Homeಮುಖಪುಟಮೋದಿ-ಶಾಗೆ ಕೇಜ್ರಿವಾಲ್ ಈ ಬಾರಿ ಎಂದಿಗಿಂತಲೂ ಹೆಚ್ಚು ಅಪಾಯಕಾರಿ...

ಮೋದಿ-ಶಾಗೆ ಕೇಜ್ರಿವಾಲ್ ಈ ಬಾರಿ ಎಂದಿಗಿಂತಲೂ ಹೆಚ್ಚು ಅಪಾಯಕಾರಿ…

- Advertisement -
- Advertisement -

– ಅಶುತೋಷ್

ಅನುವಾದ: ನಿಖಿಲ್ ಕೋಲ್ಪೆ

ಕೃಪೆ: NDTV

ಅರವಿಂದ ಕೇಜ್ರಿವಾಲ್ ಅವರು ನರೇಂದ್ರ ಮೋದಿ ಮತ್ತು ಅಮಿತ್ ಶಾಗೆ ಕಬ್ಬಿಣದ ಕಡಲೆಯಾಗಿದ್ದಾರೆ. ಹಿಂದೂತ್ವ ಅಜೆಂಡಾದ ಹಿಂಸಾತ್ಮಕ ಪ್ರತಿಪಾದನೆಯ ಬಳಿಕವೂ ಮೋದಿ ಮ್ಯಾಜಿಕ್ ಕಳೆಗುಂದುತ್ತಿದೆ ಎಂಬುದನ್ನು ದಿಲ್ಲಿಗಾಗಿ ನಡೆಯುತ್ತಿರುವ ಕದನ ಇನ್ನಷ್ಟು ಸ್ಪಷ್ಟವಾಗಿ ತೋರಿಸಿಕೊಡಲಿದೆ.

ಕೇಜ್ರಿವಾಲ್ ಐದು ವರ್ಷಗಳ ಹಿಂದೆ ಇದ್ದಂತಹ ವರ್ಚಸ್ಸನ್ನು ಈಗಲೂ ಉಳಿಸಿಕೊಂಡಿದ್ದಾರೆಂದು ಹೇಳುವಂತಿಲ್ಲ. ಆಗ ಅವರು ರಾಜಕೀಯವಾಗಿ ಎಳಸಾಗಿದ್ದರು. ಆದರೆ, ಎಳಸಾಗಿದ್ದರು, ದಪ್ಪ ಚರ್ಮದ ರಾಜಕಾರಣಿ ಆಗಿಲ್ಲದಿದ್ದರಿಂದಲೇ ಜನರು ಅವರನ್ನು ನಂಬಿದ್ದರು. ಅವರು ರಾಜಕೀಯವನ್ನು ಪ್ರವೇಶಿಸಿಯೂ, ರಾಜಕೀಯ ಮಾಡದೆ, ರಾಜಕೀಯವನ್ನು ಬದಲಿಸಲು ಬಯಸುವ ವ್ಯಕ್ತಿಯಾಗಿ ಜನರು ಅವರನ್ನು ಕಂಡಿದ್ದರು. ಕಳೆದ ಐದು ವರ್ಷಗಳಲ್ಲಿ ಅವರು ಆದರ್ಶವಾದಿಯಿಂದ, ಅರಾಜಕತಾವಾದಿಯಾಗಿ, ಇದೀಗ ವಾಸ್ತವವಾದಿ ರಾಜಕಾರಣಿಯಾಗಿ ರೂಪಾಂತರಗೊಂಡಿದ್ದಾರೆ.

ಯಾರಾದರೂ ಕೇಜ್ರಿವಾಲ್ ಅವರು ತನ್ನ ವರ್ಚಸ್ಸನ್ನು, ಮತದಾರರ ಆಕರ್ಷಣೆಯನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ ಎಂದು ಭಾವಿಸಿದರೆ ಅವರು ಮೂರ್ಖರ ಲೋಕದಲ್ಲಿದ್ದಾರೆ ಎಂದರ್ಥ. ಅವರು ಅಖಿಲ ಭಾರತ ಮಟ್ಟದಲ್ಲಿ ಮತದಾರರನ್ನು ಓಲೈಸಲು ಸಾಧ್ಯವಾಗದೇ ಇರಬಹುದು ಆದರೆ, ದಿಲ್ಲಿಯ ಮಟ್ಟಿಗೆ ಅವರೇ ನಂಬರ್ ವನ್. ಅವರ ನಾಯಕತ್ವದಲ್ಲಿ ಕಳೆದ ಎರಡು ವರ್ಷಗಳಲ್ಲಿ ಸ್ಪರ್ಧಿಸಿದ ಯಾವುದೇ ರೀತಿಯ ಚುನಾವಣೆಯಲ್ಲಿ ಆಪ್ ಮಹಾನ್ ಸಾಧನೆ ಮಾಡಿಲ್ಲ ಎಂಬುದು ಅಲ್ಲಗೆಳೆಯಲಾಗದ ಸತ್ಯ.

