Homeಮುಖಪುಟಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

- Advertisement -
- Advertisement -

ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ ಸಂಸದೆ ಸ್ವಾತಿ ಮಲಿವಾಲ್ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.

ಮೇ 13ರಂದು ಸ್ವಾತಿ ಮಲಿವಾಲ್ ಸಿಎಂ ನಿವಾಸದ ಭದ್ರತೆಯನ್ನು ಉಲ್ಲಂಘಿಸಿ ಅನಧಿಕೃತವಾಗಿ ಪ್ರವೇಶಿಸಿದ್ದಾರೆ. ಈ ವೇಳೆ ನಾನು ತಡೆಯಲು ಯತ್ನಿಸಿದ್ದೇನೆ ಆಗ ನನಗೆ ನಿಂದನೆ ಮಾಡಿದ್ದಾರೆ ಎಂದು ಬಿಭವ್ ಕುಮಾರ್ ಆರೋಪಿಸಿದ್ದಾರೆ.

ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಎಸ್‌ಎಚ್‌ಒಗೆ ಇ-ಮೇಲ್ ಮೂಲಕ ಸಲ್ಲಿಸಿದ ದೂರಿನಲ್ಲಿ, ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಹೋದಾಗ ಮುಖ್ಯಮಂತ್ರಿಗಳ ನಿವಾಸದಲ್ಲಿ ತನ್ನ ಮೇಲೆ ಸ್ವಾತಿ ಹಲ್ಲೆ ನಡೆಸಿದ್ದಾರೆ, ಇದೀಗ ದೂರು ನೀಡುವ ಮೂಲಕ ತನ್ನನ್ನು ತಪ್ಪಾಗಿ ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಕುಮಾರ್ ಅವರು ತಮ್ಮ ದೂರಿನ ಪ್ರತಿಯನ್ನು ಪೊಲೀಸ್ ಉಪ ಆಯುಕ್ತರಿಗೆ ಕಳುಹಿಸಿದ್ದಾರೆ. ಮಲಿವಾಲ್ ಅವರು ಸಿಎಂ ನಿವಾಸದ ಭದ್ರತೆಯನ್ನು ಉಲ್ಲಂಘಿಸಿ, ಬಲವಂತವಾಗಿ ಮತ್ತು ಅನಧಿಕೃತವಾಗಿ ಪ್ರವೇಶಿಸಿ ಅಲ್ಲಿ ಗದ್ದಲ ಸೃಷ್ಟಿಸಿದ್ದಾರೆ. ನಾನು ಆಕೆಯನ್ನು ತಡೆಯಲು ಯತ್ನಿಸಿದಾಗ ದೈಹಿಕವಾಗಿ ಹಲ್ಲೆ ಮಾಡುವ ಉದ್ದೇಶದಿಂದ  ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮೇ 13ರಂದು ರಾಜ್ಯಸಭಾ ಸಂಸದೆ ಎಂದು ಭದ್ರತಾ ಸಿಬ್ಬಂದಿಗೆ ಹೇಳುವ ಮೂಲಕ ಮಲಿವಾಲ್ ಅವರು ಸಿಎಂ ನಿವಾಸಕ್ಕೆ ನುಗ್ಗಿದ್ದು, ಭದ್ರತಾ ಅಧಿಕಾರಿಗಳ ಆಕ್ಷೇಪಣೆಗಳ ಹೊರತಾಗಿಯೂ ಅವರು ಬಲವಂತವಾಗಿ ಸಿಎಂ ನಿವಾಸಕ್ಕೆ ಪ್ರವೇಶಿಸಿದ್ದಾರೆ ಎಂದು ಕುಮಾರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಬೆಳಗ್ಗೆ 9:22ಕ್ಕೆ ಕುಮಾರ್ ಸಿಎಂ ನಿವಾಸದ ಮುಖ್ಯ ಕೊಠಡಿಗೆ ಪ್ರವೇಶಿಸಿದಾಗ ಮಲಿವಾಲ್ ಅವರು ಅಲ್ಲಿ ಕುಳಿತಿರುವುದು ಕಂಡು ಬಂದಿದೆ. ಮಲಿವಾಲ್ ಅವರ ಬಳಿ ಮುಖ್ಯಮಂತ್ರಿಯನ್ನು ಭೇಟಿಯಾಗಲು ಸರಿಯಾದ ವಿಧಾನವನ್ನು ಅನುಸರಿಸುವಂತೆ ನಯವಾಗಿ ವಿನಂತಿಸಿದೆ. ಇದಕ್ಕೆ ಮಲಿವಾಲ್ ನನ್ನ ಮೇಲೆ ಕಿರುಚಲು ಮತ್ತು ನಿಂದಿಸಲು ಪ್ರಾರಂಭಿಸಿದರು. ಮಲಿವಾಲ್ ಬಳಿಕ ಕೇಜ್ರಿವಾಲ್‌ ನಿವಾಸದ ಒಳಭಾಗದ ಕಡೆಗೆ ನಡೆಯಲು ಪ್ರಾರಂಭಿಸಿದರು. ಅವರು ಕೇಜ್ರಿವಾಲ್‌ಗೆ ಹಾನಿ ಮಾಡುವ ಉದ್ದೇಶ ಹೊಂದಿದ್ದರು. ಇದಕ್ಕೆ ನಾನು ಬಲವಾಗಿ ಆಕ್ಷೇಪಿಸಿದ್ದೇನೆ ಎಂದು ಕುಮಾರ್ ಹೇಳಿದ್ದಾರೆ.

