Homeಮುಖಪುಟಮೋದಿ-ಶಾಗೆ ಕೇಜ್ರಿವಾಲ್ ಈ ಬಾರಿ ಎಂದಿಗಿಂತಲೂ ಹೆಚ್ಚು ಅಪಾಯಕಾರಿ...

ಮೋದಿ-ಶಾಗೆ ಕೇಜ್ರಿವಾಲ್ ಈ ಬಾರಿ ಎಂದಿಗಿಂತಲೂ ಹೆಚ್ಚು ಅಪಾಯಕಾರಿ…

- Advertisement -
- Advertisement -

– ಅಶುತೋಷ್

ಅನುವಾದ: ನಿಖಿಲ್ ಕೋಲ್ಪೆ

ಕೃಪೆ: NDTV

ಅರವಿಂದ ಕೇಜ್ರಿವಾಲ್ ಅವರು ನರೇಂದ್ರ ಮೋದಿ ಮತ್ತು ಅಮಿತ್ ಶಾಗೆ ಕಬ್ಬಿಣದ ಕಡಲೆಯಾಗಿದ್ದಾರೆ. ಹಿಂದೂತ್ವ ಅಜೆಂಡಾದ ಹಿಂಸಾತ್ಮಕ ಪ್ರತಿಪಾದನೆಯ ಬಳಿಕವೂ ಮೋದಿ ಮ್ಯಾಜಿಕ್ ಕಳೆಗುಂದುತ್ತಿದೆ ಎಂಬುದನ್ನು ದಿಲ್ಲಿಗಾಗಿ ನಡೆಯುತ್ತಿರುವ ಕದನ ಇನ್ನಷ್ಟು ಸ್ಪಷ್ಟವಾಗಿ ತೋರಿಸಿಕೊಡಲಿದೆ.

ಕೇಜ್ರಿವಾಲ್ ಐದು ವರ್ಷಗಳ ಹಿಂದೆ ಇದ್ದಂತಹ ವರ್ಚಸ್ಸನ್ನು ಈಗಲೂ ಉಳಿಸಿಕೊಂಡಿದ್ದಾರೆಂದು ಹೇಳುವಂತಿಲ್ಲ. ಆಗ ಅವರು ರಾಜಕೀಯವಾಗಿ ಎಳಸಾಗಿದ್ದರು. ಆದರೆ, ಎಳಸಾಗಿದ್ದರು, ದಪ್ಪ ಚರ್ಮದ ರಾಜಕಾರಣಿ ಆಗಿಲ್ಲದಿದ್ದರಿಂದಲೇ ಜನರು ಅವರನ್ನು ನಂಬಿದ್ದರು. ಅವರು ರಾಜಕೀಯವನ್ನು ಪ್ರವೇಶಿಸಿಯೂ, ರಾಜಕೀಯ ಮಾಡದೆ, ರಾಜಕೀಯವನ್ನು ಬದಲಿಸಲು ಬಯಸುವ ವ್ಯಕ್ತಿಯಾಗಿ ಜನರು ಅವರನ್ನು ಕಂಡಿದ್ದರು. ಕಳೆದ ಐದು ವರ್ಷಗಳಲ್ಲಿ ಅವರು ಆದರ್ಶವಾದಿಯಿಂದ, ಅರಾಜಕತಾವಾದಿಯಾಗಿ, ಇದೀಗ ವಾಸ್ತವವಾದಿ ರಾಜಕಾರಣಿಯಾಗಿ ರೂಪಾಂತರಗೊಂಡಿದ್ದಾರೆ.

ಯಾರಾದರೂ ಕೇಜ್ರಿವಾಲ್ ಅವರು ತನ್ನ ವರ್ಚಸ್ಸನ್ನು, ಮತದಾರರ ಆಕರ್ಷಣೆಯನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ ಎಂದು ಭಾವಿಸಿದರೆ ಅವರು ಮೂರ್ಖರ ಲೋಕದಲ್ಲಿದ್ದಾರೆ ಎಂದರ್ಥ. ಅವರು ಅಖಿಲ ಭಾರತ ಮಟ್ಟದಲ್ಲಿ ಮತದಾರರನ್ನು ಓಲೈಸಲು ಸಾಧ್ಯವಾಗದೇ ಇರಬಹುದು ಆದರೆ, ದಿಲ್ಲಿಯ ಮಟ್ಟಿಗೆ ಅವರೇ ನಂಬರ್ ವನ್. ಅವರ ನಾಯಕತ್ವದಲ್ಲಿ ಕಳೆದ ಎರಡು ವರ್ಷಗಳಲ್ಲಿ ಸ್ಪರ್ಧಿಸಿದ ಯಾವುದೇ ರೀತಿಯ ಚುನಾವಣೆಯಲ್ಲಿ ಆಪ್ ಮಹಾನ್ ಸಾಧನೆ ಮಾಡಿಲ್ಲ ಎಂಬುದು ಅಲ್ಲಗೆಳೆಯಲಾಗದ ಸತ್ಯ.

