Homeಮುಖಪುಟಭಿನ್ನಮತದ ವದಂತಿ ನಡುವೆ ಪಂಜಾಬ್ ಸಿಎಂ, ಶಾಸಕರೊಂದಿಗೆ ಕೇಜ್ರಿವಾಲ್ ಮಹತ್ವದ ಸಭೆ

ಭಿನ್ನಮತದ ವದಂತಿ ನಡುವೆ ಪಂಜಾಬ್ ಸಿಎಂ, ಶಾಸಕರೊಂದಿಗೆ ಕೇಜ್ರಿವಾಲ್ ಮಹತ್ವದ ಸಭೆ

- Advertisement -
- Advertisement -

ಪಕ್ಷದ ಪಂಜಾಬ್ ಘಟಕದಲ್ಲಿ ಭಿನ್ನಮತದ ವದಂತಿಗಳ ನಡುವೆ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ (ಫೆ.11) ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಸಚಿವರು ಮತ್ತು ಶಾಸಕರೊಂದಿಗೆ ದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ಸಭೆ ನಡೆಸಿದ್ದಾರೆ.

ಪಕ್ಷದ ನಾಯಕರ ಪ್ರಕಾರ, ಇತ್ತೀಚೆಗೆ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿಯ ಸೋತಿರುವ ಕುರಿತು ಪರಾಮರ್ಶೆ ನಡೆಸಲು ಮತ್ತು 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಯೋಜನೆ ರೂಪಿಸುವ ಬಗ್ಗೆ ಚರ್ಚೆಸಲು ಸಭೆ ನಡೆಸಲಾಗಿದೆ. ಪಂಜಾಬ್‌ ಸಂಸದರಾದ ರಾಘವ್ ಚಡ್ಡಾ ಮತ್ತು ಸಂದೀಪ್ ಪಾಠಕ್ ಸೇರಿದಂತೆ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ.

ಪಂಜಾಬ್‌ನ ಸಂಗ್ರೂರ್ ಶಾಸಕಿ ನರಿಂದರ್ ಕೌರ್ ಅವರು ಎಎಪಿಯೊಳಗಿನ ಆಂತರಿಕ ಭಿನ್ನಾಭಿಪ್ರಾಯದ ವರದಿಗಳನ್ನು ತಳ್ಳಿಹಾಕಿದ್ದಾರೆ. ಇಂದಿನದ್ದು ಪಕ್ಷದ ಸಾಮಾನ್ಯ ಸಭೆ ಎಂದಿದ್ದಾರೆ. “ನಾವು ದೆಹಲಿಯ ಜನಾದೇಶವನ್ನು ಸ್ವೀಕರಿಸುತ್ತೇವೆ ಮತ್ತು ಬಲವಾದ ವಿರೋಧ ಪಕ್ಷವಾಗಿ ನಮ್ಮ ಪಾತ್ರ ನಿರ್ವಹಿಸುತ್ತೇವೆ. ಪಂಜಾಬ್ ಮತ್ತು ದೆಹಲಿಯಲ್ಲಿ ಇಂತಹ ಸಭೆಗಳು ಈ ಹಿಂದೆಯೂ ನಡೆದಿವೆ” ಎಂದು ಹೇಳಿದ್ದಾರೆ.

ಎಎಪಿಯಲ್ಲಿ ಭಿನ್ನಾಭಿಪ್ರಾಯವಿದೆ ಎಂಬ ಕಾಂಗ್ರೆಸ್‌ನ ಹೇಳಿಕೆಯನ್ನು ಕೌರ್ ವಿರೋಧಿಸಿದ್ದಾರೆ. “ಇಷ್ಟು ವರ್ಷಗಳ ಕಾಲ ಆಡಳಿತ ನಡೆಸಿದ ತಮ್ಮ ಪಕ್ಷಕ್ಕೆ ದೆಹಲಿಯಲ್ಲಿ ಶೂನ್ಯ ಸ್ಥಾನಗಳು ಏಕೆ ಬಂದವು ಎಂಬುವುದನ್ನು ಕಾಂಗ್ರೆಸ್ ಪರಾಮರ್ಶಿಸಲಿ. ನಮ್ಮ ಪಕ್ಷವನ್ನು ನಾವು ನೋಡಿಕೊಳ್ಳುತ್ತೇವೆ” ಎಂದಿದ್ದಾರೆ.

