Homeಮುಖಪುಟತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್; ಮಳೆಯಲ್ಲೆ ಕಾಯುತ್ತಿದ್ದ ಬೆಂಬಲಿಗರಿಗೆ ಧನ್ಯವಾದ ತಿಳಿಸಿದ ದೆಹಲಿ ಸಿಎಂ

ತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್; ಮಳೆಯಲ್ಲೆ ಕಾಯುತ್ತಿದ್ದ ಬೆಂಬಲಿಗರಿಗೆ ಧನ್ಯವಾದ ತಿಳಿಸಿದ ದೆಹಲಿ ಸಿಎಂ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಹೊರಬಂದರು. ಅಬಕಾರಿ ನೀತಿ ‘ಹಗರಣ’ಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ ಅವರು ಹೊರಬಂದಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿನ ಭಾರಿ ಮಳೆಯ ನಡುವೆಯೇ ಕೇಜ್ರಿವಾಲ್ ಅವರು ಜೈಲು ಆವರಣದಿಂದ ನಿರ್ಗಮಿಸಿದರು. ಅವರ ಪತ್ನಿ ಸುನೀತಾ ಕೇಜ್ರಿವಾಲ್, ಮನೀಷ್ ಸಿಸೋಡಿಯಾ, ಅತಿಶಿ, ಸಂಜಯ್ ಸಿಂಗ್, ಭಗವಂತ್ ಮಾನ್ ಸೇರಿದಂತೆ ಎಎಪಿಯ ಹಿರಿಯ ನಾಯಕರು ಹಾಜರಿದ್ದರು.

ಕಾರಿನ ಸನ್‌ರೂಫ್ ಮೂಲಕ ನಿಂತು ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ಕೇಜ್ರಿವಾಲ್, ತಿಹಾರ್ ಜೈಲಿನ ಹೊರಗೆ ಜಮಾಯಿಸಿದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. “ಜೈಲ್ ಕೆ ಟೇಲ್ ಟೂಟ್ ಗಯೇ, ಕೇಜ್ರಿವಾಲ್ಜಿ ಛೂಟ್ ಗಯೇ” ಎಂದು ಎಎಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.

“ಮಳೆಯಲ್ಲಿ ನನಗಾಗಿ ಕಾದಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು, ಅವರು ನನ್ನನ್ನು ಜೈಲಿಗೆ ಹಾಕಿದರು, ಅವರು ಕೇಜ್ರಿವಾಲ್ ಅವರನ್ನು ಕಂಬಿ ಹಿಂದೆ ಹಾಕಿದರೆ ನೈತಿಕ ಸ್ಥೈರ್ಯ ಕುಗ್ಗುತ್ತದೆ ಎಂದು ಅವರು ಭಾವಿಸಿದರು. ಇಂದು ನಾನು ಜೈಲಿನಿಂದ ಹೊರಬಂದಿದ್ದೇನೆ ಎಂದು ಹೇಳಲು ಬಯಸುತ್ತೇನೆ. ನನ್ನ ನೈತಿಕ ಸ್ಥೈರ್ಯ 100ರಷ್ಟು ಹೆಚ್ಚಾಗಿದೆ. ನನ್ನ ಶಕ್ತಿ 100 ಪಟ್ಟು ಹೆಚ್ಚಾಗಿದೆ” ಎಂದು ಕೇಜ್ರಿವಾಲ್ ಹೇಳಿದರು.

