Homeಮುಖಪುಟಮೋದಿ-ಶಾಗೆ ಕೇಜ್ರಿವಾಲ್ ಈ ಬಾರಿ ಎಂದಿಗಿಂತಲೂ ಹೆಚ್ಚು ಅಪಾಯಕಾರಿ...

ಮೋದಿ-ಶಾಗೆ ಕೇಜ್ರಿವಾಲ್ ಈ ಬಾರಿ ಎಂದಿಗಿಂತಲೂ ಹೆಚ್ಚು ಅಪಾಯಕಾರಿ…

- Advertisement -
- Advertisement -

– ಅಶುತೋಷ್

ಅನುವಾದ: ನಿಖಿಲ್ ಕೋಲ್ಪೆ

ಕೃಪೆ: NDTV

ಅರವಿಂದ ಕೇಜ್ರಿವಾಲ್ ಅವರು ನರೇಂದ್ರ ಮೋದಿ ಮತ್ತು ಅಮಿತ್ ಶಾಗೆ ಕಬ್ಬಿಣದ ಕಡಲೆಯಾಗಿದ್ದಾರೆ. ಹಿಂದೂತ್ವ ಅಜೆಂಡಾದ ಹಿಂಸಾತ್ಮಕ ಪ್ರತಿಪಾದನೆಯ ಬಳಿಕವೂ ಮೋದಿ ಮ್ಯಾಜಿಕ್ ಕಳೆಗುಂದುತ್ತಿದೆ ಎಂಬುದನ್ನು ದಿಲ್ಲಿಗಾಗಿ ನಡೆಯುತ್ತಿರುವ ಕದನ ಇನ್ನಷ್ಟು ಸ್ಪಷ್ಟವಾಗಿ ತೋರಿಸಿಕೊಡಲಿದೆ.

ಕೇಜ್ರಿವಾಲ್ ಐದು ವರ್ಷಗಳ ಹಿಂದೆ ಇದ್ದಂತಹ ವರ್ಚಸ್ಸನ್ನು ಈಗಲೂ ಉಳಿಸಿಕೊಂಡಿದ್ದಾರೆಂದು ಹೇಳುವಂತಿಲ್ಲ. ಆಗ ಅವರು ರಾಜಕೀಯವಾಗಿ ಎಳಸಾಗಿದ್ದರು. ಆದರೆ, ಎಳಸಾಗಿದ್ದರು, ದಪ್ಪ ಚರ್ಮದ ರಾಜಕಾರಣಿ ಆಗಿಲ್ಲದಿದ್ದರಿಂದಲೇ ಜನರು ಅವರನ್ನು ನಂಬಿದ್ದರು. ಅವರು ರಾಜಕೀಯವನ್ನು ಪ್ರವೇಶಿಸಿಯೂ, ರಾಜಕೀಯ ಮಾಡದೆ, ರಾಜಕೀಯವನ್ನು ಬದಲಿಸಲು ಬಯಸುವ ವ್ಯಕ್ತಿಯಾಗಿ ಜನರು ಅವರನ್ನು ಕಂಡಿದ್ದರು. ಕಳೆದ ಐದು ವರ್ಷಗಳಲ್ಲಿ ಅವರು ಆದರ್ಶವಾದಿಯಿಂದ, ಅರಾಜಕತಾವಾದಿಯಾಗಿ, ಇದೀಗ ವಾಸ್ತವವಾದಿ ರಾಜಕಾರಣಿಯಾಗಿ ರೂಪಾಂತರಗೊಂಡಿದ್ದಾರೆ.

ಯಾರಾದರೂ ಕೇಜ್ರಿವಾಲ್ ಅವರು ತನ್ನ ವರ್ಚಸ್ಸನ್ನು, ಮತದಾರರ ಆಕರ್ಷಣೆಯನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ ಎಂದು ಭಾವಿಸಿದರೆ ಅವರು ಮೂರ್ಖರ ಲೋಕದಲ್ಲಿದ್ದಾರೆ ಎಂದರ್ಥ. ಅವರು ಅಖಿಲ ಭಾರತ ಮಟ್ಟದಲ್ಲಿ ಮತದಾರರನ್ನು ಓಲೈಸಲು ಸಾಧ್ಯವಾಗದೇ ಇರಬಹುದು ಆದರೆ, ದಿಲ್ಲಿಯ ಮಟ್ಟಿಗೆ ಅವರೇ ನಂಬರ್ ವನ್. ಅವರ ನಾಯಕತ್ವದಲ್ಲಿ ಕಳೆದ ಎರಡು ವರ್ಷಗಳಲ್ಲಿ ಸ್ಪರ್ಧಿಸಿದ ಯಾವುದೇ ರೀತಿಯ ಚುನಾವಣೆಯಲ್ಲಿ ಆಪ್ ಮಹಾನ್ ಸಾಧನೆ ಮಾಡಿಲ್ಲ ಎಂಬುದು ಅಲ್ಲಗೆಳೆಯಲಾಗದ ಸತ್ಯ.