ಒಂದು ದಶಕದ ಕಾಲ ದೆಹಲಿಯನ್ನು ಆಳಿದ್ದ ಎಎಪಿ, ಫೆಬ್ರವರಿ 8ರಂದು ಪ್ರಕಟಗೊಂಡ ಚುನಾವಣಾ ಫಲಿತಾಂಶದಲ್ಲಿ 70 ವಿಧಾನಸಭಾ ಸ್ಥಾನಗಳಲ್ಲಿ ಕೇವಲ 22 ಮಾತ್ರ ಗೆಲ್ಲುವ ಮೂಲಕ ಭಾರೀ ಹಿನ್ನಡೆ ಅನುಭವಿಸಿದೆ. ಬಿಜೆಪಿಯ ಗೆಲುವು ರಾಜಧಾನಿಯಲ್ಲಿ ಎಎಪಿಯ ದಶಕದ ಆಡಳಿತವನ್ನು ಕೊನೆಗೊಳಿಸಿದೆ. ಪಕ್ಷದ ಭವಿಷ್ಯದ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ.

ದೆಹಲಿಯಲ್ಲಿ ಎಎಪಿಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರೇ ಸೋಲನುಭವಿಸಿದ್ದಾರೆ. ಹಾಗಾಗಿ, ಅವರು ಪಂಜಾಬ್ ಮೂಲಕ ಮುಂದಿನ ರಾಜಕೀಯ ಅಧಿಕಾರ ಹಿಡಿಯುವ ಸಾಧ್ಯತೆ ಇದೆ. ಖಾಲಿ ಇರುವ ಲುಧಿಯಾನ ವಿಧಾನಸಭಾ ಕ್ಷೇತ್ರದಿಂದ ಅವರು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ, ಎಎಪಿ ಸಂಸದ ಮಲ್ವಿಂದರ್ ಸಿಂಗ್ ಕಾಂಗ್ ಅವರು ಈ ವರದಿಗಳನ್ನು ತಳ್ಳಿ ಹಾಕಿದ್ದಾರೆ. ಇಂದಿನ ಸಭೆಯನ್ನು ಪಕ್ಷದ ನಿಯಮಿತ ಕಾರ್ಯತಂತ್ರದ ಭಾಗ ಎಂದಿದ್ದಾರೆ.

ದೆಹಲಿಯಲ್ಲಿ ಸೋತ ಬಳಿಕ ಪಂಜಾಬ್‌ನಲ್ಲಿ ಮಾತ್ರ ಎಎಪಿ ಆಡಳಿತವಿದ್ದು, ಇಂದಿನ ಸಭೆಯ ಫಲಿತಾಂಶವು ಪಕ್ಷದ ಭವಿಷ್ಯದ ದೃಷ್ಟಿಯಲ್ಲಿ ಮಹತ್ವದ್ದು ಎನ್ನಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ “ದೆಹಲಿ ಮಾದರಿ” ತಿರಸ್ಕರಿಸಲ್ಪಟ್ಟ ನಂತರ, ಎಎಪಿ ಈಗ ಅಧಿಕಾರದಲ್ಲಿರುವ ಏಕೈಕ ರಾಜ್ಯದಲ್ಲಿ ತನ್ನ ಕಾರ್ಯಕ್ಷಮತೆಯನ್ನು ಸುಧಾರಿಸಲು “ಪಂಜಾಬ್-ನಿರ್ದಿಷ್ಟ ಅಭಿವೃದ್ಧಿ ಮಾದರಿ”ಯನ್ನು ರೂಪಿಸಬೇಕಾಗುತ್ತದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಪಂಜಾಬ್‌ನ ಒಟ್ಟು 117 ವಿಧಾನಸಭಾ ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗೆಲ್ಲುವ ಮೂಲಕ 2022ರಲ್ಲಿ ಎಎಪಿ ಅಧಿಕಾರ ಹಿಡಿದಿತ್ತು. “ದೆಹಲಿ ಅಭಿವೃದ್ಧಿ ಮಾದರಿ”ಯನ್ನು ಮುಂದಿಟ್ಟುಕೊಂಡು ಪಕ್ಷವು ಪಂಜಾಬ್ ಚುನಾವಣೆ ಗೆದ್ದಿತ್ತು.

ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಪಂಜಾಬ್ ಸಿಎಂ ಭಗವಂತ್ ಮಾನ್, ಅವರ ಸಂಪುಟದ ಸಚಿವರು, ಸಂಸದರು ಮತ್ತು ಶಾಸಕರು ಸೇರಿದಂತೆ ಎಎಪಿಯ ಸಂಪೂರ್ಣ ಪಂಜಾಬ್ ಘಟಕವು ದೆಹಲಿಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರಗಳಲ್ಲಿ ಸಕ್ರಿಯವಾಗಿ ಭಾಗವಹಿಸಿತ್ತು. ಪಂಜಾಬ್‌ನಲ್ಲಿ ತಾವು ಮಾಡಿದ ಕೆಲಸಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದ ಮಾನ್ ಅವರು, ದೆಹಲಿಯಲ್ಲಿ ರೋಡ್‌ಶೋಗಳನ್ನು ನಡೆಸಿ ಮತ ಕೇಳಲು ತಮ್ಮ ಸರ್ಕಾರದ ಕೆಲಸಗಳನ್ನು ಹೇಳಿಕೊಂಡಿದ್ದರು.

ದೆಹಲಿಯಲ್ಲಿ ಎಎಪಿ ಸೋಲಿನ ನಂತರ, ಪಂಜಾಬ್‌ನ ವಿರೋಧ ಪಕ್ಷಗಳು ಆಡಳಿತ ಪಕ್ಷವನ್ನು ಟೀಕಿಸತೊಡಗಿವೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿಯ ಸುಳ್ಳು ಮತ್ತು ವಂಚನೆಯನ್ನು ಜನರು ಬಹಿರಂಗಪಡಿಸಿದ್ದಾರೆ ಎಂದು ಹೇಳುತ್ತಿವೆ. ಪಂಜಾಬ್‌ನಲ್ಲಿ ಭಗವಂತ್ ಮಾನ್ ಸರ್ಕಾರ ಕೂಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ವಂಚಿಸಿದೆ ಎಂದು ಆರೋಪಿಸುತ್ತಿವೆ.

ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ, ಹೆಚ್ಚುತ್ತಿರುವ ಸಾಲ ಮತ್ತು ಮಾದಕವಸ್ತು ಪಿಡುಗು ಸೇರಿದಂತೆ ಹಲವಾರು ವಿಷಯಗಳ ಕುರಿತು ವಿರೋಧ ಪಕ್ಷಗಳು ಎಎಪಿ ಸರ್ಕಾರವನ್ನು ಗುರಿಯಾಗಿಸಿಕೊಂಡಿವೆ.

ದೆಹಲಿಯಲ್ಲಿ ಸೋಲಿನ ನಂತರ, ಪಂಜಾಬ್‌ನಲ್ಲಿ ಪಕ್ಷವನ್ನು ಬಲಪಡಿಸುವುದು ಮತ್ತು ರಾಜ್ಯದಲ್ಲಿ ಅದರ ಕಾರ್ಯಕ್ಷಮತೆಯನ್ನು ಸುಧಾರಿಸುವುದು ಈಗ ಎಎಪಿ ಮುಂದಿರುವ ಸವಾಲು ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತಗಳನ್ನು ಹಾಳು ಮಾಡಲು ಕಾಂಗ್ರೆಸ್‌ಗೆ ಅಸಾಧ್ಯ – ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...