“ನನ್ನ ಜೀವನ ದೇಶಕ್ಕೆ ಮುಡಿಪಾಗಿದೆ, ನನ್ನ ಜೀವನದ ಪ್ರತಿ ಕ್ಷಣ, ಪ್ರತಿ ರಕ್ತ ಹನಿಯೂ ದೇಶಕ್ಕೆ ಸಮರ್ಪಿತವಾಗಿದೆ. ನಾನು ಜೀವನದಲ್ಲಿ ಸಾಕಷ್ಟು ಹೋರಾಟಗಳನ್ನು ನೋಡಿದ್ದೇನೆ, ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದೇನೆ. ಆದರೆ, ದೇವರು ನನ್ನನ್ನು ಪ್ರತಿ ಹೆಜ್ಜೆಯಲ್ಲಿಯೂ ಬೆಂಬಲಿಸಿದ್ದಾನೆ. ಏಕೆಂದರೆ, ನಾನು ಸತ್ಯವಂತ ಮತ್ತು ಪ್ರಾಮಾಣಿಕನಾಗಿದ್ದೆ” ಎಂದು ಅವರು ಹೇಳಿದರು.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಕೇಜ್ರಿವಾಲ್‌ಗೆ ರಿಲೀಫ್ ನೀಡಿತು. ಆದರೆ, ಮುಖ್ಯಮಂತ್ರಿ ಕಚೇರಿಗೆ ಭೇಟಿ ನೀಡುವುದನ್ನು ಅಥವಾ ಯಾವುದೇ ಅಧಿಕೃತ ದಾಖಲೆಗಳಿಗೆ ಸಹಿ ಮಾಡುವುದನ್ನು ನಿರ್ಬಂಧಿಸಿತು.

ಮಾರ್ಚ್ 21 ರಂದು ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಕೇಜ್ರಿವಾಲ್ ಅವರು ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಮೇ 10 ರಂದು ಮಧ್ಯಂತರ ಜಾಮೀನು ಪಡೆದಿದ್ದರು.

ಕೇಜ್ರಿವಾಲ್ ಅವರ ಜಾಮೀನಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ, ಸುಪ್ರೀಂ ಕೋರ್ಟ್ ಅವರಿಗೆ ಕೇವಲ ಷರತ್ತುಬದ್ಧ ಜಾಮೀನು ನೀಡಿರುವುದರಿಂದ ಮುಖ್ಯಮಂತ್ರಿ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಅವರು ಮದ್ಯ ನೀತಿ ಪ್ರಕರಣದಲ್ಲಿ ಆರೋಪಿಯಾಗಿ ಮುಂದುವರಿದಿದ್ದಾರೆ ಎಂದು ಹೇಳಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಎಎಪಿ, ಅರವಿಂದ್ ಕೇಜ್ರಿವಾಲ್ ಅವರಂತಹ “ಕಠಿಣ ಪ್ರಾಮಾಣಿಕ” ನಾಯಕನನ್ನು ಜೈಲಿನಲ್ಲಿಟ್ಟಿದ್ದಕ್ಕಾಗಿ ಆಡಳಿತ ಪಕ್ಷವು ದೇಶದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಅಬಕಾರಿ ನೀತಿ ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಿರುವ ಸುಪ್ರೀಂ ಕೋರ್ಟ್ ಆದೇಶವು ಬಿಜೆಪಿಯ “ಸುಳ್ಳು”ನ್ನು ಬಹಿರಂಗಪಡಿಸಿದೆ ಎಂದು ಪಕ್ಷವು ಹೇಳಿದೆ.

“ಇದು ಕೇಜ್ರಿವಾಲ್‌ಗೆ ನೀಡಿದ ಜಾಮೀನಿನ ವಿಷಯವಲ್ಲ. ಬಿಜೆಪಿ ನೇತೃತ್ವದ ಕೇಂದ್ರಕ್ಕೆ ತನ್ನ ಸರ್ವಾಧಿಕಾರವನ್ನು ನಿಲ್ಲಿಸುವಂತೆ ನ್ಯಾಯಾಲಯವು ದೊಡ್ಡ ಸಂದೇಶವನ್ನು ನೀಡಿದೆ” ಎಂದು ಹಿರಿಯ ಎಎಪಿ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಇದನ್ನೂ ಓದಿ; ಇಡಿ ಪ್ರಕರಣದ ಜಾಮೀನು ವಿಫಲಗೊಳಿಸಲು ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು: ನ್ಯಾ. ಭುಯಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...