Homeಮುಖಪುಟಭಿನ್ನಮತದ ವದಂತಿ ನಡುವೆ ಪಂಜಾಬ್ ಸಿಎಂ, ಶಾಸಕರೊಂದಿಗೆ ಕೇಜ್ರಿವಾಲ್ ಮಹತ್ವದ ಸಭೆ

ಭಿನ್ನಮತದ ವದಂತಿ ನಡುವೆ ಪಂಜಾಬ್ ಸಿಎಂ, ಶಾಸಕರೊಂದಿಗೆ ಕೇಜ್ರಿವಾಲ್ ಮಹತ್ವದ ಸಭೆ

- Advertisement -
- Advertisement -

ಪಕ್ಷದ ಪಂಜಾಬ್ ಘಟಕದಲ್ಲಿ ಭಿನ್ನಮತದ ವದಂತಿಗಳ ನಡುವೆ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ (ಫೆ.11) ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಸಚಿವರು ಮತ್ತು ಶಾಸಕರೊಂದಿಗೆ ದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ಸಭೆ ನಡೆಸಿದ್ದಾರೆ.

ಪಕ್ಷದ ನಾಯಕರ ಪ್ರಕಾರ, ಇತ್ತೀಚೆಗೆ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿಯ ಸೋತಿರುವ ಕುರಿತು ಪರಾಮರ್ಶೆ ನಡೆಸಲು ಮತ್ತು 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಯೋಜನೆ ರೂಪಿಸುವ ಬಗ್ಗೆ ಚರ್ಚೆಸಲು ಸಭೆ ನಡೆಸಲಾಗಿದೆ. ಪಂಜಾಬ್‌ ಸಂಸದರಾದ ರಾಘವ್ ಚಡ್ಡಾ ಮತ್ತು ಸಂದೀಪ್ ಪಾಠಕ್ ಸೇರಿದಂತೆ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ.

ಪಂಜಾಬ್‌ನ ಸಂಗ್ರೂರ್ ಶಾಸಕಿ ನರಿಂದರ್ ಕೌರ್ ಅವರು ಎಎಪಿಯೊಳಗಿನ ಆಂತರಿಕ ಭಿನ್ನಾಭಿಪ್ರಾಯದ ವರದಿಗಳನ್ನು ತಳ್ಳಿಹಾಕಿದ್ದಾರೆ. ಇಂದಿನದ್ದು ಪಕ್ಷದ ಸಾಮಾನ್ಯ ಸಭೆ ಎಂದಿದ್ದಾರೆ. “ನಾವು ದೆಹಲಿಯ ಜನಾದೇಶವನ್ನು ಸ್ವೀಕರಿಸುತ್ತೇವೆ ಮತ್ತು ಬಲವಾದ ವಿರೋಧ ಪಕ್ಷವಾಗಿ ನಮ್ಮ ಪಾತ್ರ ನಿರ್ವಹಿಸುತ್ತೇವೆ. ಪಂಜಾಬ್ ಮತ್ತು ದೆಹಲಿಯಲ್ಲಿ ಇಂತಹ ಸಭೆಗಳು ಈ ಹಿಂದೆಯೂ ನಡೆದಿವೆ” ಎಂದು ಹೇಳಿದ್ದಾರೆ.

ಎಎಪಿಯಲ್ಲಿ ಭಿನ್ನಾಭಿಪ್ರಾಯವಿದೆ ಎಂಬ ಕಾಂಗ್ರೆಸ್‌ನ ಹೇಳಿಕೆಯನ್ನು ಕೌರ್ ವಿರೋಧಿಸಿದ್ದಾರೆ. “ಇಷ್ಟು ವರ್ಷಗಳ ಕಾಲ ಆಡಳಿತ ನಡೆಸಿದ ತಮ್ಮ ಪಕ್ಷಕ್ಕೆ ದೆಹಲಿಯಲ್ಲಿ ಶೂನ್ಯ ಸ್ಥಾನಗಳು ಏಕೆ ಬಂದವು ಎಂಬುವುದನ್ನು ಕಾಂಗ್ರೆಸ್ ಪರಾಮರ್ಶಿಸಲಿ. ನಮ್ಮ ಪಕ್ಷವನ್ನು ನಾವು ನೋಡಿಕೊಳ್ಳುತ್ತೇವೆ” ಎಂದಿದ್ದಾರೆ.

