Homeಮುಖಪುಟಮೋದಿ-ಶಾಗೆ ಕೇಜ್ರಿವಾಲ್ ಈ ಬಾರಿ ಎಂದಿಗಿಂತಲೂ ಹೆಚ್ಚು ಅಪಾಯಕಾರಿ...

ಮೋದಿ-ಶಾಗೆ ಕೇಜ್ರಿವಾಲ್ ಈ ಬಾರಿ ಎಂದಿಗಿಂತಲೂ ಹೆಚ್ಚು ಅಪಾಯಕಾರಿ…

- Advertisement -
- Advertisement -

– ಅಶುತೋಷ್

ಅನುವಾದ: ನಿಖಿಲ್ ಕೋಲ್ಪೆ

ಕೃಪೆ: NDTV

ಅರವಿಂದ ಕೇಜ್ರಿವಾಲ್ ಅವರು ನರೇಂದ್ರ ಮೋದಿ ಮತ್ತು ಅಮಿತ್ ಶಾಗೆ ಕಬ್ಬಿಣದ ಕಡಲೆಯಾಗಿದ್ದಾರೆ. ಹಿಂದೂತ್ವ ಅಜೆಂಡಾದ ಹಿಂಸಾತ್ಮಕ ಪ್ರತಿಪಾದನೆಯ ಬಳಿಕವೂ ಮೋದಿ ಮ್ಯಾಜಿಕ್ ಕಳೆಗುಂದುತ್ತಿದೆ ಎಂಬುದನ್ನು ದಿಲ್ಲಿಗಾಗಿ ನಡೆಯುತ್ತಿರುವ ಕದನ ಇನ್ನಷ್ಟು ಸ್ಪಷ್ಟವಾಗಿ ತೋರಿಸಿಕೊಡಲಿದೆ.

ಕೇಜ್ರಿವಾಲ್ ಐದು ವರ್ಷಗಳ ಹಿಂದೆ ಇದ್ದಂತಹ ವರ್ಚಸ್ಸನ್ನು ಈಗಲೂ ಉಳಿಸಿಕೊಂಡಿದ್ದಾರೆಂದು ಹೇಳುವಂತಿಲ್ಲ. ಆಗ ಅವರು ರಾಜಕೀಯವಾಗಿ ಎಳಸಾಗಿದ್ದರು. ಆದರೆ, ಎಳಸಾಗಿದ್ದರು, ದಪ್ಪ ಚರ್ಮದ ರಾಜಕಾರಣಿ ಆಗಿಲ್ಲದಿದ್ದರಿಂದಲೇ ಜನರು ಅವರನ್ನು ನಂಬಿದ್ದರು. ಅವರು ರಾಜಕೀಯವನ್ನು ಪ್ರವೇಶಿಸಿಯೂ, ರಾಜಕೀಯ ಮಾಡದೆ, ರಾಜಕೀಯವನ್ನು ಬದಲಿಸಲು ಬಯಸುವ ವ್ಯಕ್ತಿಯಾಗಿ ಜನರು ಅವರನ್ನು ಕಂಡಿದ್ದರು. ಕಳೆದ ಐದು ವರ್ಷಗಳಲ್ಲಿ ಅವರು ಆದರ್ಶವಾದಿಯಿಂದ, ಅರಾಜಕತಾವಾದಿಯಾಗಿ, ಇದೀಗ ವಾಸ್ತವವಾದಿ ರಾಜಕಾರಣಿಯಾಗಿ ರೂಪಾಂತರಗೊಂಡಿದ್ದಾರೆ.

ಯಾರಾದರೂ ಕೇಜ್ರಿವಾಲ್ ಅವರು ತನ್ನ ವರ್ಚಸ್ಸನ್ನು, ಮತದಾರರ ಆಕರ್ಷಣೆಯನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ ಎಂದು ಭಾವಿಸಿದರೆ ಅವರು ಮೂರ್ಖರ ಲೋಕದಲ್ಲಿದ್ದಾರೆ ಎಂದರ್ಥ. ಅವರು ಅಖಿಲ ಭಾರತ ಮಟ್ಟದಲ್ಲಿ ಮತದಾರರನ್ನು ಓಲೈಸಲು ಸಾಧ್ಯವಾಗದೇ ಇರಬಹುದು ಆದರೆ, ದಿಲ್ಲಿಯ ಮಟ್ಟಿಗೆ ಅವರೇ ನಂಬರ್ ವನ್. ಅವರ ನಾಯಕತ್ವದಲ್ಲಿ ಕಳೆದ ಎರಡು ವರ್ಷಗಳಲ್ಲಿ ಸ್ಪರ್ಧಿಸಿದ ಯಾವುದೇ ರೀತಿಯ ಚುನಾವಣೆಯಲ್ಲಿ ಆಪ್ ಮಹಾನ್ ಸಾಧನೆ ಮಾಡಿಲ್ಲ ಎಂಬುದು ಅಲ್ಲಗೆಳೆಯಲಾಗದ ಸತ್ಯ.