ಮುಖ್ಯಮಂತ್ರಿ ನಿವಾಸದಿಂದ ಹೊರಹೋಗುವಂತೆ ಮಲಿವಾಲ್‌ಗೆ ಮನವಿ ಮಾಡಿದಾಗ, ಅವರು ನಾನು ನಿಮ್ಮನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುತ್ತೇನೆ, ನೀವು ನಿಮ್ಮ ಇಡೀ ಜೀವನವನ್ನು ಜೈಲಿನಲ್ಲಿ ಕಳೆಯುವಂತೆ ಮಾಡುತ್ತೇನೆ ಎಂದು ಬೆದರಿಸಿದ್ದಾರೆ ಎಂದು  ಕುಮಾರ್ ಹೇಳಿದ್ದಾರೆ.

ಮಲಿವಾಲ್ ಅವರು ಅತಿಕ್ರಮ ಪ್ರವೇಶ ಮಾಡಿದ್ದಾರೆ, ಸಿಎಂ ನಿವಾಸದ ಭದ್ರತೆಯನ್ನು ಉಲ್ಲಂಘಿಸಿದ್ದಾರೆ, ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸದಂತೆ ತಡೆದು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕುಮಾರ್ ಆರೋಪಿಸಿದ್ದಾರೆ.

ಮಲಿವಾಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇದು ಚುನಾವಣಾ ಸಮಯವಾದ್ದರಿಂದ ಇದೆಲ್ಲವೂ ಬಿಜೆಪಿಯ ಆಜ್ಞೆಯ ಮೇರೆಗೆ ನಡೆದಿರಬಹುದು. ಅವರ ಕರೆ, ದಾಖಲೆಗಳು, ಚಾಟ್‌ಗಳು ಮತ್ತು ಬಿಜೆಪಿ ನಾಯಕರೊಂದಿಗಿನ ಸಂವಾದದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಕುಮಾರ್‌ ದೂರಿನಲ್ಲಿ ಆಗ್ರಹಿಸಿದ್ದಾರೆ.

ಮೇ 13ರಂದು ಕೇಜ್ರಿವಾಲ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಲು ಹೋದಾಗ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಲಿವಾಲ್ ಕುಮಾರ್ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನು ಓದಿ: ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...