Homeಮುಖಪುಟತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್; ಮಳೆಯಲ್ಲೆ ಕಾಯುತ್ತಿದ್ದ ಬೆಂಬಲಿಗರಿಗೆ ಧನ್ಯವಾದ ತಿಳಿಸಿದ ದೆಹಲಿ ಸಿಎಂ

ತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್; ಮಳೆಯಲ್ಲೆ ಕಾಯುತ್ತಿದ್ದ ಬೆಂಬಲಿಗರಿಗೆ ಧನ್ಯವಾದ ತಿಳಿಸಿದ ದೆಹಲಿ ಸಿಎಂ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಹೊರಬಂದರು. ಅಬಕಾರಿ ನೀತಿ ‘ಹಗರಣ’ಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ ಅವರು ಹೊರಬಂದಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿನ ಭಾರಿ ಮಳೆಯ ನಡುವೆಯೇ ಕೇಜ್ರಿವಾಲ್ ಅವರು ಜೈಲು ಆವರಣದಿಂದ ನಿರ್ಗಮಿಸಿದರು. ಅವರ ಪತ್ನಿ ಸುನೀತಾ ಕೇಜ್ರಿವಾಲ್, ಮನೀಷ್ ಸಿಸೋಡಿಯಾ, ಅತಿಶಿ, ಸಂಜಯ್ ಸಿಂಗ್, ಭಗವಂತ್ ಮಾನ್ ಸೇರಿದಂತೆ ಎಎಪಿಯ ಹಿರಿಯ ನಾಯಕರು ಹಾಜರಿದ್ದರು.

ಕಾರಿನ ಸನ್‌ರೂಫ್ ಮೂಲಕ ನಿಂತು ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ಕೇಜ್ರಿವಾಲ್, ತಿಹಾರ್ ಜೈಲಿನ ಹೊರಗೆ ಜಮಾಯಿಸಿದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. “ಜೈಲ್ ಕೆ ಟೇಲ್ ಟೂಟ್ ಗಯೇ, ಕೇಜ್ರಿವಾಲ್ಜಿ ಛೂಟ್ ಗಯೇ” ಎಂದು ಎಎಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.

“ಮಳೆಯಲ್ಲಿ ನನಗಾಗಿ ಕಾದಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು, ಅವರು ನನ್ನನ್ನು ಜೈಲಿಗೆ ಹಾಕಿದರು, ಅವರು ಕೇಜ್ರಿವಾಲ್ ಅವರನ್ನು ಕಂಬಿ ಹಿಂದೆ ಹಾಕಿದರೆ ನೈತಿಕ ಸ್ಥೈರ್ಯ ಕುಗ್ಗುತ್ತದೆ ಎಂದು ಅವರು ಭಾವಿಸಿದರು. ಇಂದು ನಾನು ಜೈಲಿನಿಂದ ಹೊರಬಂದಿದ್ದೇನೆ ಎಂದು ಹೇಳಲು ಬಯಸುತ್ತೇನೆ. ನನ್ನ ನೈತಿಕ ಸ್ಥೈರ್ಯ 100ರಷ್ಟು ಹೆಚ್ಚಾಗಿದೆ. ನನ್ನ ಶಕ್ತಿ 100 ಪಟ್ಟು ಹೆಚ್ಚಾಗಿದೆ” ಎಂದು ಕೇಜ್ರಿವಾಲ್ ಹೇಳಿದರು.