ಅವರ ಪಕ್ಷಕ್ಕೆ ಹರ್ಯಾಣ, ಜಾರ್ಖಂಡ್, ಮಧ್ಯಪ್ರದೇಶ, ಛತ್ತೀಸ್‌ಘಡ್ ಮತ್ತು ರಾಜಸ್ಥಾನದ ಚುನಾವಣೆಯಲ್ಲಿ ಒಂದು ಶೇಕಡಾ ಮತವನ್ನೂ ಗಳಿಸಲು ಸಾಧ್ಯವಾಗಿಲ್ಲ. ಅವರ ಪಕ್ಷವು ದಿಲ್ಲಿಯಲ್ಲಿ ಸಂಸದೀಯ ಚುನಾವಣೆಯ ವೇಳೆಯೂ ದಯನೀಯವಾಗಿ ಸೋತಿತ್ತು ಮತ್ತು ಗಳಿಸಿದ ಮತಗಳ ಲೆಕ್ಕದಲ್ಲೂ ಅದು ಮೂರನೇ ಸ್ಥಾನದಲ್ಲಿತ್ತು. ಕಾಂಗ್ರೆಸ್ ಕೂಡಾ ಅದಕ್ಕಿಂತ ಹೆಚ್ಚು ಮತಗಳನ್ನು ಗಳಿಸಿತ್ತು. ಆಪ್ 2017ರಲ್ಲಿ ನಡೆದ ದಿಲ್ಲಿ ಮುನಿಸಿಪಲ್ ಚುನಾವಣೆಗಳಲ್ಲೂ ಕೆಟ್ಟದಾಗಿ ಸೋತಿತ್ತು. ಆದರೆ, ದಿಲ್ಲಿ ವಿಧಾನಸಭಾ ಚುನಾವಣೆಯ ವಿಷಯ ಬೇರೆಯೇ ತರದ ಆಟ.

ಆಪ್ ಭವಿಷ್ಯ ನಿರ್ಧರಿಸಲಿರುವ ಮೂರು ವಿಷಯಗಳು:

ಮೊದಲನೆಯದು, ದಿಲ್ಲಿಯಲ್ಲಿ ಮೋದಿಯಂತೆಯೇ ಕೇಜ್ರಿವಾಲ್‌ರಿಗೂ ಯಾರೂ ಎದುರಾಳಿಗಳಿಲ್ಲ. 2019ರ ಸಂಸದೀಯ ಚುನಾವಣೆಗಳ ವೇಳೆ ಮೋದಿ ಉಳಿದವರಿಗಿಂತ ಸ್ವಲ್ಪ ಎತ್ತರವಾಗಿಯೇ ಕಾಣುತ್ತಿದ್ದರು. ದಿಲ್ಲಿಯಲ್ಲಿ ಬಿಜೆಪಿ ನಾಯಕತ್ವರಹಿತವಾಗಿದೆ. ಮನೋಜ್ ತಿವಾರಿ, ವಿಜಯ್ ಗೋಯಲ್, ಹರ್ಷವರ್ಧನ್ ಮತ್ತಿತರರು ಕೇಜ್ರಿವಾಲ್‌ರಿಗೆ ಸರಿಸಾಟಿಯೇ ಅಲ್ಲ. ಅವರಿಗೆ ವರ್ಚಸ್ಸು ಅಥವಾ ಸಾಮಾಜಿಕ ನೆಲೆಯೇ ಇಲ್ಲ. ದಿಲ್ಲಿಯಲ್ಲಿ ಮೇಲು ಮತ್ತು ಮಧ್ಯಮ ವರ್ಗದವರು ಕೇಜ್ರಿವಾಲ್ ಬಗ್ಗೆ ಭ್ರಮನಿರಸನಗೊಂಡಿರಬಹುದು. ಆದರೆ, ಅವರು ಕೆಳಮಧ್ಯಮ ಮತ್ತು ಬಡಜನರು ಮತ್ತು ಆ ನಡುವೆ ಬದುಕುವ ಜನರ ಕಣ್ಮಣಿಯಾಗಿಯೇ ಉಳಿದಿದ್ದಾರೆ. ಬಿಜೆಪಿ ನಾಯಕರಿಗೆ ವ್ಯತಿರಿಕ್ತವಾಗಿ ಅವರು ಯಾವತ್ತೂ ಕಾಲಿಗೆ ಚಕ್ರ ಕಟ್ಟಿಕೊಂಡಿರುವ ವ್ಯಕ್ತಿ. 2017ರ ಎಪ್ರಿಲ್‌ನಲ್ಲಿ ನಡೆದ ದಿಲ್ಲಿ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಸೋತ ಬಳಿಕ ಅವರು ದಿಲ್ಲಿಯ ಮೂಲೆ ಮೂಲೆಯನ್ನೂ ತಿರುಗಿ ಪ್ರತಿದಿನವೆಂಬತೆ ಚಿಕ್ಕ ದೊಡ್ಡ ಸಭೆಗಳಲ್ಲಿ ಮಾತನಾಡುತ್ತಲೇ ಇದ್ದಾರೆ. ಅವರೀಗ ತನ್ನ ಮಾಂತ್ರಿಕ ಸ್ಪರ್ಶವನ್ನು ಮರಳಿ ಪಡೆದಂತಿದೆ.