ಅವರ ಪಕ್ಷಕ್ಕೆ ಹರ್ಯಾಣ, ಜಾರ್ಖಂಡ್, ಮಧ್ಯಪ್ರದೇಶ, ಛತ್ತೀಸ್‌ಘಡ್ ಮತ್ತು ರಾಜಸ್ಥಾನದ ಚುನಾವಣೆಯಲ್ಲಿ ಒಂದು ಶೇಕಡಾ ಮತವನ್ನೂ ಗಳಿಸಲು ಸಾಧ್ಯವಾಗಿಲ್ಲ. ಅವರ ಪಕ್ಷವು ದಿಲ್ಲಿಯಲ್ಲಿ ಸಂಸದೀಯ ಚುನಾವಣೆಯ ವೇಳೆಯೂ ದಯನೀಯವಾಗಿ ಸೋತಿತ್ತು ಮತ್ತು ಗಳಿಸಿದ ಮತಗಳ ಲೆಕ್ಕದಲ್ಲೂ ಅದು ಮೂರನೇ ಸ್ಥಾನದಲ್ಲಿತ್ತು. ಕಾಂಗ್ರೆಸ್ ಕೂಡಾ ಅದಕ್ಕಿಂತ ಹೆಚ್ಚು ಮತಗಳನ್ನು ಗಳಿಸಿತ್ತು. ಆಪ್ 2017ರಲ್ಲಿ ನಡೆದ ದಿಲ್ಲಿ ಮುನಿಸಿಪಲ್ ಚುನಾವಣೆಗಳಲ್ಲೂ ಕೆಟ್ಟದಾಗಿ ಸೋತಿತ್ತು. ಆದರೆ, ದಿಲ್ಲಿ ವಿಧಾನಸಭಾ ಚುನಾವಣೆಯ ವಿಷಯ ಬೇರೆಯೇ ತರದ ಆಟ.

ಆಪ್ ಭವಿಷ್ಯ ನಿರ್ಧರಿಸಲಿರುವ ಮೂರು ವಿಷಯಗಳು:

ಮೊದಲನೆಯದು, ದಿಲ್ಲಿಯಲ್ಲಿ ಮೋದಿಯಂತೆಯೇ ಕೇಜ್ರಿವಾಲ್‌ರಿಗೂ ಯಾರೂ ಎದುರಾಳಿಗಳಿಲ್ಲ. 2019ರ ಸಂಸದೀಯ ಚುನಾವಣೆಗಳ ವೇಳೆ ಮೋದಿ ಉಳಿದವರಿಗಿಂತ ಸ್ವಲ್ಪ ಎತ್ತರವಾಗಿಯೇ ಕಾಣುತ್ತಿದ್ದರು. ದಿಲ್ಲಿಯಲ್ಲಿ ಬಿಜೆಪಿ ನಾಯಕತ್ವರಹಿತವಾಗಿದೆ. ಮನೋಜ್ ತಿವಾರಿ, ವಿಜಯ್ ಗೋಯಲ್, ಹರ್ಷವರ್ಧನ್ ಮತ್ತಿತರರು ಕೇಜ್ರಿವಾಲ್‌ರಿಗೆ ಸರಿಸಾಟಿಯೇ ಅಲ್ಲ. ಅವರಿಗೆ ವರ್ಚಸ್ಸು ಅಥವಾ ಸಾಮಾಜಿಕ ನೆಲೆಯೇ ಇಲ್ಲ. ದಿಲ್ಲಿಯಲ್ಲಿ ಮೇಲು ಮತ್ತು ಮಧ್ಯಮ ವರ್ಗದವರು ಕೇಜ್ರಿವಾಲ್ ಬಗ್ಗೆ ಭ್ರಮನಿರಸನಗೊಂಡಿರಬಹುದು. ಆದರೆ, ಅವರು ಕೆಳಮಧ್ಯಮ ಮತ್ತು ಬಡಜನರು ಮತ್ತು ಆ ನಡುವೆ ಬದುಕುವ ಜನರ ಕಣ್ಮಣಿಯಾಗಿಯೇ ಉಳಿದಿದ್ದಾರೆ. ಬಿಜೆಪಿ ನಾಯಕರಿಗೆ ವ್ಯತಿರಿಕ್ತವಾಗಿ ಅವರು ಯಾವತ್ತೂ ಕಾಲಿಗೆ ಚಕ್ರ ಕಟ್ಟಿಕೊಂಡಿರುವ ವ್ಯಕ್ತಿ. 2017ರ ಎಪ್ರಿಲ್‌ನಲ್ಲಿ ನಡೆದ ದಿಲ್ಲಿ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಸೋತ ಬಳಿಕ ಅವರು ದಿಲ್ಲಿಯ ಮೂಲೆ ಮೂಲೆಯನ್ನೂ ತಿರುಗಿ ಪ್ರತಿದಿನವೆಂಬತೆ ಚಿಕ್ಕ ದೊಡ್ಡ ಸಭೆಗಳಲ್ಲಿ ಮಾತನಾಡುತ್ತಲೇ ಇದ್ದಾರೆ. ಅವರೀಗ ತನ್ನ ಮಾಂತ್ರಿಕ ಸ್ಪರ್ಶವನ್ನು ಮರಳಿ ಪಡೆದಂತಿದೆ.

