Homeಮುಖಪುಟಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

- Advertisement -
- Advertisement -

ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ ಸಂಸದೆ ಸ್ವಾತಿ ಮಲಿವಾಲ್ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.

ಮೇ 13ರಂದು ಸ್ವಾತಿ ಮಲಿವಾಲ್ ಸಿಎಂ ನಿವಾಸದ ಭದ್ರತೆಯನ್ನು ಉಲ್ಲಂಘಿಸಿ ಅನಧಿಕೃತವಾಗಿ ಪ್ರವೇಶಿಸಿದ್ದಾರೆ. ಈ ವೇಳೆ ನಾನು ತಡೆಯಲು ಯತ್ನಿಸಿದ್ದೇನೆ ಆಗ ನನಗೆ ನಿಂದನೆ ಮಾಡಿದ್ದಾರೆ ಎಂದು ಬಿಭವ್ ಕುಮಾರ್ ಆರೋಪಿಸಿದ್ದಾರೆ.

ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಎಸ್‌ಎಚ್‌ಒಗೆ ಇ-ಮೇಲ್ ಮೂಲಕ ಸಲ್ಲಿಸಿದ ದೂರಿನಲ್ಲಿ, ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಹೋದಾಗ ಮುಖ್ಯಮಂತ್ರಿಗಳ ನಿವಾಸದಲ್ಲಿ ತನ್ನ ಮೇಲೆ ಸ್ವಾತಿ ಹಲ್ಲೆ ನಡೆಸಿದ್ದಾರೆ, ಇದೀಗ ದೂರು ನೀಡುವ ಮೂಲಕ ತನ್ನನ್ನು ತಪ್ಪಾಗಿ ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಕುಮಾರ್ ಅವರು ತಮ್ಮ ದೂರಿನ ಪ್ರತಿಯನ್ನು ಪೊಲೀಸ್ ಉಪ ಆಯುಕ್ತರಿಗೆ ಕಳುಹಿಸಿದ್ದಾರೆ. ಮಲಿವಾಲ್ ಅವರು ಸಿಎಂ ನಿವಾಸದ ಭದ್ರತೆಯನ್ನು ಉಲ್ಲಂಘಿಸಿ, ಬಲವಂತವಾಗಿ ಮತ್ತು ಅನಧಿಕೃತವಾಗಿ ಪ್ರವೇಶಿಸಿ ಅಲ್ಲಿ ಗದ್ದಲ ಸೃಷ್ಟಿಸಿದ್ದಾರೆ. ನಾನು ಆಕೆಯನ್ನು ತಡೆಯಲು ಯತ್ನಿಸಿದಾಗ ದೈಹಿಕವಾಗಿ ಹಲ್ಲೆ ಮಾಡುವ ಉದ್ದೇಶದಿಂದ  ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮೇ 13ರಂದು ರಾಜ್ಯಸಭಾ ಸಂಸದೆ ಎಂದು ಭದ್ರತಾ ಸಿಬ್ಬಂದಿಗೆ ಹೇಳುವ ಮೂಲಕ ಮಲಿವಾಲ್ ಅವರು ಸಿಎಂ ನಿವಾಸಕ್ಕೆ ನುಗ್ಗಿದ್ದು, ಭದ್ರತಾ ಅಧಿಕಾರಿಗಳ ಆಕ್ಷೇಪಣೆಗಳ ಹೊರತಾಗಿಯೂ ಅವರು ಬಲವಂತವಾಗಿ ಸಿಎಂ ನಿವಾಸಕ್ಕೆ ಪ್ರವೇಶಿಸಿದ್ದಾರೆ ಎಂದು ಕುಮಾರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಬೆಳಗ್ಗೆ 9:22ಕ್ಕೆ ಕುಮಾರ್ ಸಿಎಂ ನಿವಾಸದ ಮುಖ್ಯ ಕೊಠಡಿಗೆ ಪ್ರವೇಶಿಸಿದಾಗ ಮಲಿವಾಲ್ ಅವರು ಅಲ್ಲಿ ಕುಳಿತಿರುವುದು ಕಂಡು ಬಂದಿದೆ. ಮಲಿವಾಲ್ ಅವರ ಬಳಿ ಮುಖ್ಯಮಂತ್ರಿಯನ್ನು ಭೇಟಿಯಾಗಲು ಸರಿಯಾದ ವಿಧಾನವನ್ನು ಅನುಸರಿಸುವಂತೆ ನಯವಾಗಿ ವಿನಂತಿಸಿದೆ. ಇದಕ್ಕೆ ಮಲಿವಾಲ್ ನನ್ನ ಮೇಲೆ ಕಿರುಚಲು ಮತ್ತು ನಿಂದಿಸಲು ಪ್ರಾರಂಭಿಸಿದರು. ಮಲಿವಾಲ್ ಬಳಿಕ ಕೇಜ್ರಿವಾಲ್‌ ನಿವಾಸದ ಒಳಭಾಗದ ಕಡೆಗೆ ನಡೆಯಲು ಪ್ರಾರಂಭಿಸಿದರು. ಅವರು ಕೇಜ್ರಿವಾಲ್‌ಗೆ ಹಾನಿ ಮಾಡುವ ಉದ್ದೇಶ ಹೊಂದಿದ್ದರು. ಇದಕ್ಕೆ ನಾನು ಬಲವಾಗಿ ಆಕ್ಷೇಪಿಸಿದ್ದೇನೆ ಎಂದು ಕುಮಾರ್ ಹೇಳಿದ್ದಾರೆ.