ಅವರ ಪಕ್ಷಕ್ಕೆ ಹರ್ಯಾಣ, ಜಾರ್ಖಂಡ್, ಮಧ್ಯಪ್ರದೇಶ, ಛತ್ತೀಸ್‌ಘಡ್ ಮತ್ತು ರಾಜಸ್ಥಾನದ ಚುನಾವಣೆಯಲ್ಲಿ ಒಂದು ಶೇಕಡಾ ಮತವನ್ನೂ ಗಳಿಸಲು ಸಾಧ್ಯವಾಗಿಲ್ಲ. ಅವರ ಪಕ್ಷವು ದಿಲ್ಲಿಯಲ್ಲಿ ಸಂಸದೀಯ ಚುನಾವಣೆಯ ವೇಳೆಯೂ ದಯನೀಯವಾಗಿ ಸೋತಿತ್ತು ಮತ್ತು ಗಳಿಸಿದ ಮತಗಳ ಲೆಕ್ಕದಲ್ಲೂ ಅದು ಮೂರನೇ ಸ್ಥಾನದಲ್ಲಿತ್ತು. ಕಾಂಗ್ರೆಸ್ ಕೂಡಾ ಅದಕ್ಕಿಂತ ಹೆಚ್ಚು ಮತಗಳನ್ನು ಗಳಿಸಿತ್ತು. ಆಪ್ 2017ರಲ್ಲಿ ನಡೆದ ದಿಲ್ಲಿ ಮುನಿಸಿಪಲ್ ಚುನಾವಣೆಗಳಲ್ಲೂ ಕೆಟ್ಟದಾಗಿ ಸೋತಿತ್ತು. ಆದರೆ, ದಿಲ್ಲಿ ವಿಧಾನಸಭಾ ಚುನಾವಣೆಯ ವಿಷಯ ಬೇರೆಯೇ ತರದ ಆಟ.

ಆಪ್ ಭವಿಷ್ಯ ನಿರ್ಧರಿಸಲಿರುವ ಮೂರು ವಿಷಯಗಳು:

ಮೊದಲನೆಯದು, ದಿಲ್ಲಿಯಲ್ಲಿ ಮೋದಿಯಂತೆಯೇ ಕೇಜ್ರಿವಾಲ್‌ರಿಗೂ ಯಾರೂ ಎದುರಾಳಿಗಳಿಲ್ಲ. 2019ರ ಸಂಸದೀಯ ಚುನಾವಣೆಗಳ ವೇಳೆ ಮೋದಿ ಉಳಿದವರಿಗಿಂತ ಸ್ವಲ್ಪ ಎತ್ತರವಾಗಿಯೇ ಕಾಣುತ್ತಿದ್ದರು. ದಿಲ್ಲಿಯಲ್ಲಿ ಬಿಜೆಪಿ ನಾಯಕತ್ವರಹಿತವಾಗಿದೆ. ಮನೋಜ್ ತಿವಾರಿ, ವಿಜಯ್ ಗೋಯಲ್, ಹರ್ಷವರ್ಧನ್ ಮತ್ತಿತರರು ಕೇಜ್ರಿವಾಲ್‌ರಿಗೆ ಸರಿಸಾಟಿಯೇ ಅಲ್ಲ. ಅವರಿಗೆ ವರ್ಚಸ್ಸು ಅಥವಾ ಸಾಮಾಜಿಕ ನೆಲೆಯೇ ಇಲ್ಲ. ದಿಲ್ಲಿಯಲ್ಲಿ ಮೇಲು ಮತ್ತು ಮಧ್ಯಮ ವರ್ಗದವರು ಕೇಜ್ರಿವಾಲ್ ಬಗ್ಗೆ ಭ್ರಮನಿರಸನಗೊಂಡಿರಬಹುದು. ಆದರೆ, ಅವರು ಕೆಳಮಧ್ಯಮ ಮತ್ತು ಬಡಜನರು ಮತ್ತು ಆ ನಡುವೆ ಬದುಕುವ ಜನರ ಕಣ್ಮಣಿಯಾಗಿಯೇ ಉಳಿದಿದ್ದಾರೆ. ಬಿಜೆಪಿ ನಾಯಕರಿಗೆ ವ್ಯತಿರಿಕ್ತವಾಗಿ ಅವರು ಯಾವತ್ತೂ ಕಾಲಿಗೆ ಚಕ್ರ ಕಟ್ಟಿಕೊಂಡಿರುವ ವ್ಯಕ್ತಿ. 2017ರ ಎಪ್ರಿಲ್‌ನಲ್ಲಿ ನಡೆದ ದಿಲ್ಲಿ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಸೋತ ಬಳಿಕ ಅವರು ದಿಲ್ಲಿಯ ಮೂಲೆ ಮೂಲೆಯನ್ನೂ ತಿರುಗಿ ಪ್ರತಿದಿನವೆಂಬತೆ ಚಿಕ್ಕ ದೊಡ್ಡ ಸಭೆಗಳಲ್ಲಿ ಮಾತನಾಡುತ್ತಲೇ ಇದ್ದಾರೆ. ಅವರೀಗ ತನ್ನ ಮಾಂತ್ರಿಕ ಸ್ಪರ್ಶವನ್ನು ಮರಳಿ ಪಡೆದಂತಿದೆ.

