Homeಮುಖಪುಟ'ಕೇಜ್ರಿವಾಲ್ ಹೇಳಿಕೆಯು ಅವರ ವೈಯಕ್ತಿಕ ಅಭಿಪ್ರಾಯ ರೂಪಿಸಿದೆ..'; ಇಡಿ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

‘ಕೇಜ್ರಿವಾಲ್ ಹೇಳಿಕೆಯು ಅವರ ವೈಯಕ್ತಿಕ ಅಭಿಪ್ರಾಯ ರೂಪಿಸಿದೆ..’; ಇಡಿ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಅರವಿಂದ್ ಕೇಜ್ರಿವಾಲ್ ವಿರುದ್ಧ ಕ್ರಮಕ್ಕಾಗಿ ಜಾರಿ ನಿರ್ದೇಶನಾಲಯದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ. ದೆಹಲಿ ಮುಖ್ಯಮಂತ್ರಿಯವರ “ನೀವು ಎಎಪಿಗೆ ಮತ ಹಾಕಿದರೆ ನಾನು ಮತ್ತೆ ಜೈಲಿಗೆ ಹೋಗುವುದಿಲ್ಲ” ಎಂಬ ಮಾತು ಅವರ ಜಾಮೀನು ನಿಯಮಗಳನ್ನು ಉಲ್ಲಂಘಿಸಿಲ್ಲ” ಎಂದು ಕೋರ್ಟ್‌ ಹೇಳಿದೆ.

ಕೇಂದ್ರ ತನಿಖಾ ಸಂಸ್ಥೆಯಿ ಕೇಜ್ರಿವಾಲ್ ಅವರ ಹೇಳಿಕೆಯು ಅವರ ವೈಯಕ್ತಿಕ ಅಭಿಪ್ರಾಯವನ್ನು ರೂಪಿಸಿದೆ ಎಂದು ನ್ಯಾಯಾಲಯವು ಹೇಳಿದೆ. “ಇದು ಅವರ ಊಹೆಯಾಗಿದೆ… ನಾವು ಏನನ್ನೂ ಹೇಳಲಾರೆವು. ನಮ್ಮ ಆದೇಶ (ಜೂನ್ 2 ರಂದು ಮುಖ್ಯಮಂತ್ರಿ ಜೈಲಿಗೆ ಮರಳುವ ಬಗ್ಗೆ) ಸ್ಪಷ್ಟವಾಗಿದೆ. ಅದು ಈ ನ್ಯಾಯಾಲಯದ ನಿರ್ಧಾರ (ಮತ್ತು) ನಾವು ಕಾನೂನಿನ ನಿಯಮದಿಂದ ನಿಯಂತ್ರಿಸಲ್ಪಡುತ್ತೇವೆ…” ಎಂದು ಹೇಳಿತು.

ಬಂಧಿತ ರಾಜಕೀಯ ನಾಯಕರು ಚುನಾವಣಾ ಪ್ರಚಾರಕ್ಕಾಗಿ ಜಾಮೀನು ಪಡೆಯುವ ಸಾಧ್ಯತೆಯ ಬಗ್ಗೆ ಇಡಿ ವಾದಗಳನ್ನು ಆಲಿಸಿದ ನ್ಯಾಯಾಲಯ, “ತಾನು ಯಾವುದೇ ವಿನಾಯಿತಿ ನೀಡಿಲ್ಲ” ಎಂದು ಒತ್ತಿ ಹೇಳಿದೆ.

“ನಾವು ಯಾವುದೇ ವಿನಾಯಿತಿ ನೀಡಿಲ್ಲ; ನಿರ್ಧಾರದ ಟೀಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಾವು ಈ ವಿಷಯಕ್ಕೆ ಹೋಗುವುದಿಲ್ಲ, ನಮ್ಮ ಆದೇಶವು ಸ್ಪಷ್ಟವಾಗಿದೆ.. ನಾವು ದಿನಾಂಕಗಳನ್ನು ನಿಗದಿಪಡಿಸಿದ್ದೇವೆ, ಮಧ್ಯಂತರ ಜಾಮೀನು ನೀಡಲು ಕಾರಣಗಳನ್ನು ಸಹ ನೀಡಿದ್ದೇವೆ” ಎಂದು ನ್ಯಾಯಮೂರ್ತಿಗಳು ಹೇಳಿದರು.

