೀಪ್ ಪಾಠಕ್ ಸೇರಿದಂತೆ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ.

ಪಂಜಾಬ್‌ನ ಸಂಗ್ರೂರ್ ಶಾಸಕಿ ನರಿಂದರ್ ಕೌರ್ ಅವರು ಎಎಪಿಯೊಳಗಿನ ಆಂತರಿಕ ಭಿನ್ನಾಭಿಪ್ರಾಯದ ವರದಿಗಳನ್ನು ತಳ್ಳಿಹಾಕಿದ್ದಾರೆ. ಇಂದಿನದ್ದು ಪಕ್ಷದ ಸಾಮಾನ್ಯ ಸಭೆ ಎಂದಿದ್ದಾರೆ. “ನಾವು ದೆಹಲಿಯ ಜನಾದೇಶವನ್ನು ಸ್ವೀಕರಿಸುತ್ತೇವೆ ಮತ್ತು ಬಲವಾದ ವಿರೋಧ ಪಕ್ಷವಾಗಿ ನಮ್ಮ ಪಾತ್ರ ನಿರ್ವಹಿಸುತ್ತೇವೆ. ಪಂಜಾಬ್ ಮತ್ತು ದೆಹಲಿಯಲ್ಲಿ ಇಂತಹ ಸಭೆಗಳು ಈ ಹಿಂದೆಯೂ ನಡೆದಿವೆ” ಎಂದು ಹೇಳಿದ್ದಾರೆ.

ಎಎಪಿಯಲ್ಲಿ ಭಿನ್ನಾಭಿಪ್ರಾಯವಿದೆ ಎಂಬ ಕಾಂಗ್ರೆಸ್‌ನ ಹೇಳಿಕೆಯನ್ನು ಕೌರ್ ವಿರೋಧಿಸಿದ್ದಾರೆ. “ಇಷ್ಟು ವರ್ಷಗಳ ಕಾಲ ಆಡಳಿತ ನಡೆಸಿದ ತಮ್ಮ ಪಕ್ಷಕ್ಕೆ ದೆಹಲಿಯಲ್ಲಿ ಶೂನ್ಯ ಸ್ಥಾನಗಳು ಏಕೆ ಬಂದವು ಎಂಬುವುದನ್ನು ಕಾಂಗ್ರೆಸ್ ಪರಾಮರ್ಶಿಸಲಿ. ನಮ್ಮ ಪಕ್ಷವನ್ನು ನಾವು ನೋಡಿಕೊಳ್ಳುತ್ತೇವೆ” ಎಂದಿದ್ದಾರೆ.

ಒಂದು ದಶಕದ ಕಾಲ ದೆಹಲಿಯನ್ನು ಆಳಿದ್ದ ಎಎಪಿ, ಫೆಬ್ರವರಿ 8ರಂದು ಪ್ರಕಟಗೊಂಡ ಚುನಾವಣಾ ಫಲಿತಾಂಶದಲ್ಲಿ 70 ವಿಧಾನಸಭಾ ಸ್ಥಾನಗಳಲ್ಲಿ ಕೇವಲ 22 ಮಾತ್ರ ಗೆಲ್ಲುವ ಮೂಲಕ ಭಾರೀ ಹಿನ್ನಡೆ ಅನುಭವಿಸಿದೆ. ಬಿಜೆಪಿಯ ಗೆಲುವು ರಾಜಧಾನಿಯಲ್ಲಿ ಎಎಪಿಯ ದಶಕದ ಆಡಳಿತವನ್ನು ಕೊನೆಗೊಳಿಸಿದೆ. ಪಕ್ಷದ ಭವಿಷ್ಯದ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ.

ದೆಹಲಿಯಲ್ಲಿ ಎಎಪಿಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರೇ ಸೋಲನುಭವಿಸಿದ್ದಾರೆ. ಹಾಗಾಗಿ, ಅವರು ಪಂಜಾಬ್ ಮೂಲಕ ಮುಂದಿನ ರಾಜಕೀಯ ಅಧಿಕಾರ ಹಿಡಿಯುವ ಸಾಧ್ಯತೆ ಇದೆ. ಖಾಲಿ ಇರುವ ಲುಧಿಯಾನ ವಿಧಾನಸಭಾ ಕ್ಷೇತ್ರದಿಂದ ಅವರು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ, ಎಎಪಿ ಸಂಸದ ಮಲ್ವಿಂದರ್ ಸಿಂಗ್ ಕಾಂಗ್ ಅವರು ಈ ವರದಿಗಳನ್ನು ತಳ್ಳಿ ಹಾಕಿದ್ದಾರೆ. ಇಂದಿನ ಸಭೆಯನ್ನು ಪಕ್ಷದ ನಿಯಮಿತ ಕಾರ್ಯತಂತ್ರದ ಭಾಗ ಎಂದಿದ್ದಾರೆ.

