Homeಮುಖಪುಟಅರವಿಂದ್ ಕೇಜ್ರಿವಾಲ್‌ಗೆ ಕಸ್ಟಡಿಯಲ್ಲಿ ಕಿರುಕುಳ ನೀಡಲಾಗುತ್ತಿದೆ: ಪತ್ನಿ ಆರೋಪ

ಅರವಿಂದ್ ಕೇಜ್ರಿವಾಲ್‌ಗೆ ಕಸ್ಟಡಿಯಲ್ಲಿ ಕಿರುಕುಳ ನೀಡಲಾಗುತ್ತಿದೆ: ಪತ್ನಿ ಆರೋಪ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿ ಸಾಕಷ್ಟು ಕಿರುಕುಳವನ್ನು ನೀಡಲಾಗುತ್ತಿದೆ ಎಂದು ಕೇಜ್ರಿವಾಲ್  ಪತ್ನಿ ಸುನೀತಾ ಕೇಜ್ರಿವಾಲ್ ಆರೋಪಿಸಿದ್ದಾರೆ.

ಪತಿಯ ನ್ಯಾಯಾಲಯದ ವಿಚಾರಣೆ ಹಿನ್ನೆಲೆ ಕೋರ್ಟ್‌ಗೆ ಬಂದಿದ್ದ ಸುನೀತಾ ಕೇಜ್ರಿವಾಲ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅವರಿಗೆ ಆರೋಗ್ಯ ಸರಿಯಿಲ್ಲ, ಅವರ ಶುಗರ್ ಲೆವೆಲ್‌ನಲ್ಲಿ ಏರುಪೇರಾಗುತ್ತಿದೆ, ಅವರಿಗೆ ಸಾಕಷ್ಟು ಕಿರುಕುಳ ನೀಡಲಾಗುತ್ತಿದೆ, ಈ ದೌರ್ಜನ್ಯ ಹೆಚ್ಚು ಕಾಲ ಮುಂದುವರಿಯುವುದಿಲ್ಲ ಮತ್ತು ಜನರು ಇದಕ್ಕೆ ತಕ್ಕದಾಗಿ ಉತ್ತರಿಸುತ್ತಾರೆ ಎಂದು ಹೇಳಿದ್ದಾರೆ..

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಈ ಮೊದಲು ಮಾ. 28ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿತ್ತು. ಇಂದು ಮತ್ತೆ ಏ.1ರವರೆಗೆ ಕೇಜ್ರಿವಾಲ್‌ಗೆ ಇಡಿ ಕಸ್ಟಡಿಯನ್ನು ಮುಂದುವರಿಸಲಾಗಿದೆ.

ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಇಡಿ ಆರೋಪ ಸುಳ್ಳು ಎಂದು ವಾದಿಸಿದ್ದಾರೆ. ಜಾರಿ ನಿರ್ದೇಶನಾಲಯ, ತನ್ನ ಪಕ್ಷವನ್ನು ನಾಶ ಮಾಡಲು ಪ್ರಯತ್ನಿಸುತ್ತಿದೆ. ಯಾವುದೇ ನ್ಯಾಯಾಲಯವು ನನ್ನನ್ನು ಅಪರಾಧಿ ಎಂದು ಸಾಬೀತುಪಡಿಸಿಲ್ಲ. ಹಾಲಿ ಮುಖ್ಯಮಂತ್ರಿಯನ್ನು ಬಂಧಿಸಲು ಇಡಿ ನೀಡಿರುವ ಕಾರಣ ಕ್ಷುಲ್ಲಕ ಎಂದು ಹೇಳಿದ್ದಾರೆ.

ಕೇಜ್ರಿವಾಲ್‌ನ್ನು ಸಿಎಂ ಹುದ್ದೆಯಿಂದ ಪದಚ್ಯುತಿಗೊಳಿಸಲು ನಿರಾಕರಿಸಿದ ಹೈಕೋರ್ಟ್‌

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಎಂ ಹುದ್ದೆಯಿಂದ ಪದಚ್ಯುತಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ಈ ಕುರಿತ ಅರ್ಜಿಯನ್ನು ತಳ್ಳಿಹಾಕಿದ ದೆಹಲಿ ನ್ಯಾಯಾಲಯ, ಈ ವಿಚಾರದಲ್ಲಿ ನ್ಯಾಯಾಂಗ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ಹೇಳಿದೆ.

ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಈ ಸಮಸ್ಯೆಯನ್ನು ಪರಿಶೀಲಿಸುತ್ತಿದ್ದಾರೆ. ಅದು ರಾಷ್ಟ್ರಪತಿಗಳ ಬಳಿಗೆ ಹೋಗಲಿದೆ. ಲೆಫ್ಟಿನೆಂಟ್ ಗವರ್ನರ್ ಈ ಬಗ್ಗೆ ಪರಿಗಣಿಸಬೇಕು, ರಾಷ್ಟ್ರಪತಿಗಳು ಪರಿಗಣಿಸಬೇಕು. ನಾವು ಈ ವಿಚಾರದಲ್ಲಿ ಮಧ್ಯಸ್ಥಿಕೆ ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಇದನ್ನು ಓದಿ: ಸಿಎಂ ಕುರಿತು ಸುಳ್ಳು ಸುದ್ದಿ ಪ್ರಸಾರ; ‘ಆರ್‌ ಕನ್ನಡ’ ಮುಖ್ಯಸ್ಥ ಅರ್ನಬ್ ಮೇಲೆ ಎಫ್‌ಐಆರ್‌ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...