ಅವರ ಪಕ್ಷಕ್ಕೆ ಹರ್ಯಾಣ, ಜಾರ್ಖಂಡ್, ಮಧ್ಯಪ್ರದೇಶ, ಛತ್ತೀಸ್‌ಘಡ್ ಮತ್ತು ರಾಜಸ್ಥಾನದ ಚುನಾವಣೆಯಲ್ಲಿ ಒಂದು ಶೇಕಡಾ ಮತವನ್ನೂ ಗಳಿಸಲು ಸಾಧ್ಯವಾಗಿಲ್ಲ. ಅವರ ಪಕ್ಷವು ದಿಲ್ಲಿಯಲ್ಲಿ ಸಂಸದೀಯ ಚುನಾವಣೆಯ ವೇಳೆಯೂ ದಯನೀಯವಾಗಿ ಸೋತಿತ್ತು ಮತ್ತು ಗಳಿಸಿದ ಮತಗಳ ಲೆಕ್ಕದಲ್ಲೂ ಅದು ಮೂರನೇ ಸ್ಥಾನದಲ್ಲಿತ್ತು. ಕಾಂಗ್ರೆಸ್ ಕೂಡಾ ಅದಕ್ಕಿಂತ ಹೆಚ್ಚು ಮತಗಳನ್ನು ಗಳಿಸಿತ್ತು. ಆಪ್ 2017ರಲ್ಲಿ ನಡೆದ ದಿಲ್ಲಿ ಮುನಿಸಿಪಲ್ ಚುನಾವಣೆಗಳಲ್ಲೂ ಕೆಟ್ಟದಾಗಿ ಸೋತಿತ್ತು. ಆದರೆ, ದಿಲ್ಲಿ ವಿಧಾನಸಭಾ ಚುನಾವಣೆಯ ವಿಷಯ ಬೇರೆಯೇ ತರದ ಆಟ.

ಆಪ್ ಭವಿಷ್ಯ ನಿರ್ಧರಿಸಲಿರುವ ಮೂರು ವಿಷಯಗಳು:

ಮೊದಲನೆಯದು, ದಿಲ್ಲಿಯಲ್ಲಿ ಮೋದಿಯಂತೆಯೇ ಕೇಜ್ರಿವಾಲ್‌ರಿಗೂ ಯಾರೂ ಎದುರಾಳಿಗಳಿಲ್ಲ. 2019ರ ಸಂಸದೀಯ ಚುನಾವಣೆಗಳ ವೇಳೆ ಮೋದಿ ಉಳಿದವರಿಗಿಂತ ಸ್ವಲ್ಪ ಎತ್ತರವಾಗಿಯೇ ಕಾಣುತ್ತಿದ್ದರು. ದಿಲ್ಲಿಯಲ್ಲಿ ಬಿಜೆಪಿ ನಾಯಕತ್ವರಹಿತವಾಗಿದೆ. ಮನೋಜ್ ತಿವಾರಿ, ವಿಜಯ್ ಗೋಯಲ್, ಹರ್ಷವರ್ಧನ್ ಮತ್ತಿತರರು ಕೇಜ್ರಿವಾಲ್‌ರಿಗೆ ಸರಿಸಾಟಿಯೇ ಅಲ್ಲ. ಅವರಿಗೆ ವರ್ಚಸ್ಸು ಅಥವಾ ಸಾಮಾಜಿಕ ನೆಲೆಯೇ ಇಲ್ಲ. ದಿಲ್ಲಿಯಲ್ಲಿ ಮೇಲು ಮತ್ತು ಮಧ್ಯಮ ವರ್ಗದವರು ಕೇಜ್ರಿವಾಲ್ ಬಗ್ಗೆ ಭ್ರಮನಿರಸನಗೊಂಡಿರಬಹುದು. ಆದರೆ, ಅವರು ಕೆಳಮಧ್ಯಮ ಮತ್ತು ಬಡಜನರು ಮತ್ತು ಆ ನಡುವೆ ಬದುಕುವ ಜನರ ಕಣ್ಮಣಿಯಾಗಿಯೇ ಉಳಿದಿದ್ದಾರೆ. ಬಿಜೆಪಿ ನಾಯಕರಿಗೆ ವ್ಯತಿರಿಕ್ತವಾಗಿ ಅವರು ಯಾವತ್ತೂ ಕಾಲಿಗೆ ಚಕ್ರ ಕಟ್ಟಿಕೊಂಡಿರುವ ವ್ಯಕ್ತಿ. 2017ರ ಎಪ್ರಿಲ್‌ನಲ್ಲಿ ನಡೆದ ದಿಲ್ಲಿ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಸೋತ ಬಳಿಕ ಅವರು ದಿಲ್ಲಿಯ ಮೂಲೆ ಮೂಲೆಯನ್ನೂ ತಿರುಗಿ ಪ್ರತಿದಿನವೆಂಬತೆ ಚಿಕ್ಕ ದೊಡ್ಡ ಸಭೆಗಳಲ್ಲಿ ಮಾತನಾಡುತ್ತಲೇ ಇದ್ದಾರೆ. ಅವರೀಗ ತನ್ನ ಮಾಂತ್ರಿಕ ಸ್ಪರ್ಶವನ್ನು ಮರಳಿ ಪಡೆದಂತಿದೆ.

