Homeಮುಖಪುಟ'ಕೇಜ್ರಿವಾಲ್ ಹೇಳಿಕೆಯು ಅವರ ವೈಯಕ್ತಿಕ ಅಭಿಪ್ರಾಯ ರೂಪಿಸಿದೆ..'; ಇಡಿ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

‘ಕೇಜ್ರಿವಾಲ್ ಹೇಳಿಕೆಯು ಅವರ ವೈಯಕ್ತಿಕ ಅಭಿಪ್ರಾಯ ರೂಪಿಸಿದೆ..’; ಇಡಿ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಅರವಿಂದ್ ಕೇಜ್ರಿವಾಲ್ ವಿರುದ್ಧ ಕ್ರಮಕ್ಕಾಗಿ ಜಾರಿ ನಿರ್ದೇಶನಾಲಯದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ. ದೆಹಲಿ ಮುಖ್ಯಮಂತ್ರಿಯವರ “ನೀವು ಎಎಪಿಗೆ ಮತ ಹಾಕಿದರೆ ನಾನು ಮತ್ತೆ ಜೈಲಿಗೆ ಹೋಗುವುದಿಲ್ಲ” ಎಂಬ ಮಾತು ಅವರ ಜಾಮೀನು ನಿಯಮಗಳನ್ನು ಉಲ್ಲಂಘಿಸಿಲ್ಲ” ಎಂದು ಕೋರ್ಟ್‌ ಹೇಳಿದೆ.

ಕೇಂದ್ರ ತನಿಖಾ ಸಂಸ್ಥೆಯಿ ಕೇಜ್ರಿವಾಲ್ ಅವರ ಹೇಳಿಕೆಯು ಅವರ ವೈಯಕ್ತಿಕ ಅಭಿಪ್ರಾಯವನ್ನು ರೂಪಿಸಿದೆ ಎಂದು ನ್ಯಾಯಾಲಯವು ಹೇಳಿದೆ. “ಇದು ಅವರ ಊಹೆಯಾಗಿದೆ… ನಾವು ಏನನ್ನೂ ಹೇಳಲಾರೆವು. ನಮ್ಮ ಆದೇಶ (ಜೂನ್ 2 ರಂದು ಮುಖ್ಯಮಂತ್ರಿ ಜೈಲಿಗೆ ಮರಳುವ ಬಗ್ಗೆ) ಸ್ಪಷ್ಟವಾಗಿದೆ. ಅದು ಈ ನ್ಯಾಯಾಲಯದ ನಿರ್ಧಾರ (ಮತ್ತು) ನಾವು ಕಾನೂನಿನ ನಿಯಮದಿಂದ ನಿಯಂತ್ರಿಸಲ್ಪಡುತ್ತೇವೆ…” ಎಂದು ಹೇಳಿತು.

ಬಂಧಿತ ರಾಜಕೀಯ ನಾಯಕರು ಚುನಾವಣಾ ಪ್ರಚಾರಕ್ಕಾಗಿ ಜಾಮೀನು ಪಡೆಯುವ ಸಾಧ್ಯತೆಯ ಬಗ್ಗೆ ಇಡಿ ವಾದಗಳನ್ನು ಆಲಿಸಿದ ನ್ಯಾಯಾಲಯ, “ತಾನು ಯಾವುದೇ ವಿನಾಯಿತಿ ನೀಡಿಲ್ಲ” ಎಂದು ಒತ್ತಿ ಹೇಳಿದೆ.

“ನಾವು ಯಾವುದೇ ವಿನಾಯಿತಿ ನೀಡಿಲ್ಲ; ನಿರ್ಧಾರದ ಟೀಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಾವು ಈ ವಿಷಯಕ್ಕೆ ಹೋಗುವುದಿಲ್ಲ, ನಮ್ಮ ಆದೇಶವು ಸ್ಪಷ್ಟವಾಗಿದೆ.. ನಾವು ದಿನಾಂಕಗಳನ್ನು ನಿಗದಿಪಡಿಸಿದ್ದೇವೆ, ಮಧ್ಯಂತರ ಜಾಮೀನು ನೀಡಲು ಕಾರಣಗಳನ್ನು ಸಹ ನೀಡಿದ್ದೇವೆ” ಎಂದು ನ್ಯಾಯಮೂರ್ತಿಗಳು ಹೇಳಿದರು.