ಎರಡನೆಯದಾಗಿ, ದಿಲ್ಲಿಯಲ್ಲಿ ಕಾಂಗ್ರೆಸ್ ಮರಣಶಯ್ಯೆಯಲ್ಲಿದೆ. ಸಂಸದೀಯ ಚುನಾವಣೆಯ ವೇಳೆ ಅದು ಕಳೆದುಕೊಂಡದ್ದನ್ನು ಮರಳಿಪಡೆಯುತ್ತಿರುವಂತೆ ಕಂಡುಬಂದಿತ್ತು. ಸಂಸದೀಯ ಚುನಾವಣೆಯ ವೇಳೆ ಅದು 22 ಶೇಕಡಾ ಮತಗಳನ್ನು ಗಳಿಸಿ, ಅಚ್ಚರಿ ಹುಟ್ಟಿಸುವ ರೀತಿಯಲ್ಲಿ ಬಿಜೆಪಿಯ ಬೆನ್ನಲ್ಲಿ ಎರಡನೇ ಸ್ಥಾನ ಗಳಿಸಿತ್ತು. ಅಲ್ಪಸಂಖ್ಯಾತರ ವಿಚಾರಗಳ ಕುರಿತು ಆಪ್ ಪಕ್ಷದ ಅಸ್ಪಷ್ಟ ನಿಲುವಿನಿಂದಾಗಿ ಮುಸ್ಲಿಮರು ಆಪ್ ಕೈಬಿಟ್ಟು ಕಾಂಗ್ರೆಸ್ ಕೈ ಹಿಡಿದಂತೆ ಕಂಡುಬರುತ್ತಿತ್ತು. ಆದರೆ, ಸಂಸದೀಯ ಚುನಾವಣೆಯ ಬಳಿಕ ಕಾಂಗ್ರೆಸ್ ತನ್ನ ಮಾಮೂಲಿ ಗುಂಪು ಒಳಜಗಳಕ್ಕೆ ಮರಳಿತ್ತು. ದಿಲ್ಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಸಾವು ಮತ್ತು ಪಕ್ಷಾಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ಕಾಂಗ್ರೆಸ್ ಪಕ್ಷವನ್ನು ಕೆಟ್ಟದಾಗಿ ಬಾಧಿಸಿದೆ. ನಾಯಕರಿಲ್ಲದೇ ಪಕ್ಷವು ತಿಂಗಳುಗಳ ಕಾಲ ನಾವಿಕನಿಲ್ಲದ ನಾವೆಯಂತೆ ತಿರುಗುತ್ತಿತ್ತು. ಆಪ್ ಮತ್ತು ಕಾಂಗ್ರೆಸ್ ದಿಲ್ಲಿಯಲ್ಲಿ ಹೊಂದಿರುವುದು ಒಂದೇ ಸಾಮಾಜಿಕ ನೆಲೆಗಟ್ಟನ್ನು. ಕಾಂಗ್ರೆಸ್ ಎದ್ದರೆ ಆಪ್ ಮುಳುಗುತ್ತದೆ. ಕಂಗೆಟ್ಟ ಕಾಂಗ್ರೆಸ್ ಆಪ್ ಪಕ್ಷಕ್ಕೆ ಮತ್ತು ಕೇಜ್ರಿವಾಲ್‌ಗೆ ವರ. ಈಗ ಬಿಜೆಪಿ ವಿರುದ್ಧ ಮತಗಳು ವಿಭಜನೆಯಾಗುವ ಯಾವುದೇ ಸಾಧ್ಯತೆಯಿಲ್ಲ.