ಎರಡನೆಯದಾಗಿ, ದಿಲ್ಲಿಯಲ್ಲಿ ಕಾಂಗ್ರೆಸ್ ಮರಣಶಯ್ಯೆಯಲ್ಲಿದೆ. ಸಂಸದೀಯ ಚುನಾವಣೆಯ ವೇಳೆ ಅದು ಕಳೆದುಕೊಂಡದ್ದನ್ನು ಮರಳಿಪಡೆಯುತ್ತಿರುವಂತೆ ಕಂಡುಬಂದಿತ್ತು. ಸಂಸದೀಯ ಚುನಾವಣೆಯ ವೇಳೆ ಅದು 22 ಶೇಕಡಾ ಮತಗಳನ್ನು ಗಳಿಸಿ, ಅಚ್ಚರಿ ಹುಟ್ಟಿಸುವ ರೀತಿಯಲ್ಲಿ ಬಿಜೆಪಿಯ ಬೆನ್ನಲ್ಲಿ ಎರಡನೇ ಸ್ಥಾನ ಗಳಿಸಿತ್ತು. ಅಲ್ಪಸಂಖ್ಯಾತರ ವಿಚಾರಗಳ ಕುರಿತು ಆಪ್ ಪಕ್ಷದ ಅಸ್ಪಷ್ಟ ನಿಲುವಿನಿಂದಾಗಿ ಮುಸ್ಲಿಮರು ಆಪ್ ಕೈಬಿಟ್ಟು ಕಾಂಗ್ರೆಸ್ ಕೈ ಹಿಡಿದಂತೆ ಕಂಡುಬರುತ್ತಿತ್ತು. ಆದರೆ, ಸಂಸದೀಯ ಚುನಾವಣೆಯ ಬಳಿಕ ಕಾಂಗ್ರೆಸ್ ತನ್ನ ಮಾಮೂಲಿ ಗುಂಪು ಒಳಜಗಳಕ್ಕೆ ಮರಳಿತ್ತು. ದಿಲ್ಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಸಾವು ಮತ್ತು ಪಕ್ಷಾಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ಕಾಂಗ್ರೆಸ್ ಪಕ್ಷವನ್ನು ಕೆಟ್ಟದಾಗಿ ಬಾಧಿಸಿದೆ. ನಾಯಕರಿಲ್ಲದೇ ಪಕ್ಷವು ತಿಂಗಳುಗಳ ಕಾಲ ನಾವಿಕನಿಲ್ಲದ ನಾವೆಯಂತೆ ತಿರುಗುತ್ತಿತ್ತು. ಆಪ್ ಮತ್ತು ಕಾಂಗ್ರೆಸ್ ದಿಲ್ಲಿಯಲ್ಲಿ ಹೊಂದಿರುವುದು ಒಂದೇ ಸಾಮಾಜಿಕ ನೆಲೆಗಟ್ಟನ್ನು. ಕಾಂಗ್ರೆಸ್ ಎದ್ದರೆ ಆಪ್ ಮುಳುಗುತ್ತದೆ. ಕಂಗೆಟ್ಟ ಕಾಂಗ್ರೆಸ್ ಆಪ್ ಪಕ್ಷಕ್ಕೆ ಮತ್ತು ಕೇಜ್ರಿವಾಲ್‌ಗೆ ವರ. ಈಗ ಬಿಜೆಪಿ ವಿರುದ್ಧ ಮತಗಳು ವಿಭಜನೆಯಾಗುವ ಯಾವುದೇ ಸಾಧ್ಯತೆಯಿಲ್ಲ.