ಜಾಮೀನು ಹಿಂಪಡೆಯಲು ಮತ್ತು ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಲು ಆದೇಶಿಸಲು ಕೋರಿಕೆಯನ್ನು ನ್ಯಾಯಾಲಯ ತಿರಸ್ಕರಿಸಿತು.

ಇಡಿ ಒರವಾಗಿ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಚುನಾವಣಾ ಪ್ರಚಾರದ ವೇಳೆ ಕೇಜ್ರಿವಾಲ್ “ನೀವು ಎಎಪಿಗೆ ಮತ ಹಾಕಿದರೆ, ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ…” ಎಂದು ಹೇಳಿದ್ದಾರೆ. “ಇದು ನ್ಯಾಯಾಲಯ ನಿಗದಿಪಡಿಸಿದ ಷರತ್ತುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಇದು ನ್ಯಾಯಾಂಗದ ಮುಖಕ್ಕೆ ಕಪಾಳಮೋಕ್ಷವಾಗಿದೆ” ಎಂದು ಹೇಳಿದರು.

ಕೇಜ್ರಿವಾಲ್ ಪರ ಪ್ರತಿಕ್ರಿಯಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, “ತಮ್ಮ ಕಕ್ಷಿದಾರರ ವಿರುದ್ಧ ವಿವಿಧ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ಕೆಲ ಹಿರಿಯ ಕೇಂದ್ರ ಸಚಿವರುಗಳ ಹೆಸರನ್ನು ಹೇಳದೆ ಆಕ್ಷೇಪ ವ್ಯಕ್ತಪಡಿಸಿದರು.

ಕೇಜ್ರಿವಾಲ್ ತಮ್ಮ ಪಕ್ಷದ ಪರವಾಗಿ ಸೋಮವಾರ ಪ್ರಚಾರ ಮಾಡುವಾಗ, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ಗೆದ್ದರೆ ಮತ್ತೆ ಜೈಲಿಗೆ ಹಾಕುವ ಭಯವಿದೆ ಎಂದು ಹೇಳಿದರು. ದೆಹಲಿಯ ತಿಹಾರ್ ಜೈಲಿಗೆ ಕಳುಹಿಸಿದ ನಂತರ ಪಕ್ಷವನ್ನು ಮುರಿಯಲು ಮತ್ತು ನನ್ನನ್ನು ಅವಮಾನಿಸಲು ಪ್ರಯತ್ನಗಳನ್ನು ಮಾಡಲಾಯಿತು ಎಂದು ಅವರು ಹೇಳಿದ್ದಾರೆ.

“ನಾನು ಜೂನ್ 2 ರಂದು ಮತ್ತೆ ಜೈಲಿಗೆ ಹೋಗಬೇಕಾಗಿದೆ. ನಾನು ಜೂನ್ 4 ರಂದು (ಚುನಾವಣೆಯ) ಫಲಿತಾಂಶಗಳನ್ನು ಜೈಲಿನಿಂದ ನೋಡುತ್ತೇನೆ. ನೀವು ಇಂಡಿಯಾವನ್ನು (ಎಎಪಿ ಸದಸ್ಯರಾಗಿರುವ ಕಾಂಗ್ರೆಸ್ ನೇತೃತ್ವದ ವಿರೋಧ ಗುಂಪು) ಗೆಲ್ಲಿಸಿದರೆ , ನಾನು ಜೂನ್ 5 ರಂದು ಹಿಂತಿರುಗುತ್ತೇನೆ, ಪ್ರಯತ್ನದ ಕೊರತೆಯಿದ್ದರೆ, ನಾವು ಯಾವಾಗ ಭೇಟಿಯಾಗುತ್ತೇವೆ ಎಂದು ನೋಡೋಣ” ಎಂದು ಅವರು ಹೇಳಿದ್ದರು.

ಕೇಜ್ರಿವಾಲ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ಕಳೆದ ವಾರವೂ ತಿರಸ್ಕರಿಸಿತ್ತು.

ಇದನ್ನೂ ಓದಿ; ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿಗೆ ಎನ್‌ಸಿಡಬ್ಲ್ಯೂ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...