ಜಾಮೀನು ಹಿಂಪಡೆಯಲು ಮತ್ತು ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಲು ಆದೇಶಿಸಲು ಕೋರಿಕೆಯನ್ನು ನ್ಯಾಯಾಲಯ ತಿರಸ್ಕರಿಸಿತು.

ಇಡಿ ಒರವಾಗಿ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಚುನಾವಣಾ ಪ್ರಚಾರದ ವೇಳೆ ಕೇಜ್ರಿವಾಲ್ “ನೀವು ಎಎಪಿಗೆ ಮತ ಹಾಕಿದರೆ, ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ…” ಎಂದು ಹೇಳಿದ್ದಾರೆ. “ಇದು ನ್ಯಾಯಾಲಯ ನಿಗದಿಪಡಿಸಿದ ಷರತ್ತುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಇದು ನ್ಯಾಯಾಂಗದ ಮುಖಕ್ಕೆ ಕಪಾಳಮೋಕ್ಷವಾಗಿದೆ” ಎಂದು ಹೇಳಿದರು.

ಕೇಜ್ರಿವಾಲ್ ಪರ ಪ್ರತಿಕ್ರಿಯಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, “ತಮ್ಮ ಕಕ್ಷಿದಾರರ ವಿರುದ್ಧ ವಿವಿಧ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ಕೆಲ ಹಿರಿಯ ಕೇಂದ್ರ ಸಚಿವರುಗಳ ಹೆಸರನ್ನು ಹೇಳದೆ ಆಕ್ಷೇಪ ವ್ಯಕ್ತಪಡಿಸಿದರು.

ಕೇಜ್ರಿವಾಲ್ ತಮ್ಮ ಪಕ್ಷದ ಪರವಾಗಿ ಸೋಮವಾರ ಪ್ರಚಾರ ಮಾಡುವಾಗ, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ಗೆದ್ದರೆ ಮತ್ತೆ ಜೈಲಿಗೆ ಹಾಕುವ ಭಯವಿದೆ ಎಂದು ಹೇಳಿದರು. ದೆಹಲಿಯ ತಿಹಾರ್ ಜೈಲಿಗೆ ಕಳುಹಿಸಿದ ನಂತರ ಪಕ್ಷವನ್ನು ಮುರಿಯಲು ಮತ್ತು ನನ್ನನ್ನು ಅವಮಾನಿಸಲು ಪ್ರಯತ್ನಗಳನ್ನು ಮಾಡಲಾಯಿತು ಎಂದು ಅವರು ಹೇಳಿದ್ದಾರೆ.

“ನಾನು ಜೂನ್ 2 ರಂದು ಮತ್ತೆ ಜೈಲಿಗೆ ಹೋಗಬೇಕಾಗಿದೆ. ನಾನು ಜೂನ್ 4 ರಂದು (ಚುನಾವಣೆಯ) ಫಲಿತಾಂಶಗಳನ್ನು ಜೈಲಿನಿಂದ ನೋಡುತ್ತೇನೆ. ನೀವು ಇಂಡಿಯಾವನ್ನು (ಎಎಪಿ ಸದಸ್ಯರಾಗಿರುವ ಕಾಂಗ್ರೆಸ್ ನೇತೃತ್ವದ ವಿರೋಧ ಗುಂಪು) ಗೆಲ್ಲಿಸಿದರೆ , ನಾನು ಜೂನ್ 5 ರಂದು ಹಿಂತಿರುಗುತ್ತೇನೆ, ಪ್ರಯತ್ನದ ಕೊರತೆಯಿದ್ದರೆ, ನಾವು ಯಾವಾಗ ಭೇಟಿಯಾಗುತ್ತೇವೆ ಎಂದು ನೋಡೋಣ” ಎಂದು ಅವರು ಹೇಳಿದ್ದರು.

ಕೇಜ್ರಿವಾಲ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ಕಳೆದ ವಾರವೂ ತಿರಸ್ಕರಿಸಿತ್ತು.

ಇದನ್ನೂ ಓದಿ; ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿಗೆ ಎನ್‌ಸಿಡಬ್ಲ್ಯೂ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...