ಮೂರನೆಯದಾಗಿ ಎಲ್ಲಾ ದೌರ್ಬಲ್ಯಗಳ ಹೊರತಾಗಿ ಆಪ್ ಸರಕಾರ ತನ್ನ ಭರವಸೆಗಳಿಗಾಗಿ ಕೆಲಸ ಮಾಡುತ್ತಾ, ಅವುಗಳನ್ನು ಈಡೇರಿಸುತ್ತಿರುವಂತೆ ಕಾಣುತ್ತಿದೆ. ಈ ಚುನಾವಣೆಗೆ ಮುಂಚಿತವಾಗಿ ಆಪ್ ಸರಕಾರವು ಜನರಿಗೆ ಉಚಿತವಾದ ಕೊಡುಗೆಗಳನ್ನು ನೀಡುತ್ತಿದೆ. ಇವುಗಳಲ್ಲಿ ಆಪ್ ಸರಕಾರದ ಪರವಾಗಿ ವಾಲುತ್ತಿರುವುದು ಬಡವರಿಗೆ ಉಚಿತ ವಿದ್ಯುತ್ ಮತ್ತು ಅರ್ಧ ದರದಲ್ಲಿ ನೀರು ನೀಡಿದೆ. ಇದು ದಿಲ್ಲಿಯ 80 ಶೇಕಡಾ ಜನರಿಗೆ ಅನುಕೂಲವಾಗುತ್ತಿದೆ. ಈ ಸತ್ಯದ ಬಗ್ಗೆ ಜನರು ಕುರುಡಾಗಿಲ್ಲ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಈತ ಮಾಡಿದ ಸಾಧನೆ ವಿರೋಧಿಗಳ ಬಾಯಿಯನ್ನೂ ಮುಚ್ಚಿಸಿದೆ. ಸರಕಾರಿ ಶಾಲೆಗಳು ಹೇಗೆ ಪರಿವರ್ತನೆ ಹೊಂದಿವೆ ಎಂಬದೇ ಮತದಾರರ ಯೋಚನೆಯ ದಿಕ್ಕು ಬದಲಿಸಿದೆ!

ಇಲ್ಲಿ ನಾಲ್ಕನೇ ಅಂಶವೊಂದಿದೆ. ಅದೆಂದರೆ, ಕೇಜ್ರಿವಾಲ್ ಮೌನ. 2015ರ ಭಾರೀ ಗೆಲುವಿನ ನಂತರ ಈ ಕೇಜ್ರಿವಾಲ್ ಆಕ್ರಮಣಕಾರಿಯಾಗಿ ಮೋದಿಯನ್ನು ಎದುರಿಸಿದ್ದರು. ಅದನ್ನು ಮೋದಿ ನೆಗೆಟಿವಾಗಿ ಬಳಸಿದ್ದರು. ಆದರೆ, ಈ ಬಾರಿ ಅವರ ಮೌನ ಮೋದಿಗೆ ಯಾವುದೇ ಅಸ್ತ್ರ ಒದಗಿಸುತ್ತಿಲ್ಲ. ಈ ಎಲ್ಲಾ ಕಾರಣಗಳಿಂದ ಕೇಜ್ರಿವಾಲ್ ಈ ಚುನಾವಣೆಯಲ್ಲಿ ಬಿಜೆಪಿಗೆ ಕಬ್ಬಿಣದ ಕಡಲೆಯಾಗಿದ್ದಾರೆ ಮತ್ತು ಹಿಂದೆಂದಿಗಿಂತಲೂ ಹೆಚ್ಚು ಅಪಾಯಕಾರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...