Homeಮುಖಪುಟಕೇಜ್ರಿವಾಲ್ ರಾಜೀನಾಮೆ ಘೋಷಣೆಯನ್ನು 'ಪಿಆರ್ ಸ್ಟಂಟ್' ಎಂದು ಕರೆದ ಬಿಜೆಪಿ

ಕೇಜ್ರಿವಾಲ್ ರಾಜೀನಾಮೆ ಘೋಷಣೆಯನ್ನು ‘ಪಿಆರ್ ಸ್ಟಂಟ್’ ಎಂದು ಕರೆದ ಬಿಜೆಪಿ

- Advertisement -
- Advertisement -

ಎರಡು ದಿನಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಮಾಡಿದ ಘೋಷಣೆಯನ್ನು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಅವರು ‘ಪಿಆರ್ ಸ್ಟಂಟ್’ ಎಂದು ಹೇಳಿದ್ದಾರೆ. ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಧಾನ ಕಚೇರಿಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುವಾಗ ಕೇಜ್ರಿವಾಲ್ ಅವರು ತಮ್ಮ ರಾಜೀನಾಮೆ ನಿರ್ಧಾರ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸುದ್ದಿ ಸಂಸ್ಥೆ ANI ಯೊಂದಿಗೆ ಭಾನುವಾರ ಮಾತನಾಡಿದ ಭಂಡಾರಿ,“ಇದು ಅರವಿಂದ್ ಕೇಜ್ರಿವಾಲ್ ಅವರ PR ಸ್ಟಂಟ್. ದೆಹಲಿಯ ಜನರಲ್ಲಿ ಅವರ ಇಮೇಜ್ ಪ್ರಾಮಾಣಿಕ ನಾಯಕನದ್ದಲ್ಲ, ಭ್ರಷ್ಟ ನಾಯಕನದು ಎಂದು ಅವರು ಅರ್ಥಮಾಡಿಕೊಂಡಿದ್ದಾರೆ. ಇಂದು ಆಮ್ ಆದ್ಮಿ ಪಕ್ಷವು ದೇಶಾದ್ಯಂತ ಭ್ರಷ್ಟ ಪಕ್ಷವೆಂದು ಗುರುತಿಸಲ್ಪಟ್ಟಿದೆ. ಅವರ ಈ PR ಸ್ಟಂಟ್ ಅಡಿಯಲ್ಲಿ, ಅವರು ತಮ್ಮ ಇಮೇಜ್ ಅನ್ನು ಪುನಃಸ್ಥಾಪಿಸಲು ಬಯಸುತ್ತಿದ್ದಾರೆ” ಎಂದು ಭಂಡಾರಿ ಹೇಳಿದ್ದಾರೆ.

ಇದನ್ನೂಓದಿ: ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದವರು ಈಗ ಬಿಜೆಪಿ ಜೊತೆ ಸೇರಿದ್ದಾರೆ: ಫಾರೂಕ್ ಅಬ್ದುಲ್ಲಾ

ಕೇಜ್ರಿವಾಲ್ ಅವರ ತಂತ್ರವು ಅವರು ‘ಸೋನಿಯಾ ಗಾಂಧಿ ಮಾದರಿ’ಯದ್ದಾಗಿದ್ದು, ಅಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ‘ಡಮ್ಮಿ’ ನಾಯಕನ ಮೂಲಕ ಅಂದಿನ ಸರ್ಕಾರವನ್ನು ನಿಯಂತ್ರಿಸುತ್ತಿದ್ದರು ಎಂದು ಭಂಡಾರಿ ಹೇಳಿದ್ದಾರೆ. “ಅವರು ಸೋನಿಯಾ ಗಾಂಧಿ ಮಾದರಿಯನ್ನು ಅನ್ವಯಿಸಲು ಬಯಸುತ್ತಾರೆ ಎಂಬುದು ಸ್ಪಷ್ಟವಾಗಿದೆ. ಅಲ್ಲಿ ಅವರು ಮನಮೋಹನ್ ಸಿಂಗ್ ಅವರನ್ನು ಡಮ್ಮಿ ಪ್ರಧಾನಿಯನ್ನಾಗಿ ಮಾಡಿದರು ಮತ್ತು ತೆರೆಮರೆಯಲ್ಲಿ ಸರ್ಕಾರವನ್ನು ನಡೆಸಿದರು” ಎಂದು ಭಂಡಾರಿ ಹೇಳಿದ್ದಾರೆ.

“ದೆಹಲಿಯಲ್ಲಿ ಎಎಪಿಗೆ ತನ್ನ ಬೆಂಬಲ ಕ್ಷೀಣಿಸುತ್ತಿರುವ ಬಗ್ಗೆ ತಿಳಿದಿದೆ. ಆಮ್ ಆದ್ಮಿ ಪಕ್ಷವು ದೆಹಲಿ ಚುನಾವಣೆಯಲ್ಲಿ ಸೋಲುತ್ತಿದೆ ಮತ್ತು ದೆಹಲಿಯ ಜನರು ತಮ್ಮ ಹೆಸರಿನಲ್ಲಿ ಮತ ಚಲಾಯಿಸಲು ಸಾಧ್ಯವಿಲ್ಲ ಎಂದು ಅವರು ಇಂದು ಅರ್ಥಮಾಡಿಕೊಂಡಿದ್ದಾರೆ. ಹಾಗಾಗಿ ಬೇರೊಬ್ಬರನ್ನು ಬಲಿಪಶು ಮಾಡಲು ಅವರು ಬಯಸುತ್ತಿದ್ದಾರೆ” ಎಂದು ಭಂಡಾರಿ ಹೇಳಿದ್ದಾರೆ.

ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಸುಪ್ರಿಂಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಅವರು ಮುಂದಿನ 2 ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭಾನುವಾರ ಹೇಳಿದ್ದಾರೆ. ಒಂದೆರಡು ದಿನಗಳಲ್ಲಿ ಪಕ್ಷವು ನೂತನ ಮುಖ್ಯಮಂತ್ರಿಯನ್ನು ಹೆಸರಿಸಲಿದೆ ಎಂದು ಅವರು ತಿಳಿಸಿದ್ದಾರೆ.

ವಿಡಿಯೊ ನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...