ಮುಖ್ಯಮಂತ್ರಿ ನಿವಾಸದಿಂದ ಹೊರಹೋಗುವಂತೆ ಮಲಿವಾಲ್‌ಗೆ ಮನವಿ ಮಾಡಿದಾಗ, ಅವರು ನಾನು ನಿಮ್ಮನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುತ್ತೇನೆ, ನೀವು ನಿಮ್ಮ ಇಡೀ ಜೀವನವನ್ನು ಜೈಲಿನಲ್ಲಿ ಕಳೆಯುವಂತೆ ಮಾಡುತ್ತೇನೆ ಎಂದು ಬೆದರಿಸಿದ್ದಾರೆ ಎಂದು  ಕುಮಾರ್ ಹೇಳಿದ್ದಾರೆ.

ಮಲಿವಾಲ್ ಅವರು ಅತಿಕ್ರಮ ಪ್ರವೇಶ ಮಾಡಿದ್ದಾರೆ, ಸಿಎಂ ನಿವಾಸದ ಭದ್ರತೆಯನ್ನು ಉಲ್ಲಂಘಿಸಿದ್ದಾರೆ, ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸದಂತೆ ತಡೆದು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕುಮಾರ್ ಆರೋಪಿಸಿದ್ದಾರೆ.

ಮಲಿವಾಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇದು ಚುನಾವಣಾ ಸಮಯವಾದ್ದರಿಂದ ಇದೆಲ್ಲವೂ ಬಿಜೆಪಿಯ ಆಜ್ಞೆಯ ಮೇರೆಗೆ ನಡೆದಿರಬಹುದು. ಅವರ ಕರೆ, ದಾಖಲೆಗಳು, ಚಾಟ್‌ಗಳು ಮತ್ತು ಬಿಜೆಪಿ ನಾಯಕರೊಂದಿಗಿನ ಸಂವಾದದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಕುಮಾರ್‌ ದೂರಿನಲ್ಲಿ ಆಗ್ರಹಿಸಿದ್ದಾರೆ.

ಮೇ 13ರಂದು ಕೇಜ್ರಿವಾಲ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಲು ಹೋದಾಗ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಲಿವಾಲ್ ಕುಮಾರ್ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನು ಓದಿ: ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...