ಎರಡನೆಯದಾಗಿ, ದಿಲ್ಲಿಯಲ್ಲಿ ಕಾಂಗ್ರೆಸ್ ಮರಣಶಯ್ಯೆಯಲ್ಲಿದೆ. ಸಂಸದೀಯ ಚುನಾವಣೆಯ ವೇಳೆ ಅದು ಕಳೆದುಕೊಂಡದ್ದನ್ನು ಮರಳಿಪಡೆಯುತ್ತಿರುವಂತೆ ಕಂಡುಬಂದಿತ್ತು. ಸಂಸದೀಯ ಚುನಾವಣೆಯ ವೇಳೆ ಅದು 22 ಶೇಕಡಾ ಮತಗಳನ್ನು ಗಳಿಸಿ, ಅಚ್ಚರಿ ಹುಟ್ಟಿಸುವ ರೀತಿಯಲ್ಲಿ ಬಿಜೆಪಿಯ ಬೆನ್ನಲ್ಲಿ ಎರಡನೇ ಸ್ಥಾನ ಗಳಿಸಿತ್ತು. ಅಲ್ಪಸಂಖ್ಯಾತರ ವಿಚಾರಗಳ ಕುರಿತು ಆಪ್ ಪಕ್ಷದ ಅಸ್ಪಷ್ಟ ನಿಲುವಿನಿಂದಾಗಿ ಮುಸ್ಲಿಮರು ಆಪ್ ಕೈಬಿಟ್ಟು ಕಾಂಗ್ರೆಸ್ ಕೈ ಹಿಡಿದಂತೆ ಕಂಡುಬರುತ್ತಿತ್ತು. ಆದರೆ, ಸಂಸದೀಯ ಚುನಾವಣೆಯ ಬಳಿಕ ಕಾಂಗ್ರೆಸ್ ತನ್ನ ಮಾಮೂಲಿ ಗುಂಪು ಒಳಜಗಳಕ್ಕೆ ಮರಳಿತ್ತು. ದಿಲ್ಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಸಾವು ಮತ್ತು ಪಕ್ಷಾಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ಕಾಂಗ್ರೆಸ್ ಪಕ್ಷವನ್ನು ಕೆಟ್ಟದಾಗಿ ಬಾಧಿಸಿದೆ. ನಾಯಕರಿಲ್ಲದೇ ಪಕ್ಷವು ತಿಂಗಳುಗಳ ಕಾಲ ನಾವಿಕನಿಲ್ಲದ ನಾವೆಯಂತೆ ತಿರುಗುತ್ತಿತ್ತು. ಆಪ್ ಮತ್ತು ಕಾಂಗ್ರೆಸ್ ದಿಲ್ಲಿಯಲ್ಲಿ ಹೊಂದಿರುವುದು ಒಂದೇ ಸಾಮಾಜಿಕ ನೆಲೆಗಟ್ಟನ್ನು. ಕಾಂಗ್ರೆಸ್ ಎದ್ದರೆ ಆಪ್ ಮುಳುಗುತ್ತದೆ. ಕಂಗೆಟ್ಟ ಕಾಂಗ್ರೆಸ್ ಆಪ್ ಪಕ್ಷಕ್ಕೆ ಮತ್ತು ಕೇಜ್ರಿವಾಲ್‌ಗೆ ವರ. ಈಗ ಬಿಜೆಪಿ ವಿರುದ್ಧ ಮತಗಳು ವಿಭಜನೆಯಾಗುವ ಯಾವುದೇ ಸಾಧ್ಯತೆಯಿಲ್ಲ.