ಒಂದು ದಶಕದ ಕಾಲ ದೆಹಲಿಯನ್ನು ಆಳಿದ್ದ ಎಎಪಿ, ಫೆಬ್ರವರಿ 8ರಂದು ಪ್ರಕಟಗೊಂಡ ಚುನಾವಣಾ ಫಲಿತಾಂಶದಲ್ಲಿ 70 ವಿಧಾನಸಭಾ ಸ್ಥಾನಗಳಲ್ಲಿ ಕೇವಲ 22 ಮಾತ್ರ ಗೆಲ್ಲುವ ಮೂಲಕ ಭಾರೀ ಹಿನ್ನಡೆ ಅನುಭವಿಸಿದೆ. ಬಿಜೆಪಿಯ ಗೆಲುವು ರಾಜಧಾನಿಯಲ್ಲಿ ಎಎಪಿಯ ದಶಕದ ಆಡಳಿತವನ್ನು ಕೊನೆಗೊಳಿಸಿದೆ. ಪಕ್ಷದ ಭವಿಷ್ಯದ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ.

ದೆಹಲಿಯಲ್ಲಿ ಎಎಪಿಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರೇ ಸೋಲನುಭವಿಸಿದ್ದಾರೆ. ಹಾಗಾಗಿ, ಅವರು ಪಂಜಾಬ್ ಮೂಲಕ ಮುಂದಿನ ರಾಜಕೀಯ ಅಧಿಕಾರ ಹಿಡಿಯುವ ಸಾಧ್ಯತೆ ಇದೆ. ಖಾಲಿ ಇರುವ ಲುಧಿಯಾನ ವಿಧಾನಸಭಾ ಕ್ಷೇತ್ರದಿಂದ ಅವರು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ, ಎಎಪಿ ಸಂಸದ ಮಲ್ವಿಂದರ್ ಸಿಂಗ್ ಕಾಂಗ್ ಅವರು ಈ ವರದಿಗಳನ್ನು ತಳ್ಳಿ ಹಾಕಿದ್ದಾರೆ. ಇಂದಿನ ಸಭೆಯನ್ನು ಪಕ್ಷದ ನಿಯಮಿತ ಕಾರ್ಯತಂತ್ರದ ಭಾಗ ಎಂದಿದ್ದಾರೆ.

ದೆಹಲಿಯಲ್ಲಿ ಸೋತ ಬಳಿಕ ಪಂಜಾಬ್‌ನಲ್ಲಿ ಮಾತ್ರ ಎಎಪಿ ಆಡಳಿತವಿದ್ದು, ಇಂದಿನ ಸಭೆಯ ಫಲಿತಾಂಶವು ಪಕ್ಷದ ಭವಿಷ್ಯದ ದೃಷ್ಟಿಯಲ್ಲಿ ಮಹತ್ವದ್ದು ಎನ್ನಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ “ದೆಹಲಿ ಮಾದರಿ” ತಿರಸ್ಕರಿಸಲ್ಪಟ್ಟ ನಂತರ, ಎಎಪಿ ಈಗ ಅಧಿಕಾರದಲ್ಲಿರುವ ಏಕೈಕ ರಾಜ್ಯದಲ್ಲಿ ತನ್ನ ಕಾರ್ಯಕ್ಷಮತೆಯನ್ನು ಸುಧಾರಿಸಲು “ಪಂಜಾಬ್-ನಿರ್ದಿಷ್ಟ ಅಭಿವೃದ್ಧಿ ಮಾದರಿ”ಯನ್ನು ರೂಪಿಸಬೇಕಾಗುತ್ತದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಪಂಜಾಬ್‌ನ ಒಟ್ಟು 117 ವಿಧಾನಸಭಾ ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗೆಲ್ಲುವ ಮೂಲಕ 2022ರಲ್ಲಿ ಎಎಪಿ ಅಧಿಕಾರ ಹಿಡಿದಿತ್ತು. “ದೆಹಲಿ ಅಭಿವೃದ್ಧಿ ಮಾದರಿ”ಯನ್ನು ಮುಂದಿಟ್ಟುಕೊಂಡು ಪಕ್ಷವು ಪಂಜಾಬ್ ಚುನಾವಣೆ ಗೆದ್ದಿತ್ತು.

ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಪಂಜಾಬ್ ಸಿಎಂ ಭಗವಂತ್ ಮಾನ್, ಅವರ ಸಂಪುಟದ ಸಚಿವರು, ಸಂಸದರು ಮತ್ತು ಶಾಸಕರು ಸೇರಿದಂತೆ ಎಎಪಿಯ ಸಂಪೂರ್ಣ ಪಂಜಾಬ್ ಘಟಕವು ದೆಹಲಿಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರಗಳಲ್ಲಿ ಸಕ್ರಿಯವಾಗಿ ಭಾಗವಹಿಸಿತ್ತು. ಪಂಜಾಬ್‌ನಲ್ಲಿ ತಾವು ಮಾಡಿದ ಕೆಲಸಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದ ಮಾನ್ ಅವರು, ದೆಹಲಿಯಲ್ಲಿ ರೋಡ್‌ಶೋಗಳನ್ನು ನಡೆಸಿ ಮತ ಕೇಳಲು ತಮ್ಮ ಸರ್ಕಾರದ ಕೆಲಸಗಳನ್ನು ಹೇಳಿಕೊಂಡಿದ್ದರು.

ದೆಹಲಿಯಲ್ಲಿ ಎಎಪಿ ಸೋಲಿನ ನಂತರ, ಪಂಜಾಬ್‌ನ ವಿರೋಧ ಪಕ್ಷಗಳು ಆಡಳಿತ ಪಕ್ಷವನ್ನು ಟೀಕಿಸತೊಡಗಿವೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿಯ ಸುಳ್ಳು ಮತ್ತು ವಂಚನೆಯನ್ನು ಜನರು ಬಹಿರಂಗಪಡಿಸಿದ್ದಾರೆ ಎಂದು ಹೇಳುತ್ತಿವೆ. ಪಂಜಾಬ್‌ನಲ್ಲಿ ಭಗವಂತ್ ಮಾನ್ ಸರ್ಕಾರ ಕೂಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ವಂಚಿಸಿದೆ ಎಂದು ಆರೋಪಿಸುತ್ತಿವೆ.

ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ, ಹೆಚ್ಚುತ್ತಿರುವ ಸಾಲ ಮತ್ತು ಮಾದಕವಸ್ತು ಪಿಡುಗು ಸೇರಿದಂತೆ ಹಲವಾರು ವಿಷಯಗಳ ಕುರಿತು ವಿರೋಧ ಪಕ್ಷಗಳು ಎಎಪಿ ಸರ್ಕಾರವನ್ನು ಗುರಿಯಾಗಿಸಿಕೊಂಡಿವೆ.

ದೆಹಲಿಯಲ್ಲಿ ಸೋಲಿನ ನಂತರ, ಪಂಜಾಬ್‌ನಲ್ಲಿ ಪಕ್ಷವನ್ನು ಬಲಪಡಿಸುವುದು ಮತ್ತು ರಾಜ್ಯದಲ್ಲಿ ಅದರ ಕಾರ್ಯಕ್ಷಮತೆಯನ್ನು ಸುಧಾರಿಸುವುದು ಈಗ ಎಎಪಿ ಮುಂದಿರುವ ಸವಾಲು ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತಗಳನ್ನು ಹಾಳು ಮಾಡಲು ಕಾಂಗ್ರೆಸ್‌ಗೆ ಅಸಾಧ್ಯ – ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...