ದೆಹಲಿಯಲ್ಲಿ ಸೋತ ಬಳಿಕ ಪಂಜಾಬ್‌ನಲ್ಲಿ ಮಾತ್ರ ಎಎಪಿ ಆಡಳಿತವಿದ್ದು, ಇಂದಿನ ಸಭೆಯ ಫಲಿತಾಂಶವು ಪಕ್ಷದ ಭವಿಷ್ಯದ ದೃಷ್ಟಿಯಲ್ಲಿ ಮಹತ್ವದ್ದು ಎನ್ನಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ “ದೆಹಲಿ ಮಾದರಿ” ತಿರಸ್ಕರಿಸಲ್ಪಟ್ಟ ನಂತರ, ಎಎಪಿ ಈಗ ಅಧಿಕಾರದಲ್ಲಿರುವ ಏಕೈಕ ರಾಜ್ಯದಲ್ಲಿ ತನ್ನ ಕಾರ್ಯಕ್ಷಮತೆಯನ್ನು ಸುಧಾರಿಸಲು “ಪಂಜಾಬ್-ನಿರ್ದಿಷ್ಟ ಅಭಿವೃದ್ಧಿ ಮಾದರಿ”ಯನ್ನು ರೂಪಿಸಬೇಕಾಗುತ್ತದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಪಂಜಾಬ್‌ನ ಒಟ್ಟು 117 ವಿಧಾನಸಭಾ ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗೆಲ್ಲುವ ಮೂಲಕ 2022ರಲ್ಲಿ ಎಎಪಿ ಅಧಿಕಾರ ಹಿಡಿದಿತ್ತು. “ದೆಹಲಿ ಅಭಿವೃದ್ಧಿ ಮಾದರಿ”ಯನ್ನು ಮುಂದಿಟ್ಟುಕೊಂಡು ಪಕ್ಷವು ಪಂಜಾಬ್ ಚುನಾವಣೆ ಗೆದ್ದಿತ್ತು.

ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಪಂಜಾಬ್ ಸಿಎಂ ಭಗವಂತ್ ಮಾನ್, ಅವರ ಸಂಪುಟದ ಸಚಿವರು, ಸಂಸದರು ಮತ್ತು ಶಾಸಕರು ಸೇರಿದಂತೆ ಎಎಪಿಯ ಸಂಪೂರ್ಣ ಪಂಜಾಬ್ ಘಟಕವು ದೆಹಲಿಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರಗಳಲ್ಲಿ ಸಕ್ರಿಯವಾಗಿ ಭಾಗವಹಿಸಿತ್ತು. ಪಂಜಾಬ್‌ನಲ್ಲಿ ತಾವು ಮಾಡಿದ ಕೆಲಸಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದ ಮಾನ್ ಅವರು, ದೆಹಲಿಯಲ್ಲಿ ರೋಡ್‌ಶೋಗಳನ್ನು ನಡೆಸಿ ಮತ ಕೇಳಲು ತಮ್ಮ ಸರ್ಕಾರದ ಕೆಲಸಗಳನ್ನು ಹೇಳಿಕೊಂಡಿದ್ದರು.

ದೆಹಲಿಯಲ್ಲಿ ಎಎಪಿ ಸೋಲಿನ ನಂತರ, ಪಂಜಾಬ್‌ನ ವಿರೋಧ ಪಕ್ಷಗಳು ಆಡಳಿತ ಪಕ್ಷವನ್ನು ಟೀಕಿಸತೊಡಗಿವೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿಯ ಸುಳ್ಳು ಮತ್ತು ವಂಚನೆಯನ್ನು ಜನರು ಬಹಿರಂಗಪಡಿಸಿದ್ದಾರೆ ಎಂದು ಹೇಳುತ್ತಿವೆ. ಪಂಜಾಬ್‌ನಲ್ಲಿ ಭಗವಂತ್ ಮಾನ್ ಸರ್ಕಾರ ಕೂಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ವಂಚಿಸಿದೆ ಎಂದು ಆರೋಪಿಸುತ್ತಿವೆ.

ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ, ಹೆಚ್ಚುತ್ತಿರುವ ಸಾಲ ಮತ್ತು ಮಾದಕವಸ್ತು ಪಿಡುಗು ಸೇರಿದಂತೆ ಹಲವಾರು ವಿಷಯಗಳ ಕುರಿತು ವಿರೋಧ ಪಕ್ಷಗಳು ಎಎಪಿ ಸರ್ಕಾರವನ್ನು ಗುರಿಯಾಗಿಸಿಕೊಂಡಿವೆ.

ದೆಹಲಿಯಲ್ಲಿ ಸೋಲಿನ ನಂತರ, ಪಂಜಾಬ್‌ನಲ್ಲಿ ಪಕ್ಷವನ್ನು ಬಲಪಡಿಸುವುದು ಮತ್ತು ರಾಜ್ಯದಲ್ಲಿ ಅದರ ಕಾರ್ಯಕ್ಷಮತೆಯನ್ನು ಸುಧಾರಿಸುವುದು ಈಗ ಎಎಪಿ ಮುಂದಿರುವ ಸವಾಲು ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತಗಳನ್ನು ಹಾಳು ಮಾಡಲು ಕಾಂಗ್ರೆಸ್‌ಗೆ ಅಸಾಧ್ಯ – ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...