ಎರಡನೆಯದಾಗಿ, ದಿಲ್ಲಿಯಲ್ಲಿ ಕಾಂಗ್ರೆಸ್ ಮರಣಶಯ್ಯೆಯಲ್ಲಿದೆ. ಸಂಸದೀಯ ಚುನಾವಣೆಯ ವೇಳೆ ಅದು ಕಳೆದುಕೊಂಡದ್ದನ್ನು ಮರಳಿಪಡೆಯುತ್ತಿರುವಂತೆ ಕಂಡುಬಂದಿತ್ತು. ಸಂಸದೀಯ ಚುನಾವಣೆಯ ವೇಳೆ ಅದು 22 ಶೇಕಡಾ ಮತಗಳನ್ನು ಗಳಿಸಿ, ಅಚ್ಚರಿ ಹುಟ್ಟಿಸುವ ರೀತಿಯಲ್ಲಿ ಬಿಜೆಪಿಯ ಬೆನ್ನಲ್ಲಿ ಎರಡನೇ ಸ್ಥಾನ ಗಳಿಸಿತ್ತು. ಅಲ್ಪಸಂಖ್ಯಾತರ ವಿಚಾರಗಳ ಕುರಿತು ಆಪ್ ಪಕ್ಷದ ಅಸ್ಪಷ್ಟ ನಿಲುವಿನಿಂದಾಗಿ ಮುಸ್ಲಿಮರು ಆಪ್ ಕೈಬಿಟ್ಟು ಕಾಂಗ್ರೆಸ್ ಕೈ ಹಿಡಿದಂತೆ ಕಂಡುಬರುತ್ತಿತ್ತು. ಆದರೆ, ಸಂಸದೀಯ ಚುನಾವಣೆಯ ಬಳಿಕ ಕಾಂಗ್ರೆಸ್ ತನ್ನ ಮಾಮೂಲಿ ಗುಂಪು ಒಳಜಗಳಕ್ಕೆ ಮರಳಿತ್ತು. ದಿಲ್ಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಸಾವು ಮತ್ತು ಪಕ್ಷಾಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ಕಾಂಗ್ರೆಸ್ ಪಕ್ಷವನ್ನು ಕೆಟ್ಟದಾಗಿ ಬಾಧಿಸಿದೆ. ನಾಯಕರಿಲ್ಲದೇ ಪಕ್ಷವು ತಿಂಗಳುಗಳ ಕಾಲ ನಾವಿಕನಿಲ್ಲದ ನಾವೆಯಂತೆ ತಿರುಗುತ್ತಿತ್ತು. ಆಪ್ ಮತ್ತು ಕಾಂಗ್ರೆಸ್ ದಿಲ್ಲಿಯಲ್ಲಿ ಹೊಂದಿರುವುದು ಒಂದೇ ಸಾಮಾಜಿಕ ನೆಲೆಗಟ್ಟನ್ನು. ಕಾಂಗ್ರೆಸ್ ಎದ್ದರೆ ಆಪ್ ಮುಳುಗುತ್ತದೆ. ಕಂಗೆಟ್ಟ ಕಾಂಗ್ರೆಸ್ ಆಪ್ ಪಕ್ಷಕ್ಕೆ ಮತ್ತು ಕೇಜ್ರಿವಾಲ್‌ಗೆ ವರ. ಈಗ ಬಿಜೆಪಿ ವಿರುದ್ಧ ಮತಗಳು ವಿಭಜನೆಯಾಗುವ ಯಾವುದೇ ಸಾಧ್ಯತೆಯಿಲ್ಲ.