ಮೂರನೆಯದಾಗಿ ಎಲ್ಲಾ ದೌರ್ಬಲ್ಯಗಳ ಹೊರತಾಗಿ ಆಪ್ ಸರಕಾರ ತನ್ನ ಭರವಸೆಗಳಿಗಾಗಿ ಕೆಲಸ ಮಾಡುತ್ತಾ, ಅವುಗಳನ್ನು ಈಡೇರಿಸುತ್ತಿರುವಂತೆ ಕಾಣುತ್ತಿದೆ. ಈ ಚುನಾವಣೆಗೆ ಮುಂಚಿತವಾಗಿ ಆಪ್ ಸರಕಾರವು ಜನರಿಗೆ ಉಚಿತವಾದ ಕೊಡುಗೆಗಳನ್ನು ನೀಡುತ್ತಿದೆ. ಇವುಗಳಲ್ಲಿ ಆಪ್ ಸರಕಾರದ ಪರವಾಗಿ ವಾಲುತ್ತಿರುವುದು ಬಡವರಿಗೆ ಉಚಿತ ವಿದ್ಯುತ್ ಮತ್ತು ಅರ್ಧ ದರದಲ್ಲಿ ನೀರು ನೀಡಿದೆ. ಇದು ದಿಲ್ಲಿಯ 80 ಶೇಕಡಾ ಜನರಿಗೆ ಅನುಕೂಲವಾಗುತ್ತಿದೆ. ಈ ಸತ್ಯದ ಬಗ್ಗೆ ಜನರು ಕುರುಡಾಗಿಲ್ಲ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಈತ ಮಾಡಿದ ಸಾಧನೆ ವಿರೋಧಿಗಳ ಬಾಯಿಯನ್ನೂ ಮುಚ್ಚಿಸಿದೆ. ಸರಕಾರಿ ಶಾಲೆಗಳು ಹೇಗೆ ಪರಿವರ್ತನೆ ಹೊಂದಿವೆ ಎಂಬದೇ ಮತದಾರರ ಯೋಚನೆಯ ದಿಕ್ಕು ಬದಲಿಸಿದೆ!

ಇಲ್ಲಿ ನಾಲ್ಕನೇ ಅಂಶವೊಂದಿದೆ. ಅದೆಂದರೆ, ಕೇಜ್ರಿವಾಲ್ ಮೌನ. 2015ರ ಭಾರೀ ಗೆಲುವಿನ ನಂತರ ಈ ಕೇಜ್ರಿವಾಲ್ ಆಕ್ರಮಣಕಾರಿಯಾಗಿ ಮೋದಿಯನ್ನು ಎದುರಿಸಿದ್ದರು. ಅದನ್ನು ಮೋದಿ ನೆಗೆಟಿವಾಗಿ ಬಳಸಿದ್ದರು. ಆದರೆ, ಈ ಬಾರಿ ಅವರ ಮೌನ ಮೋದಿಗೆ ಯಾವುದೇ ಅಸ್ತ್ರ ಒದಗಿಸುತ್ತಿಲ್ಲ. ಈ ಎಲ್ಲಾ ಕಾರಣಗಳಿಂದ ಕೇಜ್ರಿವಾಲ್ ಈ ಚುನಾವಣೆಯಲ್ಲಿ ಬಿಜೆಪಿಗೆ ಕಬ್ಬಿಣದ ಕಡಲೆಯಾಗಿದ್ದಾರೆ ಮತ್ತು ಹಿಂದೆಂದಿಗಿಂತಲೂ ಹೆಚ್ಚು ಅಪಾಯಕಾರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...