“ನನ್ನ ಜೀವನ ದೇಶಕ್ಕೆ ಮುಡಿಪಾಗಿದೆ, ನನ್ನ ಜೀವನದ ಪ್ರತಿ ಕ್ಷಣ, ಪ್ರತಿ ರಕ್ತ ಹನಿಯೂ ದೇಶಕ್ಕೆ ಸಮರ್ಪಿತವಾಗಿದೆ. ನಾನು ಜೀವನದಲ್ಲಿ ಸಾಕಷ್ಟು ಹೋರಾಟಗಳನ್ನು ನೋಡಿದ್ದೇನೆ, ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದೇನೆ. ಆದರೆ, ದೇವರು ನನ್ನನ್ನು ಪ್ರತಿ ಹೆಜ್ಜೆಯಲ್ಲಿಯೂ ಬೆಂಬಲಿಸಿದ್ದಾನೆ. ಏಕೆಂದರೆ, ನಾನು ಸತ್ಯವಂತ ಮತ್ತು ಪ್ರಾಮಾಣಿಕನಾಗಿದ್ದೆ” ಎಂದು ಅವರು ಹೇಳಿದರು.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಕೇಜ್ರಿವಾಲ್‌ಗೆ ರಿಲೀಫ್ ನೀಡಿತು. ಆದರೆ, ಮುಖ್ಯಮಂತ್ರಿ ಕಚೇರಿಗೆ ಭೇಟಿ ನೀಡುವುದನ್ನು ಅಥವಾ ಯಾವುದೇ ಅಧಿಕೃತ ದಾಖಲೆಗಳಿಗೆ ಸಹಿ ಮಾಡುವುದನ್ನು ನಿರ್ಬಂಧಿಸಿತು.

ಮಾರ್ಚ್ 21 ರಂದು ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಕೇಜ್ರಿವಾಲ್ ಅವರು ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಮೇ 10 ರಂದು ಮಧ್ಯಂತರ ಜಾಮೀನು ಪಡೆದಿದ್ದರು.

ಕೇಜ್ರಿವಾಲ್ ಅವರ ಜಾಮೀನಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ, ಸುಪ್ರೀಂ ಕೋರ್ಟ್ ಅವರಿಗೆ ಕೇವಲ ಷರತ್ತುಬದ್ಧ ಜಾಮೀನು ನೀಡಿರುವುದರಿಂದ ಮುಖ್ಯಮಂತ್ರಿ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಅವರು ಮದ್ಯ ನೀತಿ ಪ್ರಕರಣದಲ್ಲಿ ಆರೋಪಿಯಾಗಿ ಮುಂದುವರಿದಿದ್ದಾರೆ ಎಂದು ಹೇಳಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಎಎಪಿ, ಅರವಿಂದ್ ಕೇಜ್ರಿವಾಲ್ ಅವರಂತಹ “ಕಠಿಣ ಪ್ರಾಮಾಣಿಕ” ನಾಯಕನನ್ನು ಜೈಲಿನಲ್ಲಿಟ್ಟಿದ್ದಕ್ಕಾಗಿ ಆಡಳಿತ ಪಕ್ಷವು ದೇಶದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಅಬಕಾರಿ ನೀತಿ ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಿರುವ ಸುಪ್ರೀಂ ಕೋರ್ಟ್ ಆದೇಶವು ಬಿಜೆಪಿಯ “ಸುಳ್ಳು”ನ್ನು ಬಹಿರಂಗಪಡಿಸಿದೆ ಎಂದು ಪಕ್ಷವು ಹೇಳಿದೆ.

“ಇದು ಕೇಜ್ರಿವಾಲ್‌ಗೆ ನೀಡಿದ ಜಾಮೀನಿನ ವಿಷಯವಲ್ಲ. ಬಿಜೆಪಿ ನೇತೃತ್ವದ ಕೇಂದ್ರಕ್ಕೆ ತನ್ನ ಸರ್ವಾಧಿಕಾರವನ್ನು ನಿಲ್ಲಿಸುವಂತೆ ನ್ಯಾಯಾಲಯವು ದೊಡ್ಡ ಸಂದೇಶವನ್ನು ನೀಡಿದೆ” ಎಂದು ಹಿರಿಯ ಎಎಪಿ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಇದನ್ನೂ ಓದಿ; ಇಡಿ ಪ್ರಕರಣದ ಜಾಮೀನು ವಿಫಲಗೊಳಿಸಲು ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು: ನ್ಯಾ. ಭುಯಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...