ಮೂರನೆಯದಾಗಿ ಎಲ್ಲಾ ದೌರ್ಬಲ್ಯಗಳ ಹೊರತಾಗಿ ಆಪ್ ಸರಕಾರ ತನ್ನ ಭರವಸೆಗಳಿಗಾಗಿ ಕೆಲಸ ಮಾಡುತ್ತಾ, ಅವುಗಳನ್ನು ಈಡೇರಿಸುತ್ತಿರುವಂತೆ ಕಾಣುತ್ತಿದೆ. ಈ ಚುನಾವಣೆಗೆ ಮುಂಚಿತವಾಗಿ ಆಪ್ ಸರಕಾರವು ಜನರಿಗೆ ಉಚಿತವಾದ ಕೊಡುಗೆಗಳನ್ನು ನೀಡುತ್ತಿದೆ. ಇವುಗಳಲ್ಲಿ ಆಪ್ ಸರಕಾರದ ಪರವಾಗಿ ವಾಲುತ್ತಿರುವುದು ಬಡವರಿಗೆ ಉಚಿತ ವಿದ್ಯುತ್ ಮತ್ತು ಅರ್ಧ ದರದಲ್ಲಿ ನೀರು ನೀಡಿದೆ. ಇದು ದಿಲ್ಲಿಯ 80 ಶೇಕಡಾ ಜನರಿಗೆ ಅನುಕೂಲವಾಗುತ್ತಿದೆ. ಈ ಸತ್ಯದ ಬಗ್ಗೆ ಜನರು ಕುರುಡಾಗಿಲ್ಲ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಈತ ಮಾಡಿದ ಸಾಧನೆ ವಿರೋಧಿಗಳ ಬಾಯಿಯನ್ನೂ ಮುಚ್ಚಿಸಿದೆ. ಸರಕಾರಿ ಶಾಲೆಗಳು ಹೇಗೆ ಪರಿವರ್ತನೆ ಹೊಂದಿವೆ ಎಂಬದೇ ಮತದಾರರ ಯೋಚನೆಯ ದಿಕ್ಕು ಬದಲಿಸಿದೆ!

ಇಲ್ಲಿ ನಾಲ್ಕನೇ ಅಂಶವೊಂದಿದೆ. ಅದೆಂದರೆ, ಕೇಜ್ರಿವಾಲ್ ಮೌನ. 2015ರ ಭಾರೀ ಗೆಲುವಿನ ನಂತರ ಈ ಕೇಜ್ರಿವಾಲ್ ಆಕ್ರಮಣಕಾರಿಯಾಗಿ ಮೋದಿಯನ್ನು ಎದುರಿಸಿದ್ದರು. ಅದನ್ನು ಮೋದಿ ನೆಗೆಟಿವಾಗಿ ಬಳಸಿದ್ದರು. ಆದರೆ, ಈ ಬಾರಿ ಅವರ ಮೌನ ಮೋದಿಗೆ ಯಾವುದೇ ಅಸ್ತ್ರ ಒದಗಿಸುತ್ತಿಲ್ಲ. ಈ ಎಲ್ಲಾ ಕಾರಣಗಳಿಂದ ಕೇಜ್ರಿವಾಲ್ ಈ ಚುನಾವಣೆಯಲ್ಲಿ ಬಿಜೆಪಿಗೆ ಕಬ್ಬಿಣದ ಕಡಲೆಯಾಗಿದ್ದಾರೆ ಮತ್ತು ಹಿಂದೆಂದಿಗಿಂತಲೂ ಹೆಚ್ಚು ಅಪಾಯಕಾರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...