Homeಮುಖಪುಟತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್; ಮಳೆಯಲ್ಲೆ ಕಾಯುತ್ತಿದ್ದ ಬೆಂಬಲಿಗರಿಗೆ ಧನ್ಯವಾದ ತಿಳಿಸಿದ ದೆಹಲಿ ಸಿಎಂ

ತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್; ಮಳೆಯಲ್ಲೆ ಕಾಯುತ್ತಿದ್ದ ಬೆಂಬಲಿಗರಿಗೆ ಧನ್ಯವಾದ ತಿಳಿಸಿದ ದೆಹಲಿ ಸಿಎಂ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಹೊರಬಂದರು. ಅಬಕಾರಿ ನೀತಿ ‘ಹಗರಣ’ಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ ಅವರು ಹೊರಬಂದಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿನ ಭಾರಿ ಮಳೆಯ ನಡುವೆಯೇ ಕೇಜ್ರಿವಾಲ್ ಅವರು ಜೈಲು ಆವರಣದಿಂದ ನಿರ್ಗಮಿಸಿದರು. ಅವರ ಪತ್ನಿ ಸುನೀತಾ ಕೇಜ್ರಿವಾಲ್, ಮನೀಷ್ ಸಿಸೋಡಿಯಾ, ಅತಿಶಿ, ಸಂಜಯ್ ಸಿಂಗ್, ಭಗವಂತ್ ಮಾನ್ ಸೇರಿದಂತೆ ಎಎಪಿಯ ಹಿರಿಯ ನಾಯಕರು ಹಾಜರಿದ್ದರು.

ಕಾರಿನ ಸನ್‌ರೂಫ್ ಮೂಲಕ ನಿಂತು ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ಕೇಜ್ರಿವಾಲ್, ತಿಹಾರ್ ಜೈಲಿನ ಹೊರಗೆ ಜಮಾಯಿಸಿದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. “ಜೈಲ್ ಕೆ ಟೇಲ್ ಟೂಟ್ ಗಯೇ, ಕೇಜ್ರಿವಾಲ್ಜಿ ಛೂಟ್ ಗಯೇ” ಎಂದು ಎಎಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.

“ಮಳೆಯಲ್ಲಿ ನನಗಾಗಿ ಕಾದಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು, ಅವರು ನನ್ನನ್ನು ಜೈಲಿಗೆ ಹಾಕಿದರು, ಅವರು ಕೇಜ್ರಿವಾಲ್ ಅವರನ್ನು ಕಂಬಿ ಹಿಂದೆ ಹಾಕಿದರೆ ನೈತಿಕ ಸ್ಥೈರ್ಯ ಕುಗ್ಗುತ್ತದೆ ಎಂದು ಅವರು ಭಾವಿಸಿದರು. ಇಂದು ನಾನು ಜೈಲಿನಿಂದ ಹೊರಬಂದಿದ್ದೇನೆ ಎಂದು ಹೇಳಲು ಬಯಸುತ್ತೇನೆ. ನನ್ನ ನೈತಿಕ ಸ್ಥೈರ್ಯ 100ರಷ್ಟು ಹೆಚ್ಚಾಗಿದೆ. ನನ್ನ ಶಕ್ತಿ 100 ಪಟ್ಟು ಹೆಚ್ಚಾಗಿದೆ” ಎಂದು ಕೇಜ್ರಿವಾಲ್ ಹೇಳಿದರು.

