Homeಮುಖಪುಟಕೇಜ್ರಿವಾಲ್ ರಾಜೀನಾಮೆ ಘೋಷಣೆಯನ್ನು 'ಪಿಆರ್ ಸ್ಟಂಟ್' ಎಂದು ಕರೆದ ಬಿಜೆಪಿ

ಕೇಜ್ರಿವಾಲ್ ರಾಜೀನಾಮೆ ಘೋಷಣೆಯನ್ನು ‘ಪಿಆರ್ ಸ್ಟಂಟ್’ ಎಂದು ಕರೆದ ಬಿಜೆಪಿ

- Advertisement -
- Advertisement -

ಎರಡು ದಿನಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಮಾಡಿದ ಘೋಷಣೆಯನ್ನು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಅವರು ‘ಪಿಆರ್ ಸ್ಟಂಟ್’ ಎಂದು ಹೇಳಿದ್ದಾರೆ. ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಧಾನ ಕಚೇರಿಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುವಾಗ ಕೇಜ್ರಿವಾಲ್ ಅವರು ತಮ್ಮ ರಾಜೀನಾಮೆ ನಿರ್ಧಾರ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸುದ್ದಿ ಸಂಸ್ಥೆ ANI ಯೊಂದಿಗೆ ಭಾನುವಾರ ಮಾತನಾಡಿದ ಭಂಡಾರಿ,“ಇದು ಅರವಿಂದ್ ಕೇಜ್ರಿವಾಲ್ ಅವರ PR ಸ್ಟಂಟ್. ದೆಹಲಿಯ ಜನರಲ್ಲಿ ಅವರ ಇಮೇಜ್ ಪ್ರಾಮಾಣಿಕ ನಾಯಕನದ್ದಲ್ಲ, ಭ್ರಷ್ಟ ನಾಯಕನದು ಎಂದು ಅವರು ಅರ್ಥಮಾಡಿಕೊಂಡಿದ್ದಾರೆ. ಇಂದು ಆಮ್ ಆದ್ಮಿ ಪಕ್ಷವು ದೇಶಾದ್ಯಂತ ಭ್ರಷ್ಟ ಪಕ್ಷವೆಂದು ಗುರುತಿಸಲ್ಪಟ್ಟಿದೆ. ಅವರ ಈ PR ಸ್ಟಂಟ್ ಅಡಿಯಲ್ಲಿ, ಅವರು ತಮ್ಮ ಇಮೇಜ್ ಅನ್ನು ಪುನಃಸ್ಥಾಪಿಸಲು ಬಯಸುತ್ತಿದ್ದಾರೆ” ಎಂದು ಭಂಡಾರಿ ಹೇಳಿದ್ದಾರೆ.

ಇದನ್ನೂಓದಿ: ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದವರು ಈಗ ಬಿಜೆಪಿ ಜೊತೆ ಸೇರಿದ್ದಾರೆ: ಫಾರೂಕ್ ಅಬ್ದುಲ್ಲಾ

ಕೇಜ್ರಿವಾಲ್ ಅವರ ತಂತ್ರವು ಅವರು ‘ಸೋನಿಯಾ ಗಾಂಧಿ ಮಾದರಿ’ಯದ್ದಾಗಿದ್ದು, ಅಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ‘ಡಮ್ಮಿ’ ನಾಯಕನ ಮೂಲಕ ಅಂದಿನ ಸರ್ಕಾರವನ್ನು ನಿಯಂತ್ರಿಸುತ್ತಿದ್ದರು ಎಂದು ಭಂಡಾರಿ ಹೇಳಿದ್ದಾರೆ. “ಅವರು ಸೋನಿಯಾ ಗಾಂಧಿ ಮಾದರಿಯನ್ನು ಅನ್ವಯಿಸಲು ಬಯಸುತ್ತಾರೆ ಎಂಬುದು ಸ್ಪಷ್ಟವಾಗಿದೆ. ಅಲ್ಲಿ ಅವರು ಮನಮೋಹನ್ ಸಿಂಗ್ ಅವರನ್ನು ಡಮ್ಮಿ ಪ್ರಧಾನಿಯನ್ನಾಗಿ ಮಾಡಿದರು ಮತ್ತು ತೆರೆಮರೆಯಲ್ಲಿ ಸರ್ಕಾರವನ್ನು ನಡೆಸಿದರು” ಎಂದು ಭಂಡಾರಿ ಹೇಳಿದ್ದಾರೆ.

“ದೆಹಲಿಯಲ್ಲಿ ಎಎಪಿಗೆ ತನ್ನ ಬೆಂಬಲ ಕ್ಷೀಣಿಸುತ್ತಿರುವ ಬಗ್ಗೆ ತಿಳಿದಿದೆ. ಆಮ್ ಆದ್ಮಿ ಪಕ್ಷವು ದೆಹಲಿ ಚುನಾವಣೆಯಲ್ಲಿ ಸೋಲುತ್ತಿದೆ ಮತ್ತು ದೆಹಲಿಯ ಜನರು ತಮ್ಮ ಹೆಸರಿನಲ್ಲಿ ಮತ ಚಲಾಯಿಸಲು ಸಾಧ್ಯವಿಲ್ಲ ಎಂದು ಅವರು ಇಂದು ಅರ್ಥಮಾಡಿಕೊಂಡಿದ್ದಾರೆ. ಹಾಗಾಗಿ ಬೇರೊಬ್ಬರನ್ನು ಬಲಿಪಶು ಮಾಡಲು ಅವರು ಬಯಸುತ್ತಿದ್ದಾರೆ” ಎಂದು ಭಂಡಾರಿ ಹೇಳಿದ್ದಾರೆ.

ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಸುಪ್ರಿಂಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಅವರು ಮುಂದಿನ 2 ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭಾನುವಾರ ಹೇಳಿದ್ದಾರೆ. ಒಂದೆರಡು ದಿನಗಳಲ್ಲಿ ಪಕ್ಷವು ನೂತನ ಮುಖ್ಯಮಂತ್ರಿಯನ್ನು ಹೆಸರಿಸಲಿದೆ ಎಂದು ಅವರು ತಿಳಿಸಿದ್ದಾರೆ.

ವಿಡಿಯೊ ನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...