ಮೂರನೆಯದಾಗಿ ಎಲ್ಲಾ ದೌರ್ಬಲ್ಯಗಳ ಹೊರತಾಗಿ ಆಪ್ ಸರಕಾರ ತನ್ನ ಭರವಸೆಗಳಿಗಾಗಿ ಕೆಲಸ ಮಾಡುತ್ತಾ, ಅವುಗಳನ್ನು ಈಡೇರಿಸುತ್ತಿರುವಂತೆ ಕಾಣುತ್ತಿದೆ. ಈ ಚುನಾವಣೆಗೆ ಮುಂಚಿತವಾಗಿ ಆಪ್ ಸರಕಾರವು ಜನರಿಗೆ ಉಚಿತವಾದ ಕೊಡುಗೆಗಳನ್ನು ನೀಡುತ್ತಿದೆ. ಇವುಗಳಲ್ಲಿ ಆಪ್ ಸರಕಾರದ ಪರವಾಗಿ ವಾಲುತ್ತಿರುವುದು ಬಡವರಿಗೆ ಉಚಿತ ವಿದ್ಯುತ್ ಮತ್ತು ಅರ್ಧ ದರದಲ್ಲಿ ನೀರು ನೀಡಿದೆ. ಇದು ದಿಲ್ಲಿಯ 80 ಶೇಕಡಾ ಜನರಿಗೆ ಅನುಕೂಲವಾಗುತ್ತಿದೆ. ಈ ಸತ್ಯದ ಬಗ್ಗೆ ಜನರು ಕುರುಡಾಗಿಲ್ಲ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಈತ ಮಾಡಿದ ಸಾಧನೆ ವಿರೋಧಿಗಳ ಬಾಯಿಯನ್ನೂ ಮುಚ್ಚಿಸಿದೆ. ಸರಕಾರಿ ಶಾಲೆಗಳು ಹೇಗೆ ಪರಿವರ್ತನೆ ಹೊಂದಿವೆ ಎಂಬದೇ ಮತದಾರರ ಯೋಚನೆಯ ದಿಕ್ಕು ಬದಲಿಸಿದೆ!

ಇಲ್ಲಿ ನಾಲ್ಕನೇ ಅಂಶವೊಂದಿದೆ. ಅದೆಂದರೆ, ಕೇಜ್ರಿವಾಲ್ ಮೌನ. 2015ರ ಭಾರೀ ಗೆಲುವಿನ ನಂತರ ಈ ಕೇಜ್ರಿವಾಲ್ ಆಕ್ರಮಣಕಾರಿಯಾಗಿ ಮೋದಿಯನ್ನು ಎದುರಿಸಿದ್ದರು. ಅದನ್ನು ಮೋದಿ ನೆಗೆಟಿವಾಗಿ ಬಳಸಿದ್ದರು. ಆದರೆ, ಈ ಬಾರಿ ಅವರ ಮೌನ ಮೋದಿಗೆ ಯಾವುದೇ ಅಸ್ತ್ರ ಒದಗಿಸುತ್ತಿಲ್ಲ. ಈ ಎಲ್ಲಾ ಕಾರಣಗಳಿಂದ ಕೇಜ್ರಿವಾಲ್ ಈ ಚುನಾವಣೆಯಲ್ಲಿ ಬಿಜೆಪಿಗೆ ಕಬ್ಬಿಣದ ಕಡಲೆಯಾಗಿದ್ದಾರೆ ಮತ್ತು ಹಿಂದೆಂದಿಗಿಂತಲೂ ಹೆಚ್ಚು ಅಪಾಯಕಾರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...