“ನನ್ನ ಜೀವನ ದೇಶಕ್ಕೆ ಮುಡಿಪಾಗಿದೆ, ನನ್ನ ಜೀವನದ ಪ್ರತಿ ಕ್ಷಣ, ಪ್ರತಿ ರಕ್ತ ಹನಿಯೂ ದೇಶಕ್ಕೆ ಸಮರ್ಪಿತವಾಗಿದೆ. ನಾನು ಜೀವನದಲ್ಲಿ ಸಾಕಷ್ಟು ಹೋರಾಟಗಳನ್ನು ನೋಡಿದ್ದೇನೆ, ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದೇನೆ. ಆದರೆ, ದೇವರು ನನ್ನನ್ನು ಪ್ರತಿ ಹೆಜ್ಜೆಯಲ್ಲಿಯೂ ಬೆಂಬಲಿಸಿದ್ದಾನೆ. ಏಕೆಂದರೆ, ನಾನು ಸತ್ಯವಂತ ಮತ್ತು ಪ್ರಾಮಾಣಿಕನಾಗಿದ್ದೆ” ಎಂದು ಅವರು ಹೇಳಿದರು.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಕೇಜ್ರಿವಾಲ್‌ಗೆ ರಿಲೀಫ್ ನೀಡಿತು. ಆದರೆ, ಮುಖ್ಯಮಂತ್ರಿ ಕಚೇರಿಗೆ ಭೇಟಿ ನೀಡುವುದನ್ನು ಅಥವಾ ಯಾವುದೇ ಅಧಿಕೃತ ದಾಖಲೆಗಳಿಗೆ ಸಹಿ ಮಾಡುವುದನ್ನು ನಿರ್ಬಂಧಿಸಿತು.

ಮಾರ್ಚ್ 21 ರಂದು ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಕೇಜ್ರಿವಾಲ್ ಅವರು ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಮೇ 10 ರಂದು ಮಧ್ಯಂತರ ಜಾಮೀನು ಪಡೆದಿದ್ದರು.

ಕೇಜ್ರಿವಾಲ್ ಅವರ ಜಾಮೀನಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ, ಸುಪ್ರೀಂ ಕೋರ್ಟ್ ಅವರಿಗೆ ಕೇವಲ ಷರತ್ತುಬದ್ಧ ಜಾಮೀನು ನೀಡಿರುವುದರಿಂದ ಮುಖ್ಯಮಂತ್ರಿ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಅವರು ಮದ್ಯ ನೀತಿ ಪ್ರಕರಣದಲ್ಲಿ ಆರೋಪಿಯಾಗಿ ಮುಂದುವರಿದಿದ್ದಾರೆ ಎಂದು ಹೇಳಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಎಎಪಿ, ಅರವಿಂದ್ ಕೇಜ್ರಿವಾಲ್ ಅವರಂತಹ “ಕಠಿಣ ಪ್ರಾಮಾಣಿಕ” ನಾಯಕನನ್ನು ಜೈಲಿನಲ್ಲಿಟ್ಟಿದ್ದಕ್ಕಾಗಿ ಆಡಳಿತ ಪಕ್ಷವು ದೇಶದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಅಬಕಾರಿ ನೀತಿ ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಿರುವ ಸುಪ್ರೀಂ ಕೋರ್ಟ್ ಆದೇಶವು ಬಿಜೆಪಿಯ “ಸುಳ್ಳು”ನ್ನು ಬಹಿರಂಗಪಡಿಸಿದೆ ಎಂದು ಪಕ್ಷವು ಹೇಳಿದೆ.

“ಇದು ಕೇಜ್ರಿವಾಲ್‌ಗೆ ನೀಡಿದ ಜಾಮೀನಿನ ವಿಷಯವಲ್ಲ. ಬಿಜೆಪಿ ನೇತೃತ್ವದ ಕೇಂದ್ರಕ್ಕೆ ತನ್ನ ಸರ್ವಾಧಿಕಾರವನ್ನು ನಿಲ್ಲಿಸುವಂತೆ ನ್ಯಾಯಾಲಯವು ದೊಡ್ಡ ಸಂದೇಶವನ್ನು ನೀಡಿದೆ” ಎಂದು ಹಿರಿಯ ಎಎಪಿ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಇದನ್ನೂ ಓದಿ; ಇಡಿ ಪ್ರಕರಣದ ಜಾಮೀನು ವಿಫಲಗೊಳಿಸಲು ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು: ನ್ಯಾ. ಭುಯಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...